ಸುದ್ದಿ

ಬಜೆಟ್‌ ಹೈಲೈಟ್ಸ್‌ : ಮಲ್ಪೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ

ಕರಾವಳಿಗೆ ಸಿದ್ದರಾಮಯ್ಯ ಕೊಡುಗೆಗಳು ಬೆಂಗಳೂರು: ಉಡುಪಿ ಮಲ್ಪೆಯಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್, ಮೈಸೂರಿನಲ್ಲಿ ಹೈಟೆಕ್ ಮತ್ಸ್ಯದರ್ಶಿನಿ, ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ, ಹೊಸ ಇಂಜಿನ್‌ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ…ಇವು ಕರಾವಳಿಗೆ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೊಟ್ಟಿರುವ ಕೊಡುಗೆಗಳು.ಮಲ್ಟಿ-ಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು. […]

ಬಜೆಟ್‌ ಹೈಲೈಟ್ಸ್‌ : ಮಲ್ಪೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌; ಮತ್ಸ್ಯದರ್ಶಿನಿ, ಸುಸ್ಥಿರ ಮೀನುಗಾರಿಕೆಗೆ ಪ್ರೋತ್ಸಾಹ Read More »

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ

ರಾಗಿ ಆರೋಗ್ಯ ಮಿಶ್ರಣ ಇನ್ನು ಮುಂದೆ ವಾರಕ್ಕೆ 5 ದಿನ ಬೆಂಗಳೂರು: ಕಲಿತು ಹೊರಗೆ ಉದ್ಯೋಗಕ್ಕೆ ಹೋಗುವ ಸಂದರ್ಭದಲ್ಲಿ ಇಂಗ್ಲಿಷ್ ಸಂವಹನದ ಅಗತ್ಯ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಶಾಲಾ ಮಟ್ಟದಿಂದಲೇ ಮಕ್ಕಳಲ್ಲಿ ಇಂಗ್ಲಿಷ್ ಕಲಿಕೆಯ ಪರಿಚಯವಾಗಲು 4 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷೆ ಪರಿಚಯಿಸಲಾಗುತ್ತದೆ. ವಿದ್ಯಾರ್ಥಿಗಳು ಇಂಗ್ಲಿಷ್ ಮತ್ತು ಅವರ ಮಾತೃಭಾಷೆ ಎರಡರಲ್ಲೂ ನಿರರ್ಗಳತೆಯಿಂದ ಮಾತನಾಡಲು ಸಹಾಯ ಮಾಡುವುದು ಇದರ ಉದ್ದೇಶವಾಗಿದೆ ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಪ್ರಸ್ತುತ ಶಾಲಾ ಮಕ್ಕಳಿಗೆ ವಾರಕ್ಕೆ 3 ದಿನ ನೀಡಲಾಗುತ್ತಿದ್ದ

ಬಜೆಟ್‌ ಹೈಲೈಟ್ಸ್‌ : ಮಕ್ಕಳಿಗೆ ಇಂಗ್ಲಿಷ್‌ ಕಲಿಸಲು ದ್ವಿಭಾಷೆ ಪರಿಚಯ Read More »

ಆಟೋ ರಿಕ್ಷಾದಲ್ಲಿ ಮಾದಕವಸ್ತು ಸಾಗಾಟ| ಆರೋಪಿ  ಅರೆಸ್ಟ್

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಆಟೊರಿಕ್ಷಾದಲ್ಲಿ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32 ವ.) ಬಂಧಿತ ಆರೋಪಿ ಎನ್ನಲಾಗಿದೆ. ಆರೋಪಿಯಿಂದ 3,75,000 ಮೌಲ್ಯದ 75 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಆಟೊ ರಿಕ್ಷಾ ಸಹಿತ ಒಟ್ಟು ಮೊತ್ತ 5 ಲಕ್ಷ ರೂ. ಗೂ ಅಧಿಕ ಬೆಲೆಬಾಳುವ  ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆಟೋ ರಿಕ್ಷಾದಲ್ಲಿ ಮಾದಕವಸ್ತು ಸಾಗಾಟ| ಆರೋಪಿ  ಅರೆಸ್ಟ್ Read More »

ಬಜೆಟ್‌: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ

ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 10 ಕೋಟಿ, ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ದಾಖಲೆಯ 16ನೇ ಬಜೆಟ್‌ ಮಂಡಿಸುತ್ತಿದ್ದು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡಿದ್ದು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನೂ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ. ಇದೇ ವೇಳೆ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500

ಬಜೆಟ್‌: ಬಿಸಿಯೂಟ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರಿಗೆ ಸಿಹಿ ನೀಡಿದ ಸಿದ್ದರಾಮಯ್ಯ Read More »

ಮೂರನೇ ವಾರಕ್ಕೆ ದಾಪುಗಾಲಿಟ್ಟ “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆ ಪಡೆದು ಇಂದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನಕ್ಕೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ  ಮಾ. 7 ರಂದು ಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು

ಮೂರನೇ ವಾರಕ್ಕೆ ದಾಪುಗಾಲಿಟ್ಟ “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಕಾರು ಪಲ್ಟಿ

ಮಂಗಳೂರು : ವೇಗವಾಗಿ ಚಲಿಸುತ್ತಿದ್ದ ಬಲೆನೊ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ ಮೇಲೆ ಏರಿ ಪಲ್ಟಿಯಾದ ಘಟನೆ ಮಂಗಳೂರು ಬೆಂದೂರ್ ವೆಲ್ ನ ಬಲ್ಮಠ ಬಳಿ ತಡ ರಾತ್ರಿ ಸಂಭವಿಸಿದೆ. ರಾತ್ರಿ ವೇಳೆ ಖಾಲಿ ಇರುವ ರಸ್ತೆಯಲ್ಲಿ ಅಪಘಾತವಾಗಿದ್ದರಿಂದ,  ಕಾರು ಡಿವೈಡರ್ ಮೇಲೆ ಏರಿ ವಿರುದ್ಧ ದಿಕ್ಕಿನ ರಸ್ತೆಗೆ ಬಿದ್ದರೂ  ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರ  ಮಾಹಿತಿ  ತಿಳಿಯಬೇಕಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ ಕಾರು ಪಲ್ಟಿ Read More »

ಮುಳಿಯ ಜ್ಯುವೆಲ್ಲರ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ

ಬೆಳ್ತಂಗಡಿ : ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು. ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಮಾ.೩ರಂದು ನಡೆದ ಡೈಮಂಡ್ ಪೆಸ್ಟ್ ಚಾಲನೆ ನೀಡಿ ಮಾತನಾಡಿದರು. ಜೆಸಿಐ ಭಾರತದ ವಲಯ ೧೫ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, ೮೦ ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು

ಮುಳಿಯ ಜ್ಯುವೆಲ್ಲರ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ Read More »

ಮಾ.9 ವಾಹನ ಚಾಲಕರಿಗೆ ಕಾರ್ಮಿಕ ಕಾರ್ಡು ವಿತರಣೆ | ರಾಜ್ಯ ಸರಕಾರದ ಹೊಸ ಯೋಜನೆಯ ಲಾಭ ಪಡೆದುಕೊಳ್ಳಿ: ಸುದೇಶ್ ಶೆಟ್ಟಿ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ನಿರಂತರ ಹೋರಾಟದ ಫಲವಾಗಿ ಕರ್ನಾಟಕ ಸರಕಾರ ಕಾರ್ಮಿಕ ಇಲಾಖಾ ವ್ಯಾಪ್ತಿಗೆ ಚಾಲಕರನ್ನು ಸೇರಿಸಿದ್ದು, ಇದು ಬಡ ಚಾಲಕರಿಗೆ ವರದಾನವಾಗಿದೆ. ಕಾರ್ಮಿಕ ಇಲಾಖೆಗೆ ಚಾಲಕರು ತನ್ಮ ಹೆಸರು ನೋಂದಾಯಿಸಿಕೊಂಡಲ್ಲಿ ಸರಕಾರದಿಂದ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.  ಅವರು ಪುತ್ತೂರು ಶಾಸಕರ ಕಚೇರಿ ಸಭಾಂಗಣದಲ್ಲಿಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿಸಿದ ಕಾರ್ಮಿಕ ರ ಭದ್ರತಾ

ಮಾ.9 ವಾಹನ ಚಾಲಕರಿಗೆ ಕಾರ್ಮಿಕ ಕಾರ್ಡು ವಿತರಣೆ | ರಾಜ್ಯ ಸರಕಾರದ ಹೊಸ ಯೋಜನೆಯ ಲಾಭ ಪಡೆದುಕೊಳ್ಳಿ: ಸುದೇಶ್ ಶೆಟ್ಟಿ Read More »

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ

ಸಿದ್ದರಾಮಯ್ಯನವರ ದಾಖಲೆಯ 16ನೇ ಮುಂಗಡಪತ್ರ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿರುವ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. 2025ನೇ ಸಾಲಿನ ಕರ್ನಾಟಕ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.30ಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ Read More »

ನಂದಿನಿ ಸ್ಟಾಲ್‍ಗೆ ಡಿಕ್ಕಿ ಹೊಡೆದು ಕಂಟೈನರ್ ಪಲ್ಟಿ

ಸುಳ್ಯ : ನಂದಿನಿ ಸ್ಟಾಲ್‍ ಗೆ ಡಿಕ್ಕಿ ಹೊಡೆದು ಕಂಟೈನರ್‍ ಪಲ್ಟಿಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮುಖ್ಯ ರಸ್ತೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೈನರ್ ಡಿಕ್ಕಿ ಹೊಡೆದು ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು ಮುಂಜಾನೆ 5.30ರ ಹೊತ್ತಿಗೆ ನಡೆದಿದೆ. ಮಂಡ್ಯದಿಂದ ತರಕಾರಿ ಮತ್ತು ಹಣ್ಣುಹಂಪಲುಗಳನ್ನು ತುಂಬಿಕೊಂಡು ಬರುತ್ತಿದ್ದ ಕಂಟೈನರ್ ವಾಹನ ಪುಟ್ ಪಾತ್ ಗೆ

ನಂದಿನಿ ಸ್ಟಾಲ್‍ಗೆ ಡಿಕ್ಕಿ ಹೊಡೆದು ಕಂಟೈನರ್ ಪಲ್ಟಿ Read More »

error: Content is protected !!
Scroll to Top