ಸುದ್ದಿ

ಸಂಘಟನೆಗಳು ಬೆಳೆಯಲು ಆರ್ಥಿಕದ ಜೊತೆಗೆ ಭೌತಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜಮುಖಿ ಚಿಂತನೆ ಇದ್ದಾಗ ಸಮಾಜ ಬೆಳೆಯಲು ಸಾಧ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಪ್ರತಿಯೊಂದು ಮನೆಯಲ್ಲೂ ಕೆಂಪೇಗೌಡರು ಹುಟ್ಟಬೇಕು : ಡಾ.ಶಾಂತಾ ಸುರೇಂದ್ರ | ಗುರು, ಗುರಿಯಲ್ಲಿ ಸ್ಪಷ್ಟತೆಯಿದ್ದಾಗ ಸಮಾಜಕ್ಕೆ ಸಂದೇಶ ನೀಡಬಲ್ಲದು : ಸಂಜೀವ ಮಠಂದೂರು | ಸಂಭ್ರಮದಿಂದ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಒಕ್ಕಲಿಗ ಸ್ವಸಹಾಯ ಟ್ರಸ್ಟ್‍ ನ ನೂತನ ಸಭಾಭವನ ಉದ್ಘಾಟನೆ

ಪುತ್ತೂರು : ಯಾವುದೇ ಸಮುದಾಯದಲ್ಲೂ ಕೇವಲ ಸಂಘ ಸಂಸ್ಥೆಗಳಿದ್ದರೆ ಸಾಲದು. ಬದಲಾಗಿ ಸಂಘ ಸಂಸ್ಥೆಗಳಲ್ಲಿರುವವರು ಭೌತಿಕ ಹಾಗೂ ಆರ್ಥಿಕವಾಗಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು. ಈ ಮೂಲಕ ದೇಶವನ್ನು ಕಟ್ಟಿ ತಾನೂ ಬೆಳೆಯಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ನುಡಿದರು. ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಆಶ್ರಯದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆದ ಒಕ್ಕಲಿಗ ಸ್ವಸಹಾಯ ಸಂಘದ ದಶಮಾನೋತ್ಸವ ಸಂಭ್ರಮ ಹಾಗೂ ಒಕ್ಕಲಿಗ […]

ಸಂಘಟನೆಗಳು ಬೆಳೆಯಲು ಆರ್ಥಿಕದ ಜೊತೆಗೆ ಭೌತಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು : ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ | ಸಮಾಜಮುಖಿ ಚಿಂತನೆ ಇದ್ದಾಗ ಸಮಾಜ ಬೆಳೆಯಲು ಸಾಧ್ಯ : ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ | ಪ್ರತಿಯೊಂದು ಮನೆಯಲ್ಲೂ ಕೆಂಪೇಗೌಡರು ಹುಟ್ಟಬೇಕು : ಡಾ.ಶಾಂತಾ ಸುರೇಂದ್ರ | ಗುರು, ಗುರಿಯಲ್ಲಿ ಸ್ಪಷ್ಟತೆಯಿದ್ದಾಗ ಸಮಾಜಕ್ಕೆ ಸಂದೇಶ ನೀಡಬಲ್ಲದು : ಸಂಜೀವ ಮಠಂದೂರು | ಸಂಭ್ರಮದಿಂದ ನಡೆದ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ | ಒಕ್ಕಲಿಗ ಸ್ವಸಹಾಯ ಟ್ರಸ್ಟ್‍ ನ ನೂತನ ಸಭಾಭವನ ಉದ್ಘಾಟನೆ Read More »

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ

ಕಂಬಳಕ್ಕೂ ಬಂತು ಕ್ರಿಕೆಟ್‌, ಫುಟ್‌ಬಾಲ್‌ನ ಕಠಿಣ ನಿಯಮ ಮೂಡುಬಿದಿರೆ: ಕ್ರಿಕೆಟ್‌, ಫುಟ್‌ಬಾಲ್‌ ಮುಂತಾದ ಕ್ರೀಡೆಗಳಲ್ಲಿರುವ ನಿಯಮಗಳನ್ನು ಕಂಬಳಕ್ಕೂ ಅಳವಡಿಸಿಕೊಳ್ಳಲು ಕಂಬಳ ಸಮಿತಿ ತೀರ್ಮಾನಿಸಿದೆ. ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದರೆ ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ನಿರ್ಧಾರ

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ Read More »

ಸದ್ಯದಲ್ಲೇ ಏರಿಕೆಯಾಗಲಿದೆ ಹಾಲಿನ ಬೆಲೆ

ಲೀಟರಿಗೆ 8-10 ರೂ. ಹೆಚ್ಚಿಸಲು ಪ್ರಸ್ತಾವ ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆ ಮಾಡಿ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆ ಹಾಲಿನ

ಸದ್ಯದಲ್ಲೇ ಏರಿಕೆಯಾಗಲಿದೆ ಹಾಲಿನ ಬೆಲೆ Read More »

ಬಿಲ್‌ ಪಾಸ್‌ ಮಾಡಿ ಇಲ್ಲವೇ ದಯಾಮರಣ ಕರುಣಿಸಿ : ಗುತ್ತಿಗೆದಾರನಿಂದ ಸಿಎಂಗೆ ಪತ್ರ

ಒಂದು ವರ್ಷದಿಂದ ಬಿಲ್‌ಗಾಗಿ ಅಲೆದಾಡುತ್ತಿರುವ ಗುತ್ತಿಗೆದಾರ ಬೆಂಗಳೂರು: ಬಿಲ್‌ ಪಾಸ್‌ ಆಗದೆ ಕಂಗಾಲಾಗಿರುವ ಸರಕಾರಿ ಗುತ್ತಿಗೆದಾರರೊಬ್ಬರು ಒಂದೋ ಬಿಲ್‌ ಪಾಸ್‌ ಮಾಡಿಸಿ ಇಲ್ಲವೇ ದಯಾಮರಣವನ್ನಾದರೂ ಕರುಣಿಸಿ ಎಂದು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮನವರಿಗೆ ಪತ್ರ ಬರೆದಿದ್ದಾರೆ. ಬಿಟ್ಟಿ ಭಾಗ್ಯಗಳಿಂದ ರಾಜ್ಯ ದಿವಾಳಿಯಾಗಿದ್ದು, ಕಾಮಗಾರಿ ಮಾಡಲು ಸರಕಾರದ ಬಳಿ ಹಣ ಇಲ್ಲ ಎಂಬ ಕೂಗು ಕೇಳಿಸುತ್ತಿರುವಾಗಲೇ ನಡೆದಿರುವ ಈ ಬೆಳವಣಿಗೆ ವಿಪಕ್ಷದ ಕೈಗೆ ಇನ್ನೊಂದು ಅಸ್ತ್ರವಾಗಿ ಸಿಕ್ಕಿದೆ.ದಾವಣಗೆರೆ ಜಿಲ್ಲೆಯ ಹರಿಹರದ ಕ್ಲಾಸ್‌ ಒನ್‌ ಗುತ್ತಿಗೆದಾರ ಮೊಹಮ್ಮದ್‌ ಮಝರ್‌ ಎಂಬವರು ಈ

ಬಿಲ್‌ ಪಾಸ್‌ ಮಾಡಿ ಇಲ್ಲವೇ ದಯಾಮರಣ ಕರುಣಿಸಿ : ಗುತ್ತಿಗೆದಾರನಿಂದ ಸಿಎಂಗೆ ಪತ್ರ Read More »

ಇ.ಡಿ.ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಯಿಂದ 30 ಲ.ರೂ. ದರೋಡೆ

ವಿಟ್ಲ: ಜಾರಿ ನಿರ್ದೇಶನಾಲಯದ ಅಧಿಕಾರಿಗಳಂತೆ ಸೋಗು ಹಾಕಿ ವಿಟ್ಲದ ಬೀಡಿ ಉದ್ಯಮಿಯೊಬ್ಬರ ಮನೆಯಿಂದ 30 ಲ.ರೂ. ದರೋಡೆ ಮಾಡಿದ ಘಟನೆ ಸಂಭವಿಸಿದೆ. ಬಂಟ್ವಾಳ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಎಂಬವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರಿನಲ್ಲಿ ಆಗಮಿಸಿದ ತಂಡ ತಮ್ಮನ್ನು ಇ.ಡಿ.ಅಧಿಕಾರಿಗಳೆಂದು ಪರಿಚಯಿಸಿಕೊಂಡಿದೆ. ಬಳಿಕ ಮನೆಯಲ್ಲಿ ಸುಮಾರು ಎರಡು ತಾಸು ಶೋಧ ನಡೆಸುವ ನಾಟಕವಾಡಿದೆ.

ಇ.ಡಿ.ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಯಿಂದ 30 ಲ.ರೂ. ದರೋಡೆ Read More »

ಎಂಎಲ್‌ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಪೂರಿತ ಸಿಹಿತಿಂಡಿ ರವಾನೆ

ಹೊಸವರ್ಷದ ಗ್ರೀಟಿಂಗ್‌ ಜೊತೆಗೆ ವಿಷಪೂರಿತ ಸಿಹಿತಿಂಡಿ ರವಾನಿಸಿದ ದುಷ್ಕರ್ಮಿಗಳು ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್‌ಗಳನ್ನು ಮೂವರಿಗೆ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಹಿತಿಂಡಿಗಳ ಬಾಕ್ಸ್‌ ಸ್ವೀಕರಿಸಿದ ಮೂವರಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್ ಎನ್ ನಾಗರಾಜ್ ಸಹ ಒಬ್ಬರಾಗಿದ್ದಾರೆ. ಜನವರಿ 1ರಂದು ಅಜ್ಞಾತ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, ಡಿಟಿಡಿಸಿ ಕೊರಿಯರ್ ಮೂಲಕ

ಎಂಎಲ್‌ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಪೂರಿತ ಸಿಹಿತಿಂಡಿ ರವಾನೆ Read More »

ಎಚ್‌ಎಂಪಿವಿ ವೈರಸ್‌ ಸೋಂಕಿಗೆ ಸಾಮಾನ್ಯ ಎಚ್ಚರಿಕೆ ಸಾಕು : ಕೇಂದ್ರ ಮಾರ್ಗಸೂಚಿ

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಶೀತ ಜ್ವರದ ಚಿಕಿತ್ಸೆ ಪಡೆಯಲು ಸಲಹೆ ಹೊಸದಿಲ್ಲಿ : ಚೀನದಲ್ಲಿ ಕಂಡು ಬಂದಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ. ಎಲ್ಲ ಉಸಿರಾಟದ ಸೋಂಕುಗಳ ವಿರುದ್ಧ ತೆಗೆದುಕೊಳ್ಳುವ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು ಎಂದು ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಹೇಳಿದೆ. ನಾವು ದೇಶದಲ್ಲಿ ಉಸಿರಾಟದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದಾಖಲಾದ ರೋಗಿಗಳ ಡೇಟಾವನ್ನು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024ರ ಡೇಟಾದಲ್ಲಿ ಯಾವುದೇ ಗಣನೀಯ ಹೆಚ್ಚಳ ಕಂಡುಬಂದಿಲ್ಲ. ನಮ್ಮ ಯಾವುದೇ ಸಂಸ್ಥೆಗಳಿಂದ ಹೆಚ್ಚಿನ

ಎಚ್‌ಎಂಪಿವಿ ವೈರಸ್‌ ಸೋಂಕಿಗೆ ಸಾಮಾನ್ಯ ಎಚ್ಚರಿಕೆ ಸಾಕು : ಕೇಂದ್ರ ಮಾರ್ಗಸೂಚಿ Read More »

ಚೀನಾದಲ್ಲಿ ಹರಡುತ್ತಿದೆ ಕೊರೊನಕ್ಕಿಂತಲೂ ಅಪಾಯಕಾರಿ ವೈರಸ್‌

ಆಸ್ಪತ್ರೆ, ಸ್ಮಶಾನಗಳು ತುಂಬಿ ತುಳುಕುತ್ತಿರುವ ವೀಡಿಯೊಗಳು ವೈರಲ್‌ ಬೀಜಿಂಗ್‌ : ಇಡೀ ಜಗತ್ತಿಗೆ ಕೊರೊನ ವೈರಸ್‌ ಹರಡಿ ತತ್ತರಿಸುವಂತೆ ಮಾಡಿದ್ದ ಚೀನಾದಲ್ಲಿ ಐದು ವರ್ಷಗಳ ಬಳಿಕ ಇದೇ ಮಾದರಿಯ ಇನ್ನೊಂದು ವೈರಸ್‌ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಸೋಷಿಯಲ್‌ ಮೀಡಿಯಾಗಳಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ. ಎಕ್ಸ್‌, ಫೇಸ್‌ಬುಕ್‌, ವಾಟ್ಸಪ್‌, ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಸೇರಿದಂತೆ ಎಲ್ಲ ಸೋಷಿಯಲ್‌ ಮೀಡಿಯಾಗಳಲ್ಲಿ ಈ ವೈರಸ್‌ ಕುರಿತು ಚರ್ಚೆಯಾಗುತ್ತಿದೆ. ಕೆಲವರು ಆಸ್ಪತ್ರೆಗಳು ತುಂಬಿ ತುಳುಕುತ್ತಿರುವ, ಸ್ಮಶಾನಗಳಲ್ಲಿ ಸಾಲಾಗಿ ಹೆಣಗಳನ್ನು ಇಟ್ಟಿರುವ ವೀಡಿಯೊಗಳನ್ನು ಹಂಚಿಕೊಂಡು ಇದು ಕೊರೊನ

ಚೀನಾದಲ್ಲಿ ಹರಡುತ್ತಿದೆ ಕೊರೊನಕ್ಕಿಂತಲೂ ಅಪಾಯಕಾರಿ ವೈರಸ್‌ Read More »

ಶ್ರೀ ರಾಮ ಭಜನಾ ತಂಡದ ಭಜನಾ ಕೀರ್ತನ ಸಂಭ್ರಮ | ಭಕ್ತಿ-ಭಾವ ಕುಣಿತದ ಸಮ್ಮಿಲನ

ಪುತ್ತೂರು : ಶ್ರೀ ರಾಮ ಭಜನಾ ತಂಡ ಆನಡ್ಕ, ಪುತ್ತೂರು ಇದರ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಭಜನಾ ಕೀರ್ತನ ಸಂಭ್ರಮ, ಭಕ್ತಿ-ಭಾವ- ಕುಣಿತದ ಸಮ್ಮಿಲನವು ಜ.5 ರಂದು ಆನಡ್ಕದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮ ಸಂಜೆ 7ಗಂಟೆಗೆ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಡ್ಕದ ಶ್ರೀ ರಾಮ ಭಜನಾ ತಂಡ ಅಧ್ಯಕ್ಷ ಗುರುಪ್ರಸಾದ್‍ ವಾಲ್ತಾಜೆ, ಮುಖ್ಯ ಅತಿಥಿಯಾಗಿ ಪುತ್ತೂರು ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್‍ ಕೊಡಂಕಿರಿ, ಪುತ್ತೂರು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‍

ಶ್ರೀ ರಾಮ ಭಜನಾ ತಂಡದ ಭಜನಾ ಕೀರ್ತನ ಸಂಭ್ರಮ | ಭಕ್ತಿ-ಭಾವ ಕುಣಿತದ ಸಮ್ಮಿಲನ Read More »

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ

ಗೃಹ ಸಚಿವರ ತವರು ಜಿಲ್ಲೆಯಲ್ಲೇ ನಡೆದ ಘಟನೆ ತುಮಕೂರು : ದೂರು ನೀಡಲು ಕಚೇರಿಗೆ ಬಂದ ಮಹಿಳೆಯ ಜೊತೆ ಡಿವೈಎಸ್‌ಪಿ ದರ್ಜೆಯ ಪೊಲೀಸ್‌ ಅಧಿಕಾರಿಯೇ ಅಸಭ್ಯವಾಗಿ ವರ್ತಿಸಿದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಪೊಲೀಸ್‌ ಇಲಾಖೆ ತಲೆ ತಗ್ಗಿಸುವಂತಾಗಿದೆ. ಗೃಹ ಸಚಿವ ಜಿ.ಪರಮೇಶ್ವರ್‌ ಅವರ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದೆ. ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದು, ವೀಡಿಯೊ ವೈರಲ್‌ ಆದ ಬಳಿಕ ಅವರು ತಲೆಮರೆಸಿಕೊಂಡಿದ್ದಾರೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು

ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್‌ಪಿ ಅಸಭ್ಯ ವರ್ತನೆ Read More »

error: Content is protected !!
Scroll to Top