ಸುದ್ದಿ

28 ಬಂಡಾಯ ಅಭ್ಯರ್ಥಿಗಳು ಅಮಾನತು : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಶಾಕ್‌

ಚುನಾವಣೆ ಹೊಸ್ತಿಲಲ್ಲಿ ಭಾರಿ ಹಿನ್ನಡೆ ಅನುಭವಿಸಿದ ಕಾಂಗ್ರೆಸ್‌ ಮುಂಬಯಿ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್‌ ಭಾರಿ ಹಿನ್ನಡೆ ಅನುಭವಿಸಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ 7 ಬಂಡಾಯ ಅಭ್ಯರ್ಥಿಗಳನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ಭಾನುವಾರ ರಾತ್ರಿ ಅಮಾನತುಗೊಳಿಸಿದೆ. ಈ ಮೂಲಕ ಚುನಾವಣೆ ಘೋಷಣೆಯಾದ ಬಳಿಕ ಅಮಾನತುಗೊಂಡ ನಾಯಕರ ಸಂಖ್ಯೆ 28ಕ್ಕೇರಿದೆ.ಅಮಾನತುಗೊಂಡಿರುವ ನಾಯಕರಲ್ಲಿ ಶಾಮಕಾಂತ್ ಸನೇರ್, ರಾಜೇಂದ್ರ ಠಾಕೂರ್, ಅಬಾ ಬಾಗುಲ್, ಮನೀಶ್ ಆನಂದ್, ಸುರೇಶ್ ಕುಮಾರ್ ಜೇತ್ಲಿಯಾ, ಕಲ್ಯಾಣ್ ಬೋರಾಡೆ ಮತ್ತು ಚಂದ್ರಪಾಲ್ […]

28 ಬಂಡಾಯ ಅಭ್ಯರ್ಥಿಗಳು ಅಮಾನತು : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಶಾಕ್‌ Read More »

ಸಚಿವ ಜಮೀರ್‌ಗೂ ರಾಜ್ಯಪಾಲರ ತನಿಖೆಯ ಸಂಕಷ್ಟ

ಹೈಕೋರ್ಟ್‌ ತೀರ್ಪು ಟೀಕಿಸಿದ ಜಮೀರ್‌ ವಿರುದ್ಧ ಕ್ರಮಕ್ಕೆ ಸೂಚನೆ ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ.ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ.ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ

ಸಚಿವ ಜಮೀರ್‌ಗೂ ರಾಜ್ಯಪಾಲರ ತನಿಖೆಯ ಸಂಕಷ್ಟ Read More »

ವೋಟು ಬೇಕಾ ಆರ್‌ಎಸ್‌ಎಸ್‌ ನಿಷೇಧಿಸಿ, 1000 ಕೋ. ರೂ. ಕೊಡಿ!

ಕಾಂಗ್ರೆಸ್‌ ಮೈತ್ರಿಕೂಟಕ್ಕೆ ಬೆಂಬಲ ನೀಡಲು ಷರತ್ತು ಹಾಕಿದ ಉಲೇಮಾ ಬೋರ್ಡ್‌ ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಣ ಕಾವೇರಿದ್ದು ವಿವಿಧ ಸಮುದಾಯಗಳ ಬೆಂಬಲ ಗಳಿಸಲು ಪಕ್ಷಗಳು ನಾನಾ ರೀತಿಯ ಕಸರತ್ತು ನಡೆಸುತ್ತಿವೆ. ಈ ನಡುವೆ ಕಾಂಗ್ರೆಸ್-ಶಿವಸೇನೆ ಉದ್ಧವ್ ಠಾಕ್ರೆ ಬಣ, ಸಮಾಜವಾದಿ ಪಕ್ಷಗಳ ಮಹಾವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ (ಎಂವಿಎ) ಬೆಂಬಲ ಸೂಚಿಸಲು ಆಲ್‌ ಇಂಡಿಯಾ ಉಲೇಮಾ ಬೋರ್ಡ್‌ ಆರ್‌ಎಸ್‌ಎಸ್ ನಿಷೇಧ, 1000 ಕೋ. ರೂ. ಅನುದಾನ ಸೇರಿದಂತೆ 17 ಷರತ್ತುಗಳನ್ನು ಮುಂದಿಟ್ಟು ಪತ್ರ ಬರೆದಿರುವುದು ಇಡೀ ದೇಶದಲ್ಲಿ

ವೋಟು ಬೇಕಾ ಆರ್‌ಎಸ್‌ಎಸ್‌ ನಿಷೇಧಿಸಿ, 1000 ಕೋ. ರೂ. ಕೊಡಿ! Read More »

ಮಂಗಳೂರು-ಬೆಂಗಳೂರು ಮಧ್ಯೆ ನಿರ್ಮಾಣವಾಗಲಿದೆ ಎಕ್ಸ್‌ಪ್ರೆಸ್‌ ವೇ

ಪ್ರಯಾಣ ಸಮಯ 3-4 ತಾಸಿಗಿಳಿಸಲು ಹೈಸ್ಪೀಡ್‌ ರೋಡ್‌ ನಿರ್ಮಾಣದ ಪ್ರಸ್ತಾವ ಬೆಂಗಳೂರು : ಎಲ್ಲ ಅಂದುಕೊಂಡಂತೆ ನಡೆದರೆ ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣ ಸುಲಭವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮಾದರಿಯಲ್ಲಿ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಯೋಜನೆಯ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ.ಬೆಂಗಳೂರು-ಮಂಗಳೂರು ಮಧ್ಯೆ ಸುಮಾರು 400 ಕಿ.ಮೀ. ಅಂತರವಿದೆ. ಬಸ್‌ನಲ್ಲಿ ಪ್ರಯಾಣಕ್ಕೆ 7-8 ತಾಸು ಸಮಯ ಬೇಕಾಗುತ್ತದೆ. ಈ ಸಮಯವನ್ನು ಕಡಿಮೆ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಬೆಂಗಳೂರು-ಮಂಗಳೂರು

ಮಂಗಳೂರು-ಬೆಂಗಳೂರು ಮಧ್ಯೆ ನಿರ್ಮಾಣವಾಗಲಿದೆ ಎಕ್ಸ್‌ಪ್ರೆಸ್‌ ವೇ Read More »

ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ : ಸಿ.ಟಿ. ರವಿ

ವೋಟಿನ ಆಸೆಗೆ ನಮ್ಮವರೇ ಕೊಟ್ಟ ವರ ಎಂದು ಆರೋಪ ಚಿಕ್ಕಮಗಳೂರು: ರೈತರ, ಮಠ, ದೇವಸ್ಥಾನಗಳ ಜಮೀನು ಕಬಳಿಸುತ್ತಿರುವ ವಕ್ಫ್‌ ಬೋರ್ಡನ್ನು ಬಿಜೆಪಿ ನಾಯಕ ಸಿ.ಟಿ.ರವಿ ಭಸ್ಮಾಸರನಿಗೆ ಹೋಲಿಸಿದ್ದಾರೆ. ಆಧುನಿಕ ಭಸ್ಮಾಸುರನನ್ನ ನಾಶ ಮಾಡೋದಕ್ಕೆ ಒಬ್ಬ ಮೋಹಿನಿ ಸಾಲಲ್ಲ, ಇಡೀ ಹಿಂದೂ ಸಮಾಜ ಒಂದಾಗಬೇಕು ಎಂದು ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ಹೇಳಿದ್ದಾರೆ.ಚಿಕ್ಕಮಗಳೂರಿನ ದತ್ತಮಾಲಾ ಧರ್ಮ ಸಭೆಯಲ್ಲಿ ವಕ್ಫ್ ವಿರುದ್ಧ ಮಾತನಾಡಿದ ಅವರು, ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ. ವೋಟಿನ ಆಸೆಗೆ ಅವರಿಗೆ ನಮ್ಮವರೇ ವರ ಕೊಟ್ಟರು. ಹಿಂದಿನ

ವಕ್ಫ್ ಬೋರ್ಡ್ ಆಧುನಿಕ ಭಸ್ಮಾಸುರ : ಸಿ.ಟಿ. ರವಿ Read More »

ಶಬರಿಮಲೆ ಯಾತ್ರಿಕರು ಆಧಾರ್‌ ಹೊಂದಿರುವುದು ಕಡ್ಡಾಯ

ಯಾತ್ರಿಕ ಎಂದು ನೋಂದಣಿ ಮಾಡಿಕೊಳ್ಳಲು ಆಧಾರ್‌ ಅಗತ್ಯ ಶಬರಿಮಲೆ : ಮಂಡಲ ಮತ್ತು ಮಕರ ವಿಳಕ್ಕು ಸಂದರ್ಭದಲ್ಲಿ ಶಬರಿಮಲೆ ಯಾತೆಗೈಯ್ಯುವ ಎಲ್ಲ ಭಕ್ತರು ಆಧಾರ್‌ ಕಾರ್ಡ್‌ ಒಯ್ಯಬೇಕೆಂದು ದೇವಸ್ವಂ ಬೋರ್ಡ್‌ ಹೇಳಿದೆ. ಶಬರಿಮಲೆ ಯಾತ್ರಿಕ ಎಂದು ನೋಂದಣಿ ಮಾಡಿಕೊಳ್ಳಲು ಆಧಾರ್‌ ಕಾರ್ಡ್‌ ಅಗತ್ಯವಿರುತ್ತದೆ. ಹೀಗಾಗಿ ಎಲ್ಲ ಯಾತ್ರಿಕರು ಯಾವುದಾದರೊಂದು ರೂಪದ ಆಧಾರ್‌ ಕಾರ್ಡ್‌ ಹೊಂದಿರಬೇಕು ಎಂದು ದೇವಸ್ವಂ ಬೋರ್ಡ್‌ ಹೇಳಿದೆ.ಅನಿವಾಸಿ ಭಾರತೀಯ ಭಕ್ತರು ಆಧಾರ್‌ ಬದಲಾಗಿ ಪಾಸ್‌ಪೋರ್ಟನ್ನು ದಾಖಲೆಯಾಗಿ ತೋರಿಸಬಹುದು. ಈ ಸಲ ಶಬರಿಮಲೆ ಯಾತ್ರೆಗಾಗಿ ಕೇರಳ

ಶಬರಿಮಲೆ ಯಾತ್ರಿಕರು ಆಧಾರ್‌ ಹೊಂದಿರುವುದು ಕಡ್ಡಾಯ Read More »

ಬಿಜೆಪಿಯನ್ನು ಕೋವಿಡ್‌ ಹಗರಣದ ಇಕ್ಕಳದಲ್ಲಿ ಸಿಲುಕಿಸಲು ಕಾಂಗ್ರೆಸ್‌ ವ್ಯೂಹ

ಯಡಿಯೂರಪ್ಪ, ರಾಮುಲು ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಸಿದ್ಧತೆ ಬೆಂಗಳೂರು: ಕೋವಿಡ್‌ ಕಾಲದಲ್ಲಿ ಮಡೆದಿದೆ ಎನ್ನಲಾಗಿರುವ ಅಕ್ರಮ ಕುರಿತಂತೆ ನ್ಯಾಯಾಧೀಶ ಮೈಕಲ್‌ ಕುನ್ಹಾ ಆಯೋಗದ ಮಧ್ಯಂತರ ವರದಿ ಆಧರಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸರಕಾರ ಮುಂದಾಗಿದೆ. ವರದಿಯ ಆಧಾರದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದರೊಂದಿಗೆ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ.

ಬಿಜೆಪಿಯನ್ನು ಕೋವಿಡ್‌ ಹಗರಣದ ಇಕ್ಕಳದಲ್ಲಿ ಸಿಲುಕಿಸಲು ಕಾಂಗ್ರೆಸ್‌ ವ್ಯೂಹ Read More »

ವಕ್ಫ್‌ ನೋಟಿಸ್‌ ಹಿಂಪಡೆಯಲು ಅಧಿಕೃತ ಆದೇಶ

ರೈತರಿಗೆ ತೊಂದರೆ ಕೊಡದಂತೆ ಸಿದ್ದರಾಮಯ್ಯ ಖಡಕ್‌ ಸೂಚನೆ ಬೆಂಗಳೂರು : ರೈತರಿಗೆ ನೀಡಲಾಗಿರುವ ವಕ್ಫ್‌ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಿರಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಆದೇಶದಲ್ಲಿ ಸೂಚಿಸಿದ್ದಾರೆ. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು

ವಕ್ಫ್‌ ನೋಟಿಸ್‌ ಹಿಂಪಡೆಯಲು ಅಧಿಕೃತ ಆದೇಶ Read More »

ಅದೃಷ್ಟ ತಂದ ಕಾರನ್ನು ಶಾಸ್ತ್ರೋಕ್ತವಾಗಿ ಸಮಾಧಿ ಮಾಡಿದ ಕುಟುಂಬ!

ಗುಜರಾತಿನಲ್ಲೊಂದು ವಿಸ್ಮಯದ ಘಟನೆ ಸೂರತ್‌ : ಮನೆಯಲ್ಲಿರುವ ಪ್ರೀತಿಯ ಪ್ರಾಣಿಗಳು ಮೃತಪಟ್ಟಾಗ ಮನೆಯವರು ಮನುಷ್ಯರಿಗೆ ಮಾಡಿದಂತೆ ವಿಧಿವತ್ತಾಗಿ ಅಂತ್ಯಕ್ರಿಯೆ ಮಾಡುವುದುಂಟು. ಕೆಲವರು ಅಂತ್ಯಕ್ರಿಯೆಯ ಬಳಿಕ ಉತ್ತರಕ್ರಿಯೆಯನ್ನೂ ಮಾಡುತ್ತಾರೆ. ಇದು ಆ ಮನೆಯವರು ಸಾಕುಪ್ರಾಣಿಯ ಮೇಲಿಟ್ಟ ಪ್ರೀತಿಯನ್ನು ತೋರಿಸುತ್ತದೆ. ಆದರೆ ಯಾರಾದರೂ ತಮ್ಮ ಮೆಚ್ಚಿನ ಕಾರಿಗೆ ಅಂತ್ಯಕ್ರಿಯೆ ಮಾಡುವುದನ್ನು ಕೇಳಿದ್ದೀರಾ? ಸಾಮಾನ್ಯವಾಗಿ ವಾಹನಗಳು ಹಳೆಯದಾದರೆ ಮಾರಿ ಹೊಸದು ತರುತ್ತೇವೆ. ಕೆಲವರು ಹಳೆಯ ವಾಹನವನ್ನು ಅಭಿಮಾನದಿಂದ ಮನೆಯಲ್ಲೇ ಇಟ್ಟುಕೊಳ್ಳುವುದೂ ಇದೆ. ಆದರೆ ಗುಜರಾತಿನ ಸೂರತ್‌ನಲ್ಲಿರುವ ಒಂದು ಕುಟಂಬ ತಮಗೆ ಅದೃಷ್ಟ

ಅದೃಷ್ಟ ತಂದ ಕಾರನ್ನು ಶಾಸ್ತ್ರೋಕ್ತವಾಗಿ ಸಮಾಧಿ ಮಾಡಿದ ಕುಟುಂಬ! Read More »

ಮತ್ತೆ ಶತಕದತ್ತ ಮುನ್ನುಗ್ಗುತ್ತಿರುವ ಈರುಳ್ಳಿ ಬೆಲೆ

ಮಳೆಯಿಂದಾಗಿ ಬೆಳೆ ನಾಶವಾಗಿ ಇಳುವರಿ ಕುಂಠಿತ ಬೆಂಗಳೂರು : ಈರುಳ್ಳಿ ಬೆಲೆ ಮತ್ತೆ ಏರುಗತಿಯಲ್ಲಿದ್ದು, ಶತಕದತ್ತ ಮುನ್ನುಗ್ಗುತ್ತಿದೆ. ಸದ್ಯ ರಾಜ್ಯದಲ್ಲಿ‌ ಮಳೆ ತಗ್ಗಿದ್ದರೂ ಕಳೆದ ತಿಂಗಳು ಬಂದ ಅಕಾಲಿಕ ಮಳೆಗೆ ಈರುಳ್ಳಿ ಬೆಳೆ ನೀರು‌ಪಾಲಾಗಿರುವುದರಿಂದ ದಿಢೀರ್‌ ಎಂದು ಬೆಲೆ ಏರಲಾರಂಭಿಸಿದೆ. ಕೆಜಿಗೆ 50-60 ರೂ. ಇದ್ದ ಈರುಳ್ಳಿಯ ಬೆಲೆ ಕಳೆದೊಂದು ವಾರದಿಂದ 70 ರಿಂದ 80 ರೂಪಾಯಿವರೆಗೆ ಏರಿಕೆಯಾಗಿದೆ. ಚಿಲ್ಲರೆ ಬೆಲೆ ಕೆಜಿಗೆ 90 ರೂ. ಇದೆ. ಕಳೆದ ಮೂರು ತಿಂಗಳಿನಿಂದ ಈರುಳ್ಳಿಯ ಬೆಲೆ ಏರಿಕೆಯಾಗುತ್ತಲೇ ಇದೆ.

ಮತ್ತೆ ಶತಕದತ್ತ ಮುನ್ನುಗ್ಗುತ್ತಿರುವ ಈರುಳ್ಳಿ ಬೆಲೆ Read More »

error: Content is protected !!
Scroll to Top