ಸುದ್ದಿ

ಸಾಕು ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡ ಬಾಲಕ

ಚಿಕ್ಕಮಗಳೂರು: ಏಳು ವರ್ಷದ ಬಾಲಕನ ಮೇಲೆ ಸಾಕು ನಾಯಿಗಳು ಗುಂಪಾಗಿ ದಾಳಿ‌‌ ನಡೆಸಿರುವ ಭೀಕರ ಘಟನೆ ಕಳಸದ ಕೆಳಗೂರು ‌ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ಮಾಧವ ಎಂದು ಗುರುತಿಸಲಾಗಿದೆ. ಹುಡುಗ ಕಾಫಿ ತೋಟದ ಮನೆಯ ಮುಂದೆ ಆಟವಾಡುತ್ತಿದ್ದ. ಕಳೆದ ನಾಲ್ಕೈದು ವರ್ಷಗಳಿಂದ ಬಾಲಕನ ಹೆತ್ತವರು ತಮಿಳುನಾಡಿನಿಂದ ‌ಕೆಳಗೂರಿಗೆ ಬಂದು ಖಾಸಗಿ ಕಾಫಿ ಎಸ್ಟೇಟ್‌ನಲ್ಲಿ ‌ಕೆಲಸ‌ ಮಾಡುತ್ತಿದ್ದರು. ಎಂದಿನಂತೆ ಬಾಲಕನ ಹೆತ್ತವರು ಕೆಲಸಕ್ಕೆ ಹೋಗಿದ್ದು ಬಾಲಕ ಆಟವಾಡುತ್ತಿದ್ದ. ಈ‌ ವೇಳೆ ತೋಟದಲ್ಲಿದ್ದ ಐದಾರು ಸಾಕು ನಾಯಿಗಳು ಬಾಲಕನ […]

ಸಾಕು ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡ ಬಾಲಕ Read More »

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ

ಅಮೆರಿಕದ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಇರಾನ್‌ ಎಚ್ಚರಿಕೆ ಟೆಹ್ರಾನ್‌ : ಸಂಧಾನಕ್ಕೆ ಬರುವುದಿಲ್ಲ ಎಂದು ಇರಾನ್‌ ಹೇಳಿದ ಬೆನ್ನಿಗೆ ಅಮೆರಿಕ ಸೇನೆ ಇರಾನ್ ಧ್ವಜ ಹೊಂದಿದ್ದ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಉಲ್ಬಣಗೊಂಡಿದೆ. ಈ ಘಟನೆ ಶಾಂತಿ ಪ್ರಕ್ರಿಯೆಯನ್ನು ಸಂಪೂರ್ಣ ಹದಗೆಡಿಸಲಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಟೌಸ್ಕಾ ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿತು ಎಂದು

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ Read More »

ತಾಂತ್ರಿಕ ದೋಷದಿಂದ 4 ತಾಸು ಆಕಾಶದಲ್ಲೇ ಹಾರಾಡಿದ ವಿಮಾನ

ಜೀವದ ಮೇಲೆ ಆಸೆ ಬಿಟ್ಟು ನಾವಿನ್ನು ಬರುವುದಿಲ್ಲ ಎಂದು ಸಂದೇಶ ಕಳುಹಿಸಿದ ಪ್ರಯಾಣಿಕರು ಹುಬ್ಬಳ್ಳಿ: ತಾಂತ್ರಿಕ ದೋಷದಿಂದ ನಿಯಂತ್ರಣ ಕಳೆದುಕೊಂಡು 4 ಗಂಟೆಗಳ ಕಾಲ ವಿಮಾನ ಆಗಸದಲ್ಲೇ ಸುತ್ತಾಟ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಮಹಾ ದುರಂತವೊಂದು ತಪ್ಪಿದೆ. ಫ್ಲೈಟ್​​ನ್ನು ಸುರಕ್ಷಿತವಾಗಿ ಲ್ಯಾಂಡಿಂಗ್​ ಮಾಡಲು ಹರಸಾಹಸ ಪಡಲಾಗಿದ್ದು, ಅಂತಿಮವಾಗಿ ವಿಮಾನವನ್ನು ಬೆಂಗಳೂರಿನಲ್ಲಿ ಲ್ಯಾಂಡಿಂಗ್​​ ಮಾಡಲಾಗಿದೆ. Fly91 ಏರ್‌ಲೈನ್ಸ್ IC3401(ATRTURBOPROP AT7) ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಹೈದರಾಬಾದ್ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್ ವಿಮಾನ ನಿಲ್ದಾಣದಿಂದ

ತಾಂತ್ರಿಕ ದೋಷದಿಂದ 4 ತಾಸು ಆಕಾಶದಲ್ಲೇ ಹಾರಾಡಿದ ವಿಮಾನ Read More »

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮನೆ ಮೇಲೆ ಇ.ಡಿ. ದಾಳಿ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯ ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಜಾರಿ ನಿರ್ದೇಶನಾಲಯ ಶಾಕ್ ಕೊಟ್ಟಿದೆ. ಶಾಸಕರ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಇ.ಡಿ. ದಾಳಿ ನಡೆಸಿದೆ. ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ. ಇವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡ. ಇವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮನೆ ಮೇಲೆ ಇ.ಡಿ. ದಾಳಿ Read More »

ಮದ್ಯಪ್ರಿಯರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್‌

ಆಲ್ಕೋಹಾಲ್ ಪ್ರಮಾಣದ ಆಧಾರದಲ್ಲಿ ತೆರಿಗೆ ವಿಧಿಸುವ ಪದ್ಧತಿ ಜಾರಿಗೊಳಿಸಲು ಅಧಿಸೂಚನೆ ಬೆಂಗಳೂರು: ಮದ್ಯಪ್ರಿಯರಿಗೆ ಶೀಘ್ರದಲ್ಲೇ ಮತ್ತೊಮ್ಮೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಸರ್ಕಾರ ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ಮಾಡಲು ಮುಂದಾಗಿದ್ದು, ಗಾತ್ರದ ಬದಲಿಗೆ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ “Alcohol-in-Beverage (AIB-ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ)” ನೀತಿಯನ್ನು ಜಾರಿಗೆ ತರಲು ಕರಡು ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿಯ ಪ್ರಕಾರ ಮದ್ಯದ ಬಾಟಲ್‌ನಲ್ಲಿ ಇರುವ ನಿಜವಾದ ಆಲ್ಕೋಹಾಲ್ ಅಂಶವನ್ನು ಆಧರಿಸಿ

ಮದ್ಯಪ್ರಿಯರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್‌ Read More »

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳು ಮಂಗಳೂರು: ನಗರ ಜಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬೃಹತ್ ಪ್ರಮಾಣದ ಎಂಡಿಎಂಎ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪೆರ್ಮಾನ್ನೂರು ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40) ಮತ್ತು ನಜರತ್ ಅಲಿ (37) ಬಂಧಿತ ಆರೋಪಿಗಳು. ಬೈಕ್‌ನಲ್ಲಿ ಎಂಡಿಎಂಎ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಗಳನ್ನು

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ Read More »

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು

ಬೆಳ್ತಂಗಡಿ: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ (60) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಅವರು ಏ.17ರಂದು ಪ್ರಯಾಣಿಸಿದ್ದರು. ಅದೇ ದಿನ ರಾತ್ರಿ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೇರಳದ ತ್ರಿಶೂರ್ ಆಸ್ಪತ್ರೆಗೆ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ತಡರಾತ್ರಿ ಸಾವನ್ನಪ್ಪಿದ್ದರು. ಭಾನುವಾರ ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಗಿದೆ.

ಬೆಳ್ತಂಗಡಿ : ರೈಲಿನಿಂದ ಬಿದ್ದು ಶಬರಿಮಲೆ ಯಾತ್ರಿಕ ಸಾವು Read More »

ಶುರುವಾಗುವ ಮೊದಲೇ ಮುರಿದು ಬಿದ್ದ ಎರಡನೇ ಸುತ್ತಿನ ಸಂಧಾನ

ಅಮೆರಿಕೆ ಜೊತೆಗೆ ಮಾತುಕತೆಗೆ ಬರುವುದಿಲ್ಲ ಎಂದು ದೃಢಪಡಿಸಿದ ಇರಾನ್‌ ಟೆಹ್ರಾನ್‌: ಅಮೆರಿಕ ಮತ್ತು ಇರಾನ್‌ ನಡುವಿನ ಎರಡನೇ ಸುತ್ತಿನ ಶಾಂತಿ ಒಪ್ಪಂದ ಮಾತುಕತೆ ಶುರುವಾಗುವುದಕ್ಕೂ ಮೊದಲೇ ಮುರಿದು ಬಿದ್ದಿದೆ. ಅಮೆರಿಕದೊಂದಿಗೆ ಏಪ್ರಿಲ್ 20ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಶಾಂತಿ ಮಾತುಕತೆಯನ್ನು ನಡೆಸಲು ಇರಾನ್ ಅಧಿಕೃತವಾಗಿ ನಿರಾಕರಿಸಿದೆ. ಅಮೆರಿಕ ಅತಿಯಾದ ಬೇಡಿಕೆಗಳು, ಅಪ್ರಾಯೋಗಿಕ ನಿರೀಕ್ಷೆಗಳು ಮತ್ತು ಪದೇಪದೆ ಬದಲಾಗುತ್ತಿರುವ ನಿಲುವುಗಳಿಂದಾಗಿ ಮಾತುಕತೆಯಿಂದ ಹಿಂದೆ ಸರಿಯುತ್ತಿರುವುದಾಗಿ ಇರಾನ್ ತಿಳಿಸಿದೆ. ಭಾನುವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಇರಾನ್‌ನ

ಶುರುವಾಗುವ ಮೊದಲೇ ಮುರಿದು ಬಿದ್ದ ಎರಡನೇ ಸುತ್ತಿನ ಸಂಧಾನ Read More »

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಸಾವಿನ ಸಂಖ್ಯೆ 23ಕ್ಕೇರಿಕೆ

ಸ್ಫೋಟದ ಬಿರುಸಿಗೆ ನಾಲ್ಕು ಮಹಡಿಯ ಕಟ್ಟಡ ಧರಾಶಾಯಿ ಚೆನ್ನೈ: ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೇರಿದೆ. ಭಾನುವಾರ ಮಧ್ಯಾಹ್ನ ವಿರುಧುನಗರ ಜಿಲ್ಲೆಯ ಕಟ್ಟನಾರ್‌ಪಟ್ಟಿ ಗ್ರಾಮದ ಬಳಿಯಿರುವ ವನಜ ಪಟಾಕಿ ತಯಾರಿಕಾ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡವು ಸಂಪೂರ್ಣವಾಗಿ ನೆಲಸಮವಾಗಿದೆ. ಗಾಯಾಳುಗಳನ್ನು ವಿರುಧುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು,

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : ಸಾವಿನ ಸಂಖ್ಯೆ 23ಕ್ಕೇರಿಕೆ Read More »

ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ: ಗ್ರಾಹಕರಿಂದ ಉತ್ತಮ ಸ್ಪಂದನೆ

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಎಪ್ರಿಲ್ 20ರವರೆಗೆ ಗ್ರಾಹಕರಿಗೆ ಆಕರ್ಷಕ ಕೊಡುಗೆಯನ್ನು ನೀಡಲಾಗುತ್ತಿದ್ದು, ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಈ ಆಫರ್ ಸಂಸ್ಥೆಯ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಗ್ರಾಹಕರು ಖರೀದಿಸುವ ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500/-ರವರೆಗೆ ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000/- ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ರೂ.7000/- ರವರೆಗೆ

ಜಿ. ಎಲ್. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ: ಗ್ರಾಹಕರಿಂದ ಉತ್ತಮ ಸ್ಪಂದನೆ Read More »

error: Content is protected !!
Scroll to Top