ಸುದ್ದಿ

ರೀಲ್ಸ್‌ ಹುಚ್ಚಿನಿಂದ ಪ್ರಾಣವನ್ನೇ ಕಳೆದುಕೊಂಡ 15 ವರ್ಷದ ಬಾಲಕ

ಹುಬ್ಬಳ್ಳಿ: ರೀಲ್ಸ್ ಹುಚ್ಚಿನಿಂದ ಹದಿನೈದು ವರ್ಷದ ಹುಡುಗನೊಬ್ಬ ಪ್ರಾಣವನ್ನೇ ಕಳೆದುಕೊಂಡ ದುರಂತ ಘಟನೆ ನಡೆದಿದೆ. ಮೃತನನ್ನು ನಮೀಷ ಸಂಗಳದ ಎಂದು ಗುರುತಿಸಲಾಗಿದೆ. ಈತ ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಯುಗಾದಿ ರಜಾ ಹಿನ್ನೆಲೆ ಮನೆಗೆ ಬಂದಿದ್ದಾಗಿ ತಿಳಿದು ಬಂದಿದೆ. ಐಷಾರಾಮಿ ಕಾರು ಮತ್ತು ಬೈಕ್‌ಗಳಲ್ಲಿ ‌ತನ್ನ ಗೆಳೆಯರ ಜೊತೆಗೆ ಸ್ಟಂಟ್ ಮಾಡಲು ನಮೀಷ ಮುಂದಾಗಿದ್ದಾನೆ. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ನಮೀಷ ಚಲಾಯಿಸುತ್ತಿದ್ದ ಬೈಕ್‌ಗೆ ಗುದ್ದಿದೆ. ಸ್ಥಳದಲ್ಲೇ ನಮೀಷ ಮೃತಪಟ್ಟಿದ್ದಾನೆ. ಮೃತ ಬಾಲಕ ಬಿಜೆಪಿ ಮುಖಂಡ […]

ರೀಲ್ಸ್‌ ಹುಚ್ಚಿನಿಂದ ಪ್ರಾಣವನ್ನೇ ಕಳೆದುಕೊಂಡ 15 ವರ್ಷದ ಬಾಲಕ Read More »

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ

ಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಯುವತಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಡಿಜೆ ಹಳ್ಳಿಯ ಈರುಳ್ಳಿ ಮಾರ್ಕೆಟ್​​ನಲ್ಲಿ ಕೆಲಸ ಮಾಡ್ತಿದ್ದ ಸೈಯದ್ ಶಬೀಲ್ ಈ ಕೃತ್ಯ ಎಸಗಿದ್ದಾನೆ. ಕೋಲಾರ ಮೂಲದ ಅಪ್ರಾಪ್ತೆ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ಸೈಯದ್ ಆಕೆ ಜೊತೆ ಸುತ್ತಾಡಿಕೊಂಡಿದ್ದನು. ಈ ವಿಷಯ ತಿಳಿದು ಪೋಷಕರು ಇಬ್ಬರಿಗೂ 2025 ಜೂನ್‌ನಲ್ಲಿ ಎಂಗೇಜ್ಮೆಂಟ್ ಮಾಡಿದ್ದರು. ನಿಶ್ಚಿತಾರ್ಥವಾದ ನಂತರ ಸೈಯದ್‌ಗೆ ಭಾವಿಪತ್ನಿ ಮೇಲೆ

ಶೀಲ ಶಂಕಿಸಿ ಭಾವಿಪತ್ನಿಯನ್ನು ಬರ್ಬರವಾಗಿ ಸಾಯಿಸಿದ ಯುವಕ Read More »

ಬೆಳ್ತಂಗಡಿ : ಪ್ರಚೋದನಕಾರಿ ಪೋಸ್ಟ್‌ ಆರೋಪದಲ್ಲಿ ಸೆರೆಯಾಗಿದ್ದ ಯುವತಿಗೆ ಮಧ್ಯರಾತ್ರಿ ಜಾಮೀನು

ಸೋಷಿಯಲ್‌ ಮೀಡಿಯಾದಲ್ಲಿ ಕೋಮು ಪ್ರಚೋದನೆ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ಆರೋಪದಲ್ಲಿ ಬಂಧಿತಳಾಗಿದ್ದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಗೆ ಮಧ್ಯಂತರ ಜಾಮೀನು ಲಭಿಸಿದ್ದು ಆಕೆ ಬಿಡುಗಡೆಯಾಗಿದ್ದಾಳೆ. ಜಾಮೀನು ಪಡೆದ ಬಳಿಕ ಆಕೆಯೊಂದಿಗಿನ ಫೊಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಶಾಸಕ ಹರೀಶ್ ಪೂಂಜ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯದ ವಿರುದ್ಧ ಗೆಲುವು ಲಭಿಸಿದೆ ಎಂದು ಬರೆದಿದ್ದಾರೆಶಾಸಕರ ಫೇಸ್‌ಬುಕ್ ಪೋಸ್ಟ್ ವೈರಲ್‌ ಆಗಿದೆ. ಭಯೋತ್ಪಾದನಾ ವಿರೋಧಿ ಹಿಂದೂ ಪರವಾದ ಪೋಸ್ಟ್

ಬೆಳ್ತಂಗಡಿ : ಪ್ರಚೋದನಕಾರಿ ಪೋಸ್ಟ್‌ ಆರೋಪದಲ್ಲಿ ಸೆರೆಯಾಗಿದ್ದ ಯುವತಿಗೆ ಮಧ್ಯರಾತ್ರಿ ಜಾಮೀನು Read More »

ಇರಾನ್‌ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸದಿರಲು ಇಸ್ರೇಲ್‌ ನಿರ್ಧಾರ

ಜಾಗತಿಕವಾಗಿ ಇಂಧನ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಯುದ್ಧ ನೀತಿ ಬದಲಾವಣೆ ಜೆರುಸಲೇಂ: ಜಾಗತಿಕವಾಗಿ ಇಂಧನ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮನವಿ ಬಳಿಕ ಇರಾನ್​​ನ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ಇಸ್ರೇಲ್ ನಿರ್ಧರಿಸಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಇಪ್ಪತ್ತು ದಿನಗಳ ಜಂಟಿ ಕಾರ್ಯಾಚರಣೆಗಳ ನಂತರ ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಇರಾನ್‌ನ ಸಾಮರ್ಥ್ಯ ದುರ್ಬಲಗೊಂಡಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ. ಆರಂಭಿಕ ಹಂತದ ಯುದ್ಧ

ಇರಾನ್‌ ಅನಿಲ ಸ್ಥಾವರಗಳ ಮೇಲೆ ದಾಳಿ ನಡೆಸದಿರಲು ಇಸ್ರೇಲ್‌ ನಿರ್ಧಾರ Read More »

ಯುದ್ಧದ ನಡುವೆಯೇ ಮೂವರು ಯುವಕರನ್ನು ಸಾರ್ವಜನಿಕವಾಗಿ ಗಲ್ಲೆಗೇರಿಸಿದ ಇರಾನ್‌ ಸರ್ಕಾರ

ಸರ್ಕಾರಿ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದಲ್ಲಿ ಸೆರೆಯಾಗಿದ್ದ ಯುವಕರು ಟೆಹ್ರಾನ್‌ : ಘನಘೋರ ಸಮರದ ನಡುವೆಯೇ ಇರಾನ್‌ ಮೂವರು ಹೋರಾಟಗಾರರನ್ನು ಗುರುವಾರ ಸಾರ್ವಜನಿಕವಾಗಿ ಗಲ್ಲೆಗೇರಿಸಿದೆ. 19ರ ಹರೆಯದ ಕುಸ್ತಿ ಚಾಂಪಿಯನ್‌ ಸಲೇಹ್‌ ಮೊಹಮ್ಮದಿ, ಸಯೀದ್‌ ದಾವೂದಿ ಮತ್ತು ಮೆಹ್ದಿ ಘಸೇಮಿ ಎಂಬವರನ್ನು ಗಲ್ಲಿಗೇರಿಸಲಾಗಿದೆ. ಇವರು ಕಳೆದ ಜನವರಿ 8ರಂದು ನಡೆದ ಸರ್ಕಾರಿ ವಿರುದ್ಧದ ಪ್ರತಿಭಟನೆ ವೇಳೆ ಇಬ್ಬರು ಪೊಲೀಸರನ್ನು ಕೊಂದ ಆರೋಪ ಹೊತ್ತಿದ್ದರು. ಇರಾನ್‌ನ ಖೋಮ್‌ ನಗರದಲ್ಲಿ ಸಾರ್ವಜನಿಕವಾಗಿ ಈ ಮೂವರು ಯುವಕರನ್ನು ಗಲ್ಲೆಗೇರಿಸಲಾಗಿದೆ ಎಂದು ವರದಿಗಳು

ಯುದ್ಧದ ನಡುವೆಯೇ ಮೂವರು ಯುವಕರನ್ನು ಸಾರ್ವಜನಿಕವಾಗಿ ಗಲ್ಲೆಗೇರಿಸಿದ ಇರಾನ್‌ ಸರ್ಕಾರ Read More »

ಅಸಭ್ಯ ಹಾಡಿಗೆ ಕುಣಿದ ನಟಿ ನೋರಾ ಫತೇಹಿ ವಿರುದ್ಧ ಫತ್ವಾ

ಬಿರುಗಾಳಿ ಎಬ್ಬಿಸಿರುವ ಕೆಡಿ ಚಿತ್ರದ ಅಸಭ್ಯ ಹಾಡು ಲಖನೌ: ಕೆಡಿ ಸಿನಿಮಾದ ವಿವಾದಿತ `ಸರ್ಸೆ ಸೆರಗ ಸರ್ಸೆ’ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಬಾಲಿವುಡ್‌ ನಟಿ ನೋರಾ ಫತೇಹಿ ವಿರುದ್ಧ ಇಸ್ಲಾಂ ಧರ್ಮದ ಮುಖಂಡರು ಫತ್ವಾ ಹೊರಡಿಸಿದ್ದಾರೆ. ಉತ್ತರ ಪ್ರದೇಶದ ಆಲಿಗಢದ ಮುಸ್ಲಿಂ ದಾರುಲ್ ಇಫ್ತಾದಿಂದ ಮುಖಂಡರು `ಸರ್ಸೆ ಸೆರಗ ಸರ್ಸೆ’ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಫತ್ವಾ ಜಾರಿ ಮಾಡಿದ್ದಾರೆ. ಈ ಹಾಡು ಆಕ್ಷೇಪಾರ್ಹವಾಗಿದ್ದು, ಇಸ್ಲಾಮಿಕ್ ಬೋಧನೆಗಳಿಗೆ ವಿರುದ್ಧವೆಂದು ಪರಿಗಣಿಸುವ ವಿಷಯಗಳನ್ನು ಹೊಂದಿದೆ. ಹೀಗಾಗಿ ಈ

ಅಸಭ್ಯ ಹಾಡಿಗೆ ಕುಣಿದ ನಟಿ ನೋರಾ ಫತೇಹಿ ವಿರುದ್ಧ ಫತ್ವಾ Read More »

ಕರಾವಳಿಯಲ್ಲಿ ಇಂದು ಈದ್‌ ಹಬ್ಬ ಆಚರಣೆ : ಜಿಲ್ಲಾಧಿಕಾರಿಗಳಿಂದ ರಜೆ ಘೋಷಣೆ

ಗುರುವಾರ ರಾತ್ರಿ ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಹಬ್ಬ ಮಂಗಳೂರು : ಗುರುವಾರ ಸಂಜೆ ಶವ್ವಾಲ್ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಮಾರ್ಚ್ 20ರ ಶುಕ್ರವಾರದಂದು ಈದ್-ಉಲ್-ಫಿತರ್ ಹಬ್ಬವನ್ನು ಆಚರಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಆಗಿರುವ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಚಂದ್ರ ದರ್ಶನವಾಗಿರುವುದಾಗಿ ತಿಳಿಸಿದ್ದು, ಶುಕ್ರವಾರ ಹಬ್ಬವನ್ನು ಆಚರಿಸುವಂತೆ ಸಮುದಾಯಕ್ಕೆ ಕರೆ ನೀಡಿದ್ದಾರೆ ಎಂದು ಮಸೀದಿ ಝೀನತ್ ಭಕ್ಷ್ ಇದರ ಕೋಶಾಧಿಕಾರಿ ಹಾಜಿ ಎಸ್.

ಕರಾವಳಿಯಲ್ಲಿ ಇಂದು ಈದ್‌ ಹಬ್ಬ ಆಚರಣೆ : ಜಿಲ್ಲಾಧಿಕಾರಿಗಳಿಂದ ರಜೆ ಘೋಷಣೆ Read More »

ತಲೆನೋವಿಗೆ ‌ಮನೆಯಲ್ಲೇ ಇದ್ದ ಔಷಧ ಸೇವಿಸಿ ಬಾಲಕ ಸಾವು

ಕಡಬ: ತಲೆನೋವಿಗೆಂದು ‌ಮನೆಯಲ್ಲೇ ಇದ್ದ ಔಷಧ ಕುಡಿದ ಪರಿಣಾಮ 10 ವರ್ಷದ ಬಾಲಕ ಮೃತ ಪಟ್ಟ ಘಟನೆ ರಾಮಕುಂಜದಲ್ಲಿ ‌ನಡೆದಿದೆ. ಈ ಸಂಬಂಧ ಮೃತ ಬಾಲಕನ ತಂದೆ ಸಂಜೀವ ಪೂಜಾರಿ ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಅವರ ಪುತ್ರನಿಗೆ ‌ಪದೇ ಪದೇ ತಲೆನೋವು ಕಾಣಿಸಿಕೊಂಡಿದೆ. ಮಾ. 18 ರಂದು ತಲೆನೋವು ಎಂದು ಹುಡುಗ ಮನೆಯಲ್ಲೇ ಇದ್ದ ಔಷಧ ಕುಡಿದಿದ್ದಾನೆ. ಆ ಬಳಿಕ ಆರೋಗ್ಯ ಹದೆಗೆಟ್ಟು ಬಾಲಕ ಕಂಗಾಲಾಗಿ ‌ನರಳಿದ್ದಾನೆ. ತಕ್ಷಣವೇ ಅವನನ್ನು ಆಸ್ಪತ್ರೆಗೆ

ತಲೆನೋವಿಗೆ ‌ಮನೆಯಲ್ಲೇ ಇದ್ದ ಔಷಧ ಸೇವಿಸಿ ಬಾಲಕ ಸಾವು Read More »

ತಾಯಿ, ಸಹೋದರಿಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಸ್ನೇಹಿತನನ್ನು ಹತ್ಯೆಗೈದ ಯುವಕ ಪೊಲೀಸ್ ವಶಕ್ಕೆ

ಬೆಂಗಳೂರು: ತನ್ನ ತಾಯಿ ಮತ್ತು ಸಹೋದರಿಗೆ ‌ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸ್ನೇಹಿತನನ್ನು ಯುವಕನೊಬ್ಬ ಹತ್ಯೆ ಮಾಡಿದ ಘಟನೆ ಆವಲಹಳ್ಳಿಯಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಬಿಹಾರ ಮೂಲದ ಕುನಾಲ್ (22) ಎಂದು ಗುರುತಿಸಲಾಗಿದೆ. ಕೊಲೆಗಾರನನ್ನು ನಸ್ರುಲ್ಲಾ(24) ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಹದಿನೈದು ದಿನಗಳ ಹಿಂದೆ ಇವರಿಬ್ಬರ ನಡುವೆ ಜಗಳ ನಡೆದಿತ್ತು.‌ ಈ ಸಂದರ್ಭದಲ್ಲಿ ನಸ್ರುಲ್ಲಾನ ತಾಯಿ ಮತ್ತು ಸಹೋದರಿಯ ಬಗ್ಗೆ ಕುನಾಲ್ ಕೆಟ್ಟದಾಗಿ ಮಾತನಾಡಿದ್ದು, ಇದರಿಂದ ಆಕ್ರೋಶಗೊಂಡಿದ್ದ ನಸ್ರುಲ್ಲಾ ಮದ್ಯದ ಅಮಲಿನಲ್ಲಿ ಕುನಾಲ್‌ನ ರೂಮ್‌ಗೆ ನುಗ್ಗಿ ಆತನ

ತಾಯಿ, ಸಹೋದರಿಯ ಬಗ್ಗೆ ಅವಾಚ್ಯವಾಗಿ ಮಾತನಾಡಿದ ಸ್ನೇಹಿತನನ್ನು ಹತ್ಯೆಗೈದ ಯುವಕ ಪೊಲೀಸ್ ವಶಕ್ಕೆ Read More »

ಜಾತ್ರೆಯಲ್ಲಿ ಅನ್ಯಕೋಮಿನ ಬಾಲಕನ ಮೇಲೆ ಹಲ್ಲೆ : ಕೇಸ್‌ ದಾಖಲು

ಕಾಲೇಜಿನ ಗೆಳೆಯರೊಂದಿಗೆ ಜಾತ್ರೆಗೆ ಬಂದಿದ್ದ ಬಾಲಕ ಬೆಳ್ತಂಗಡಿ : ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅನ್ಯಕೋಮಿನ 17 ವಯಸ್ಸಿನ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಎನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ ಅಪಹರಿಸಿ ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ ಮಾ.11ರಂದು ತನ್ನ ಸ್ನೇಹಿತರೊಂದಿಗೆ ಉಜಿರೆ

ಜಾತ್ರೆಯಲ್ಲಿ ಅನ್ಯಕೋಮಿನ ಬಾಲಕನ ಮೇಲೆ ಹಲ್ಲೆ : ಕೇಸ್‌ ದಾಖಲು Read More »

error: Content is protected !!
Scroll to Top