ಸುದ್ದಿ

ಹೆಂಡತಿ-ಮಗಳಿಗೆ ಹಲ್ಲೆ | ಆಸ್ಪತ್ರೆಗೆ ದಾಖಲು !

ಶಿಶಿಲ: ಹೆಂಡತಿ ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದ ಕುರಿತು ಶಿಶಿಲದಿಂದ ವರದಿಯಾಗಿದೆ. ಶಿಶಿಲ ಕೋಟಬಾಗಿಲು ನಿವಾಸಿ ಸುರೇಶ್‍ ಎಂಬವರು ತನ್ನ ಹೆಂಡತಿ ಮುಖದ ಭಾಗಕ್ಕೆ ಕಚ್ಚಿದ್ದು, ಕಣ್ಣಿಗೆ ಕೋಲಿನಿಂದ ಹೊಡೆದು ಕಣ್ಣನ್ನು ಸಂಪೂರ್ಣ ಹಾನಿಗೊಳ್ಳಿಸಿದ್ದಾರೆ. ಅಲ್ಲದೆ ಮಗಳಿಗೆ ತಲೆ ಭಾಗಕ್ಕೆ ಹೊಡೆದಿದ್ದು, ಹೆಂಡತಿ-ಮಗಳು ಇಬ್ಬರೂ ಪ್ರಾಣ ಭಯದಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದ್ದು, ತಕ್ಷಣ ಸ್ಥಳೀಯರು ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆಸ್ಪತ್ರೆಗೆ ತೆರಳಿ […]

ಹೆಂಡತಿ-ಮಗಳಿಗೆ ಹಲ್ಲೆ | ಆಸ್ಪತ್ರೆಗೆ ದಾಖಲು ! Read More »

ಖೋಟಾ ನೋಟು ಚಲಾವಣೆಗೆ ಯತ್ನ | ಆರೋಪಿ ಬಂಧನ

ಮಂಗಳೂರು : ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ಬಳಿ ಬಂಧಿಸಿದ್ದಾರೆ. ಮಂಜೇಶ್ವರದ ಆಬುಪಡ್ಡು ನಿವಾಸಿ ಪ್ರಶ್ಚಿತ್ (25) ಬಂಧಿತ ಆರೋಪಿ. ಆರೋಪಿ 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂ. ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯಿಂದ 500 ರೂ. ಮುಖಬೆಲೆಯ 3 ನೋಟುಗಳು, 200

ಖೋಟಾ ನೋಟು ಚಲಾವಣೆಗೆ ಯತ್ನ | ಆರೋಪಿ ಬಂಧನ Read More »

ಕಾರು ಡಿಕ್ಕಿಯಾಗಿ ವಿಕಲಚೇತನರೊಬ್ಬರು ಮೃತ್ಯು !

ಕಡಬ: ರಸ್ತೆ ದಾಟುತ್ತಿದ್ದ ವಿಕಲಚೇತನರೊಬ್ಬರ ಮೇಲೆ ಕಾರೊಂದು ಹರಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕಡಬದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಡಬದ ಅಂಗಡಿ ಮನೆ ನಿವಾಸಿ ಧರ್ನಪ್ಪ ಮೃತರ ವಿಕಲಚೇತನರಾಗಿದ್ದಾರೆ. ಶುಕ್ರವಾರ ಸಾಯಂಕಾಲ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾರು ಡಿಕ್ಕಿಯಾಗಿ ವಿಕಲಚೇತನರೊಬ್ಬರು ಮೃತ್ಯು ! Read More »

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ

ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಅನಾರೋಗ್ಯದ ಕಾರಣಕ್ಕೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್ (69) ಕೊನೆಯುಸಿರೆಳೆದಿದ್ದಾರೆ. 1993ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕಾಡುಗಳ್ಳ ವೀರಪ್ಪನ್, ಬಿಲವೇಂದ್ರನ್ ಸೈಮನ್, ಮೀಸೆಕಾರ ಮಾದಯ್ಯ ಅವರೊಂದಿಗೆ ಭಾಗಿಯಾಗಿದ್ದ ಆರೋಪದ ಮೇಲೆ ಮೈಸೂರಿನ ಟಾಡಾ ನ್ಯಾಯಾಲಯ 1997ರಲ್ಲಿ ಜ್ಞಾನಪ್ರಕಾಶ್‌ ಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2014ರಲ್ಲಿ ಸುಪ್ರಿಂ ಕೋರ್ಟ್ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಆದೇಶಿಸಿತ್ತು. ಈ ವೇಳೆ

ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ ನಿಧನ | ಬಾಂಬ್‌ ಸ್ಪೋಟ ಪ್ರಕರಣದಲ್ಲಿ 29 ವರ್ಷ ಜೈಲಿನಲ್ಲಿದ್ದ ಆರೋಪಿ Read More »

ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ

ಉಳ್ಳಾಲ : ಯುವಕನೊಬ್ಬನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಶಾಲೆಯೊಂದರ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯಗೀಡಾದ ಯುವಕನನ್ನು ವರುಣ್‌ ಗಟ್ಟಿ(28) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಸೂರಜ್‌ ಮತ್ತು ರವಿರಾಜ್‌ ಎಂಬವರನ್ನು ಉಳ್ಳಾಲ ಠಾಣಾ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಬಿಯರ್‌ ಕುಡಿದು ಬಾಟಲಿಯನ್ನು ರಸ್ತೆಗೆ ಎಸೆದಿದ್ದನ್ನು ಪ್ರಶ್ನಿಸಿದಕ್ಕೆ ಕೊಲೆಗೈಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಯ ಮುಂಭಾಗದ ಕಟ್ಟೆಯೊಂದರಲ್ಲಿ ಕುಳಿತು ಸೂರಜ್‌ ಮತ್ತು ರವಿರಾಜ್‌ ಬಿಯರ್‌ ಕುಡಿದು ಬಾಟಲಿಯನ್ನು ರಸ್ತೆಗೆ

ಮಾರಕಾಸ್ತ್ರದಿಂದ ಇರಿದು ಯುವಕನ ಹತ್ಯೆ; ಆರೋಪಿಗಳ ಬಂಧನ Read More »

ಬಸ್ಸಿಗೆ ಹತ್ತುವ ವೇಳೆ ಚಿನ್ನದ ಸರ ಕಳವು !

ಬೆಳ್ತಂಗಡಿ: ಬಸ್ಸಿಗೆ ಹತ್ತುವ ವೇಳೆ ಚಿನ್ನ ಕಳವು ಮಾಡಿರುವ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಜಿರೆ ಗ್ರಾಮದ ವಾರಿಜ ಟಿ. (53) ಮಂಗಳವಾರ ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆಎಸ್ಸಾಆರ್ಟಿಸಿ ಬಸ್ ಗೆ ಹತ್ತುವ ವೇಳೆ ಘಟನೆ ನಡೆದಿದೆ. ವಾರಿಜ ಅವರು ಕೊರಳಿನಲ್ಲಿ ಧರಿಸಿದ್ದ ಚಿನ್ನದ ಸರವನ್ನು ಯಾರೋ ಅನಾಮಿಕರು ಎಳೆದು ತೆಗೆದಿದ್ದಾರೆ. ಈ ಸಂದರ್ಭ ಅವರು ಬೊಬ್ಬೆ ಹೊಡೆದಿದ್ದಾರೆ. ಆದರೆ ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದುದರಿಂದ ಕಳ್ಳ ಯಾರೆಂದು ಪತ್ತೆಯಾಗಿಲ್ಲ ಎಂದು

ಬಸ್ಸಿಗೆ ಹತ್ತುವ ವೇಳೆ ಚಿನ್ನದ ಸರ ಕಳವು ! Read More »

ಶುಚಿತ್ವ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ವ್ಯಾಪಾರಿಗಳಿಗೆ ನೋಟೀಸ್!

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಟಿ ಜಾತ್ರೋತ್ಸವ ನಡೆಯುವ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವ ಹಿನ್ನಲೆಯಲ್ಲಿ ಶುಚಿತ್ವ ವಹಿಸುವಂತೆ ವ್ಯಾಪಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ  ಹಾಗೂ ಶುಚಿತ್ವ ಕಾಪಾಡುವ ದೃಷ್ಟಿಯಿಂದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾl ತ್ರಿಮೂರ್ತಿ ಅವರ ಸೂಚನೆಯಂತೆ ಹಿರಿಯ ಆರೋಗ್ಯ ನಿರೀಕ್ಷಕ ಬಸವರಾಜ್ ಹಾಗೂ ಆರೋಗ್ಯ ನಿರೀಕ್ಷಕ ಉಮ್ಮರ್ ಖಾನ್ ನೋಟೀಸ್ ನೀಡುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಜಾತ್ರೋತ್ಸವ ಸಂದರ್ಭದಲ್ಲಿ ಬೇಕರಿ, ಸಣ್ಣ ಚಹಾದ ಅಂಗಡಿ, ಸಣ್ಣ ಪುಟ್ಟ

ಶುಚಿತ್ವ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ವ್ಯಾಪಾರಿಗಳಿಗೆ ನೋಟೀಸ್! Read More »

ಆಶೀರ್ವಾದದ ರೂಪದಲ್ಲಿ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ..

ಪುತ್ತೂರು: ಹೊಸ ಮನೆ ನಿರ್ಮಿಸಬೆಕು ಎನ್ನುವುದು ಎಲ್ಲರ ಕನಸು. ಆ ಕನಸು ನಿಮಗೆ ಅದೃಷ್ಟವಾಗಿ ಒಲಿದು ಬಂದರೆ ಹೇಗಿರಬಹುದು. ಹೌದು, ಇಂತಹದೊಂದು ಅವಕಾಶ ನಿಮ್ಮ ಮುಂದಿದೆ. ಆಶೀರ್ವಾದ ಎಂಟರ್ಪ್ರೈಸಸ್ ಇಂತಹ ಹೊಸ ಅವಕಾಶ ಒಂದನ್ನು ನಿಮ್ಮ ಮುಂದಿಟ್ಟಿದೆ. ಅದು ಮಾತ್ರ ಅಲ್ಲದೆ ಪ್ರತೀ ತಿಂಗಳು ಕಾರು, ಬೈಕ್, ಚಿನ್ನ, ನಗದು ಜೊತೆಗೆ ಹತ್ತು ಹಲವಾರು ಅದೃಷ್ಟಕರ ಬಹುಮಾನವನ್ನು ಆಶೀರ್ವಾದ ಲಕ್ಕಿ ಸ್ಕೀಂ ಮೂಲಕ ನೀವು ಪಡೆದುಕೊಳ್ಳಬಹುದು. ಪ್ರತೀ ತಿಂಗಳು 50 ಆಕರ್ಷಕ ಬಹುಮಾನವನ್ನು ಸಹ ನೀವು ಪಡೆದುಕೊಳ್ಳಬಹುದು.

ಆಶೀರ್ವಾದದ ರೂಪದಲ್ಲಿ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ.. Read More »

ಡಿ.12 : ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟದಿಂದ ಪ್ರತಿಭಟನೆ | ಸೇವೆಯಲ್ಲಿ ಉಂಟಾಗಲಿದೆ ವ್ಯತ್ಯಯ

ಮಂಗಳೂರು: ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟ  ಹಾಗೂ ಗ್ರಾಮೀಣ ಅಂಚೆ ಸೇವಕರ ರಾಷ್ಟ್ರೀಯ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಸಹಯೋಗದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 12ರಿಂದ ಮುಷ್ಕರ ಹಮ್ಮಿಕೊಂಡಿದ್ದು, ಗ್ರಾಮೀಣ ಭಾಗಗಳಲ್ಲಿ ಅಂಚೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮುಷ್ಕರ ಹಿನ್ನೆಲೆಯಲ್ಲಿ ಸೇವೆಯನ್ನು ಸ್ಥಗಿತಗೊಳಿಸಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಐಜಿಡಿಎಸ್‌ಯು ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಹದೇವಯ್ಯ ಸಭೆಯೊಂದರಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ 16.5 ಸಾವಿರ ಗ್ರಾಮೀಣ ಅಂಚೆ ಸೇವಕರು ಕಾರ್ಯನಿರ್ವಹಿಸುತ್ತಿದ್ದು, ಅಂಚೆ ಸೇವೆಗಳನ್ನು

ಡಿ.12 : ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಒಕ್ಕೂಟದಿಂದ ಪ್ರತಿಭಟನೆ | ಸೇವೆಯಲ್ಲಿ ಉಂಟಾಗಲಿದೆ ವ್ಯತ್ಯಯ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ | ಲಕ್ಷ ದೀಪೋತ್ಸವದಂದು ಲಕ್ಷ ಹಣತೆಗಳ ಸಾಲು. 

ಸುಬ್ರಹ್ಮಣ್ಯ,: ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾ ಷಷ್ಟಿ ಮಹೋತ್ಸವದ ಅಂಗವಾಗಿ ಡಿ.9 ಶನಿವಾರ ಮೂಲಮೃತಿಕ ಪ್ರಸಾದ ತೆಗೆದು ವಿತರಣೆ ಆಗುವುದರೊಂದಿಗೆ  ಆರಂಭಗೊಳ್ಳಲಿದ್ದು, ಡಿ.24 ರಂದು ಕೊಪ್ಪರಿಗೆ ಇಳಿಯುವ ಮೂಲಕ ರಾತ್ರಿ ನೀರು ಬಂಡಿ ಉತ್ಸವ ಹಾಗೂ ದೈವಗಳ ನಡಾವಳಿ ನಡೆದು ಜಾತ್ರೆ ಸಂಪನ್ನಗೊಳ್ಳಲಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಜಾತ್ರೋತ್ಸವಕ್ಕೆ ಹೊರೆ ಕಾಣಿಕೆಸಲ್ಲಿಸುವ ಬಗ್ಗೆ ಸುಳ್ಯ, ಪುತ್ತೂರು ಹಾಗೂ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವಕ್ಕೆ ಭರದ ಸಿದ್ಧತೆ | ಲಕ್ಷ ದೀಪೋತ್ಸವದಂದು ಲಕ್ಷ ಹಣತೆಗಳ ಸಾಲು.  Read More »

error: Content is protected !!
Scroll to Top