ಸುದ್ದಿ

ರದ್ದಾಗಲಿದೆಯೇ ಮಹಿಳೆಯರ ಉಚಿತ ಪ್ರಯಾಣದ ಸೌಲಭ್ಯ?

ಉಪಮುಖ್ಯಮಂತ್ರಿ ಡಿಕೆಶಿ ಹೇಳಿಕೆಯಲ್ಲಿದೆ ಶಕ್ತಿ ಯೋಜನೆ ರದ್ದಾಗುವ ಸುಳಿವು ಬೆಂಗಳೂರು : ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಸರಕಾರದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಶಕ್ತಿ ಯೋಜನೆ ರದ್ದಾಗುವ ಕುರಿತು ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಸುಳಿವು ನೀಡಿದ್ದಾರೆ. ಶಕ್ತಿ ಯೋಜನೆ ಮುಂದುವರಿಸುವ ವಿಚಾರವಾಗಿ ಮರುಪರಿಶೀಲನೆ ನಡೆಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ನಿನ್ನೆ ಹೇಳಿದ ಬಳಿಕ ಈ ಯೋಜನೆ ರದ್ದಾಗಲಿದೆಯೇ […]

ರದ್ದಾಗಲಿದೆಯೇ ಮಹಿಳೆಯರ ಉಚಿತ ಪ್ರಯಾಣದ ಸೌಲಭ್ಯ? Read More »

ನಟ ದರ್ಶನ್‌ಗೆ ಕೊನೆಗೂ ಸಿಕ್ಕಿತು ಜಾಮೀನು

ಬೆನ್ನುನೋವಿಗೆ ಚಿಕಿತ್ಸೆ ಪಡೆದುಕೊಳ್ಳಲು ಆರು ವಾರ ಬಿಡುಗಡೆ ಭಾಗ್ಯ ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್​ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಆರು ವಾರಗಳ ಅವಧಿಯ ಮಧ್ಯಂತರ ಜಾಮೀನು ನೀಡಲಾಗಿದ್ದು, ಮಧ್ಯಂತರ ಜಾಮೀನಿಗೆ ಬಹಳಷ್ಟು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ

ನಟ ದರ್ಶನ್‌ಗೆ ಕೊನೆಗೂ ಸಿಕ್ಕಿತು ಜಾಮೀನು Read More »

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ 63 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ

ಬೆಂಗಳೂರು: ಕರ್ನಾಟಕದಲ್ಲಿ ಈಗ ಹಗರಣ ಮತ್ತು ಕಬಳಿಕೆಯದ್ದೇ ಸುದ್ದಿ. ನಿತ್ಯ ಬೆಳಗಾದರೆ ಒಂದಿಲ್ಲೊಂದು ಹಗರಣ ಅಥವಾ ಭೂ ಕಬಳಿಕೆ ಪ್ರಕರಣಗಳು ಬಯಲಾಗುತ್ತಿವೆ. ಈಗ ಮಾಜಿ ಸ್ಪೀಕರ್‌ ಚೊನಗರೆಸಸ ಹಿರಿಯ ನಾಯಕ ರಮೇಶ್‌ ಕುಮಾರ್‌ ಸರದಿ. ರಮೇಶ್​ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೊಸಹುಡ್ಯದ ಸರ್ವೆ ನಂ.1, 2ರಲ್ಲಿ 122 ಎಕರೆ ಭೂಮಿಯನ್ನು ಏಳು

ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ 63 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ Read More »

ಮಗನ ಕೊಳೆತ ಮೃತದೇಹದ ಜೊತೆ ಐದು ದಿನ ಕಳೆದ ಅಂಧ ತಂದೆ-ತಾಯಿ

ಹೈದರಾಬಾದ್: ಮಗ ಮೃತಪಟ್ಟಿರುವುದು ತಿಳಿಯದೆ ಅಂಧ ವೃದ್ಧ ದಂಪತಿ ಮೃತದೇಹದ ಜೊತೆಗೆ 5 ದಿನ ಕಳೆದ ದಾರುಣ ಘಟನೆಯೊಂದು ಹೈದರಾಬಾದ್‌ ಬ್ಲೈಂಡ್ಸ್‌ ಕಾಲೋನಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು 30 ವರ್ಷದ ಪ್ರಮೋದ್ ಎಂದು ಗುರುತಿಸಲಾಗಿದೆ.ಪತಿ ನಿವೃತ್ತ ಸರ್ಕಾರಿ ನೌಕರ ಕಾಲುವ ರಮಣ ಮತ್ತು ಅವರ ಪತ್ನಿ ಶಾಂತಿಕುಮಾರಿ ಇಬ್ಬರೂ 60 ವರ್ಷ ಮೇಲ್ಪಟ್ಟವರು ಮತ್ತು ಇಬ್ಬರೂ ಅಂಧರು. ದಂಪತಿ ತಮ್ಮ ಮಗ ಪ್ರಮೋದ್‌ನೊಂದಿಗೆ ಹೈದರಾಬಾದ್‌ನ ಬ್ಲೈಂಡ್ಸ್‌ ಕಾಲೋನಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಅಕ್ಕಪಕ್ಕದವರು ಅವರ ಮನೆಯಿಂದ ವಿಪರೀತ ದುರ್ವಾಸನೆ

ಮಗನ ಕೊಳೆತ ಮೃತದೇಹದ ಜೊತೆ ಐದು ದಿನ ಕಳೆದ ಅಂಧ ತಂದೆ-ತಾಯಿ Read More »

ವಕ್ಫ್‌ ನೋಟಿಸ್‌ : ರೈತರಿಂದ ಅಹೋರಾತ್ರಿ ಧರಣಿ

ಸರಕಾರ ನಮಗೆ ದೀಪಾವಳಿಯ ಕರಾಳ ಉಡುಗೊರೆ ಕೊಟ್ಟಿದೆ ಎಂದು ಆಕ್ರೋಶ ವಿಜಯಪುರ: ಎಲ್ಲೆಡೆ ಜನರು ದೀಪಾವಳಿ ಸಂಭ್ರಮಕ್ಕೆ ಅಣಿಯಾಗುತ್ತಿದ್ದರೆ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈತರು ಮಾತ್ರ ವಕ್ಫ್‌ ದೆಸೆಯಿಂದಾಗಿ ತಮ್ಮ ಕೃಷಿ ಜಮೀನು ಉಳಿಸಿಕೊಳ್ಳಲು ಹಬ್ಬ ಬಿಟ್ಟು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲಿನ ರೈತರ ಪಾಲಿಗೆ ಈ ವರ್ಷದ ದೀಪಾವಳಿ ಕರಾಳವಾಗುವ ಲಕ್ಷಣ ಕಾಣಿಸಿದೆ. ತಮ್ಮ ಜಮೀನನ್ನು ವಕ್ಫ್ ಮಂಡಳಿ ವಶಪಡಿಸಿಕೊಂಡಿರುವುದನ್ನು ವಿರೋಧಿಸಿ ರೈತರು ಅಹೋರಾತ್ರಿ ಹೋರಾಟ ಪ್ರಾರಂಭಿಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ

ವಕ್ಫ್‌ ನೋಟಿಸ್‌ : ರೈತರಿಂದ ಅಹೋರಾತ್ರಿ ಧರಣಿ Read More »

ಮುಡಾ ಹಗರಣ : 35 ತಾಸು ಇ.ಡಿ. ಅಧಿಕಾರಿಗಳಿಂದ ಪರಿಶೋಧನೆ | ಬೆಂಗಳೂರು, ಮೈಸೂರಿನಲ್ಲಿ ದಾಳಿ; ಸಿದ್ದರಾಮಯ್ಯ ಆಪ್ತರ ವಿಚಾರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಯಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮೊನ್ನೆಯಿಂದ ಪ್ರಾರಂಭಿಸಿದ ದಾಳಿ ಮತ್ತು ಶೋಧ ಕಾರ್ಯಾಚರಣೆ ಬರೋಬ್ಬರಿ 35 ತಾಸು ನಿರಂತರವಾಗಿ ನಡೆದಿದೆ. ಇ.ಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ ದಾಳಿ ಮಾಡಿ ದಾಖಲೆಪತ್ರ ಮತ್ತಿತರ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗ ರಾಕೇಶ್ ಪಾಪಣ್ಣ ಹಾಗೂ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ. ಕಳೆದೆರಡು ದಿನಗಳಿಂದ ಇಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ

ಮುಡಾ ಹಗರಣ : 35 ತಾಸು ಇ.ಡಿ. ಅಧಿಕಾರಿಗಳಿಂದ ಪರಿಶೋಧನೆ | ಬೆಂಗಳೂರು, ಮೈಸೂರಿನಲ್ಲಿ ದಾಳಿ; ಸಿದ್ದರಾಮಯ್ಯ ಆಪ್ತರ ವಿಚಾರಣೆ Read More »

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆ ಆರಂಭ

ಹೆಸರು ಸೇರ್ಪಡೆ, ಬದಲಾವಣೆ, ತಿದ್ದುಪಡಿಗೆ ಅವಕಾಶ ಬೆಂಗಳೂರು : ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ರಾಜ್ಯಾದ್ಯಂತ ಮಂಗಳವಾರದಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಅಭಿಯಾನ ಪ್ರಾರಂಭವಾಗಿದೆ. ಮತದಾರರ ಕರಡು ಪಟ್ಟಿ ಪರಿಷ್ಕರಣೆಗೆ ಹಕ್ಕುಗಳು ಮತ್ತು ಆಕ್ಷೇಪಣೆ ಸಲ್ಲಿಸಲು ಅ.29ರಿಂದ ನವೆಂಬರ್‌ 24ರ ವರೆಗೆ ಅವಕಾಶ ಇರಲಿದೆ. ಹೆಸರು ಸೇರ್ಪಡೆ, ಬದಲಾವಣೆ, ತಿದ್ದುಪಡಿಗಳಿಗೆ ನವೆಂಬರ್‌ 9-10 ಹಾಗೂ 23-24 (ಶನಿವಾರ-ರವಿವಾರ) ವಿಶೇಷ ದಿನಾಂಕ ಇರಲಿದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು

ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆ ಆರಂಭ Read More »

13ನೇ ಶತಮಾನದ ಮಠದ ಆಸ್ತಿಯೂ ವಕ್ಫ್‌ ಪಾಲು!

ಭಕ್ತರ ತೀವ್ರ ಆಕ್ರೋಶ, ಉದ್ವಿಗ್ನ ಪರಿಸ್ಥಿತಿ ವಿಜಯಪುರ: ಸಿಂದಗಿ ಪಟ್ಟಣದಲ್ಲಿರುವ 13ನೇ ಶತಮಾನದ ಮಠದ ಆಸ್ತಿ ಕೂಡ ಈಗ ವಕ್ಫ್‌ ಬೋರ್ಡ್‌ ಆಸ್ತಿ ಎಂದು ನೋಂದಣಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ರೈತರ ನೂರಾರು ಎಕರೆ ಕೃಷಿಭೂಮಿ ವಕ್ಫ್‌ ಆಸ್ತಿ ಎಂದು ಪಹಣಿಯಾದ ಬೆನ್ನಿಗೆ ಮಠದ ಆಸ್ತಿಯೂ ವಕ್ಫ್‌ ಪಾಲಾಗಿರುವುದು ಬೆಳಕಿಗೆ ಬಂದಿದೆ. ಸರ್ವೆ ನಂಬರ್‌ 1020ರ ಆಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್‌ ಎಂದು ನೋಂದಣಿಯಾಗಿದೆ. ಸಿದ್ದಲಿಂಗ ಸ್ವಾಮಿಜಿ ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂಬರ್‌ 11 ಖಾಲಿ

13ನೇ ಶತಮಾನದ ಮಠದ ಆಸ್ತಿಯೂ ವಕ್ಫ್‌ ಪಾಲು! Read More »

ಧಗಧಗಿಸುತ್ತಿದ್ದ ಬೆಂಕಿಯ ನಡುವಿನಿಂದ ಮಗುವನ್ನು ರಕ್ಷಿಸಿದ ʼದೈವʼ!

ಕಾಸರಗೋಡು: ನೀಲೇಶ್ವರದ ಅಂಜೂತಾಂಬಲಂ ವೀರರ್ಕಾವು ದೈವಸ್ಥಾನದಲ್ಲಿ ನಿನ್ನೆ ತಡರಾತ್ರಿ ವಾರ್ಷಿಕ ಕಳಿಯಾಟ್ಟಂ ಸಂದರ್ಭದಲ್ಲಿ ಸಂಭವಿಸಿದ ಭೀಕರ ಪಟಾಕಿ ದುರಂತದಲ್ಲಿ ಜನರನ್ನು ರಕ್ಷಿಸಲು ತಮ್ಮ ಪ್ರಾಣದ ಹಂಗು ತೊರೆದು ಶ್ರಮಿಸಿದವರ ಕಥೆಗಳು ಬೆಳಕಿಗೆ ಬರುತ್ತಿವೆ. ಎಲ್ಲಕ್ಕೂ ಮಿಗಿಲಾಗಿ ದೈವ ನರ್ತಕನೇ ತನ್ನ ಪ್ರಾಣಕ್ಕೆ ಅಪಾಯವಿದ್ದರೂ ಲೆಕ್ಕಿಸದೆ ಬೆಂಕಿಯ ನಡುವೆ ಸಿಕ್ಕಿಬಿದ್ದಿದ್ದ ಮಗುವೊಂದನ್ನು ರಕ್ಷಿಸಿದ್ದು ಸುದ್ದಿಯಾಗುತ್ತಿದೆ.ರಾತ್ರಿ 12.30 ವೇಳೆಗೆ ದೈವಸ್ಥಾನದಲ್ಲಿ ಭೀಕರ ದುರಂತ ಸಂಭವಿಸಿದೆ. ಈ ವೇಳೆ ತೆಯ್ಯಂ (ದೈವ) ಆವೇಶವಾಗಿ ನರ್ತನ ನಡೆಯುತ್ತಿತ್ತು. ಕಿವಿಗಡಚಿಕ್ಕುವ ಶಬ್ದದೊಂದಿಗೆ ದೈವಸ್ಥಾನದ ಪಕ್ಕವೇ

ಧಗಧಗಿಸುತ್ತಿದ್ದ ಬೆಂಕಿಯ ನಡುವಿನಿಂದ ಮಗುವನ್ನು ರಕ್ಷಿಸಿದ ʼದೈವʼ! Read More »

ಧಾರವಾಡ, ಯಾದಗಿರಿ ಜಿಲ್ಲೆಯ ರೈತರಿಗೂ ವಕ್ಫ್‌ ಶಾಕ್‌ : ಅನ್ನದಾತ ಕಂಗಾಲು

ನೂರಾರು ಎಕರೆ ಭೂಮಿ ಸದ್ದಿಲ್ಲದೆ ವಕ್ಫ್‌ಗೆ ವರ್ಗಾವಣೆಯಾದದ್ದು ಹೇಗೆ ಎಂಬ ಪ್ರಶ್ನೆ ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಕಾಯ್ದೆಯ ಬಿಸಿ ಇದೀಗ ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳಿಗೆ ವಿಸ್ತರಿಸಿದೆ. ಧಾರವಾಡ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೂರಾರು ರೈತರ ಕೃಷಿಭೂಮಿ ಅವರಿಗರಿವಿಲ್ಲದೆ ವಕ್ಫ್‌ ಬೋರ್ಡ್‌ಗೆ ವರ್ಗಾವಣೆಯಾಗಿದೆ. ಕಂದಾಯ ಇಲಾಖೆಯಿಂದ ನೋಟಿಸ್‌ ಬಂದ ಬಳಿಕ ಎಚ್ಚೆತ್ತಿರುವ ಇಲ್ಲಿನ ರೈತರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಧಾರವಾಡದಲ್ಲಿ ಕೆಲ ರೈತರ ಜಮೀನಿನ ಪಹಣಿಯಲ್ಲಿ ಕೆಲವು ವರ್ಷಗಳ ಹಿಂದೆಯೇ ವಕ್ಫ್ ಹೆಸರು ದಾಖಲಾಗಿರುವುದು

ಧಾರವಾಡ, ಯಾದಗಿರಿ ಜಿಲ್ಲೆಯ ರೈತರಿಗೂ ವಕ್ಫ್‌ ಶಾಕ್‌ : ಅನ್ನದಾತ ಕಂಗಾಲು Read More »

error: Content is protected !!
Scroll to Top