ಸುದ್ದಿ

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು

ಬ್ರಹ್ಮಾವರ ಸಮೀಪ ಕುದ್ರು ಬಳಿ ನಡೆದ ಘಟನೆ ಉಡುಪಿ : ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ನೀರುಪಾಲಾಗಿರುವ ಘಟನೆ ಜಿಲ್ಲೆ ಬ್ರಹ್ಮಾವರ ತಾಲೂಕಿನ ಕುಕ್ಕುಡೆ ಕಿಣಿಯರ ಕುದ್ರು ಬಳಿ ನದಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಇಬಾಜ್, ಫಜಾನ್, ಸೂಫಾನ್, ಫರಾನ್​ ಮೃತರು. ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದವರು ಎಂದು ಗುರುತಿಸಲಾಗಿದೆ. ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ದೋಣಿ ಮೂಲಕ ಮೀನು ಹಿಡಿಯಲು ಏಳು ಯುವಕರು ತೆರಳಿದ್ದರು. ನದಿಯಲ್ಲಿ ನೀರಿನ ಮಟ್ಟ […]

ನದಿಯಲ್ಲಿ ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು Read More »

ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯ ಬಂಧನ

ತಿರುವನಂತಪುರಂ : ಏಪ್ರಿಲ್ 24ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಏ. 23 ರಂದು ಕೇರಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ. ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಪತ್ರ ಬಂದಿತ್ತು ಎಂದು ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ನಿನ್ನೆ ಹೇಳಿದ್ದರು. ಈ ಕುರಿತು ಮಾತನಾಡಿರುವ ಕೊಚ್ಚಿ

ಪ್ರಧಾನಿ ಮೋದಿಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯ ಬಂಧನ Read More »

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ Read More »

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ : ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ. ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿನಯ್ ಯಾವ ಕಾರಣದಿಂದ ಮೃತಪಟ್ಟಿದ್ಧಾನೆ ಎಂಬುದು ಸ್ಪಷ್ಟವಾಗಿಲ್ಲ.

ಮಂಗಳೂರು : ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಯುವಕನ ಮೃತದೇಹ ಪತ್ತೆ Read More »

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಬೆಂಗಳೂರು : ಒಂದಷ್ಟು ಕಾಲದಿಂದ ಸಿನಿಮಾ ಹಾಗೂ ರಾಜಕೀಯದಿಂದಲೇ ಸೈಲೆಂಟಾಗಿದ್ದ ಸ್ಯಾಂಡಲ್‌ವುಡ್‌ನ ಮೋಹಕ ತಾರೆ ನಟಿ ರಮ್ಯಾ(v) ಅವರು ಮತ್ತೆ ರಾಜಕೀಯದತ್ತ ತಮ್ಮ ದೃಷ್ಟಿ ಹರಿಸಿದ್ದಾರೆ. ಸದ್ಯಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಾಮಾಜಿಕ ಜಾಲತಾಣಗಳ ಮೂಲಕವೇ ಕೆಲ ರಾಜಕೀಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದರಂತೆ ರಮ್ಯಾ ಅವರನ್ನು ಬಿಜೆಪಿಗೆ ಬರುವಂತೆ ಉನ್ನತ ನಾಯಕರು ಆಹ್ವಾನಿಸಿದ್ದರು ಸ್ವತಃ ರಮ್ಯಾ ಅವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದು, ಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದು

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌ Read More »

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ

ಉಪ್ಪಿನಂಗಡಿ : ಏ. 22 ರಂದು ಕಲ್ಲೇರಿ ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು,

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ Read More »

ಟ್ರಕ್‌-ಬಸ್‌ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಪುಣೆ : ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆ ಸಮೀಪ ಭೀಕರ ಅಪಘಾತ ಸಂಭವಿಸಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದೆ. .ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಅಂಬೇಗಾಂವ್‌ನ ಸ್ವಾಮಿ ನಾರಾಯಣ ದೇಗುಲದ ಬಳಿ ನವಲೆ ಸೇತುವೆ ಬಳಿ ಅಪಘಾತ ಸಂಭವಿಸಿದೆ.ಸಕ್ಕರೆ ಮೂಟೆ ಸಾಗಿಸುತ್ತಿದ್ದ ಟ್ರಕ್‌ ಟೂರಿಸ್ಟ್‌ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ

ಟ್ರಕ್‌-ಬಸ್‌ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ Read More »

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ

ಅಗ್ನಿಸಾಕ್ಷಿ ಧಾರಾವಾಹಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲೂ ನಟಿಸಿದ್ದರು ಬೆಂಗಳೂರು : ಕಿರುತೆರೆಯ ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದ ಸಂಪತ್ ಜಯರಾಮ್(35) ಅವರು ನಿಧನರಾಗಿದ್ದಾರೆ. ಕೆಲವು ಕನ್ನಡ ಸಿನೆಮಾ ಹಾಗೂ ದಾರವಾಹಿಗಳಲ್ಲಿ ಸಂಪತ್‌ ಕುಮಾರ್‌ ನಟಿಸಿದ್ದರು. ಆದರೆ ಇತ್ತೀಚೆಗೆ ಕೆಲ ಸಮಯದಿಂದ ಸೂಕ್ತ ಅವಕಾಶ ಸಿಗದೆ ಚಿಂತೆಯಲ್ಲಿದ್ದರು. ಶನಿವಾರ (ಏ.22) ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ವೈವಾಹಿಕ ಜೀವನಕ್ಕೆ

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ Read More »

ಇಂದು ಶೂನ್ಯ ನೆರಳಿನ ದಿನ

ನಿಮ್ಮ ನೆರಳು ನಿಮಗೇ ಕಾಣಿಸದ ಪ್ರಾಕೃತಿಕ ಚಮತ್ಕಾರ ಪುತ್ತೂರು : ಪುತ್ತೂರಿನಲ್ಲಿ ಇಂದು(ಎ. 23) ಮುಂಬರುವ ದಿನಗಳಲ್ಲಿ ಸೂರ್ಯನು ಆಕಾಶದಲ್ಲಿ ಉತ್ತರ ದಿಕ್ಕಿನತ್ತ ಚಲಿಸುವಾಗ, ನೀವು ಇರುವ ಸ್ಥಳಕ್ಕೆ ಅವಲಂಬಿತವಾಗಿ ಸೂರ್ಯನು ಖಮಧ್ಯದ ಮೂಲಕ ಅಂದರೆ ನೆತ್ತಿಯ ನೇರದಲ್ಲಿ ಹಾದು ಹೋಗುತ್ತಾನೆ. ನೀವು ನಿಂತಿರುವ ಸ್ಥಳದಿಂದ ನೆತ್ತಿಯ ಮೇಲಿರುವ ಬಿಂದು ವನ್ನು ಖಮಧ್ಯ(ನಿತ್) ಎನ್ನುತ್ತಾರೆ. ಭೂಮಿಯು ಗೋಳಾಕಾರದಲ್ಲಿ ರುವುದರಿಂದ ಈ ಬಿಂದುವು ಆಕಾಶಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ. ಬೇರೆ ಯಾವುದೇ ಸಮಯದಲ್ಲಿ, ಸೂರ್ಯನು ನಿಮ್ಮನ್ನು ಒಂದು

ಇಂದು ಶೂನ್ಯ ನೆರಳಿನ ದಿನ Read More »

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ

ಲಿಂಗಾಯತರ ಆಕ್ರೋಶ ತಣಿಸಲು ಪ್ರಯತ್ನ ಬೆಂಗಳೂರು : ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪುಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಆ ರೀತಿ ನಾನು ಹೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಸೃಷ್ಟಿಕರಣ ನೀಡಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪುಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ ಅಂತ ಹೇಳಿದ್ದಾರೆ. ಲಿಂಗಾಯತರಲ್ಲಿ

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ Read More »

error: Content is protected !!
Scroll to Top