ಸುದ್ದಿ

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌

ಪ್ರಣಾಳಿಕೆ ಸಿದ್ಧಪಡಿಸಿದ್ದು ನೀವೇ ಎಂದ ಶಿವಕುಮಾರ್‌ ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಅಧಿಕಾರ ಹಿಡಿಯಲು ಘೋಷಿಸಿದ ಗ್ಯಾರಂಟಿ ಯೋಜನೆಗಳು ಬೊಕ್ಕಸಕ್ಕೆ ಹೊರೆಯಾಗುತ್ತಿವೆ ಎಂಬುದನ್ನು ಈಗ ಕಾಂಗ್ರೆಸ್‌ ಸಚಿವರೇ ಹೇಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್‌, ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ.ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದಿದ್ದಾರೆ. ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರೂ […]

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌ Read More »

ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಅಪಾರ್ಟ್‌ಮೆಂಟ್ ನ 14ನೇ ಮಹಡಿಯಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ ಬ್ರಹ್ಮಗಿರಿಯಲ್ಲಿ ಮಧ್ಯಾಹ್ನ ನಡೆದಿದೆ. ಮೃತಪಟ್ಟವರು ಲೇಖಿರಾಜ್ (29) ಎನ್ನಲಾಗಿದೆ. ಮೃತರು ಲೇಖಿರಾಜ್ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಅವರ ಪುತ್ರ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು ತಿಳಿದು ಬಂದಿದೆ. ಘಟನೆಗೆ ಸಂಬಂಧ ಪಟ್ಟಂತೆ ನಿಖರ ಕಾರಣ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.

ಮಹಡಿಯಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಬಿಟ್‌ ಕಾಯಿನ್‌ ಹಗರಣ : 60 ಕಡೆ ಸಿಬಿಐ ದಾಳಿ

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಬಿಟ್ ಕಾಯಿನ್, ಕ್ರಿಪ್ಟೋ ಕರೆನ್ಸಿ ಹಗರಣ ಸಂಬಂಧ ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ದೊಡ್ಡಮಟ್ಟದ

ಬಿಟ್‌ ಕಾಯಿನ್‌ ಹಗರಣ : 60 ಕಡೆ ಸಿಬಿಐ ದಾಳಿ Read More »

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ

ಹೀಗಿದೆ ರೈಲಿನ ಹೊಸ ವೇಳಾಪಟ್ಟಿ ಮಂಗಳೂರು: ಮೂರು ದಶಕಗಳ ಬೇಡಿಕೆಯಾಗಿದ್ದ ಮಂಗಳೂರು-ಕಬಕ ಪ್ಯಾಸೆಂಜರ್‌ ರೈಲು ಸೇವೆಯನ್ನು ಸುಬ್ರಹ್ಮಣ್ಯದ ತನಕ ವಿಸ್ತರಿಸಬೇಕೆಂಬ ಬೇಡಿಕೆ ಕೊನೆಗೂ ಈಡೇರಿದೆ. ರೈಲು ಸೇವೆಯನ್ನು ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ಇದಕ್ಕಾಗಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಬಹಳಷ್ಟು ಪ್ರಯತ್ನಪಟ್ಟಿದ್ದರು. ರೈಲು ವಿಸ್ತರಣೆಯಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮಾತ್ರವಲ್ಲದೆ ನಿತ್ಯ ಮಂಗಳೂರಿಗೆ ಬಂದು ಹೋಗುವವರಿಗೆ ತುಂಬ ಅನುಕೂಲ ಆಗಲಿದೆ. ೀ ಭಾಗದ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎನ್ನಲಾಗಿದೆ. ಹೊಸ ವೇಳಾಪಟ್ಟಿ ಪ್ರಕಾರ

ಕೊನೆಗೂ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾದ ಪ್ಯಾಸೆಂಜರ್‌ ರೈಲು : 3 ದಶಕದ ಬೇಡಿಕೆ ಈಡೇರಿಕೆ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ

ವಾರ್ಷಿಕ ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತವಾಗಿ ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಘೋಷಿಸಿದೆ. ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಪ್ರಯಾಣದ ಕೊಡುಗೆ Read More »

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ

ಇದುವರೆಗೆ ಸುಮಾರು 64 ಕೋಟಿ ಜನರಿಂದ ಪುಣ್ಯಸ್ನಾನ ಪ್ರಯಾಗರಾಜ್: ಮಹಾಶಿವರಾತ್ರಿ ಪವಿತ್ರ ದಿನವಾದ ಇಂದು ಮಹಾಕುಂಭಮೇಳದಲ್ಲಿ ಕೊನೆಯ ಪುಣ್ಯಸ್ನಾನ ನಡೆಯಲಿದ್ದು, ಇದರೊಂದಿಗೆ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮುಕ್ತಾಯವಾಗಲಿದೆ. ಫೆಬ್ರವರಿ 25ರಂದು ರಾತ್ರಿ 8 ಗಂಟೆಯವರೆಗೆ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ 1.24 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದರು. ಇದರೊಂದಿಗೆ ಜನವರಿ 13ರಿಂದ ಮಹಾಕುಂಭದಲ್ಲಿ ಸ್ನಾನ ಮಾಡಿದ ಒಟ್ಟು ಭಕ್ತರ ಸಂಖ್ಯೆ 64 ಕೋಟಿ ಮೀರಿದೆ.ಇಂದು ನಡೆಯಲಿರುವ ಮಹಾಶಿವರಾತ್ರಿಯ

ಮಹಾಕುಂಭಮೇಳದಲ್ಲಿ ಇಂದು ಕೊನೆಯ ಪುಣ್ಯಸ್ನಾನ : ಜಗತ್ತಿನ ಬೃಹತ್‌ ಧಾರ್ಮಿಕ ಕಾರ್ಯಕ್ರಮಕ್ಕೆ ತೆರೆ Read More »

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ | ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ

ಸುಳ್ಯ : ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರು, ವ್ಯಕ್ತಿತ್ವವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ  ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ  ಹಂಪಿ ಉತ್ಸವವು ಫೆಬ್ರುವರಿ  28 ರಿಂದ ಮಾರ್ಚ್  2

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ | ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡನೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದಲ್ಲಿ ಕೊಮೋಡಾ ವೀಲ್ ಚಯರ್ ವಿತರಣೆ

ಬಂಟ್ವಾಳ  ತಾಲೂಕು, ಕೆದಿಲ ಗ್ರಾಮದ  ಕರಿಮಜಲು  ಪ್ರೇಮ W/O  ರಾಮಮೂಲ್ಯ ಮತ್ತು  ಕಂಪ  ಲೋಕಯ ಗೌಡ ಇವರು ಅಸೌಖ್ಯಂದಿದ್ದು, ಇವರಿಗೆ    ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ  ಯೋಜನೆಯ  ಜನಮಂಗಲ ಕಾರ್ಯಕ್ರಮದ  ಯೋಜನೆಯಡಿಯಲ್ಲಿ ಫೆ.24   ಸೋಮವಾರದಂದು ಕೊಮೋಡೋ  ವೀಲ್ ಚಯರನ್ನು ನೀಡಲಾಯಿತು. ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದ ಮತ್ತು ಪೆರ್ನೆ ವಲಯ  ಮೇಲ್ವಿಚಾರಕಿ ಶಾರದಾ ಕೊಮೋಡೋ  ವೀಲ್ ಚಯರನ್ನು ವಿತರಿಸಿದರು.  ಈ ಸಂದರ್ಭದಲ್ಲಿ  ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ  ಶಾರದಾ ಮತ್ತು ಕೆದಿಲ  “B” ಒಕ್ಕೂಟದ ಸೇವಾಪ್ರತಿನಿಧಿ

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ  ಜನಮಂಗಲ ಕಾರ್ಯಕ್ರಮದಲ್ಲಿ ಕೊಮೋಡಾ ವೀಲ್ ಚಯರ್ ವಿತರಣೆ Read More »

ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಪುತ್ತೂರು: ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ

ಸತಾಯಿಸುತ್ತಿದ್ದ ಮಾಲೀಕನಿಂದ ಪಾರಾಗಲು ತಪ್ಪಿಸಿಕೊಂಡು ಬಂದ ತಮಿಳುನಾಡಿನ ಮೀನುಗಾರರು 4000 ಕಿ.ಮೀ. ಮೀನುಗಾರಿಕೆ ದೋಣಿಯಲ್ಲೆ ಪ್ರಯಾಣ ಉಡುಪಿ : ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಮೀನುಗಾರಿಕೆ ದೋಣಿಯೊಂದು ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮಾನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮಾನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ.ಓಮಾನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ ನಡೆಸುತ್ತಿದ್ದ

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ Read More »

error: Content is protected !!
Scroll to Top