ಸುದ್ದಿ

ನೇಣು ಬಿಗಿದುಕೊಂಡು ಆತ್ಮಹತ್ಯೆ !!

ಉಳ್ಳಾಲ: ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಿಪು ಬಳಿಯ ಕಾರ್ ಗ್ಯಾರೇಜ್‌ನಲ್ಲಿ ನಡೆದಿದೆ. ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ಮುಡಿಪುವಿನಲ್ಲಿ ಕಾರು ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿಶೋರ್‌ ಕಂಕನಾಡಿಯ ಕಾರ್ ಶೋ ರೂಂನಲ್ಲಿ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ನ.20 ರಂದು ಕೆಲಸಕ್ಕೆ ಹೋಗಿದ್ದು ತಡವಾದರೂ ಮನೆಗೆ ಬಂದಿರಲಿಲ್ಲ. ಮನೆಯವರು, ಸಂಬಂಧಿಕರ ಹುಡುಕಾಡಿದರೂ ಕಿಶೋರ್ ಪತ್ತೆಯಾಗಿರಲಿಲ್ಲ. ಕೊನೆಗೆ ಕಿಶೋರ್‌ ಪ್ರತಿದಿನ ಕೆಲಸ ಬಿಟ್ಟು ಕೆಲ ಹೊತ್ತು ಕುಳಿತುಕೊಳ್ಳುತ್ತಿದ್ದ ಮುಡಿಪುವಿನ ಗ್ಯಾರೇಜ್‌ ನಲ್ಲಿ ಹುಡುಕಾಟ […]

ನೇಣು ಬಿಗಿದುಕೊಂಡು ಆತ್ಮಹತ್ಯೆ !! Read More »

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ!

ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ ವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ

ವಿದೇಶದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಬಿಡುಗಡೆ; ಇಂದು ಮಂಗಳೂರಿಗೆ! Read More »

ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಿಎಂ ವಿಶ್ವಕರ್ಮ ಯೋಜನೆ ವಿಸ್ತರಣೆ

ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಮೊದಲ ಹಂತದಲ್ಲಿ 18 ಜಿಲ್ಲೆಗಳನ್ನು ಮಾತ್ರ ಆಯ್ಕೆ ಮಾಡಲಾಗಿತ್ತು. ಇದೀಗ ಉಳಿದ 13 ಜಿಲ್ಲೆಗಳನ್ನು ಯೋಜನೆಯೊಳಗೆ ತರಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಸಹಿತ ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಧಾರವಾಡ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯನಗರ ಜಿಲ್ಲೆಗಳನ್ನು ಎರಡನೇ ಹಂತದಲ್ಲಿ ಸೇರಿಸಿಕೊಳ್ಳಲಾಗಿದೆ. ಎಲ್ಲಾ ಕುಶಲ ಕರ್ಮಿಗಳಿಗೂ ಅವಕಾಶ ಮಾಡಿಕೊಡುವ

ಉಡುಪಿ, ದ.ಕ. ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪಿಎಂ ವಿಶ್ವಕರ್ಮ ಯೋಜನೆ ವಿಸ್ತರಣೆ Read More »

ತೆಂಗಿನ ಮರವನ್ನು ಪೋಷಿಸಿದರೆ ಭವಿಷ್ಯದ ಪೀಳಿಗೆ ಉಳಿಸಲು ಸಾಧ್ಯ | ಸೌತ್ ಕೆನರಾ ತೆಂಗು ರೈತರ ಉತ್ಪಾದಕ ಕಂಪೆನಿ ಲಿಮಿಟೆಡ್ ನ ಪ್ರಾದೇಶಿಕ ಕಚೇರಿ ಉದ್ಘಾಟಿಸಿ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: : ಸೌತ್ ಕೆನರಾ ತೆಂಗು ರೈತರ ಉತ್ಪಾದಕ ಕಂಪೆನಿ ಲಿಮಿಟೆಡ್ ನ ಪ್ರಾದೇಶಿಕ ಕಚೇರಿ ಉದ್ಘಾಟನಾ ಸಮಾರಂಭ ಗುರುವಾರ ಮರೋಳಿಯಲ್ಲಿ ನಡೆಯಿತು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠ ಡಾ.ಧರ್ಮಪಾಲನಾಥ ಸ್ವಾಮೀಜಿ ಪ್ರಾದೇಶಿಕ ಕಚೇರಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ, ತೆಂಗಿನ ಮರಗಳು ದೈವಿಕ ಸೃಷ್ಟಿಯಾಗಿದ್ದು, ಮಾಹಿತಿಯ ಕೊರತೆಯಿಂದ ನಾವು ಆಗಾಗ್ಗೆ ಅವುಗಳ ಮೌಲ್ಯವನ್ನು ಕಡಿಮೆ ಮಾಡುತ್ತೇವೆ. ತೆಂಗಿನಕಾಯಿಯು ಹಲವಾರು ಉಪ ಉತ್ಪನ್ನಗಳನ್ನು ನೀಡುತ್ತದೆ. ಯಾವುದೇ ತ್ಯಾಜ್ಯವನ್ನು ಬಿಡುವುದಿಲ್ಲ. ನಾವು ಐದು ವರ್ಷಗಳ ಕಾಲ ತೆಂಗಿನ ಮರಗಳನ್ನು

ತೆಂಗಿನ ಮರವನ್ನು ಪೋಷಿಸಿದರೆ ಭವಿಷ್ಯದ ಪೀಳಿಗೆ ಉಳಿಸಲು ಸಾಧ್ಯ | ಸೌತ್ ಕೆನರಾ ತೆಂಗು ರೈತರ ಉತ್ಪಾದಕ ಕಂಪೆನಿ ಲಿಮಿಟೆಡ್ ನ ಪ್ರಾದೇಶಿಕ ಕಚೇರಿ ಉದ್ಘಾಟಿಸಿ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಮಂಗಳೂರು-ಬೆಂಗಳೂರು ನಡುವೆ ಮತ್ತೆರಡು ವಿಮಾನ!

ಮಂಗಳೂರು: ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಎಐಇ) ಮಂಗಳೂರು ಮತ್ತು ಬೆಂಗಳೂರು ನಡುವೆ ಎರಡು ವಿಮಾನಗಳ ಸೇವೆಯನ್ನು ಆರಂಭಿಸಿದ್ದು, ಈ ಎರಡೂ ನಗರಗಳ ನಡುವಿನ ಸಂಪರ್ಕವನ್ನು ವಿಸ್ತರಿಸಿದೆ. ಇದರೊಂದಿಗೆ ಮಂಗಳೂರಿಗೆ ಈಗ ಒಟ್ಟು ಏಳು ವಿಮಾನಗಳು ರಾಜ್ಯ ರಾಜಧಾನಿಯಿಂದ ಸಂಚರಿಸಲಿವೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಮೊದಲನೇ ವಿಮಾನ IX 782 ಮಂಗಳವಾರದಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ. ಎರಡನೇ ವಿಮಾನ IX1795 ಕಣ್ಣೂರು-ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಕಾರ್ಯನಿರ್ವಹಿಸಲಿದೆ. ಹೊಸ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ, ವಿಮಾನ ನಿಲ್ದಾಣವು ಸಾಂಪ್ರದಾಯಿಕ ಜಲಫಿರಂಗಿ

ಮಂಗಳೂರು-ಬೆಂಗಳೂರು ನಡುವೆ ಮತ್ತೆರಡು ವಿಮಾನ! Read More »

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಆರೋಪಿ ಪ್ರವೀಣ್ ಚೌಗಲೆ (39) ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನಲೆಯಲ್ಲಿ ಆತನ ಬಂಧನವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ತಾಂತ್ರಿಕ ಹಾಗೂ ಇತರ ಸಾಕ್ಷ್ಯಾಧಾರಗಳಿಂದ ಈತನೆ ಕೊಲೆ ಮಾಡಿರುವುದು ದೃಢಪಟ್ಟಿದೆ. ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ ಎಂದರು. ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್

ತಾಯಿ, ಮಕ್ಕಳ ಹತ್ಯೆಗೆ  3 ಕಾರಣ ಕೊಟ್ಟ ಆರೋಪಿ: ಎಸ್ಪಿ ಡಾ. ಅರುಣ್ Read More »

ಸುಬ್ರಹ್ಮಣ್ಯ ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರದಾನ | ಪ್ರಶಸ್ತಿ ಸ್ವೀಕರಿಸಿದ ಎಸ್‍ ಆರ್‍ ಕೆ ಲ್ಯಾಡರ್ಸ್ ಮಾಲಕ ಕೇಶವ                             

ಸುಬ್ರಹ್ಮಣ್ಯ: ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರತಿವರ್ಷದಂತೆ ಅತ್ಯುತ್ತಮ ಸಾಧಕರಿಗೆ ನೀಡುವ  ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ನಡೆಯಿತು. ಈ ಬಾರಿಯ ಪ್ರಶಸ್ತಿಯನ್ನು ಸಾಧಕ ಉದ್ಯಮಿ ಮೂಲತ ಬಿಳಿ ನೆಲೆಯ ನೋಣಯ್ಯ ಉಗ್ರಾಣಿಯವರ ಸುಪುತ್ರ ಎಸ್. ಆರ್. ಕೆ .ಲ್ಯಾಡರ್ಸ್ ನ ಮಾಲಕರಾದ ಕೇಶವ ಅವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಕೇಶವ ರವರು, ದಿವಂಗತ ಕುಮಾರ ನಾಯರ್ ಅವರ ದೂರ ದೃಷ್ಟಿಯಿಂದ ಸಾವಿರಾರು ಮಕ್ಕಳಿಗೆ ಇಂದು ಉನ್ನತ ಮಟ್ಟದ

ಸುಬ್ರಹ್ಮಣ್ಯ ಕುಮಾರ ನಾಯರ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರದಾನ | ಪ್ರಶಸ್ತಿ ಸ್ವೀಕರಿಸಿದ ಎಸ್‍ ಆರ್‍ ಕೆ ಲ್ಯಾಡರ್ಸ್ ಮಾಲಕ ಕೇಶವ                              Read More »

ಬೆಟ್ಟಂಪಾಡಿಯಲ್ಲಿ ಯಕ್ಷಗಾನ ಉಚಿತ ತರಬೇತಿ ತರಗತಿ ಉದ್ಘಾಟನೆ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಉಚಿತ ಯಕ್ಷಗಾನ ತರಬೇತಿ ತರಗತಿ ನ. 12ರಂದು ಆರಂಭಗೊಂಡಿತು. ಯಕ್ಷಗಾನ ಗುರು ಶಶಿಕಿರಣ್ ಕಾವು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ರಾಧಕೃಷ್ಣ ನಾಯಕ್, ಕಾರ್ಯದರ್ಶಿ ಭಾಸ್ಕರ್ ಎಂ.ಎಸ್, ಮಂಜುನಾಥೇಶ್ವರ ಭಜನಾ ಮಂಡಳಿ ಗೌರವಾಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ಭಜನಾ ಮಂಡಳಿಯ ಅಧ್ಯಕ್ಷ ಅವಿನ್ ಬೆಟ್ಟಂಪಾಡಿ, ಸನತ್ ಬರಮೇಲು ಉಪಸ್ಥಿತರಿದ್ದರು. ಬಳಿಕ ಯಕ್ಷಗಾನ ಗುರು ಶಶಿಕುಮಾರ್ ಕಾವು ಅವರು ತರಬೇತಿ ಕಾರ್ಯಾಗಾರ ನಡೆಸಿದರು.

ಬೆಟ್ಟಂಪಾಡಿಯಲ್ಲಿ ಯಕ್ಷಗಾನ ಉಚಿತ ತರಬೇತಿ ತರಗತಿ ಉದ್ಘಾಟನೆ Read More »

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು

ಬೆಂಗಳೂರು: ಅಪರಿಚಿತರ ಗುಂಪೊಂದು ಯುವಕನೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಸಮೀಪ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಸೂರ್ಯ (22) ಹತ್ಯೆಯಾದ ಯುವಕ. ಭಾನುವಾರ ರಾಮೇಶ್ವರ ಸಮೀಪದ ರೆಸ್ಟೋರೆಂಟ್ ಒಂದಲ್ಲಿ ಸೂರ್ಯ ನಾಲ್ವರು ಸ್ನೇಹಿತರೊಂದಿಗೆ ಫೋಟೊ ಶೂಟ್ ಮಾಡುತ್ತಿದ್ದ ವೇಳೆ ಅಪರಿಚಿತರ ಗುಂಪೊಂದು ಅವರ ಜತೆ ಕಿರಿಕ್ ತೆಗೆದಿದೆ. ಅಪರಿಚಿತರ ತಂಡ ಫೋಟೋ ತೆಗೆದಿದ್ದ ಕ್ಯಾಮೆರಾ ಕಿತ್ತುಕೊಂಡು ನಾಲ್ವರು ಯುವಕರ ಮೇಲೆ ಹಲ್ಲೆ ಮಾಡಿ, ಸೂರ್ಯನಿಗೆ ಚಾಕುವಿನಿಂದ ಇರಿದಿದ್ದಾರೆ.

ಫೋಟೊ ಶೂಟ್ ವೇಳೆ ಯುವಕನಿಗೆ ಅಪರಿಚಿತರಿಂದ ಚೂರಿ ಇರಿತ | ಯುವಕ ಮೃತ್ಯು Read More »

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

ಮಲ್ಪೆ: ದುಷ್ಮರ್ಮಿಗಳು ನಾಲ್ವರನ್ನು ಕೊಲೆ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ. ಮುಸ್ಲಿ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ದುಷ್ಕರ್ಮಿಗಳಿಂದ ನಾಲ್ವರ ಹತ್ಯೆ | ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು Read More »

error: Content is protected !!
Scroll to Top