ಸುದ್ದಿ

ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ

ಕೊನೇ ಕ್ಷಣದವರೆಗೂ ಮತದಾರರನ್ನು ಒಲಿಸಲು ಕಸರತ್ತು ಮಾಡಿದ ಪಕ್ಷಗಳು ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ನಡೆಯಲಿದೆ. ಮೂರು ಕ್ಷೇತ್ರಗಳ ಶಾಸಕರು ಲೋಕಸಭೆಗೆ ಸ್ಪರ್ಧಿಸಿ ಗೆದ್ದ ಹಿನ್ನೆಲೆಯಲ್ಲಿ ಈ ಉಪಚುನಾವಣೆ ಬಂದಿದೆ. ಮೂರೇ ಕ್ಷೇತ್ರವಾಗಿದ್ದರೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿನ ಹೋರಾಟದ ಪರಿಣಾಮವಾಗಿ ಈ ಉಪಚುನಾವಣೆ ಭಾರಿ ಕುತೂಹಲ ಕೆರಳಿಸಿದೆ.ಹಗರಣಗಳ ಸುಳಿಯಲ್ಲಿ ಸಿಲುಕಿರುವ ಕಾಂಗ್ರೆಸ್‌ ತನ್ನ ಜನಪ್ರಿಯತೆ ಇನ್ನೂ ಕುಸಿದಿಲ್ಲ ಎನ್ನುವುದನ್ನು ಈ ಉಪಚುನಾವಣೆಯ ಮೂರೂ ಸ್ಥಾನಗಳನ್ನು ಗೆದ್ದು […]

ಇಂದು ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ Read More »

ಯಡಿಯೂರಪ್ಪ ವಿರುದ್ಧ ತನಿಖೆಗೆ ಇನ್ನೊಂದು ಸಮಿತಿ ರಚನೆ

ಕೆಕೆಆರ್‌ಡಿಬಿಯ 300 ಕೋ. ರೂ. ಅನುದಾನ ದುರ್ಬಳಕೆ ಆರೋಪ ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 2020-2023ರಲ್ಲಿ ಕೆಕೆಆರ್‌ಡಿಬಿಗೆ ಬಿಡುಗಡೆ ಮಾಡಿದ 300 ಕೋಟಿ ಅನುದಾನದಲ್ಲಿ ವ್ಯಾಪಕ ಅವ್ಯವಹಾರ ನಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ಸಮಿತಿ ರಚಿಸುವ ಮೂಲಕ ಕಾಂಗ್ರೆಸ್‌ ಸರಕಾರ ಬಿಜೆಪಿಯನ್ನು ಹಣಿಯಲು ಇನ್ನೊಂದು ಅಸ್ತ್ರ ರೆಡಿ ಮಾಡಿದೆ. ಕಲ್ಯಾಣ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಅಕ್ರಮದ ಕುರಿತು ತನಿಖೆಗೆ ಆದೇಶ ಹೊರಡಿಸಿ ಕೋವಿಡ್ ಹಗರಣದ ತನಿಖೆಗೆ ಬಳಿಕ ಯಡಿಯೂರಪ್ಪ ವಿರುದ್ಧ ಮತ್ತೊಂದು ಹಗರಣದ ತನಿಖೆಗೆ

ಯಡಿಯೂರಪ್ಪ ವಿರುದ್ಧ ತನಿಖೆಗೆ ಇನ್ನೊಂದು ಸಮಿತಿ ರಚನೆ Read More »

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ

ಅರಣ್ಯ ಒತ್ತುವರಿ ತೆರವು ಆದೇಶದ ಬಳಿಕ ನಕ್ಸಲರು ಸಕ್ರಿಯ? ಕೊಪ್ಪ : ಕಾರ್ಕಳ ಮತ್ತು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಕ್ಸಲ್‌ ಓಡಾಟದ ಶಂಕೆ ವ್ಯಕ್ತವಾದ ಬೆನ್ನಲ್ಲೇ ನಕ್ಸಲ್‌ ನಿಗ್ರಹ ಪಡೆಯವರು ಚಿಕ್ಕಮಗಳೂರಿನ ಕೊಪ್ಪದಲ್ಲಿ ಕಾಡಂಚಿನಲ್ಲಿರುವ ಮನೆಯೊಂದರಿಂದ ಮೂರು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಇದು ಈ ಭಾಗದಲ್ಲಿ ನಕ್ಸಲರು ಓಡಾಡಿದ ಅನುಮಾನವನ್ನು ದೃಢಪಡಿಸುತ್ತದೆ ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಕ್ಸಲರು ಓಡಾಡಿದ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಇದಕ್ಕೂ ಎರಡು ದಿನ ಮೊದಲು ಕಾರ್ಕಳದ ಈದು ಪರಿಸರದಲ್ಲೂ ಇದೇ ಮಾದರಿಯ ಸುದ್ದಿ

ಕೊಪ್ಪದ ಮನೆಯೊಂದರಲ್ಲಿ ಮೂರು ಬಂದೂಕು ಪತ್ತೆ : ನಕ್ಸಲರು ನುಸುಳಿರುವ ಶಂಕೆ Read More »

ಶಬರಿಮಲೆ ಯಾತ್ರೆಗೆ ದೇವಸ್ವಂ ಬೋರ್ಡ್‌ ಮಾರ್ಗಸೂಚಿ ಬಿಡುಗಡೆ

ಇರುಮಡಿ ಕಟ್ಟಿನಲ್ಲಿ ಈ ವಸ್ತುಗಳು ಇರಲೇಬಾರದು ಎಂದು ಸೂಚನೆ ಶಬರಿಮಲೆ : ಮಂಡಲ ಮತ್ತು ಮಕರ ವಿಳಕ್ಕು ಯಾತ್ರೆಗೈಯ್ಯುವ ಅಯ್ಯಪ್ಪ ಭಕ್ತರ ಇರುಮುಡಿಯಲ್ಲಿ ಏನೇನು ಇರಬೇಕು ಮತ್ತು ಇರಬಾರದು ಎಂಬುದರ ಕುರಿತು ಕೇರಳದ ದೇವಸ್ವಂ ಬೋರ್ಡ್‌ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿದೆ. ಶಬರಿಮಲೆಯ ಮುಖ್ಯ ಅರ್ಚಕ ಕಂಡರಾರು ರಾಜೀವಾರು ನೀಡಿದ ಸೂಚನೆ ಪ್ರಕಾರ ಈ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ದೇವಸ್ವಂ ಬೋರ್ಡ್‌ ಹೇಳಿಕೊಂಡಿದೆ.ಶಬರಿಮಲೆ ಯಾತ್ರೆಗೈಯ್ಯುವವರು ಇಡುಮುಡಿ ಹೊತ್ತುಕೊಂಡು ಸಾಗಬೇಕಾಗುತ್ತದೆ. ಇರುಮುಡಿಯನ್ನು ಮುಂದಿನ ಕಟ್ಟು ಮತ್ತು ಹಿಂದಿನ ಕಟ್ಟು ಎಂದು ಎರಡು

ಶಬರಿಮಲೆ ಯಾತ್ರೆಗೆ ದೇವಸ್ವಂ ಬೋರ್ಡ್‌ ಮಾರ್ಗಸೂಚಿ ಬಿಡುಗಡೆ Read More »

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ

ಕರ್ನಾಟಕ ಸೇರಿ ಒಂಬತ್ತು ರಾಜ್ಯಗಳಲ್ಲಿ ಎನ್‌ಐಎ ದಾಳಿ ಬೆಂಗಳೂರು : ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಅಲ್‌ ಖೈದಾ ಜಾಲವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಭಾರತವನ್ನು ಅಸ್ಥಿರಗೊಳಿಸಲು ಅಲ್​ ಖೈದಾ ಉಗ್ರ ಸಂಘಟನೆಯ ಸಂಚು ಮಾಡಿರುವ ಕುರಿತು ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ.

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ Read More »

ಭದ್ರತಾ ಪಡೆ ಗುಂಡಿಗೆ 11 ಉಗ್ರರು ಬಲಿ

ಹೊಸದಿಲ್ಲಿ : ಮಣಿಪುರದ ಜಿರಿಬಾಮ್‌ ಎಂಬಲ್ಲಿ ಭದ್ರತಾ ಪಡೆಗಳು 11 ಕುಕಿ ಉಗ್ರರನ್ನು ಹತ್ಯೆ ಮಾಡಿದೆ. ಭದ್ರತಾ ಪಡೆ ಶಿಬಿರದ ಮೇಲೆ ನಿನ್ನೆ ರಾತ್ರಿ ಕುಕಿ ಉಗ್ರರು ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ನಡೆದ ಭೀಕರ ಗುಂಡಿನ ಕಾಳದಲ್ಲಿ 11 ಕುಕಿ ಉಗ್ರರು ಹತ್ಯೆಯಾಗಿ ಓರ್ವ ಸಿಆರ್‌ಪಿಎಫ್‌ ಜವಾನ ಗಂಭೀರವಾಗಿ ಗಾಯಗೊಂಡಿದ್ದಾರೆ.ಭದ್ರತಾ ಪಡೆ ಶಿಬಿರಕ್ಕೆ ಸಮೀಪವಿದ್ದ ಜಾಕರ್‌ಧುರ್‌ ಎಂಬಲ್ಲಿ ಕುಕಿ ಉಗ್ರರು ಜನವಸತಿಯಿಲ್ಲದ ಮೈತೇಯಿ ಸಮುದಾಯದವರ ನಾಲ್ಕು ಮನೆಗಳನ್ನು ಸುಟ್ಟು ಹಾಕಿದ್ದಾರೆ. ಭಾನುವಾರದಿಂದೀಚೆಗೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ

ಭದ್ರತಾ ಪಡೆ ಗುಂಡಿಗೆ 11 ಉಗ್ರರು ಬಲಿ Read More »

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ

ಡೆತ್‌ನೋಟ್‌ನಲ್ಲಿತ್ತು ಪಕ್ಷಿಕೆರೆಯಲ್ಲಿ ನಡೆದ ಬೆಚ್ಚಿಬೀಳಿಸಿದ ಕೃತ್ಯದ ಹಿಂದಿನ ಕಾರಣ ಮಂಗಳೂರು: ಮೂಲ್ಕಿ ಸಮೀಪ ಕೆಮ್ರಾಲ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಸಂಭವಿಸಿದ್ದ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮೂಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೃತ ಕಾರ್ತಿಕ್‌ನ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್‌ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಇಬ್ಬರನ್ನು ಪೊಲೀಸರು

ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆ ಪ್ರಕರಣ : ಇಬ್ಬರ ಬಂಧನ Read More »

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್‌ ಖನ್ನ ಪ್ರಮಾಣ

ಭಾರತದ 51ನೇ ಮುಖ್ಯ ನ್ಯಾಯಮೂರ್ತಿ ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನ್ಯಾಯಮೂರ್ತಿ ಖನ್ನಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಅವರು ಮೇ 13, 2025 ರವರೆಗೆ ಅಧಿಕಾರದಲ್ಲಿರುತ್ತಾರೆ. ನ್ಯಾಯಮೂರ್ತಿ ಖನ್ನಾ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸುವುದು, ಆರ್ಟಿಕಲ್ 370 ರದ್ದತಿಯನ್ನು ಎತ್ತಿಹಿಡಿಯುವುದು ಸೇರಿದಂತೆ ಸುಪ್ರೀಂ ಕೋರ್ಟ್‌ನ ಹಲವಾರು ಮಹತ್ವದ

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ಸಂಜೀವ್‌ ಖನ್ನ ಪ್ರಮಾಣ Read More »

ಉಪಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯ

ಘಟಾನುಘಟಿಗಳಿಂದ ಭರ್ಜರಿ ಮತಯಾಚನೆ ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ 6 ಗಂಟೆಗೆ ಅಂತ್ಯವಾಗಲಿದೆ. ನಂತರ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ.ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿವೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ.ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.

ಉಪಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯ Read More »

ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ

ರಕ್ಷಿಸಿ ಎರಡೇಟು ಬಿಗಿದು ಬುದ್ಧಿ ಕಲಿಸಿದ ಜನ ಮಂಗಳೂರು : ಗುರುಪುರ ಸೇತುವೆ ಮೇಲಿಂದ ವ್ಯಕ್ತಿಯೊಬ್ಬ 2 ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ಗುರುತಿಸಲಾಗಿದೆ. ಸೇತುವೆಯ ತಡೆಗೋಡೆ ಏರಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆದು ರಕ್ಷಿಸಿ ಥಳಿಸಿದ್ದಾರೆ. ಮೊದಲಿಗೆ ಕೆಲ ಮುಸ್ಲಿಂ ಯುವಕರು ಸಂದೀಪ್‌ನ ಮನವೊಲಿಸುವ ಪ್ರಯತ್ನ ಮಾಡಿದ್ದಾಗ ಅವನು ಯಾರನ್ನೂ ಸಮೀಪಕ್ಕೆ ಬಿಟ್ಟುಕೊಂಡಿಲ್ಲ. ಈ

ಮಗುವಿನ ಜೊತೆ ಸೇತುವೆಯಿಂದ ಜಿಗಿಯಲು ಯತ್ನಿಸಿದ ಯುವಕ Read More »

error: Content is protected !!
Scroll to Top