ಸುದ್ದಿ

ಹತ್ತಕ್ಕೂ ಮಿಕ್ಕಿದ ಮನೆಗಳು ಮುಳುಗಡೆ: ಮನೆ ಮಂದಿಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್ ತಂಡ

ಪುತ್ತೂರು : ಸರ್ವೆ ವ್ಯಾಪ್ತಿಯಲ್ಲಿರುವ  ಗೌರಿ ಹೊಳೆ ಸೇತುವೆ ನಿರಂತರ ಸುರಿದ ಮಳೆಯಿಂದಾಗಿ ತುಂಬಿ ಹರಿದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ಸವಣೂರು ಸಮೀಪದ ಸರ್ವೆ ಎಂಬಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ರಸ್ತೆಯ ಸಂಪರ್ಕ ಕಡಿತಗೊಂಡಿದ್ದು, ಹತ್ತಕ್ಕೂ ಮಿಕ್ಕಿದ ಮನೆಗಳು ಮುಳುಗಡೆಯಾಗಿದೆ ಎಂದು ತಿಳಿದು ಬಂದಿದೆ. ಅಪಾಯದ ಮಟ್ಟದಲ್ಲಿದ್ದ ಮನೆ ಮಂದಿಯನ್ನು ಎನ್ ಡಿ ಆರ್ ಎಫ್ ತಂಡ ರಕ್ಷಣೆ ಮಾಡಿದೆ. ಇದೇ ಮೊದಲ ಬಾರಿಗೆ ಗೌರಿ ಹೊಳೆಯಲ್ಲಿ ಪ್ರವಾಹ ಭೀತಿ ಸೃಷ್ಠಿಯಾಗಿದೆ ಎಂದು […]

ಹತ್ತಕ್ಕೂ ಮಿಕ್ಕಿದ ಮನೆಗಳು ಮುಳುಗಡೆ: ಮನೆ ಮಂದಿಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್ ತಂಡ Read More »

ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ

ವಿಟ್ಲ: ಕಳೆದ 50 ವರ್ಷಗಳಿಂದ ದಿನಪತ್ರಿಕೆ ಮಾರಾಟ ಮಾಡುತ್ತಿದ್ದ ಜಗದೀಶ್ ಭಟ್ (86) ನಿಧನರಾಗಿದ್ದಾರೆ. ವಿಟ್ಲ ಪರಿಸರದಲ್ಲಿ ಪೇಪ‌ರ್ ಭಟ್ರು ಎಂದೇ ಹೆಸರುವಾಸಿಯಾಗಿದ್ದ ಜಗದೀಶ್‌ ಭಟ್‌ ರವರು ಮೊದಲು ಗಣೇಶ್ ಬೀಡಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.  ಅವರು ಬಳಿಕ ಪತ್ರಿಕಾ ವಿತರಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದರು. ವಿಟ್ಲ ಜಾತ್ರಾ ಸಂದರ್ಭ ದೇವಸ್ಥಾನದ ಆನೆ ಬಾಗಿಲು ಸಮೀಪ ಸೂಜಿ ವ್ಯಾಪಾರ ಮಾಡಿ ಜನರ ಪ್ರೀತಿ ಪಾತ್ರರಾಗಿದ್ದರು. ಮೃತರು ಪತ್ನಿ ಹಾಗು ಮೂವರು ಪುತ್ರರು, ಪುತ್ರಿ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ Read More »

ಕಮಲಹಾಸನ್‌ ಅಭಿನಯದ ಥಗ್‌ಲೈಫ್‌ ಬ್ಯಾನ್‌ಗೆ ಕನ್ನಡಪರ ಸಂಘಟನೆಗಳ ಕರೆ

ಚಿತ್ರ ಪ್ರದರ್ಶಿಸಿದರೆ ಥಿಯೇಟರ್‌ಗೆ ಬೆಂಕಿ ಹಚ್ಚುವ ಎಚ್ಚರಿಕೆ ಬೆಂಗಳೂರು : ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಉದ್ದಟತನದ ಹೇಳಿಕೆ ನೀಡಿದ್ದಲ್ಲದೆ ಇದಕ್ಕಾಗಿ ಕ್ಷಮೆ ಯಾಚಿಸದೆ ಮೊಂಡಾಟ ಮಾಡಿ ಕನ್ನಡಿಗರನ್ನು ಕೆಣಕಿರುವ ಮೇರುನಟ ಕಮಲಹಾಸನ್‌ಗೆ ಕರ್ನಾಟಕದಲ್ಲಿ ಬ್ಯಾನ್‌ ಬಿಸಿ ತಟ್ಟಿದೆ. ಮುಂಬರುವ ಜೂ.5ರಂದು ಬಿಡುಗಡೆಯಾಗಲಿರುವ ಕಮಲಹಾಸನ್‌ ಅಭಿನಯದ ಥಗ್‌ ಲೈಫ್‌ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡದಿರಲು ಕನ್ನಡಪರ ಸಂಘಟನೆಗಳು ತೀರ್ಮಾನಿಸಿವೆ. ಅಧಿಕಪ್ರಸಂಗಿ ಹೇಳಿಕೆ ನೀಡಿದ ಬಳಿಕ ನಾನು ತಪ್ಪೇ ಮಾಡಿಲ್ಲ, ಕ್ಷಮೆ ಕೇಳಲ್ಲ ಎಂದು

ಕಮಲಹಾಸನ್‌ ಅಭಿನಯದ ಥಗ್‌ಲೈಫ್‌ ಬ್ಯಾನ್‌ಗೆ ಕನ್ನಡಪರ ಸಂಘಟನೆಗಳ ಕರೆ Read More »

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವ

ಪುತ್ತೂರು : ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ವವ ಮೇ 30 ರಂದು ಗಣಪತಿ ಹವನದ ಮೂಲಕ ಆರಂಭಿಸಲಾಯಿತು. ಪೋಷಕ ಹರಿಪ್ರಸಾದ್ ವೈಲಾಯ ಮತ್ತು ಬಳಗದವರು ಯಜ್ಞ ಕಾರ್ಯ ನೆರವೇರಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಎಂ. ದಂಪತಿ ಹವನದ ಕರ್ತೃತ್ವ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವ Read More »

ಕಾರ್ಕಳ : ಹಟ್ಟಿಗೆ ಬೆಂಕಿ ತಗಲಿ ಕಂಬಳದ ಕೋಣಗಳು ಸಾವು

ಜೀವಂತ ಸುಟ್ಟು ಕರಕಲಾದ ಚಾಂಪಿಯನ್‌ ಕೋಣಗಳು ಕಾರ್ಕಳ : ಹಟ್ಟಿಗೆ ಬೆಂಕಿ ತಗುಲಿದ ಪರಿಣಾಮ ಕಂಬಳದ ಕೋಣಗಳು ಜೀವಂತ ದಹಿಸಿದ ದಾರುಣ ಘಟನೆ ಶುಕ್ರವಾರ ತಡರಾತ್ರಿ ಕಾರ್ಕಳದ ಕಾಂತಾವರ ಸಮೀಪದ ಬೇಲಾಡಿ ಎಂಬಲ್ಲಿ ಸಂಭವಿಸಿದೆ. ಬೇಲಾಡಿ ಬಾವ ಅಶೋಕ್‌ ಶೆಟ್ಟಿಯವರ 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್‌ ಪಡೆದ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.

ಕಾರ್ಕಳ : ಹಟ್ಟಿಗೆ ಬೆಂಕಿ ತಗಲಿ ಕಂಬಳದ ಕೋಣಗಳು ಸಾವು Read More »

ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನ

ಮಹತ್ವದ ಮಾಹಿತಿಗಳನ್ನು ರೇಖಾಚಿತ್ರದೊಂದಿಗೆ ಪಾಕ್‌ ಏಜೆಂಟರಿಗೆ ಕೊಡುತ್ತಿದ್ದ ಪಾತಕಿ ಮುಂಬೈ: ದೇಶದ ಯುದ್ಧನೌಕೆಗಳು, ಜಲಾಂತರ್ಗಾಮಿಗಳ ಸೂಕ್ಷ್ಮಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಐಎಸ್‌ಐ ಏಜೆಂಟ್‌ ಒಬ್ಬನನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಲಾಗಿದೆ. ಥಾಣೆಯ ಕಲ್ವಾ ನಿವಾಸಿ ಮೆಕ್ಯಾನಿಕಲ್ ಇಂಜಿನಿಯರ್ ರವೀಂದ್ರ ವರ್ಮಾ (27) ಬಂಧಿತ ಆರೋಪಿ. ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ರವೀಂದ್ರನನ್ನು ಬಂಧಿಸಲಾಗಿದೆ. ವರ್ಮಾ ರಕ್ಷಣಾ ತಂತ್ರಜ್ಞಾನ ಸಂಸ್ಥೆಯಲ್ಲಿ ಜೂನಿಯರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ದಕ್ಷಿಣ ಮುಂಬೈನಲ್ಲಿರುವ ನೇವಲ್ ಡಾಕ್‌ಯಾರ್ಡ್‌ಗೆ

ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನ Read More »

ಬೆಳ್ಳಿಪ್ಪಾಡಿಯಲ್ಲಿ ಭೂಕುಸಿತ | ಅಪಾಯದಲ್ಲಿರುವ ಎರಡು ಮನೆಗಳು

ಪುತ್ತೂರು : ತಾಲೂಕಿನ ಬೆಳ್ಳಿಪಾಡಿ ಗ್ರಾಮದಲ್ಲಿ ಭೀಕರ ಭೂಕುಸಿತವಾಗಿದ್ದು,  ಬೆಳ್ಳಿಪ್ಪಾಡಿ ಕಠಾರ ಕೋಟೆಲು ಭಾಗಕ್ಕೆ ಸಂಪರ್ಕಿಸುವ ಸಕಲೇಶ್ವರ ದೇವಸ್ಥಾನದ ಬಳಿ ಇರುವ  ಗುತ್ತಿನಮನ ಎಂಬಲ್ಲಿ ರಸ್ತೆಗೆ ಧರೆ ಕುಸಿದುಬಿದ್ದು ದರಿಂದ ಸಂಪರ್ಕ ಕಡಿತವಾಗಿದೆ . ಮಣ್ಣು ಕೆಳಗಿನ ತೋಟಗಳಿಗೂ ನುಗ್ಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ಸ್ಥಳದಲ್ಲಿ ಭೂಕುಸಿತ ಸಂಭವಿಸಿದ್ದು, ಮೇಲ್ಬಾಗದಲ್ಲಿ ಎರಡು ಮನೆಗಳು ತೀರ ಅಪಾಯಕಾರಿ ಸ್ಥಿತಿಯಲ್ಲಿವೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ರಸ್ತೆಯನ್ನು ಉಪಯೋಗಿಸುವಂತೆ ಸ್ಥಳೀಯರು ತಿಳಿಸಿದ್ದಾರೆ. ಇಲಾಖೆ ತಕ್ಷಣ ಎಚ್ಚೆತ್ತುಕೊಂಡು

ಬೆಳ್ಳಿಪ್ಪಾಡಿಯಲ್ಲಿ ಭೂಕುಸಿತ | ಅಪಾಯದಲ್ಲಿರುವ ಎರಡು ಮನೆಗಳು Read More »

ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದೆಲ್ಲೆಡೆ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಹಲವು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಅರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ ಆಫೀಸರ್ ಗಿರೀಶ್ ರಾವ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಡಿವೈಎಸ್ ಪಿ.ಮಂಜುನಾಥ ನೇತೃತ್ವದಲ್ಲಿ ದಾಳಿಯಾಗಿದ್ದು, ಕಾರ್ಕಳದ ಮನೆ, ಕಚೇರಿ, ಸಂಬಂಧಿಕರ ಮನೆ ಸೇರಿದಂತೆ ಐದು ಕಡೆ ದಾಳಿ

ಕಾರ್ಕಳ ಮೆಸ್ಕಾಂ ಅಕೌಂಟ್ ಆಫೀಸರ್ ಮನೆ ಮೇಲೆ ಲೋಕಾಯುಕ್ತ ದಾಳಿ Read More »

ಮೊಂಟೆಪದವು ಗುಡ್ಡಕುಸಿತಕ್ಕೆ ನಿರ್ಲಕ್ಷ್ಯ ಕಾರಣ : ಪಿಡಿಒ, ಕೆಆರ್​ಡಿಐಎಲ್ ಅಧಿಕಾರಿಗಳ ವಿರುದ್ಧ ದೂರು

ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು : ಮಂಜನಾಡಿಯ ಮೊಂಟೆಪದವಿನಲ್ಲಿ ಶುಕ್ರವಾರ ನಸುಕಿನ ಹೊತ್ತು ಗುಡ್ಡಕುಸಿತವಾಗಲು ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾಮಗಾರಿ ಕಾರಣವೆಂಬ ಆರೋಪ ಕೇಳಿಬಂದಿದ್ದು, ಈ ಕುರಿತಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ಗಾಯಾಳು ಅಶ್ವಿನಿ ಸಹೋದರ ತೇಜು ಕುಮಾರ್ ಆರೋಪಿಸಿದ್ದಾರೆ.ಈ ಕುರಿತಾಗಿ ಕೊಣಾಜೆ ಪೊಲೀಸ್

ಮೊಂಟೆಪದವು ಗುಡ್ಡಕುಸಿತಕ್ಕೆ ನಿರ್ಲಕ್ಷ್ಯ ಕಾರಣ : ಪಿಡಿಒ, ಕೆಆರ್​ಡಿಐಎಲ್ ಅಧಿಕಾರಿಗಳ ವಿರುದ್ಧ ದೂರು Read More »

ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು

ಮಹಾಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಅನಾಹುತ ಬೆಂಗಳೂರು : ರಾಜ್ಯದಲ್ಲಿ ಮೇ ತಿಂಗಳಲ್ಲಿ ಇಷ್ಟು ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು 125 ವರ್ಷಗಳಲ್ಲಿ ಇದೇ ಮೊದಲು ಎನ್ನಲಾಗಿದೆ. ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳೊಂದರಲ್ಲೇ ಸುರಿದಿದೆ. ಇದು ಶತಮಾನದ ಮಳೆ ಎಂದು ಹೇಳಲಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಗೆ 67 ಜನರು ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ನಾಶನಷ್ಟ ಉಂಟಾಗಿದೆ. ಭೂಕುಸಿತ, ನೆರೆ, ವಿದ್ಯುತ್‌ ಶಾಕ್‌ ಮತ್ತಿತರ ಅವಘಡಗಳಲ್ಲಿ ಶುಕ್ರವಾರ ಒಂದೇ

ಮೇ ತಿಂಗಳಲ್ಲಿ 125 ವರ್ಷಗಳ ಬಳಿಕ ಸುರಿದ ಅತ್ಯಧಿಕ ಮಳೆ : 67 ಮಂದಿ ಸಾವು Read More »

error: Content is protected !!
Scroll to Top