ಸುದ್ದಿ

ಪಾಟ್ರಕೋಡಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅಶೋಕ್ ರೈ | ಶಾಸಕರಿಗೆ ಇಷ್ಟು ಗಟ್ಸ್ ಇದೆ ಎಂದು ಗೊತ್ತೇ ಇರಲಿಲ್ಲ: ಹೇಮನಾಥ ಶೆಟ್ಟಿ

ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ 2ರಿಂದ 3 ಸಾವಿರ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ ಹಲವು ಯೋಜನೆಗಳನ್ನು ಇಲ್ಲಿ ಜಾರಿ ಮಾಡುವ ಆಲೋಚನೆಯಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಟ್ರಕೋಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನಯಡಿ ಕೆದಿಲ ಗ್ರಾಮದಲ್ಲಿ 3 ಕೋಟಿ ಲೀಟರ್ ಸಾಮರ್ಥ್ಯದ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಯೋಜನೆಯಡಿ ಸುಮಾರು 500ಕ್ಕೂ ಮಿಕ್ಕಿ […]

ಪಾಟ್ರಕೋಡಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅಶೋಕ್ ರೈ | ಶಾಸಕರಿಗೆ ಇಷ್ಟು ಗಟ್ಸ್ ಇದೆ ಎಂದು ಗೊತ್ತೇ ಇರಲಿಲ್ಲ: ಹೇಮನಾಥ ಶೆಟ್ಟಿ Read More »

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ನಾಳ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆಯ ಪ್ರಯುಕ್ತ ಪಕ್ಷ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಿತು. ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ದೀಪ ಬೆಳಗಿಸಿ ಉದ್ಘಾಟಿಸಿ, ದೇವಳದ ಒಳ ಭಾಗದಲ್ಲಿ ನವರಾತ್ರಿ ಪೂಜೆಯು ವಿದ್ಯುಕ್ತವಾಗಿ ನಡೆದಂತೆ ದೇವಿಯ ಪ್ರೀತ್ಯರ್ಥವಾಗಿ ಸಂಗೀತ, ಭಜನೆ, ಯಕ್ಷಗಾನ, ಪಾರಾಯಣ ಕಾರ್ಯಕ್ರಮಗಳು ನಡೆಯಲಿರುವುದು ಸಂಪ್ರದಾಯವಾಗಿದೆ ಎಂದು ತಿಳಿಸಿದರು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಭುವನೇಶ. ಜಿ, ಭಜನಾ ಮಂಡಳಿಯ ಅಧ್ಯಕ್ಷ ಉಮೇಶ ಶೆಟ್ಟಿ ಸಂಬೊಳ್ಯ, ಕಲಾವಿದ

ನಾಳ ಕ್ಷೇತ್ರದಲ್ಲಿ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ Read More »

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್’ನಲ್ಲಿ ಆಯೋಜಿಸಲಾಗಿರುವ ಕರ್ನಾಟಕ ಸಂಭ್ರಮ-50ರ ಲಾಂಛನವನ್ನು ಅನಾವರಣ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಂಛನ ಬಿಡುಗಡೆ ಮಾಡಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ

ಕರ್ನಾಟಕ ಸಂಭ್ರಮ-50: ಲಾಂಛನ ಬಿಡುಗಡೆ Read More »

ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಮೆಷಿನ್ ಹಸ್ತಾಂತರ

ಪುತ್ತೂರು: ಸರಕಾರ ಕೆಲಸ ದೇವರ ಕೆಲಸ. ಈ ನಿಟ್ಟಿನಲ್ಲಿ ಸರಕಾರಿ ಕಚೇರಿ ಯಾವುದೇ ಇರಲಿ ಸಿಬ್ಬಂದಿಗಳ ಕೊರತೆ ಇದೆ ಎಂಬ ನೆಪ ಬಿಟ್ಟು ಇರುವ ಸಿಬ್ಬಂದಿಗಳನ್ನು ಹೆಚ್ಚು ಬಳಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ 9 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಾಗೂ ಮಕ್ಕಳ ಚಿಕಿತ್ಸಾ ವಿಭಾಗಗಕ್ಕೆ ಮಲ್ಪಿ ಪ್ಯಾರಾ ಮಾನಿಟರ್, ಹೊರಪ್ರಾಂಗಣದ ನಿರೀಕ್ಷಣಾ ಕೊಠಡಿಗೆ ಟೆಲಿವಿಷನ್ ಕೊಡುಗೆಯಾಗಿ

ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಮೆಷಿನ್ ಹಸ್ತಾಂತರ Read More »

ತಸ್ಲೀಮ್ ಮೃತದೇಹ ಮೇಲೆತ್ತಿದ ಈಶ್ವರ್ ಮಲ್ಪೆ | ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ಮತ್ತೊಂದು ಸೇವಾ ಕಾರ್ಯ

ಪುತ್ತೂರು: ಡಾ. ಎಪಿಜೆ ಅಬ್ದುಲ್ ಕಲಾಂ ಮಿಸೈಲ್ ಮ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಿ ಇನ್ನೂ ಗಂಟೆ ಸರಿದಿರಲಿಲ್ಲ. ಅಷ್ಟರಲ್ಲೇ ಆಪದ್ಭಾಂಧವ ಈಶ್ವರ್ ಮಲ್ಪೆ ಅವರ ಮೊಬೈಲ್’ಗೆ ಕರೆ ಬಂದಾಗಿತ್ತು. ಪುತ್ತೂರು ತಾಲೂಕಿನ ಮಾಡಾವು ಸಮೀಪದ ಗೌರಿ ಹೊಳೆಯಲ್ಲಿ 17 ವರ್ಷದ ನವತರುಣ ತಸ್ಲೀಮ್ ಎಂಬ ಯುವಕ ನಾಪತ್ತೆಯಾಗಿದ್ದಾನೆ. ಗೆಳೆಯರ ಜೊತೆ ಈಜಲು ತೆರಳಿದ್ದು, ಇದುವರೆಗೆ ಮರಳಿ ಬಂದಿಲ್ಲ. ನೀರಿನ ಸೆಳೆತ ಹೆಚ್ಚಿರುವುದರಿಂದ ಅಪಾಯ ಸಂಭವಿಸಿರುವ ಸಾಧ್ಯತೆಯೇ ಅಧಿಕ. ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ ಎಂಬ ಸಂದೇಶ ಬಂದಾಗಿತ್ತು. ಬೆಂಗಳೂರಿನಲ್ಲಿ ಪ್ರಶಸ್ತಿ

ತಸ್ಲೀಮ್ ಮೃತದೇಹ ಮೇಲೆತ್ತಿದ ಈಶ್ವರ್ ಮಲ್ಪೆ | ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ಮತ್ತೊಂದು ಸೇವಾ ಕಾರ್ಯ Read More »

ಹುಟ್ಟುಹಬ್ಬದಂದು ಬಡವರಿಗೆ ಹೀಗೊಂದು ಸ್ವ- ಉದ್ಯೋಗದ ನೆರವು

ಪುತ್ತೂರು: ಬಹುತೇಕ ಮಂದಿ ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಸಂಭ್ರಮದಿಂದ, ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಾರೆ. ಅದೂ ಮನೆಯ ನಾಲ್ಕು ಗೋಡೆಗಳ ಮಧ್ಯೆ ಅಥವಾ ಸ್ನೇಹಿತರ ಜೊತೆಗೆ. ಇದಕ್ಕೆ ಅಪವಾದ ಎನ್ನುವಂತೆ ಇಲ್ಲೊಬ್ಬರು ತನ್ನ ಮಕ್ಕಳ ಹುಟ್ಟುಹಬ್ಬವನ್ನು ಬಡವರಿಗೆ ನೆರವಾಗುವ ಮೂಲಕ ಆಚರಿಸಿಕೊಳ್ಳುತ್ತಿದ್ದಾರೆ.  ಚಾರ್ವಾಕ ವಾಲ್ತಾಜೆಯ ರಾಜೇಶ್ ವಾಲ್ತಾಜೆ ಅವರೇ ಹೀಗೆ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವವರು. ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಎಲ್ಲೂ ಕಾಣದ ವಿಶೇಷತೆಯಿದೆ. ಚಾರ್ವಾಕದಲ್ಲಿ ದುರ್ಗಾ ಅರ್ಥ್ ಮೂವರ್ಸ್ ಸಂಸ್ಥೆಯ ಮಾಲಕರಾಗಿರುವ ರಾಜೇಶ್‍ ಅವರು ತನ್ನ ಹುಟ್ಟುಹಬ್ಬ ಸಹಿತ ತಮ್ಮ

ಹುಟ್ಟುಹಬ್ಬದಂದು ಬಡವರಿಗೆ ಹೀಗೊಂದು ಸ್ವ- ಉದ್ಯೋಗದ ನೆರವು Read More »

ಇನ್ನು ಮೊಬೈಲ್ ನೀಡಲಿದೆ ವಿಕೋಪಗಳ ಮುನ್ಸೂಚನೆ!!

ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ

ಇನ್ನು ಮೊಬೈಲ್ ನೀಡಲಿದೆ ವಿಕೋಪಗಳ ಮುನ್ಸೂಚನೆ!! Read More »

ಜಿ.ಪಂ. ಸಿಇಓ ನೇತೃತ್ವದಲ್ಲಿ ನಡೆಯಿತು ಆರ್ಯಾಪು ಗ್ರಾ.ಪಂ. ಜಮಾಬಂದಿ ಸಭೆ | ಆಸ್ತಿ ಪರಿಷ್ಕರಣೆ, ಜೆಜೆಎಂ ಯೋಜನೆ ಬಗ್ಗೆ ಮಹತ್ವದ ಚರ್ಚೆ!

ಸಂಪ್ಯ: ಆರ್ಯಾಪು ಗ್ರಾಮ ಪಂಚಾಯತ್ 2022-23ನೇ ಸಾಲಿನ ಜಮಾಬಂದಿ ಸಭೆ ಬುಧವಾರ ಗ್ರಾ.ಪಂ.ನ ನೇತಾಜಿ ಸುಭಾಸ್ ಚಂದ್ರ ಬೋಸ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರ ನೇತೃತ್ವದಲ್ಲಿ ಜಮಾಬಂದಿ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು, ಗ್ರಾಮ ಪಂಚಾಯತ್’ನ ಸ್ವಂತ ಆದಾಯದ ಮೂಲವಾದ ಆಸ್ತಿ ತೆರಿಗೆಗಳನ್ನು ಕಡ್ಡಾಯವಾಗಿ 2 ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡಬೇಕು. ಇದರಿಂದ ಸಂಪನ್ಮೂಲ ವೃದ್ಧಿಯಾಗುತ್ತದೆ ಎಂದು ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಪ್ರತಿ 2 ವರ್ಷಕ್ಕೊಮ್ಮೆ ಆಸ್ತಿ

ಜಿ.ಪಂ. ಸಿಇಓ ನೇತೃತ್ವದಲ್ಲಿ ನಡೆಯಿತು ಆರ್ಯಾಪು ಗ್ರಾ.ಪಂ. ಜಮಾಬಂದಿ ಸಭೆ | ಆಸ್ತಿ ಪರಿಷ್ಕರಣೆ, ಜೆಜೆಎಂ ಯೋಜನೆ ಬಗ್ಗೆ ಮಹತ್ವದ ಚರ್ಚೆ! Read More »

‘ಮಂಗಳ’ ಹಾಡಿದ ವಾರಪತ್ರಿಕೆ ಮಂಗಳ!! | ಪ್ರಕಟಣೆ ನಿಲ್ಲಿಸಿದ ಓದುಗರ ಮನ ಗೆದ್ದಿದ್ದ ಕುಟುಂಬ ವಾರಪತ್ರಿಕೆ

ಮಂಗಳೂರು: ಶುಕ್ರವಾರಕ್ಕಾಗಿ ಓದುಗರ ದೊಡ್ಡ ಗುಂಪೇ ಕಾದು ಕುಳಿತುಕೊಳ್ಳುತ್ತಿದ್ದರು. ಕಾರಣ, ಮಂಗಳ ಕುಟುಂಬ ವಾರಪತ್ರಿಕೆ ಪ್ರಕಟವಾಗುತ್ತಿದ್ದ ದಿನವದು. ಆದರೆ ಇನ್ನು ಅಂತಹ ಕಾತರತೆ ಇರದು. 40 ವರ್ಷಗಳ ಪತ್ರಿಕಾ ಯಾನಕ್ಕೆ ಮಂಗಳ ವಾರಪತ್ರಿಕೆ ಮಂಗಳ ಹಾಡಿದೆ. ಓದುಗರು ನಿರಾಸೆಯ ನಿಟ್ಟುಸಿರನ್ನಷ್ಟೇ ಹೊರಹಾಕುವಂತಾಗಿದೆ. ಈ ವಾರ ಮಂಗಳ ವಾರಪತ್ರಿಕೆಯ ಕೊನೆಯ ಸಂಚಿಕೆ ಮುದ್ರಣಗೊಂಡಿದೆ. ಈ ಬಗ್ಗೆ ಸಂಪಾದಕರು ಪ್ರಕಟಣೆಯನ್ನು ನೀಡಿದ್ದಾರೆ. ಕನ್ನಡ ಪತ್ರಿಕಾರಂಗದಲ್ಲಿ ತನ್ನ ಛಾಯೆಯನ್ನು ಮೂಡಿಸಿದ್ದ ಮಂಗಳ, ಓದುಗ ವಲಯದಲ್ಲಿ ವಿಶೇಷ ಸ್ಥಾನಮಾನ ಪಡೆದುಕೊಂಡಿತ್ತು. ಬಾಲಮಂಗಳ, ಚಿತ್ರಕತೆಯಿಂದ

‘ಮಂಗಳ’ ಹಾಡಿದ ವಾರಪತ್ರಿಕೆ ಮಂಗಳ!! | ಪ್ರಕಟಣೆ ನಿಲ್ಲಿಸಿದ ಓದುಗರ ಮನ ಗೆದ್ದಿದ್ದ ಕುಟುಂಬ ವಾರಪತ್ರಿಕೆ Read More »

ಬಾಯ್ದೆರೆದ ಅಪಾಯಕ್ಕೆ ತಾತ್ಕಾಲಿಕ ತಡೆ! | ಶಾಶ್ವತ ಪರಿಹಾರದ ಭರವಸೆ ನೀಡಿದ ಪಿಡಬ್ಲ್ಯೂಡಿ ಎಇಇ | ನ್ಯೂಸ್ ಪುತ್ತೂರು ವರದಿಗೆ ಕ್ಷಿಪ್ರ ಸ್ಪಂದನೆ | ಹಾರಾಡಿ ರೈಲ್ವೇ ರಸ್ತೆ ಪ್ರವೇಶಿಸುವಲ್ಲಿ ಎದುರಾಗಿದ್ದ ಅಪಾಯ!!

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ಮುಖ್ಯರಸ್ತೆಯಿಂದ ಹಾರಾಡಿ ರೈಲ್ವೇ ರಸ್ತೆ ಪ್ರವೇಶಿಸುವಲ್ಲಿಯೇ ಚರಂಡಿಯೊಂದು ಬಾಯ್ದೆರೆದು ನಿಂತಿದ್ದು, ಲೋಕೋಪಯೋಗಿ ಇಲಾಖೆ ತಾತ್ಕಾಲಿಕ ತಡೆ ನಿರ್ಮಿಸಿದೆ. ಮುಖ್ಯರಸ್ತೆಯಲ್ಲೇ ಬಾಯ್ದೆರೆದು ನಿಂತಿದ್ದ ಅಪಾಯದ ಬಗ್ಗೆ ‘ನ್ಯೂಸ್ ಪುತ್ತೂರು’ ಅಕ್ಟೋಬರ್ 5ರಂದು ವರದಿ ಮಾಡಿತ್ತು. ವರದಿಗೆ ತಕ್ಷಣ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ತನ್ನ ಸಿಬ್ಬಂದಿಗಳ ಮೂಲಕ ತಾತ್ಕಾಲಿಕ ತಡೆ ಬೇಲಿ ನಿರ್ಮಿಸಿದೆ. ಮಾತ್ರವಲ್ಲ, ಮುರಿದು ಹೋಗಿದ್ದ ಚರಂಡಿಯ ಭಾಗಕ್ಕೆ ಮರಳು ತುಂಬಿದ್ದ ಚೀಲಗಳನ್ನಿಡಲಾಗಿದೆ. ಇದರಿಂದ ವಾಹನಗಳು ಸಂಚರಿಸುವಾಗ ರಸ್ತೆ ಬದಿಗೆ ಬಂದರೂ, ಯಾವುದೇ

ಬಾಯ್ದೆರೆದ ಅಪಾಯಕ್ಕೆ ತಾತ್ಕಾಲಿಕ ತಡೆ! | ಶಾಶ್ವತ ಪರಿಹಾರದ ಭರವಸೆ ನೀಡಿದ ಪಿಡಬ್ಲ್ಯೂಡಿ ಎಇಇ | ನ್ಯೂಸ್ ಪುತ್ತೂರು ವರದಿಗೆ ಕ್ಷಿಪ್ರ ಸ್ಪಂದನೆ | ಹಾರಾಡಿ ರೈಲ್ವೇ ರಸ್ತೆ ಪ್ರವೇಶಿಸುವಲ್ಲಿ ಎದುರಾಗಿದ್ದ ಅಪಾಯ!! Read More »

error: Content is protected !!
Scroll to Top