ಸುದ್ದಿ

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ನೇಮಕ

ಪುತ್ತೂರು: ಡಿ.ಸಿ.ಆರ್.ಬಿ. ಚಿಕ್ಕಮಗಳೂರು ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ. ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.

ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ನೇಮಕ Read More »

ಜನೌಷಧಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಸಂವಾದ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯಶವಂತಪುರ ಸುಬೇದಾರ್ ಛತ್ರಂ ರಸ್ತೆಯಲ್ಲಿರುವ “ಪ್ರಧಾನಮಂತ್ರಿಗಳ ಜನೌಷಧಿ ಕೇಂದ್ರ”ಕ್ಕೆ ಭೇಟಿ ನೀಡಿ ಜನರ ಜೊತೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾರ್ಖಂಡ್‍ನ ದಿಯೋಘರ್‍ನ ಏಮ್ಸ್‍ನಲ್ಲಿ 10 ಸಾವಿರನೇ ಜನೌಷಧಿ ಕೇಂದ್ರವನ್ನು ಜನತೆಗೆ ಸಮರ್ಪಿಸಿದ್ದಾರೆ. ಮಧ್ಯಮ ವರ್ಗ ಮತ್ತು ಬಡಜನರಲ್ಲಿ ಜನೌಷಧಿ ಕೇಂದ್ರಗಳ ಜನಪ್ರಿಯತೆ ಹೆಚ್ಚುತ್ತಿದೆ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಕೆಲವು ಔಷಧಿಗಳು ಶೇ 70ರಷ್ಟು ಕಡಿಮೆ ದರಕ್ಕೆ ಲಭಿಸುತ್ತವೆ. ಕಳೆದ 9 ವರ್ಷಗಳಲ್ಲಿ, ದೇಶಾದ್ಯಂತ

ಜನೌಷಧಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಸಂವಾದ Read More »

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು

ಭತ್ತ ಕಾಯಲು ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಿಡಿಲು ಬಡಿದು ಮೃತಪಟ್ಟ ಘಟನೆ ಶಿವಮೊಗ್ಗದ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಬೀರು (32) ಹಾಗೂ ಸುರೇಶ್ (30) ಸಿಡಿಲು ಬಡಿತದಿಂದ ಮೃತಪಟ್ಟವರು ಎನ್ನಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರ ಶವವನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು Read More »

ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ

ಬಂಟ್ವಾಳ: ಬಂಟ್ವಾಳದಲ್ಲಿ ಅಕ್ಕ-ಪಕ್ಕದ ಮನೆಯಿಂದ ಕಾಣೆಯಾದ ಯುವಕ- ಯುವತಿ ಕೇರಳದ ಕಾಂಞಗಾಡ್ ನಲ್ಲಿ ಪೋಲೀಸರು ಪತ್ತೆಹಚ್ಚಿದ್ದು, ಇಬ್ಬರನ್ನು ವಾಪಾಸು ಕರೆದುಕೊಂಡು ಬಂದಿದ್ದಾರೆ. ನ.24 ರಂದು ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ಈ ಯುವಜೋಡಿ ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್‌ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದ‌ರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾಗಿರುವ ಜೋಡಿಯಾಗಿದ್ದರು. ಆಸ್ಮಾ ಅವರು ದೇರಳಕಟ್ಟೆ ನಡುಪದವು

ಬಂಟ್ವಾಳದಿಂದ ಕಾಣೆಯಾದ ಜೋಡಿ ಕೇರಳದಲ್ಲಿ ಪತ್ತೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ

ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಹುಡುಗರ ಹಾಗೂ ಹುಡುಗಿಯರ ವಿಭಾಗದಲ್ಲಿ ಕೆ. ಎಸ್. ಎಸ್. ಕಾಲೇಜಿನ ತಂಡ ತೃತೀಯ ಸ್ಥಾನ ಗಳಿಸಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್‍ ವತಿಯಿಂದ ಸನ್ಮಾನಿಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತರಾದ ಸುಮಂತ್, ಜೀವನ್, ವರುಣ್, ದಿಶಾಂತ್, ರಕ್ಷಿತ್, ವಿಜಯ್ ಕುಮಾರ್, ಅರ್ಚನಾ, ಪುನೀತ, ಪ್ರತಿಕ್ಷ, ಪ್ರಗತಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಕ್ರೀಡಾಪಟುಗಳಿಗೆ ಸನ್ಮಾನ Read More »

ಸಾವಿನಲ್ಲೂ ಒಂದಾದ ಅಜ್ಜ-ಮೊಮ್ಮಗ !

ಅಜ್ಜ ಸಾವನ್ನಪ್ಪಿದ ಎರಡೂವರೆ ಗಂಟೆಗಳ ಅಂತರದಲ್ಲಿ ರಸ್ತೆ ಅಪಘಾತದಲ್ಲಿ ಮೊಮ್ಮಗ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಶೇಡಿಮನೆಯಲ್ಲಿ ವಾಸ್ಥವ್ಯವಿರುವ ನಾರಾಯಣ ಪೂಜಾರಿ ವಯೋಸಹಜದಿಂದ ಮೃತಪಟ್ಟಿದ್ದರು. ಇದಾದ ಎರಡೂವರೆ ಗಂಟೆ ಬಳಿಕ ಮೊಮ್ಮಗ ನಿಶಾಂತ ಪೂಜಾರಿ (23) ವಾಹನ ಅಪಘಾತದಿಂದ ಮೃತಪಟ್ಟರು ಎನ್ನಲಾಗಿದೆ. ಮೃತ ನಿಶಾಂತ ಚಾಮರಾಜನಗರದ ಮೆಡಿಕಲ್ ಕಾಲೇಜೊಂದರಲ್ಲಿ  ಎರಡನೇ ವರ್ಷದ ಎಂಬಿ ವ್ಯಾಸಂಗ ಮಾಡುತ್ತಿದ್ದು, ಕಳೆದ ವಾರವಷ್ಟೆ ಊರಿಗೆ ಬಂದಿದ್ದ ನಿಶಾಂತ ಸೋಮವಾರ ಪರೀಕ್ಷೆ ಇದ್ದಿದ್ದರಿಂದ ಶನಿವಾರ ಚಾಮರಾಜನಗರಕ್ಕೆ ತೆರಳಿದ್ದ. ಆದರೆ

ಸಾವಿನಲ್ಲೂ ಒಂದಾದ ಅಜ್ಜ-ಮೊಮ್ಮಗ ! Read More »

ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ

ಸುಳ್ಯ: ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಅಡ್ಡಾದಿಡ್ಡಿಯಾಗಿ ಚಲಾಯಿಸಿದ ಘಟನೆ ಸುಳ್ಯದ ಆರಂಬೂರು ಬಳಿ ನಡೆದಿದೆ. ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ವಿಭಾಗದ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಚಯ ಕೇಳಿದಾಗ ಕುಡಿದ

ಮದ್ಯದ ಅಮಲಿನಲ್ಲಿ ವಾಹನ ಚಾಲನೆ | ಸಾರ್ವಜನಿಕರ ಆಕ್ರೋಶ Read More »

ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ! | ಭ್ರೂಣ ಹತ್ಯೆಯಂತೆ ಮಿಂಚುಹುಳಗಳಿಗೂ ಬಂತೇ ವೈದ್ಯಕೀಯ ಕುತ್ತು??

ಕತ್ತಲ ಹೊತ್ತಲ್ಲಿ ಬೆಳಕ ಚಿಮ್ಮಿಸುತ್ತಾ ಬರುವ ಮಿಂಚುಹುಳ ಯಾರಿಗೆ ಗೊತ್ತಿಲ್ಲ ಹೇಳಿ!! ಹಳ್ಳಿಯ ಮನೆಗಳಲ್ಲಿ ಬಾಲ್ಯವನ್ನು ಕಳೆದವರಿಗೆ ಮಿಂಚುಹುಳವನ್ನು ಮರೆಯಲು ಸಾಧ‍್ಯವೇ ಇಲ್ಲ. ಆದರೆ ಇಂದು ಆ ಮಿಂಚುಹುಳಗಳು ಎಲ್ಲಿ ಹೋಗಿವೆ? ಅಪರೂಪಕ್ಕಾದರೂ ನೋಡಲು ಸಿಗಬೇಕಲ್ಲವೇ? ಸಂಶೋಧಕರ ಪ್ರಕಾರ, ಪಶ್ಚಿಮ ಘಟ್ಟಗಳಲ್ಲಿಯೂ ಮಿಂಚುಹುಳುಗಳ ಸಂತತಿ ಕಡಿಮೆಯಾಗಿದೆ. ಇದಕ್ಕೆ ಹಲವು ಕಾರಣಗಳನ್ನು ಅವರು ನೀಡಿದ್ದಾರೆ. ಎನ್ವಿರಾನ್ಮೆಂಟಲ್ ಮ್ಯಾನೇಜ್ಮೆಂಟ್ ಮತ್ತು ಪಾಲಿಸಿ ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಸಂಶೋಧಕರು ಜೀರುಂಡೆ ಜಾತಿಗಳು ಮತ್ತು ಅವುಗಳ ಪರಿಸರ

ಮಿಂಚುಹುಳಗಳ ಸಂಖ್ಯೆಯಲ್ಲಿ ತೀವ್ರ ಕುಸಿತ! | ಭ್ರೂಣ ಹತ್ಯೆಯಂತೆ ಮಿಂಚುಹುಳಗಳಿಗೂ ಬಂತೇ ವೈದ್ಯಕೀಯ ಕುತ್ತು?? Read More »

ನೆರಿಯದಲ್ಲಿ ಕಾಡಾನೆ ದಾಳಿ !

ನೆರಿಯ: ನೆರಿಯ ಪೋಸ್ಟ್ ಆಫೀಸ್ ಬಳಿ ಕಾಡಾನೆ ಕಾರೊಂದರ ಮೇಲೆರಗಿದ ಘಟನೆ ನಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಆರು ಜನರು ಪ್ರಯಾಣಿಸುತ್ತಿದ್ದ ಆಲ್ಟೋ ಕಾರಿನ ಮೇಲೆ ಆನೆ ದಾಳಿ ನಡೆಸಿದೆ ಎನ್ನಲಾಗಿದ್ದು, ಪುತ್ತೂರು ಮೂಲದ ಅಬ್ದುಲ್ ರೆಹಮಾನ್ (40) ಹಾಗೂ ನಾಸಿಯಾ (30) ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ.

ನೆರಿಯದಲ್ಲಿ ಕಾಡಾನೆ ದಾಳಿ ! Read More »

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ

ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ಪ್ರಾರಂಭವಾಗುವ ವಿಧಾನ ಮಂಡಲದ ಚಳಿಗಾಲದ ಜಂಟಿ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ತಡೆಯಲು ಮಸೂದೆಯ

ಸುಳ್ಳು ಸುದ್ದಿ ತಡೆಗೆ ಮಸೂದೆ: ಮಂಡನೆಗೆ ಸಿದ್ಧತೆ Read More »

error: Content is protected !!
Scroll to Top