ಸುದ್ದಿ

ಪರ್ಯಾಯ ಸಂಭ್ರಮದಲ್ಲಿ ಉಡುಪಿ : ಇಂದು ರಾತ್ರಿಯಿಂದ ಧಾರ್ಮಿಕ ವಿಧಿಗಳು ಆರಂಭ

ಮೊದಲ ಸಲ ಪರ್ಯಾಯ ಪೀಠವೇರಲಿರುವ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉಡುಪಿ: ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಸರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಉಡುಪಿ ಜನತೆಯ ಸಹಕಾರದೊಂದಿಗೆ ಶ್ರದ್ಧಾ–ಭಕ್ತಿಯಿಂದ, ಅತ್ಯಂತ ವ್ಯವಸ್ಥಿತ ಹಾಗೂ ವೈಭವಯುತವಾಗಿ ಪರ್ಯಾಯ ಮಹೋತ್ಸವವನ್ನು ನಡೆಸಲು ಪೊಡವಿಗೊಡೆಯ ಶ್ರೀಕೃಷ್ಣನ ನಗರಿ ಉಡುಪಿ ಸಜ್ಜಾಗಿದೆ. ಪರ್ಯಾಯ ಮಹೋತ್ಸವದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಜನವರಿ 17ರ ರಾತ್ರಿ ಸಹ ಸಾರ್ವಜನಿಕ ಅನ್ನ […]

ಪರ್ಯಾಯ ಸಂಭ್ರಮದಲ್ಲಿ ಉಡುಪಿ : ಇಂದು ರಾತ್ರಿಯಿಂದ ಧಾರ್ಮಿಕ ವಿಧಿಗಳು ಆರಂಭ Read More »

ಇಂದು, ನಾಳೆ ತಣ್ಣೀರುಬಾವಿ ಬೀಚ್‌ನಲ್ಲಿ ವಿಶ್ವವಿಖ್ಯಾತ ಗಾಳಿಪಟ ಉತ್ಸವ

15 ದೇಶಗಳ 30 ಅಂತಾರಾಷ್ಟ್ರೀಯ ತಂಡಗಳಿಂದ ಆಕರ್ಷಕ ಗಾಳಿಪಟಗಳ ಹಾರಾಟ ಮಂಗಳೂರು : ಕರಾವಳಿ ಉತ್ಸವದ ಅಂಗವಾದ ಮಂಗಳೂರಿನ ವಿಶ್ವವಿಖ್ಯಾತ ಗಾಳಿಪಟ ಉತ್ಸವ ಇಂದು ಮತ್ತು ನಾಳೆ ತಣ್ಣೀರುಬಾವಿ ಬ್ಲೂ ಬೇ ಬೀಚ್‌ಲ್ಲಿ ನಡೆಯಲಿದೆ. 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸಂಜೆ 3 ಗಂಟೆಗೆ ಆರಂಭವಾಗಲಿದ್ದು, ಇದರಲ್ಲಿ 15 ದೇಶಗಳ 30 ಅಂತಾರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ

ಇಂದು, ನಾಳೆ ತಣ್ಣೀರುಬಾವಿ ಬೀಚ್‌ನಲ್ಲಿ ವಿಶ್ವವಿಖ್ಯಾತ ಗಾಳಿಪಟ ಉತ್ಸವ Read More »

ವಿವಾದದ ಕಿಡಿ ಹೊತ್ತಿಸಿದ ಎ.ಆರ್‌.ರೆಹಮಾನ್‌ ಹೇಳಿಕೆ

ಕೋಮುವಾದಿ ಮನಸ್ಥಿತಿಯಿಂದಾಗಿ ಬಾಲಿವುಡ್‌ನಲ್ಲಿ ಅವಕಾಶ ಸಿಗುತ್ತಿಲ್ಲ ಎಂದ ಸಂಗೀತ ನಿರ್ದೇಶಕ ಮುಂಬೈ: ಆಸ್ಕರ್ ಅವಾರ್ಡ್ ಗೆದ್ದಿರುವ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರ ಒಂದು ಹೇಳಿಕೆ ಬಾಲಿವುಡ್‌ನಲ್ಲಿ ವಿವಾದದ ಅಲೆ ಎಬ್ಬಿಸಿದೆ. ಬಾಲಿವುಡ್‌ನಲ್ಲಿ ನನಗೆ 8 ವರ್ಷಗಳಿಂದ ಅವಕಾಶ ಸಿಗ್ತಿಲ್ಲ. ಕೋಮುವಾದಿ ಮನಸ್ಥಿತಿಯೂ ಇದಕ್ಕೆ ಕಾರಣವಿರಬಹುದು ಎಂದು ರೆಹಮಾನ್‌ ಹೇಳಿದ್ದಾರೆ. ಬಿಬಿಸಿ ಏಷ್ಯನ್ ನೆಟ್ವರ್ಕ್ ಸಂದರ್ಶನದಲ್ಲಿ ಮಾತಾಡಿರುವ ರೆಹಮಾನ್, ನಾನು ಕೆಲಸ ಹುಡುಕಿ ಹೋಗಲ್ಲ. ನನ್ನನ್ನ ಅರಸಿ ಬರುವ ಕೆಲಸವನ್ನು ಅತ್ಯಂತ ಶ್ರದ್ಧೆ, ಪ್ರಾಮಾಣಿಕವಾಗಿ ಮಾಡ್ತೇನೆ. 90ರ

ವಿವಾದದ ಕಿಡಿ ಹೊತ್ತಿಸಿದ ಎ.ಆರ್‌.ರೆಹಮಾನ್‌ ಹೇಳಿಕೆ Read More »

ಮುಂಬಯಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತದತ್ತ ದಾಪುಗಾಲು : ಠಾಕ್ರೆ ಪರಿವಾರದ ಕಾರುಬಾರು ಅಂತ್ಯ

ಮಹಾರಾಷ್ಟ್ರದ ಮಹಾನಗರಪಾಲಿಕೆ ಚುನಾವಣೆಯಲ್ಲೂ ಕೇಸರಿ ಅಲೆ ಕಮಾಲ್‌ ಮುಂಬಯಿ : ಮಹಾರಾಷ್ಟ್ರದ ನಗರಪಾಲಿಕೆ ಚುನಾವಣೆಯಲ್ಲೂ ಕೇಸರಿ ಅಲೆ ಮುಂದುವರಿದಿದೆ. ಇಡೀ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮುನ್ನಡೆ ಕಾಯ್ದುಕೊಂಡಿದೆ. ಅದರಲ್ಲೂ ಮುಂಬಯಿ ಮಹಾನಗರಪಾಲಿಕೆಯ;ಲ್ಲಿ ಹಲವು ದಶಕಗಳ ಶಿವಸೇನೆಯ ಆಡಳಿತ ಮುಕ್ತಾಯಗೊಂಡಿದೆ. ಶಿವಸೇನೆಯ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಕಾಲದಿಂದಲೂ ತಮ್ಮ ಕುಟುಂಬದ ಹಿಡಿತದಲ್ಲಿ ಇಟ್ಟುಕೊಂಡಿದ್ದ ಮುಂಬೈ ಮಹಾನಗರ ಪಾಲಿಕೆಯಲ್ಲಿ ಶಿವಸೇನೆಯ ಉದ್ದವ್ ಠಾಕ್ರೆ ಮತ್ತು ಎಂಎನ್ಎಸ್ ಸಂಸ್ಥಾಪಕ ರಾಜ್ ಠಾಕ್ರೆ ಆಧಿಪತ್ಯಕ್ಕೆ ಮತದಾರ ಮಂಗಳ ಹಾಡಿದ್ದಾನೆ. ಮುಂಬೈ

ಮುಂಬಯಿ ಮಹಾನಗರಪಾಲಿಕೆಯಲ್ಲಿ ಬಿಜೆಪಿ ಆಡಳಿತದತ್ತ ದಾಪುಗಾಲು : ಠಾಕ್ರೆ ಪರಿವಾರದ ಕಾರುಬಾರು ಅಂತ್ಯ Read More »

ಗೌರಿ ಲಂಕೇಶ್‌ ಹತ್ಯೆ ಆರೋಪಿಗೆ ಮುನ್ಸಿಪಲ್‌ ಚುನಾವಣೆಯಲ್ಲಿ ಗೆಲುವು

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಶ್ರೀಕಾಂತ್‌ ಪಂಗಾರ್ಕರ್‌ ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರದ ನಗರಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಆ ವಾರ್ಡ್‌ನಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಪಂಗಾರ್ಕರ್ 2001 ಮತ್ತು 2006ರ ನಡುವೆ ಅವಿಭಜಿತ ಶಿವಸೇನೆಯಿಂದ ಜಲ್ನಾ ಪುರಸಭೆಯ ಸದಸ್ಯರಾಗಿದ್ದರು.

ಗೌರಿ ಲಂಕೇಶ್‌ ಹತ್ಯೆ ಆರೋಪಿಗೆ ಮುನ್ಸಿಪಲ್‌ ಚುನಾವಣೆಯಲ್ಲಿ ಗೆಲುವು Read More »

ಹಣದ ವಿಚಾರಕ್ಕೆ ಹಲ್ಲೆ: ದೂರು ದಾಖಲು

ರಾಮಕುಂಜ: ಹಣದ ವಿಚಾರಕ್ಕೆ ಸಂಬಂಧಿಸಿದ ಹಾಗೆ ರಾಮಕುಂಜದ ಕುಂಡಡ್ಕಕ್ಕೆ ಬರಲು ಹೇಳಿ ತಗಾದೆ ತೆಗೆದು, ಹಲ್ಲೆ ನಡೆಸಿರುವ ಬಗ್ಗೆ ಕಡು ಪೊಲೀಸ್ ಠಾಣೆಗೆ ಸವಣೂರು ಚಾಪಳ್ಳಿ ನಿವಾಸಿ ಅಬ್ದುಲ್ ಖಾದರ್ ಎಂಬವರು ದೂರು ನೀಡಿದ್ದಾರೆ. ಆರೋಪಿಗಳಾದ ಕೃಷ್ಣಪ್ಪ, ಗಂಗಾಧರ, ಆರಿಫ್, ಸದಾಶಿವ ಎಂಬವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾಗಿ ಖಾದರ್ ತಿಳಿಸಿದ್ದಾರೆ. ಕೃಷ್ಣಪ್ಪ ಎಂಬವರು ಖಾದರ್ ಅವರಿಗೆ ಪರಿಚಯಸ್ಥರಾಗಿದ್ದು ಫೋನ್ ಮೂಲಕ ಕುಂಡಡ್ಕದ ಕೇಶವ ಎಂಬವರ ಮನೆಯ ಪಕ್ಕ ಬನ್ನಿ, ಹಣಕಾಸಿಗೆ ಸಂಬಂಧಿಸಿದಂತೆ ಮಾತನಾಡುವುದಾಗಿ ಕರೆದಿದ್ದರು. ಅದರಂತೆ

ಹಣದ ವಿಚಾರಕ್ಕೆ ಹಲ್ಲೆ: ದೂರು ದಾಖಲು Read More »

ಅಕ್ರಮ ಜಾನುವಾರು ಸಾಗಾಟಗಾರರ ಬಂಧನ

ಉಡುಪಿ: ಅನಧಿಕೃತವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೆಬ್ರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೆಮ್ಮಣ್ಣಿನ ವಾಸಿಂ ಅಕ್ರಮ್ ಮತ್ತು ಮೊಹಮ್ಮದ್ ಖಾಜಾ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಂಗಳೂರು ತಾಲೂಕು ಮೂಡುತೆರಾರ್ ಗ್ರಾಮದ ಗಂಜಿಮಠದ ಸಮೀಪ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳ ವಿರುದ್ಧ ಬಿ.ಎನ್.ಎಸ್. ಮತ್ತು ಕಲಂ ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಅಕ್ರಮ ಜಾನುವಾರು ಸಾಗಾಟಗಾರರ ಬಂಧನ Read More »

ಸೂರ್ಯಕುಮಾರ್‌ ಯಾದವ್‌ ಜೊತೆ ಡೇಟಿಂಗ್‌ ಮಾಡಿದ್ದೇನೆ ಎಂದ ನಟಿಯ ಮೇಲೆ ಬಿತ್ತು 100 ಕೋ. ರೂ. ಮಾನನಷ್ಟ ಮೊಕದ್ದಮೆ

ಹಲವಾರು ಕ್ರಿಕೆಟರ್‌ಗಳು ನನ್ನ ಹಿಂದೆ ಬಿದ್ದಿದ್ದರು ಎಂದು ಬಡಾಯಿ ಕೊಚ್ಚಿದ್ದ ನಟಿ ಮುಂಬೈ: ಟಿ20 ಭಾರತ ಕ್ರಿಕೆಟ್ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ವಿರುದ್ಧ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಖುಷಿ ಮುಖರ್ಜಿಗೆ ಬಿಗ್ ಶಾಕ್ ಎದುರಾಗಿದ್ದು, ಆಕೆಯ ವಿರುದ್ಧ ಇದೀಗ 100 ಕೋಟಿ ರೂಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಈ ಹಿಂದೆ ಖುಷಿ ಮುಖರ್ಜಿ ನನ್ನ ಹಿಂದೆ ಹಲವಾರು ಕ್ರಿಕೆಟರ್‌ಗಳು ಬಿದ್ದಿದ್ದರು. ಇದರಲ್ಲಿ ಕ್ಯಾಪ್ಟನ್‌ ಸೂರ್ಯಕುಮಾರ್‌ ನನ್ನ ಜೊತೆ ಸಾಕಷ್ಟು ಮೆಸೇಜ್‌ ವಿನಿಮಯ ಮಾಡಿದ್ದರು

ಸೂರ್ಯಕುಮಾರ್‌ ಯಾದವ್‌ ಜೊತೆ ಡೇಟಿಂಗ್‌ ಮಾಡಿದ್ದೇನೆ ಎಂದ ನಟಿಯ ಮೇಲೆ ಬಿತ್ತು 100 ಕೋ. ರೂ. ಮಾನನಷ್ಟ ಮೊಕದ್ದಮೆ Read More »

ಹಿಂದೂ ಹುಡುಗಿಗೆ ಬಲವಂತಾಗಿ ಬುರ್ಖಾ ತೊಡಿಸಿದ ಸ್ನೇಹಿತೆಯರು : ವಿಡಿಯೋ ವೈರಲ್‌

ಇದನ್ನು ಧರಿಸು, ಚೆನ್ನಾಗಿ ಕಾಣುತ್ತದೆ ಎಂದು ಹೇಳಿದ ಗೆಳತಿಯರು ಲಖನೌ : ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಮುಸ್ಲಿಂ ಸ್ನೇಹಿತೆಯರ ಗುಂಪೊಂದು ಹಿಂದೂ ಹುಡುಗಿಗೆ ಬಲವಂತವಾಗಿ ಬುರ್ಖಾ ತೊಡಿಸಿರುವ ವಿಡಿಯೋವೊಂದು ವೈರಲ್ ಆಗಿ ವಿವಾದ ಸೃಷ್ಟಿಸಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನ ಬಿಲಾರಿ ಪ್ರದೇಶದ ಸಾಹುಕುಂಜ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಬುರ್ಖಾ ಧರಿಸಿದ ಕೆಲವು ಹುಡುಗಿಯರು ಸರಳ ಉಡುಪಿನಲ್ಲಿರುವ ಹಿಂದೂ ಹುಡುಗಿಯನ್ನು ಬುರ್ಖಾ ಧರಿಸಲು ಒತ್ತಾಯಿಸುತ್ತಿರುವುದು ಕಂಡುಬರುತ್ತದೆ. ಇದಕ್ಕೆ ಹುಡುಗಿ ನಿರಾಕರಿಸಿದಾಗ,

ಹಿಂದೂ ಹುಡುಗಿಗೆ ಬಲವಂತಾಗಿ ಬುರ್ಖಾ ತೊಡಿಸಿದ ಸ್ನೇಹಿತೆಯರು : ವಿಡಿಯೋ ವೈರಲ್‌ Read More »

Leopard attack

ಚಿರತೆ ದಾಳಿ: ಕೂದಲೆಳೆ ಅಂತರದಿಂದ ತಪ್ಪಿಸಿ ಜೀವ ಉಳಿಸಿಕೊಂಡ ವ್ಯಕ್ತಿ

ಬೆಳ್ತಂಗಡಿ: ಕನ್ಯಾಡಿ ಗ್ರಾಮದ ಅಂಡೀರುಮಾರುವಿನಲ್ಲಿ ಚಿರತೆಯ ದಾಳಿಯಿಂದ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಮಂಜಪ್ಪ ನಾಯ್ಕ(62) ಎಂಬವರೇ ಚಿರತೆಯ ಭೀಕರ ದಾಳಿಗೆ ತುತ್ತಾಗಿ ಪಾರಾದ ವ್ಯಕ್ತಿ. ಮನೆಯ ಅಂಗಳದಲ್ಲಿದ್ದ ಮಂಜಪ್ಪ ಅವರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದೆ. ತಕ್ಷಣವೇ ಅವರು ಪಕ್ಕದಲ್ಲಿದ್ದ ಅಡಿಕೆ ಮರವನ್ನು ಏರಿ ಜೀವ ರಕ್ಷಣೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಚಿರತೆ ಅವರ ಕಾಲಿಗೆ ಕಚ್ಚಿದ್ದು, ಗಂಭೀರ ಪ್ರಮಾಣದ ಗಾಯಗಳಾಗಿವೆ. ಗಾಯಾಳು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ

ಚಿರತೆ ದಾಳಿ: ಕೂದಲೆಳೆ ಅಂತರದಿಂದ ತಪ್ಪಿಸಿ ಜೀವ ಉಳಿಸಿಕೊಂಡ ವ್ಯಕ್ತಿ Read More »

error: Content is protected !!
Scroll to Top