ಪಾಟ್ರಕೋಡಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅಶೋಕ್ ರೈ | ಶಾಸಕರಿಗೆ ಇಷ್ಟು ಗಟ್ಸ್ ಇದೆ ಎಂದು ಗೊತ್ತೇ ಇರಲಿಲ್ಲ: ಹೇಮನಾಥ ಶೆಟ್ಟಿ
ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ 2ರಿಂದ 3 ಸಾವಿರ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಿದ್ದು, ಇದಕ್ಕಾಗಿ ಹಲವು ಯೋಜನೆಗಳನ್ನು ಇಲ್ಲಿ ಜಾರಿ ಮಾಡುವ ಆಲೋಚನೆಯಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪಾಟ್ರಕೋಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನಯಡಿ ಕೆದಿಲ ಗ್ರಾಮದಲ್ಲಿ 3 ಕೋಟಿ ಲೀಟರ್ ಸಾಮರ್ಥ್ಯದ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಯೋಜನೆಯಡಿ ಸುಮಾರು 500ಕ್ಕೂ ಮಿಕ್ಕಿ […]










