ಸುದ್ದಿ

ಪಾಕಿಸ್ಥಾನದಲ್ಲಿ 22 ಭಯೋತ್ಪಾದಕರ ಹತ್ಯೆ

ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ 6 ಸೈನಿಕರ ಸಾವು ಇಸ್ಲಾಮಾಬಾದ್‌: ವಾಯುವ್ಯ ಪಾಕಿಸ್ಥಾನದ ಖೈಬರ್ ಪಖ್ತುನ್‌ಖ್ವಾ ಪ್ರಾಂತ್ಯದಲ್ಲಿ ಎರಡು ದಿನಗಳ ಕಾಲ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 22 ಭಯೋತ್ಪಾದಕರನ್ನು ಪಾಕಿಸ್ಥಾನದ ಭದ್ರತಾ ಪಡೆ ಹತ್ಯೆಗೈದಿದೆ. ಈ ಕಾರ್ಯಾಚರಣೆಯಲ್ಲಿ ಆರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ಥಾನದ ಸೇನೆಯ ಮಾಧ್ಯಮ ವಿಭಾಗ ತಿಳಿಸಿದೆ.ಗುಪ್ತಚರ ಮಾಹಿತಿ ಆಧಾರದ ಮೇಲೆ ಖೈಬರ್ ಪುಖ್ತುನ್‌ಖ್ವಾದ ಟ್ಯಾಂಕ್, ಉತ್ತರ ವಜಿರಿಸ್ಥಾನ್ ಮತ್ತು ಥಾಲ್ ಜಿಲ್ಲೆಗಳಲ್ಲಿ ಡಿ.6 ಮತ್ತು 7ರಂದು ಈ ಕಾರ್ಯಾಚರಣೆ ನಡೆಸಲಾಗಿದೆ. ಟ್ಯಾಂಕ್ ಜಿಲ್ಲೆಯಲ್ಲಿ, […]

ಪಾಕಿಸ್ಥಾನದಲ್ಲಿ 22 ಭಯೋತ್ಪಾದಕರ ಹತ್ಯೆ Read More »

ಮಂಗಳೂರಿನಲ್ಲಿ ಕಲಿಯುತ್ತಿದ್ದ ಗೋಣಿಕೊಪ್ಪದ ಯುವಕ ನಿಗೂಢವಾಗಿ ನಾಪತ್ತೆ

ದೀಪಾವಳಿ ರಜೆ ಮುಗಿಸಿ ಕಾಲೇಜಿಗೆಂದು ಹೊರಟವ ಕಣ್ಮರೆ, ಊರೂರು ಅಲೆದು ಹುಡುಕುತ್ತಿರುವ ತಾಯಿ ಮಡಿಕೇರಿ: ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಮಡಿಕೇರಿಯ ದೀಕ್ಷಿತ್‌ (17) ಎಂಬ ಯುವಕ ಕಳೆದ ಸುಮಾರು ಒಂದು ತಿಂಗಳಿಂದ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ದೀಪಾವಳಿ ಹಬ್ಬದ ರಜೆಯಲ್ಲಿ ಮನೆಗೆ ಬಂದಿದ್ದ ಯುವಕ ರಜೆ ಮುಗಿಸಿ ಕಾಲೇಜಿಗೆಂದು ಹೊರಟವ ಅತ್ತ ಹಾಸ್ಟೆಲ್‌ ತಲುಪದೆ ಇತ್ತ ಮನೆಗೂ ಬಾರದೆ ನಾಪತ್ತೆಯಾಗಿದ್ದಾನೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಗ ಕಾಣೆಯಾಗಿ ಒಂದು ತಿಂಗಳು ಕಳೆದರೂ

ಮಂಗಳೂರಿನಲ್ಲಿ ಕಲಿಯುತ್ತಿದ್ದ ಗೋಣಿಕೊಪ್ಪದ ಯುವಕ ನಿಗೂಢವಾಗಿ ನಾಪತ್ತೆ Read More »

ಡಿ.25 : ಕಡಬ ಹೊಸಮಠದಲ್ಲಿರುವ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಚೇರಿ ಉದ್ಘಾಟನೆ, ವಾರ್ಷಿಕ ಕ್ರೀಡಾಕೂಟ | ಪೂರ್ವಭಾವಿ ಸಭೆ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಕಡಬದ ಹೊಸಮಠದಲ್ಲಿರುವ ನೂತನ ಸಮುದಾಯ ಭವನದಲ್ಲಿ ಡಿ.25 ರಂದು ನಡೆಯುವ ಸಂಘದ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭ ಹಾಗೂ ತಾಲೂಕು ಮಟ್ಟದ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಪೂರ್ವಭಾವಿ ಸಭೆ ಶನಿವಾರ ಕಡಬದಲ್ಲಿ ನಡೆಯಿತು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮ ಯಶಸ್ಸಿನ ಕುರಿತು ಚರ್ಚಿಸಲಾಯಿತು. ಅಂದು ಬೆಳಿಗ್ಗೆ 7 ಗಂಟೆಗೆ ನಾಗ ತಂಬಿಲ ಹಾಗೂ

ಡಿ.25 : ಕಡಬ ಹೊಸಮಠದಲ್ಲಿರುವ ನೂತನ ಸಮುದಾಯ ಭವನದಲ್ಲಿ ಸಂಘದ ಆಡಳಿತ ಕಚೇರಿ ಉದ್ಘಾಟನೆ, ವಾರ್ಷಿಕ ಕ್ರೀಡಾಕೂಟ | ಪೂರ್ವಭಾವಿ ಸಭೆ Read More »

ಹಿಂದೂ ಯುವತಿ ಹಾಗೂ ಮಹಿಳೆಗೆ ಕಿರುಕುಳ : ಆರೋಪಿ ಸೈಯದ್ ನಯೀಮ್ ಬಂಧನ

ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆಯ ಮನೆಗೆ ಬಂದು ಯುವಕನೋರ್ವ ಬಂದು ಕಿರುಕಳ ಮತ್ತು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಈತ ಮಹಿಳೆಗೆ ರವಿ ಎಂಬ ಹೆಸರಿನಲ್ಲಿ ಒಂದು ವರ್ಷದ ಹಿಂದೆ ಪರಿಚಯವಾಗಿದ್ದು ಆಗಾಗ ಮಹಿಳೆ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವೂ ಇತ್ತೆಂದು ತಿಳಿದು ಬಂದಿದೆ. ಶುಕ್ರವಾರ ಬೆಳಿಗ್ಗೆ ಬಂದಿದ್ದ ಯುವಕ ಮಹಿಳೆ ಮತ್ತು ಮಹಿಳೆಯ ಅಕ್ಕನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಮಹಿಳೆ ಮತ್ತು ಯುವಕನ ಮಧ್ಯೆ ಗಲಾಟೆ

ಹಿಂದೂ ಯುವತಿ ಹಾಗೂ ಮಹಿಳೆಗೆ ಕಿರುಕುಳ : ಆರೋಪಿ ಸೈಯದ್ ನಯೀಮ್ ಬಂಧನ Read More »

ಡ್ರಗ್ಸ್‌ ದಂಧೆ : 63 ವರ್ಷದ ಮಹಿಳೆ ಬಂಧನ; 40 ಕೆಜಿ ಗಾಂಜಾ ವಶ

ಮಾದಕವಸ್ತು ವ್ಯಾಪಾರದಿಂದಲೇ ಕೋಟಿಗಟ್ಟಲೆ ಸಂಪಾದಿಸಿದ್ದ ಲೇಡಿ ಡಾನ್‌ ಬೆಂಗಳೂರು: ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಮಾಡುತ್ತಿದ್ದ 63 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ಪೊಲೀಸರು ಸಹ ಆಕೆಯೊಂದಿಗೆ ಕೈಜೋಡಿಸಿದ್ದಾರೆ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ. ಮಹಿಳೆಯ ಮನೆಯಿಂದ 40 ಕೆಜಿ ಗಾಂಜಾ, 33 ಲಕ್ಷ ರೂ. ನಗದು, ಮಚ್ಚು ಸೇರಿದಂತೆ ಎಂಟು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧಾರದ ಮೇರೆಗೆ ಬ್ಯಾಟರಾಯನಪುರ ಪೊಲೀಸರು ಮಾದಕವಸ್ತು ಮಾರಾಟಗಾರ್ತಿ ಕಾಲಿ ಮೆಹರುನಿಸಾ ಒಡೆತನದ ಹಲವು

ಡ್ರಗ್ಸ್‌ ದಂಧೆ : 63 ವರ್ಷದ ಮಹಿಳೆ ಬಂಧನ; 40 ಕೆಜಿ ಗಾಂಜಾ ವಶ Read More »

ಕುವೈಟ್‌ನ ಬ್ಯಾಂಕಿಗೇ 700 ಕೋ. ರೂ. ವಂಚಿಸಿದ ಮಲಯಾಳಿಗಳು

ಸಾಲ ಪಡೆದು ಸ್ವದೇಶಕ್ಕೆ ಪಲಾಯನ ತಿರುವನಂತಪುರ: ಕುವೈಟ್‌ಗೆ ಉದ್ಯೋಗಕ್ಕೆ ತೆರಳಿದ ಕೇರಳದವರು ಅಲ್ಲಿನ ಗಲ್ಫ್‌ ಬ್ಯಾಂಕ್‌ಗೆ 700 ಕೋ. ರೂ.ಅಧಿಕ ಮೊತ್ತ ವಂಚಿಸಿ ಪಲಾಯನ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಗಲ್ಫ್‌ ಬ್ಯಾಂಕ್‌ನ ಡೆಪ್ಯುಟಿ ಜನರಲ್‌ ಮ್ಯಾನೇಜರ್‌ ಕೇರಳಕ್ಕೆ ಬಂದು ಈ ಕುರಿತು ದೂರು ನೀಡಿದ ಬಳಿಕ ಕೇರಳ ಪೊಲೀಸರು ವಂಚನೆ ಕುರಿತು ತನಿಖೆ ಪ್ರಾರಂಭಿಸಿದ್ದಾರೆ. ವಿಶೇಷವೆಂದರೆ ಸಾಲ ಪಡೆದು ವಂಚಿಸಿದವರಲ್ಲಿ ಬಹುತೇಕ ಮಂದಿ ನರ್ಸ್‌ ಕೆಲಸಕ್ಕಾಗಿ ಕುವೈಟ್‌ಗೆ ಹೋದ ಮಹಿಳೆಯರು. ಗಲ್ಫ್‌ ಬ್ಯಾಂಕ್‌ನ ಕುವೈಟ್‌ ಷೇರ್‌

ಕುವೈಟ್‌ನ ಬ್ಯಾಂಕಿಗೇ 700 ಕೋ. ರೂ. ವಂಚಿಸಿದ ಮಲಯಾಳಿಗಳು Read More »

ಶಬರಿಮಲೆಯಲ್ಲಿ ನಟನಿಗೆ ವಿಶೇಷ ದರ್ಶನ ಸೌಲಭ್ಯ : ಹೈಕೋರ್ಟ್‌ ಗರಂ

ಯಾವ ನೆಲೆಯಲ್ಲಿ ನಟನಿಗೆ ಈ ಸೌಲಭ್ಯ ನೀಡಲಾಯಿತು ಎಂದು ಪ್ರಶ್ನೆ ಕೊಚ್ಚಿ : ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯಕ್ಕೆ ಒದಗಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆ ಮತ್ತು ತಿರುವಾಂಕೂರು ದೇವಸ್ವಂ ಬೋರ್ಡನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದೆ. ನ್ಯಾ.ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾ.ಮುರಳಿ ಕೃಷ್ಣ ಎಸ್. ಅವರಿಂದ ದ್ವಿಸದಸ್ಯ ಪೀಠ, ನಟನಿಗೆ ಯಾವ ಆಧಾರದ ಮೇಲೆ ವಿಶೇಷ ದರ್ಶನ ಅವಕಾಶ ನೀಡಲಾಯಿತು ಎಂದು ಪ್ರಶ್ನಿಸಿದೆ. ದಿಲೀಪ್

ಶಬರಿಮಲೆಯಲ್ಲಿ ನಟನಿಗೆ ವಿಶೇಷ ದರ್ಶನ ಸೌಲಭ್ಯ : ಹೈಕೋರ್ಟ್‌ ಗರಂ Read More »

ಭಾರತದ ಮೇಲೆ ಮತ್ತೆ ದಾಳಿ : ಉಗ್ರ ಮಸೂದ್ ಅಜರ್ ಉಗ್ರ ಪ್ರತಿಜ್ಞೆ

ಪಾಕಿಸ್ಥಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಾರತ ಹೊಸದಿಲ್ಲಿ: ಭಾರತದ ಮೇಲೆ ಮತ್ತೆ ದಾಳಿ ಮಾಡುತ್ತೇನೆ ಎಂದು ಪಾಕಿಸ್ಥಾನದ ಉಗ್ರಗಾಮಿ ಸಂಘಟನೆ ಜೈಶ್‌ ಎ ಮೊಹಮ್ಮದ್‌ನ ಮುಖಂಡ ಮಸೂದ್‌ ಅಜರ್‌ ಉಗ್ರ ಪ್ರತಿಜ್ಞೆ ಮಾಡಿದ್ದಾನೆ. ನಿಷೇಧಿತ ಭಯೋತ್ಪಾದನಾ ಸಂಘಟನೆಯಾಗಿರುವ ಜೈಶ್-ಎ-ಮೊಹಮ್ಮದ್ 2011ರ ಸಂಸತ್ ದಾಳಿಯಂತಹ ಭಯೋತ್ಪಾದಕ ಕೃತ್ಯಗಳನ್ನು ಎಸಗಿದ್ದು, ಈ ದಾಳಿಗಳ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ ಆಗಿದ್ದಾನೆ. ಅವನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಕಿಸ್ಥಾನವನ್ನು ಭಾರತ ಒತ್ತಾಯಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದ ಇಸ್ಲಾಮಿಕ್ ಸೆಮಿನರಿಯಲ್ಲಿ

ಭಾರತದ ಮೇಲೆ ಮತ್ತೆ ದಾಳಿ : ಉಗ್ರ ಮಸೂದ್ ಅಜರ್ ಉಗ್ರ ಪ್ರತಿಜ್ಞೆ Read More »

ಜಗತ್ತು ಹೆಚ್ಚು ನೆನಪಿಡುವುದು ಮೊದಲಿಗರನ್ನು ಮಾತ್ರ

ನೀವು ಕೂಡಾ ಪಯೋನೀರ್ ಆಗಬಹುದು ಜಗತ್ತಿನಲ್ಲಿ ಯಾವುದೇ ಸಾಧನೆಯನ್ನು ಮೊದಲು ಮಾಡಿದವರನ್ನು ಪಯೋನೀರ್ ಎಂದು ಕರೆಯುತ್ತಾರೆ. ಜಗತ್ತು ಅವರನ್ನು ಮಾತ್ರ ಹೆಚ್ಚು ನೆನಪಿಟ್ಟುಕೊಳ್ಳುತ್ತದೆ. 1) ಭಾರತದ ಮೊತ್ತಮೊದಲ ಮಹಿಳಾ ವೈದ್ಯೆ ಎಂದರೆ ಅದು ಡಾಕ್ಟರ್ ಆನಂದಿಬಾಯಿ ಜೋಶಿ. ಅದರ ನಂತರ ಸಾವಿರಾರು ಮಹಿಳೆಯರು ವೈದ್ಯರಾದರು. ಜಗತ್ತು ಅವರನ್ನೆಲ್ಲ ಗಮನಿಸಿದ್ದು ಕಡಿಮೆ. 2) ಜುಲೈ 20, 1969ರಂದು ಚಂದ್ರನ ಮೇಲೆ ಮೊದಲ ಹೆಜ್ಜೆ ಇರಿಸಬೇಕಾದದ್ದು ಎಡ್ವಿನ್ ಆಲ್ಡ್ರಿನ್. ಆದರೆ ಆತ ಸ್ವಲ್ಪ ಅಳುಕಿದ ಕಾರಣ ನೀಲ್ ಆರ್ಮ್‌ಸ್ಟ್ರಾಂಗ್ ಮೊದಲು

ಜಗತ್ತು ಹೆಚ್ಚು ನೆನಪಿಡುವುದು ಮೊದಲಿಗರನ್ನು ಮಾತ್ರ Read More »

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಯಿಂದ ಕಾಂಗ್ರೆಸ್ ಬಣ್ಣ ಬಯಲು ಮಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್‌ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ ಮೂಲಕ ನಗರ ಪ್ರದೇಶದ ಬಡವರಿಗೆ ಸ್ವಂತ ಸೂರು ಅಥವಾ ಮನೆ ಸೌಲಭ್ಯ ಒದಗಿಸುವ ಈ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರಾಸಕ್ತಿ

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ Read More »

error: Content is protected !!
Scroll to Top