ಸುದ್ದಿ

ತಂದೆಯಿಂದ ಮಗನ ಹತ್ಯೆ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ಉಜಿರೆಯಲ್ಲಿ  ಸಂಭವಿಸಿದೆ. ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್ (30) ಮೃತಪಟ್ಟವರು. ಮೃತರ ತಂದೆ ಕೃಷ್ಣಯ್ಯಾಚಾರ್ ಎಂಬವರೇ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಭಾನುವಾರ ರಾತ್ರಿ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆದಿದೆ. ಇದಾದ ಬಳಿಕ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ. ಮಗ ಜಗದೀಶ ಬಾಗಿಲು ತೆಗೆಯಲು ಪ್ರಯತ್ನಿಸಿದಾಗ ಏಕಾಏಕಿ ಬಾಗಿಲು ತೆರೆದ ತಂದೆ ಕೃಷ್ಣಯ್ಯ ಆಚಾರ್ ಕೋಣೆಯ ಒಳಗಿನಿಂದ […]

ತಂದೆಯಿಂದ ಮಗನ ಹತ್ಯೆ | ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕೇರಳದಲ್ಲಿ ಬಾಂಬ್ ಸ್ಪೋಟ | ದ.ಕ. ಗಡಿಭಾಗ ಸಹಿತ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್

ಪುತ್ತೂರು: ಕೇರಳದಲ್ಲಿ ಭಾನುವಾರ ನಡೆದ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಗಡಿಭಾಗ ಸಹಿತ ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸರು ಗಡಿಭಾಗದಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಹಿರಿಯ ಅಧಿಕಾರಿಗಳು ಚೆಕ್‍ಪೋಸ್ಟ್ ಗಳಿಗೆ ಭೇಟಿ ನೀಡಿ ಹೆಚ್ಚಿನ ನಿಗಾ ವಹಿಸಿದ್ದಾರೆ. ಮಂಗಳೂರು ನಗರ ಕೇಂದ್ರ ಭಾಗ ಸೇರಿದಂತೆ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿನ ಆಯಕಟ್ಟಿನ ಸ್ಥಳಗಳಲ್ಲಿ, ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ  ಬಂದರು, ಧಾರ್ಮಿಕ ಕ್ಷೇತ್ರಗಳು, ಕಡಲ ತೀರ ಪ್ರದೇಶಗಳಲ್ಲಿ ಪೊಲೀಸರು ನಿಗಾ ವಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್

ಕೇರಳದಲ್ಲಿ ಬಾಂಬ್ ಸ್ಪೋಟ | ದ.ಕ. ಗಡಿಭಾಗ ಸಹಿತ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ Read More »

ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ.

ಸುಬ್ರಹ್ಮಣ್ಯ: ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯ ಭಾನುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಟ್ರಸ್ಟ್ ನ ಸುಮಾರು 25 ಸ್ವಯಂಸೇವಕರನ್ನು ಒಳಗೊಂಡ  ತಂಡ ಕುಮಾರಧಾರ ಸ್ಥಾನಘಟ್ಟ, ಮುಖ್ಯ ದ್ವಾರದ ಇಕ್ಕಲಗಳಲ್ಲಿ, ಹಾಗೂ ಮುಖ್ಯ ರಸ್ತೆಯಲ್ಲಿ ಸ್ವಚ್ಛತೆ ಮಾಡಿದರು. ನವರಾತ್ರಿಯ ರಜಾ ದಿನಗಳಂದು ಹಾಗೂ ಶಾಲೆಗಳಿಗೆ ರಜೆ  ಇದ್ದುದ ರಿಂದ  ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿ ಸಿದ್ದರು .ಇದರಿಂದ ಕುಮಾರಧಾರ ಸ್ಥಾನಘಟ್ಟದ ಬಳಿ, ದ್ವಾರದ ಅಕ್ಕ ಪಕ್ಕದಲ್ಲಿ, ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ

ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ. Read More »

ಕೇರಳದ ಎರ್ನಾಕುಲಂನಲ್ಲಿ ಭೀಕರ ಸ್ಪೋಟ | ಓರ್ವ ಮಹಿಳೆ ಮೃತ್ಯು, 23 ಮಂದಿಗೆ ಗಾಯ

ಕೇರಳ: ಎರ್ನಾಕುಲಂನಲ್ಲಿರುವ ಕನ್ವೆನ್ಷನ್‌ ಸೆಂಟರ್‌  ನಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, 23 ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏಕಾಏಕಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಇದೊಂದು ಉಗ್ರರ ದಾಳಿಯ ಶಂಕೆ ವ್ಯಕ್ತವಾಗಿದೆ. ಈ ಘಟನೆ ಎರ್ನಾಕುಲಂನ ಕಲಮಶ್ಶೇರಿಯಲ್ಲಿರುವ ಜಾಮ್ರಾ ಇಂಟರ್‌ನ್ಯಾಷನಲ್‌ ಸಭಾಭವನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಬೆಳಗ್ಗಿನ ಪ್ರಾರ್ಥನೆಗಾಗಿ ನೂರಾರು ಜನ ಸೇರಿದ್ದು, ಬೆಳಿಗ್ಗೆ

ಕೇರಳದ ಎರ್ನಾಕುಲಂನಲ್ಲಿ ಭೀಕರ ಸ್ಪೋಟ | ಓರ್ವ ಮಹಿಳೆ ಮೃತ್ಯು, 23 ಮಂದಿಗೆ ಗಾಯ Read More »

ಕುಡಿಯುವ ನೀರಿನ ಪೈಪ್‍ಗೆ ಹಾನಿ : ಸ್ಥಳೀಯರಿಂದ ಹೆದ್ದಾರಿ ಕಾಮಗಾರಿಗೆ ತಡೆ

ಉಪ್ಪಿನಂಗಡಿ : ಹೆದ್ದಾರಿ ಅಗಲೀಕರಣದ ಕಾಮಗಾರಿ ನಡೆಯುತ್ತಿರುವ ವೇಳೆ ಕುಡಿಯುವ ನೀರಿನ ಪೈಪುಗಳನ್ನು ಹಾನಿಗೊಳಿಸಿದ ಪರಿಣಾಮ ಕಳೆದ ನಾಲ್ಕು ದಿನಗಳಿಂದ ನೀರಿಲ್ಲದೆ ಸಂಕಷ್ಠಗೀಡಾದವರು ಆಕ್ರೋಶಗೊಂಡು ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ. ಉಪ್ಪಿನಂಗಡಿಯ ಕುಡಿಯುವ ನೀರು ಶುದ್ದೀಕರಣ ಘಟಕದಿಂದ ಹಲವೆಡೆಗೆ ಸರಬರಾಜಾಗುವ ನೀರಿನ ಪೈಪುಗಳು ಕಾಮಗಾರಿಯ ವೇಳೆ ಒಡೆದು ಹೋಗಿತ್ತು. ಪೈಪ್ ಸರಿಪಡಿಸಬೇಕೆಂದು ಪಂಚಾಯಿತಿ ಆಡಳಿತ ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳನ್ನು ಒತ್ತಾಯಿಸಿತ್ತು. ಸ್ಪಂದಿಸುವ ಭರವಸೆ ನೀಡಿದ್ದ ಸಂಸ್ಥೆಯ ಅಧಿಕಾರಿಗಳು ಬಳಿಕ ಮೌನವಹಿಸಿದ್ದರಿಂದಾಗಿ ಸತತ ನಾಲ್ಕು ದಿನಗಳ ಕಾಲ

ಕುಡಿಯುವ ನೀರಿನ ಪೈಪ್‍ಗೆ ಹಾನಿ : ಸ್ಥಳೀಯರಿಂದ ಹೆದ್ದಾರಿ ಕಾಮಗಾರಿಗೆ ತಡೆ Read More »

ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ : ಮುಖ್ಯಮಂತ್ರಿ ಸಿದ್ಧರಾಮಯ್ಯ

ಉಡುಪಿ: ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ‘ಬಂಟರ ಅಭಿವೃದ್ಧಿ ನಿಗಮ’ದ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ ಸಮಾಜಕ್ಕೆ ಭರವಸೆ ನೀಡಿದ್ದಾರೆ. ನಗರದ ಅಜ್ಜರಕಾಡು ಕ್ರೀಡಾಂಗಣದ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ನಡೆದ ನಾಲ್ಕನೇ ವಿಶ್ವ ಬಂಟರ ಸಮ್ಮೇಳನ-2023ನ್ನು ದೀಪ ಪ್ರಜ್ವಲನಗೊಳಿಸಿ, ಹಿಂಗಾರ ಅರಳಿಸಿ, ತೆಂಗಿನ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಬಂಟ ಸಮಾಜದ ಅಭಿವೃದ್ಧಿಗಾಗಿ ಕಳೆದ ನಮ್ಮಚುನಾವಣಾ ಪ್ರಣಾಳಿಕೆ ಯಲ್ಲೇ ಬಂಟರ ಅಭಿವೃದ್ಧಿ

ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ : ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಮರಳು ಪೂರೈಕೆ ಕೊರತೆ ನೀಗಿಸದಿದ್ದಲ್ಲಿ ಪ್ರತಿಭಟನೆ | ದಕ್ಷಿಣ ಕನ್ನಡ ಜಿಲ್ಲಾ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಮರಳು ಪೂರೈಕೆ ಕೊರತೆಯನ್ನು 10 ದಿನಗಳಲ್ಲಿ ನಿವಾರಿಸದಿದ್ದರೆ ನಿರ್ಮಾಣ ಚಟುವಟಿಕೆ ಸ್ಥಗಿತಗೊಳಿಸಿ ಕಾರ್ಮಿಕರನ್ನೂ ಸೇರಿಸಿಕೊಂಡು ಪ್ರತಿಭಟನೆ ನಡೆಸಲಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ. ಎಸೋಸಿಯೇಷನ್‌ ಅಧ್ಯಕ್ಷ ಮಹಾಬಲ ಕೊಟ್ಟಾರಿಯವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನೈಸರ್ಗಿಕ ಮರಳು ಯಥೇಚ್ಚವಾಗಿದೆ. ಆದರೆ ಅದರ ಪೂರೈಕೆ ಸಮರ್ಪಕವಾಗಿ ಆಗದ ಕಾರಣ ಗುತ್ತಿಗೆದಾರರು ಮತ್ತು ಸಾರ್ವಜನಿಕರು ಕಾಳಸಂತೆಯಲ್ಲಿ ದುಬಾರಿ ದರಕ್ಕೆ ಮರಳನ್ನು ಖರೀದಿಸುವ ಸ್ಥಿತಿ ನಿರ್ಮಾಣವಾಗಿದೆ. ಈ

ಮರಳು ಪೂರೈಕೆ ಕೊರತೆ ನೀಗಿಸದಿದ್ದಲ್ಲಿ ಪ್ರತಿಭಟನೆ | ದಕ್ಷಿಣ ಕನ್ನಡ ಜಿಲ್ಲಾ ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಎಚ್ಚರಿಕೆ Read More »

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ

ಸುಳ್ಯ : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಶುಕ್ರವಾರ ನಡೆದಿದೆ. ಸುಳ್ಯ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬವರ ಮಗ ಸೈಬಿನ್ ಈ ಕೃತ್ಯ ಎಸಗಿದವರು. ನಿನ್ನೆ ಗುತ್ತಿಗಾರು ಪೇಟೆಗೆ ಸೈಬಿನ್  ಆಗಮಿಸಿದ್ದು, ಎಲ್ಲರ ಜೊತೆ ಸಂತೋಷದಿಂದ ಮಾತನಾಡಿದ್ದ ಎನ್ನಲಾಗಿದೆ. ಸೈಬಿನ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಅವರ ಹಳೆ ಮನೆಯ ಪಕ್ಕ ಜಮಾಯಿಸಿದ್ದರು. ಈ ಸಂದರ್ಭ  ಪೊಲೀಸರು ಆಗಮಿಸಿ ಜನರನ್ನು ಚದುರಿಸಿದರು ಎಂದು ತಿಳಿದು ಬಂದಿದೆ.

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸುಳ್ಯದ ಯುವಕ ಆತ್ಮಹತ್ಯೆ Read More »

ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಂಕಿತಾ ಮೃತ್ಯು

ಉಜಿರೆ: ಬೈಕ್ ಡಿಕ್ಕಿ ಹೊಡೆದ ಪರಿಣಾಮ 3ನೇ ತರಗತಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ಉಜಿರೆಯಲ್ಲಿ ನಡೆದಿದೆ. ದಿ.ಅಶೋಕ್ ಹಾಗೂ ಜಯಶ್ರೀ ದಂಪತಿ ಪುತ್ರಿ ಅಂಕಿತಾ ಮೃತಪಟ್ಟ ವಿದ್ಯಾರ್ಥಿನಿ ಬದನಾಜೆ ಹಿ.ಪ್ರಾ. ಶಾಲೆಯ ಎದುರು ರಸ್ತೆ ದಾಟುತ್ತಿರುವ ಸಂದರ್ಭ ಬೈಕ್‍ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಅಂಕಿತಾ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಂಕಿತಾ ಮೃತ್ಯು Read More »

ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸುಳ್ಯ: ಉದ್ಯಮಿಯೊಬ್ಬರ ಸೊಸೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡೈರಿ ರಿಚ್ ಐಸ್‍ ಕ್ರೀಂ ಉದ್ಯಮಿ ಕನಕಮಜಲಿನ ಗಿರಿಯಪ್ಪ ಗೌಡರ ಸೊಸೆ, ರಾಜೇಶ್ ಎಂಬವರ ಪತ್ನಿ ಐಶ್ವರ್ಯ (26) ಈ ಕೃತ್ಯ ಎಸಗಿದವರು. ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿ ಪುತ್ರಿಯಾಗಿರುವ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್‍ ಅವರನ್ನು ವಿವಾಹವಾಗಿದ್ದು, ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಪತಿ ರಾಜೇಶ್ ಐಸ್‍ ಕ್ರೀಂ ಪಾರ್ಲರ್ ನಡೆಸಿಕೊಂಡು ಬೆಂಗಳೂರಿನಲ್ಲೇ ವಾಸವಾಗಿದ್ದರು. ಅವರ ತಾಯಿಯೂ

ಸುಳ್ಯದ ವಿವಾಹಿತೆ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

error: Content is protected !!
Scroll to Top