ಜ್ಯೂಸ್ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ | ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು
ಪುತ್ತೂರು: ಬಸ್ ನಿಲ್ದಾಣದ ಬಳಿಯ ಹೋಟೆಲ್ ಒಂದರಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದು ಯುವತಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದ ಸಂದರ್ಭ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಇಬ್ಬರು ಶಿವಮೊಗ್ಗ ಮೂಲದವರು ಎಂದು ತಿಳಿದು ಬಂದಿದ್ದು, ಯುವತಿ ನಗರದಲ್ಲಿ ಪಿಜಿ ಯಿಂದ ಕಾಲೇಜಿಗೆ ತೆರಳುತ್ತಿದ್ದಳು ಎನ್ನಲಾಗಿದೆ. ಠಾಣೆಗೆ ಪುತ್ತೂರು ಬಿಜೆಪಿ ನಿಯೋಗ ಬೇಟಿ ನೀಡಿದರು. ಆದರೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಸದ್ಯ ಪೊಲೀಸರು ಇಬ್ಬರ ಮನೆಯವರಿಗೆ ಮಾಹಿತಿ ನೀಡಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಜ್ಯೂಸ್ ಕುಡಿತಯುತ್ತಿದ್ದ ಅನ್ಯಕೋಮಿನ ಜೋಡಿ | ಪೋಲಿಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು Read More »










