ಸುದ್ದಿ

ಮಂಗಳೂರು ಬೆಡಗಿ ಮುಡಿಗೆ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಕಿರೀಟ | ಅಂತಾರಾಷ್ಟ್ರೀಯ ಮಟ್ಟದ ಬ್ಯೂಟಿ ಕಾಂಟೆಸ್ಟ್ ನಲ್ಲಿ ಗೆದ್ದ ಯಶಸ್ವಿನಿ ದೇವಾಡಿಗ

ಮಂಗಳೂರು: ಥಾಯ್ಲೆಂಡ್ ನಲ್ಲಿ ನಡೆದ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಕಿರೀಟವನ್ನು ಕರ್ನಾಟಕದ ಕುವರಿ ಮಂಗಳೂರು ಬೆಡಗಿ ಯಶಸ್ವಿನಿ ದೇವಾಡಿಗ ತನ್ನ ಮುಡಿಗೇರಿಸಿಕೊಂಡಿದ್ದಾರೆ. ವರ್ಷದ ಆರಂಭದಲ್ಲಿ ನಡೆದ ಮಿಸ್ ಟೀನ್ ಇಂಡಿಯಾ ಗ್ಲೋಬ್ ಬ್ಯೂಟಿ ಕಾಂಟೆಸ್ಟ್ ನಲ್ಲಿ ಸ್ಪರ್ಧಿಸಿ ರನ್ನರ್ ಅಪ್ ಪ್ರಶಸ್ತಿ ಪಡೆದು, ಥಾಯ್ಲೆಂಡ್ ನಲ್ಲಿ ನಡೆದ ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದರು. ಇದೀಗ ಯಶಸ್ವಿನಿ ದೇವಾಡಿಗ ಅವರು ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಆಗಿ ಹೊರಹೊಮ್ಮಿದರು. ಇಂಡೋನೇಷ್ಯಾದ […]

ಮಂಗಳೂರು ಬೆಡಗಿ ಮುಡಿಗೆ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಕಿರೀಟ | ಅಂತಾರಾಷ್ಟ್ರೀಯ ಮಟ್ಟದ ಬ್ಯೂಟಿ ಕಾಂಟೆಸ್ಟ್ ನಲ್ಲಿ ಗೆದ್ದ ಯಶಸ್ವಿನಿ ದೇವಾಡಿಗ Read More »

ಕನ್ನಡ ಎಂ.ಎ. ವಿದ್ಯಾಭ್ಯಾಸಕ್ಕೆ ಕಸಾಪ ಪುತ್ತೂರು ಘಟಕದ ಸಹಾಯಹಸ್ತ | ವಿದ್ಯಾರ್ಥಿಗಳಿಗಾಗಿ ತಂದಿರುವ ಹೊಸ ಯೋಜನೆಯ ಬಗ್ಗೆ ಇಲ್ಲಿದೆ ಮಾಹಿತಿ

ಪುತ್ತೂರು: ಕನ್ನಡ ಐಚ್ಛಿಕ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುವವರಿಗೆ ನೆರವಾಗಲು ಕನ್ನಡ ಸಾಹಿತ್ಯ ಪರಿಷತ್’ನ ಪುತ್ತೂರು ಘಟಕ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಪ್ರಸ್ತುತ ಪದವಿ ವ್ಯಾಸಂಗ ಪೂರೈಸಿ ಆರ್ಥಿಕ ಸಮಸ್ಯೆಯಿಂದ ಉನ್ನತ ವ್ಯಾಸಂಗ ಮಾಡಲು ಅವಕಾಶ ವಂಚಿತ ವಿದ್ಯಾರ್ಥಿಗಳು ಅಥವಾ ಆಸಕ್ತ ವಿದ್ಯಾರ್ಥಿಗಳಿಗಾಗಿ ದಿನನಿತ್ಯದ ತರಗತಿಗಳಿಗೆ ಹಾಜರಾಗಿ ಕನ್ನಡದಲ್ಲಿ ಎಂ.ಎ. ಮಾಡಲು ಪುತ್ತೂರು ತಾಲೂಕಿನಲ್ಲಿರುವ ವಿದ್ಯಾ ಸಂಸ್ಥೆಯೊಂದರಲ್ಲಿ ಅವಕಾಶ ಕಲ್ಪಿಸಲಾಗಿದೆ. ಆರ್ಥಿಕವಾಗಿ ಸಮಸ್ಯೆ ಇರುವ ಬಡ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿ ವೇತನದ ವ್ಯವಸ್ಥೆ ಮಾಡಲಾಗಿದೆ. ಸಂಖ್ಯೆ

ಕನ್ನಡ ಎಂ.ಎ. ವಿದ್ಯಾಭ್ಯಾಸಕ್ಕೆ ಕಸಾಪ ಪುತ್ತೂರು ಘಟಕದ ಸಹಾಯಹಸ್ತ | ವಿದ್ಯಾರ್ಥಿಗಳಿಗಾಗಿ ತಂದಿರುವ ಹೊಸ ಯೋಜನೆಯ ಬಗ್ಗೆ ಇಲ್ಲಿದೆ ಮಾಹಿತಿ Read More »

ಬೆಂಗಳೂರು – ಮಂಗಳೂರು ರೈಲು ಮುರುಡೇಶ್ವರದವರೆಗೆ ವಿಸ್ತರಣೆ | ಮಂಗಳೂರು – ಕುಂದಾಪುರ ಪ್ರಯಾಣಕ್ಕೆ ಇನ್ನು ಎರಡೇ ಗಂಟೆ ಸಾಕು!!

ಮಂಗಳೂರು: ಬೆಂಗಳೂರು ಮೈಸೂರು ಮಂಗಳೂರಿಗೆ ಬರುತ್ತಿದ್ದ ನಿತ್ಯ ರೈಲನ್ನು ಮುರ್ಡೇಶ್ವರದ ವರೆಗೆ ವಿಸ್ತರಿಸಿದ್ದು, ವೇಳಾಪಟ್ಟಿಯಲ್ಲಿರುವ ವ್ಯತ್ಯಯ ಮತ್ತು ತಡವಾಗಿ ಪ್ರಯಾಣದ ಹಿನ್ನೆಲೆಯಲ್ಲಿ ಇದೀಗ ರೈಲ್ವೇ ಇಲಾಖೆ ಕ್ರಮ ಕೈಗೊಂಡಿದೆ. ಆರಂಭದಲ್ಲಿ ವರದಿಗೆ ಸ್ಪಂದಿಸಿದ ಮೈಸೂರು ಸಂಸದ ರೈಲ್ವೇ ಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದರು. ತಕ್ಷಣ ಸ್ಪಂದಿಸಿದ ರೈಲು ಸಚಿವರು ಕೆಲವೇ ಗಂಟೆಗಳಲ್ಲಿ ರೈಲ್ವೆ ಬೋರ್ಡ್ ನಿಂದ ದಕ್ಷಿಣ ರೈಲ್ವೆಗೆ ಮಂಗಳೂರು ಮತ್ತು ಸುರತ್ಕಲ್ ನಡುವಿನ ಪ್ರಯಾಣವನ್ನು ತಗ್ಗಿಸಲು ಆದೇಶ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ದಕ್ಷಿಣ

ಬೆಂಗಳೂರು – ಮಂಗಳೂರು ರೈಲು ಮುರುಡೇಶ್ವರದವರೆಗೆ ವಿಸ್ತರಣೆ | ಮಂಗಳೂರು – ಕುಂದಾಪುರ ಪ್ರಯಾಣಕ್ಕೆ ಇನ್ನು ಎರಡೇ ಗಂಟೆ ಸಾಕು!! Read More »

ದೊಡ್ಡ ಬಜೆಟಿನಲ್ಲಿ `ಕಾಂತಾರ 2’ ಸೆಟ್ಟೇರುವುದು ಪಕ್ಕಾ! | `ಕಾಂತಾರ 2’ ಯಾವ ಹಂತದಲ್ಲಿದೆ ಎನ್ನುವುದು ಈಗ ಬಹಿರಂಗ!!

ಇನ್ನಿಲ್ಲದ ಸಕ್ಸಸ್ ಕಂಡಿದ್ದ ಕಾಂತಾರ ಸಿನಿಮಾದ ಬಳಿಕ ಕಾಂತಾರ 2 ಬರಲಿದೆ ಎನ್ನುವ ಮಾತು ಅಲ್ಲಲ್ಲಿ ಕೇಳಿಬರುತ್ತಿತ್ತು. ಇದೀಗ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರೇ ಇದನ್ನು ಖಾತ್ರಿಪಡಿಸಿದ್ದಾರೆ. ಸುಮಾರು 100 ಕೋಟಿ ರೂ.ನಲ್ಲಿ ಕಾಂತಾರ 2 ಸೆಟ್ಟೇರುವ ಸಾಧ್ಯತೆ ಇದೆ. ಅಂದರೆ ಕಾಂತಾರ ಚಿತ್ರಕ್ಕಿಂತಲೂ ಹೆಚ್ಚು – ಕಮ್ಮಿ 10 ಪಟ್ಟು ಹೆಚ್ಚು ಬಜೆಟ್ ಹೊಂದಿದ್ದು, ಅದ್ಧೂರಿಯಾಗಿ ತೆರೆ ಕಾಣಲಿದೆಯಂತೆ. ಸದ್ಯ ಕಾಂತಾರ 2 ಬರವಣಿಗೆ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ ಬಿ.

ದೊಡ್ಡ ಬಜೆಟಿನಲ್ಲಿ `ಕಾಂತಾರ 2’ ಸೆಟ್ಟೇರುವುದು ಪಕ್ಕಾ! | `ಕಾಂತಾರ 2’ ಯಾವ ಹಂತದಲ್ಲಿದೆ ಎನ್ನುವುದು ಈಗ ಬಹಿರಂಗ!! Read More »

ನ್ಯೂಸ್ ಪುತ್ತೂರು ಸ್ಟುಡಿಯೋದಲ್ಲಿ ವಿಠಲ್ ನಾಯಕ್ | ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಗೀತಾ ಸಾಹಿತ್ಯ ಸಂಭ್ರಮ ಕೆಲವೇ ಕ್ಷಣದಲ್ಲಿ ಪ್ರಸಾರ…

ಪುತ್ತೂರು: ಗೌರಿ ಗಣೇಶ (ಚೌತಿ) ಹಬ್ಬದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಸ್ಟುಡಿಯೋದಿಂದ ವಿಠಲ್ ನಾಯಕ್ ಅವರ ಗೀತಾ ಸಾಹಿತ್ಯ ಸಂಭ್ರಮ ವಿಶೇಷ ಕಾರ್ಯಕ್ರಮ ಇಂದು (ಸೆ. 18) ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಗೀತಾ ಸಾಹಿತ್ಯ ಸಂಭ್ರಮದ ಮೂಲಕ ಮನೆಮಾತಾಗಿರುವ ವಿಠಲ್ ನಾಯಕ್ ಅವರು ನ್ಯೂಸ್ ಪುತ್ತೂರು ಸ್ಟುಡಿಯೋಗೆ ಭೇಟಿ ನೀಡಿ, ವಿಶೇಷ ಕಾರ್ಯಕ್ರಮವನ್ನು ನೀಡಿದ್ದಾರೆ. ಹಾಸ್ಯ ಮಿಶ್ರಿತ, ಸಂದೇಶ ನೀಡಿರುವ ವಿಠಲ್ ನಾಯಕ್ ಅವರು ಭಜನೆಯನ್ನು ಹಾಡಿ, ಗಣಪತಿಯ ವಿಶೇಷತೆಯನ್ನು ಕೊಂಡಾಡಿದ್ದಾರೆ.

ನ್ಯೂಸ್ ಪುತ್ತೂರು ಸ್ಟುಡಿಯೋದಲ್ಲಿ ವಿಠಲ್ ನಾಯಕ್ | ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಗೀತಾ ಸಾಹಿತ್ಯ ಸಂಭ್ರಮ ಕೆಲವೇ ಕ್ಷಣದಲ್ಲಿ ಪ್ರಸಾರ… Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ | 1.51 ಕೋಟಿ ರೂ. ಲಾಭ: ಶೇ. 20 ಡಿವಿಡೆಂಡ್ ಘೋಷಣೆ

ಸುಳ್ಯ: ಗೌಡರ ಯುವ ಸೇವಾಸಂಘ ಸುಳ್ಯ ಪ್ರವರ್ತಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ ವಾರ್ಷಿಕ ಮಹಾಸಭೆ ಸೆ.16ರಂದು ಗೌಡ ಸಮುದಾಯ ಭವನ ಕೊಡಿಯಾಲಬೈಲು ಇಲ್ಲಿ ನಡೆಯಿತು. ಸಂಘವು 2022-23ನೇ ಆರ್ಥಿಕ ವರ್ಷದಲ್ಲಿ 1.51 ಕೋಟಿ ಲಾಭ ಗಳಿಸಿದ್ದು, ಶೇ. 20 ಲಾಭಾಂಶ ಹಂಚಿಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಘೋಷಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಮೋಹನ್ ರಾಂ ಸುಳ್ಯ , ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಹಾಗೂ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ | 1.51 ಕೋಟಿ ರೂ. ಲಾಭ: ಶೇ. 20 ಡಿವಿಡೆಂಡ್ ಘೋಷಣೆ Read More »

8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ!

ಕೊಲಂಬೊ: ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ ಭಾರತ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾಗೆ ಭಾರತೀಯ ಬೌಲರ್ ಗಳು ಮಾರಕವಾಗಿ ಕಾಡಿದರು. ಹೀಗಾಗಿ ಲಂಕಾ 50 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ 51 ರನ್ ಗಳ ಗುರಿ ನೀಡಿತ್ತು. ಈ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಭಾರತ 6.1 ಓವರ್ ಗೆ ವಿಕೆಟ್ ನಷ್ಟವಿಲ್ಲದೆ 51

8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ! Read More »

ಪೊಲೀಸ್ ನಾಯಿಗೆ ಅದೆಂಥಾ ಗೌರವ! ಶೂ ಕಳಚಿಟ್ಟು ಸನ್ಮಾನಿಸಿದ ಎಸ್.ಪಿ.!!

ಕೋಲಾರ: ಯಾರೋ ಒಬ್ಬ ದೊಡ್ಡ ಸಾಧಕರಿಗೆ ಸನ್ಮಾನ ಮಾಡುವಾಗಲೂ ನಾವು ಚಪ್ಪಲಿ ಕಳಚಿಟ್ಟು ನಿಲ್ಲುವುದಿಲ್ಲ. ಆದರೆ, ಕೋಲಾರದ ಎಸ್‌ಪಿ ನಾರಾಯಣ ಅವರು 11 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ವಾನ ಲೈಕಾ ಬೀಳ್ಕೊಡುಗೆ ಸಂದರ್ಭದಲ್ಲಿ ಶೂ ಕಳಚಿಟ್ಟು ಆ ನಾಯಿಗೆ ಹೂವಿನ ಹಾರ ಹಾಕಿ, ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಿದರು. ನಾಯಿಯ ಬಗೆಗಿನ ಪೊಲೀಸರ ಪ್ರೀತಿ ಜಗತ್ತಿಗೆ ಅರ್ಥವಾಯಿತು. ಹೀಗೆ ಸನ್ಮಾನ ಮಾಡಿಸಿಕೊಂಡ ಶ್ವಾನದಳದ ನಾಯಿ ಏನು ಸಾಮಾನ್ಯದ್ದಲ್ಲ. ಕಳೆದ 11 ವರ್ಷಗಳಿಂದ

ಪೊಲೀಸ್ ನಾಯಿಗೆ ಅದೆಂಥಾ ಗೌರವ! ಶೂ ಕಳಚಿಟ್ಟು ಸನ್ಮಾನಿಸಿದ ಎಸ್.ಪಿ.!! Read More »

ಪ್ರತಿಷ್ಠಿತ ಸಂಸ್ಥೆಯ ಪ್ರಮುಖ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ಇಲ್ಲಿನ ಪ್ರತಿಷ್ಠಿತ ಸಂಸ್ಥೆಯೊಂದು ಕಚೇರಿ ಹುದ್ದೆ ಭರ್ತಿಗೆ ಮುಂದಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಯಾವುದೇ ಪದವಿ ಪಡೆದುಕೊಂಡಿರಬೇಕು. ಇದರೊಂದಿಗೆ ಕಂಪ್ಯೂಟರ್ ಜ್ಞಾನ, ಕನ್ನಡ – ಇಂಗ್ಲೀಷ್ ಟೈಪಿಂಗ್ ಕಡ್ಡಾಯವಾಗಿ ತಿಳಿದಿರಬೇಕು. ಸಂವಹನ ಕೌಶಲ್ಯ ಅಗತ್ಯ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಸಂಪರ್ಕಕ್ಕೆ: Email id : info@myprerana.in, Ph no.: 8904877721, 7204977721

ಪ್ರತಿಷ್ಠಿತ ಸಂಸ್ಥೆಯ ಪ್ರಮುಖ ಹುದ್ದೆಗೆ ಅರ್ಜಿ ಆಹ್ವಾನ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭ

ಸುಳ್ಯ :ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭದ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಜೂ.12 ಬೆಳಗ್ಗೆ 6.00 ಗಂಟೆಗೆ ಗಣಹೋಮ ಪೂಜೆಯೊಂದಿಗೆ ಪಿ ಕೆ ಉಮೇಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಹರೀಶ್ ಕಂಜಿಪಿಲಿ, ಎ ವಿ ತೀರ್ಥರಾಮ, ಎಸ್ ಎನ್ ಮನ್ಮಥ, ಎನ್ ಎ ರಾಮಚಂದ್ರ, ರಾಕೇಶ್ ರೈ ಕೆಡೆಂಜಿ, ವೆಂಕಟ್ ವಳಳಂಬೆ, ಸುಬೋದ್ ಶೆಟ್ಟಿ, ವಿನಯ್ ಕುಮಾರ್ ಕಂದಡ್ಕ,

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಚೇರಿ ಕಾರ್ಯಾರಂಭ Read More »

error: Content is protected !!
Scroll to Top