ಸುದ್ದಿ

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ

ಮೂರು ಮಕ್ಕಳ ಶವಗಳನ್ನು ಮಂಚದೊಳಗಿಟ್ಟಿದ್ದ ಹಂತಕರು ಲಖನೌ: ಉತ್ತರ ಪ್ರದೇಶದ ಮೇರಠ್‌ ಜಿಲ್ಲೆಯ ಲಿಸಡಿ ಗೇಟ್‌ ಎಂಬಲ್ಲಿ ಒಂದೇ ಕುಟುಂಬದ ಐದು ಮಂದಿ ಕೊಲೆಯಾದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ತಂದೆ, ತಾಯಿ ಮತ್ತು ಮೂರು ಮಕ್ಕಳನ್ನು ಕೊಲೆಮಾಡಿದ್ದಾರೆ. ತಂದೆ, ತಾಯಿ ಶವ ನೆಲದಲ್ಲಿ ಬಿದ್ದಿದ್ದರೆ ಮಕ್ಕಳ ಶವಗಳು ಮಂಚದೊಳಗಿನ ಬಾಕ್ಸ್‌ನಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದವರನ್ನು ಮೊಯಿನ್‌, ಅವರ ಹೆಂಡತಿ ಅಸ್ಮಾ ಮಕ್ಕಳಾದ ಅಫ್ಸಾ (8), ಅಜೀಜ (4) ಮತ್ತು ಅದಿಬ(1) ಎಂದು ಗುರುತಿಸಲಾಗಿದೆ. ಕೆಲದಿನಗಳಿಂದ ಮನೆಯವರು […]

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ Read More »

ಬೈಕ್ ಅಪಘಾತದಲ್ಲಿ ಗಾಯಗೊಂಡ ನಿಶಾಂತ್, ಕಾರ್ತಿಕ್ ಅವರಿಗೆ ವಜ್ರತೇಜಸ್ ತಂಡದಿಂದ ಧನಸಹಾಯ ಹಸ್ತಾಂತರ

ಪುತ್ತೂರು : ದಾರಂದಕುಕ್ಕು ಸಮೀಪ ನಿನ್ನೆ ನಡೆದ ಬೈಕ್ ಮತ್ತು ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳಾದ ಬೆಳ್ಳಿಪ್ಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಅವರಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ವಜ್ರತೇಜಸ್ ತಂಡದಿಂದ ಧನಸಹಾಯ ನೀಡಲಾಯಿತು. ಗುರುವಾರ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ವಜ್ರತೇಜಸ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊದಲ ಕಂತಿನ ಮೊತ್ತವನ್ನು ಅವರ ಮನೆಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಜ್ರತೇಜಸ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ವಿಶ್ವ

ಬೈಕ್ ಅಪಘಾತದಲ್ಲಿ ಗಾಯಗೊಂಡ ನಿಶಾಂತ್, ಕಾರ್ತಿಕ್ ಅವರಿಗೆ ವಜ್ರತೇಜಸ್ ತಂಡದಿಂದ ಧನಸಹಾಯ ಹಸ್ತಾಂತರ Read More »

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡು ಬಂಧನದಲ್ಲಿದ್ದ ಪ್ರಜ್ವಲ್ ರೇವಣ್ಣ ರಿಗೆ ಹೈಕೋರ್ಟ್ ತಾತ್ಕಾಲಿಕವಾಗಿ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್‌ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ಮುಂದಿನ

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಧ್ವಂಸ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣವಾಗಿ ಸುಟ್ಟಿರುವ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ. ವಿನೋದಾ ಎಂಬವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸುಮಾರು ರಾತ್ರಿ 8 ರ ವೇಳೆ ವಿದ್ಯುತ್ ಶಾರ್ಟ್ ಸಕ್ಯೂಟ್‌  ಸಂಭವಿಸಿದೆ. ಈ ವೇಳೆ  ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಿನೋದ ಅವರ ಮನೆ ಕಡೆ ತೆರಳಿ ನೋಡಿದಾಗ  ಬೆಂಕಿ ಮನೆಯೊಳಗೆ ಆವರಿಸಿಕೊಂಡಿರುವುದು  ಬೆಳಕಿಗೆ ಬಂದಿದೆ. ತಕ್ಷಣ ಮನೆಯೊಡತಿಗೆ ವಿಚಾರ ತಿಳಿಸಿ ಮನೆ ಬಾಗಿಲು ಮುರಿದು

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಧ್ವಂಸ Read More »

ಸಾಲಭಾದೆಯಿಂದ ಯುವಕ ಆತ್ಮಹತ್ಯೆ

ಮೂಡಬಿದಿರೆ : ಸಾಲ ಭಾದೆಯಿಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಎಂಬುವವರು  ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಈ ವೇಳೆ ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ. ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರೆನ್ನಲಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದರು. ಬುಧವಾರ ಬೆಡ್ ರೂಂನಲ್ಲಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಸಾಲಭಾದೆಯಿಂದ ಯುವಕ ಆತ್ಮಹತ್ಯೆ Read More »

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು

ಮಂಗಳೂರು : ಲಂಚ ಸ್ವೀಕರಿಸುತ್ತಿದ್ದ ವೇಳೆ  ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್‌.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶೆ ಸಂಧ್ಯಾ ಎಸ್ ಅರ್ಜಿಯನ್ನು ವಜಾಗೊಳಿಸಿ, ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. 2024ರ ಡಿಸೆಂಬರ್ 19ರಂದು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಿನೇಶ್ ಅವರನ್ನು ಬಂಧಿಸಿದ್ದಲ್ಲದೆ, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ

ಲಂಚ ಸ್ವೀಕರಿಸಿದ ನಿಮಿತ್ತ ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ರದ್ದು Read More »

ಅಮೆರಿಕ : 15 ಸಾವಿರ ಎಕರೆ ಪ್ರದೇಶದಲ್ಲಿ ಕಾಡ್ಗಿಚ್ಚು – 5 ಮಂದಿ ಸಜೀವ ದಹನ

ಸಾವಿರಕ್ಕೂ ಅಧಿಕ ಕಟ್ಟಡ ಬೆಂಕಿಗಾಹುತಿ; 1 ಲಕ್ಷ ಮಂದಿ ಸ್ಥಳಾಂತರ ವಾಷಿಂಗ್ಟನ್‌: ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದ ನಗರ ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಬೆಂಕಿ ನಿಯಂತ್ರಿಸಲು ಸರಕಾರ ಹರಸಾಹಸ ಪಡುತ್ತಿದೆ. ಇಷ್ಟರತನಕ ಕನಿಷ್ಠ 5 ಮಂದಿ ಸಜೀವ ದಹನವಾಗಿದ್ದಾರೆ. ಅಪಾರ ಪ್ರಮಾಣದ ಅರಣ್ಯ ಮತ್ತು ಸೊತ್ತು ನಾಶವಾಗಿದೆ. 15,832 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿಹೊತ್ತಿ ಉರಿಯುತ್ತಿದೆ. 1,000 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸುಮಾರು 1 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಇನ್ನೂ

ಅಮೆರಿಕ : 15 ಸಾವಿರ ಎಕರೆ ಪ್ರದೇಶದಲ್ಲಿ ಕಾಡ್ಗಿಚ್ಚು – 5 ಮಂದಿ ಸಜೀವ ದಹನ Read More »

ಕಡಬ :  ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ

ಕಡಬ : ಕಡಬ ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ಒರುoಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಜ.10ರಂದು ನಡೆಯಲಿದೆ. ಕೆಮ್ಮಿoಜೆ ನಾಗೇಶ್ ತಂತ್ರಿ ಅವರ ನೇತೃತ್ವದಲ್ಲಿ ಒರುಬಾoಲು ಶ್ರೀ ಉಮಾಮಹೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳ್ಳಿಗೆ 7.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿ ಹೋಮ, ಪಂಚವಿoಶತಿ  ನಡೆಯಲಿದೆ. ನಂತರ ಸಾಮೂಹಿಕ ಸತ್ಯನಾರಾಯಣ ಪೂಜೆ ಜರುಗಲಿದೆ. ಬಳಿಕ ಬೆಳಿಗ್ಗೆ 11.00 ಗಂಟೆಗೆ ಶ್ರೀ ದೇವರಿಗೆ ಕಳಶಾಭಿಷೇಕ, ನಾಗ ದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳಿಗೆ ತಂಬಿಲ ಸೇವೆ

ಕಡಬ :  ಶ್ರೀ ಉಮಾಮಹೇಶ್ವರ ದೇವಸ್ಥಾನದ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ Read More »

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ

ಮಹಾರಾಷ್ಟ್ರದ ಹಳ್ಳಿಗಳಲ್ಲಿ ಕಾಣಿಸಿಕೊಂಡ ವಿಚಿತ್ರ ಸಮಸ್ಯೆ ಮುಂಬಯಿ : ಮಹಾರಾಷ್ಟ್ರದ ಬುಲ್ಢಾನ ಜಿಲ್ಲೆಯ ಮೂರು ಹಳ್ಳಿಗಳಲ್ಲಿ ಕಳೆದ ಸುಮಾರು ಎರಡು ವಾರದಿಂದ ಜನರು ವಿಚಿತ್ರವಾದ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಮಕ್ಕಳು, ವಯಸ್ಕರು, ಪುರುಷರು, ಮಹಿಳೆಯರು, ವೃದ್ಧರೆನ್ನದೆ ಈ ಹಳ್ಳಿಗಳಲ್ಲಿ ಜನರು ಹಠಾತ್‌ ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ. ಸುಮಾರು 50 ಜನ ಈಗಾಗಲೇ ಕೂದಲು ಉದುರಿ ಹೋಗಿ ಬೊಕ್ಕ ತಲೆಯವರಾಗಿದ್ದಾರೆ. ವಿಶೇಷ ಎಂದರೆ ಕೆಲವು ಮಕ್ಕಳ ತಲೆಕೂದಲು ಕೂಡ ಉದುರಿ ಹೋಗಿದೆ. ಕೆಲವು ಯುವಕರ ಗಡ್ಡ ಉದುರುತ್ತಿದೆ.

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ Read More »

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ

ಸುಳ್ಯ: ತಾಯಿಯೊಬ್ಬಳು ತನ್ನ  ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಾವೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಹಿನ್ನಲೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಆರೋಪಿ ತಾಯಿ ಕಾವ್ಯಶ್ರೀ ಎಂದು ಗುರುತಿಸಲಾಗಿದೆ. ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿ ತಾಯಿಯೋರ್ವಳು ಬಿಸಿ ಹಾಲಿನ ಪಾತ್ರೆಯಿಂದ ತನ್ನ ಐದು ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟಿರುವಂತದ್ದು ಆ.16  2022ರಂದು ನಡೆದಿದೆ.  ಈ ಕುರಿತು ತಾಯಿ ಕಾವ್ಯಶ್ರೀ ವಿರುದ್ಧ ಮಹಿಳಾ ಮತ್ತು

ತಾಯಿಯೇ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ಪ್ರಕರಣ| 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಲಾಯ Read More »

error: Content is protected !!
Scroll to Top