ಸ್ಥಳೀಯ ಸುದ್ದಿ

ನ್ಯಾಯವಾದಿ ನಿಶಾಂತ್ ಮುಂದಾಳತ್ವದಲ್ಲಿ ನೂತನ ಸಂಸ್ಥೆ ಉದ್ಘಾಟನೆ

ಪುತ್ತೂರು: ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ ಮಳಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಸೊರಕೆ, ಪುತ್ತೂರು ವಕೀಲರ ಸಂಘದ […]

ನ್ಯಾಯವಾದಿ ನಿಶಾಂತ್ ಮುಂದಾಳತ್ವದಲ್ಲಿ ನೂತನ ಸಂಸ್ಥೆ ಉದ್ಘಾಟನೆ Read More »

ಅಶಕ್ತ ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ, ಪುನರ್ವಸತಿ ಕಲ್ಪಿಸಿದ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರು

ಪುತ್ತೂರು: ಒಳ ರೋಗಿಯಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊಡಿಂಬಾಡಿಯ ದಾರಂದಕುಕ್ಕು ನಿವಾಸಿ ಲಕ್ಷ್ಮೀ (80) ಎಂಬ ವೃದ್ಧೆಗೆ ಪುನರ್ವಸತಿ ಕಲ್ಪಿಸಿ‌ ಮಾನವೀಯತೆ ಮೆರೆದ ಹೃದಯಸ್ಪರ್ಶಿ ಘಟನೆ ನಡೆದಿದೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಸಾಯುವ ಸ್ಥಿತಿಗೆ ತಲುಪಿದ್ದ ಲಕ್ಷ್ಮೀ ಅಮ್ಮನಿಗೆ ಸರ್ಕಾರಿ ಆಸ್ಪತ್ರೆಯ ಡಾ. ಯದುರಾಜ್ ‌ಡಿ. ಕೆ. ಅವರ ತಂಡ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಿಂದ ಆ ತಾಯಿ ಚೇತರಿಸಿಕೊಂಡು ನಡೆದಾಡುವ ಸ್ಥಿತಿಗೆ ಬಂದಿದ್ದಾರೆ. ಆ ಬಳಿಕ ಲಕ್ಷ್ಮೀ ಅಮ್ಮನನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳ ಮನವಿಯ ಮೇರೆಗೆ ಮಹಿಳಾ

ಅಶಕ್ತ ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ, ಪುನರ್ವಸತಿ ಕಲ್ಪಿಸಿದ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರು Read More »

ಜಿಡೆಕಲ್ಲಿನಲ್ಲಿ ಕಾಲೇಜು ವಾರ್ಷಿಕೋತ್ಸವ

ಜಿಡೆಕಲ್ಲು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಆಕರ್ಷಕವಾಗಿ ನಡೆಯಿತು. ಕಾಲೇಜು ಅಭಿವೃದ್ಧಿಗೆ ಕೈ ಜೋಡಿಸೋಣ, ಪ್ರಾಂಶುಪಾಲರ ಪ್ರಯತ್ನ ಸ್ತುತ್ಯರ್ಹ – ಶಾಸಕ ಅಶೋಕ್ ಕುಮಾರ್ ರೈ ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಜೀವನದಲ್ಲಿ ಯೋಗ್ಯವಾದ ಶಿಕ್ಷಣದ ಆಯ್ಕೆ ಮಾಡಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಸಾಧನೆ ಮಾಡುವ ಮೂಲಕ ಸಂ‌ಸ್ಥೆಗೆ ಫಲ ನೀಡಬೇಕು ಎಂದರು. ವಿಧೇಯತೆ ಮತ್ತು ಯೋಜನಾಬದ್ಧ ಕಾರ್ಯ ನಿರ್ವಹಣೆಗಳನ್ನು ಪ್ರಾಯೋಗಿಕವಾಗಿ ಕಲಿತು ಜೀವನ ನಿರ್ವಹಣೆ ಮಾಡುವ ಕನಸು

ಜಿಡೆಕಲ್ಲಿನಲ್ಲಿ ಕಾಲೇಜು ವಾರ್ಷಿಕೋತ್ಸವ Read More »

ನಳ್ಳಿ ನೀರಿನ ವಿಚಾರಕ್ಕೆ ನಿಂದನೆ, ಹಲ್ಲೆ: ದೂರು ದಾಖಲು

ಪುತ್ತೂರು: ನಳ್ಳಿ ‌ನೀರಿನ ಸರಬರಾಜು ವಿಷಯಕ್ಕೆ ಸಂಬಂಧಿಸಿದ ಹಾಗೆ ಹಲ್ಲೆ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಶಾಂತಿಗೋಡು ಗ್ರಾಮದ ಉಮೇಶ್ ಖಂಡಿಗ ಅವರು ದೂರು ನೀಡಿರುವುದಾಗಿದೆ. ಉಮೇಶ್ ಅವರು ನರಿಮೊಗರು ಪಂಚಾಯತ್‌ನಿಂದ ನಳ್ಳಿ ‌ನೀರಿನ ಸೌಲಭ್ಯ ಪಡೆದಿದ್ದು, ಅವರ ಮನೆಗೆ ನೀರು ಸರಬರಾಜು ಸ್ಥಗಿತವಾಗಿತ್ತು‌. ಈ ಬಗ್ಗೆ ನೀರು ಬಿಡುವ ಕೆಲಸ ಮಾಡುತ್ತಿದ್ದ ಶೇಖರ್ ಎಂಬವರಿಗೆ ಕರೆ ಮಾಡಿ ನೀರು ಬಿಡುವಂತೆ ಹೇಳಿದ್ದರು. ಆದರೆ ಶೇಖರ್ ಮತ್ತು

ನಳ್ಳಿ ನೀರಿನ ವಿಚಾರಕ್ಕೆ ನಿಂದನೆ, ಹಲ್ಲೆ: ದೂರು ದಾಖಲು Read More »

ಉಡುಪಿಯಲ್ಲಿ 32 ಅಕ್ರಮ ಹೋಂ ಸ್ಟೇ‌ಗಳು ಪತ್ತೆ

ಉಡುಪಿ: ಕೊಡಗಿನ ಹೋಂ‌ಸ್ಚೇ ಒಂದರಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ಬಳಿಕ ರಾಜ್ಯದ ಪೊಲೀಸ್ ಇಲಾಖೆ ಹೋಂ ಸ್ಟೇ‌ಗಳ ಮೇಲೆ ಹದ್ದಿನ ಕಣ್ಣಿರಿಸಲು ಆರಂಭಿಸಿದೆ. ಮಾನ್ಯ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಅವರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ 32 ಅಕ್ರಮ ಹೋಂಸ್ಟೇಗಳ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ

ಉಡುಪಿಯಲ್ಲಿ 32 ಅಕ್ರಮ ಹೋಂ ಸ್ಟೇ‌ಗಳು ಪತ್ತೆ Read More »

ಎ. 27: ಲೋಕ ಕಲ್ಯಾಣಕ್ಕಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸಿಯಾಳಾಭಿಷೇಕ

ಪುತ್ತೂರು: ಲೋಕ ಕಲ್ಯಾಣಕ್ಕಾಗಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಎ. 27 ರಂದು ವಿಶೇಷ ಸಿಯಾಳಾಭಿಷೇಕ ಸೇವೆ ನಡೆಯಲಿದೆ. ಶ್ರೀ ದೇವರಿಗೆ ಬೆಳಗ್ಗೆ 9 ಗಂಟೆಯಿಂದ 11 ಗಂಟೆಯ ವರೆಗೆ ಸೀಯಾಳಾಭಿಷೇಕ ನಡೆಯಲಿದೆ. ಈ ಪುಣ್ಯ ಕಾರ್ಯಕ್ಕೆ ಶ್ರೀ ದೇವರಿಗೆ ಎಳನೀರು ಸಮರ್ಪಣೆ ಮಾಡುವ ಭಕ್ತರು ಆನದಿನ 9.30 ಕ್ಕೆ ಮುಂಚಿತವಾಗಿ ದೇವಾಲಯದ ಒಳಗೆ ಸಮರ್ಪಿಸುವಂತೆ ಮನವಿ ಮಾಡಲಾಗಿದೆ. ಈ ಮಹತ್ಕಾರ್ಯದಲ್ಲಿ ಹೆಚ್ಚಿನ ಭಕ್ತಬಾಂಧವರು ಪಾಲ್ಗೊಂಡು, ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ವ್ಯವಸ್ಥಾಪನಾ ಮಂಡಳಿ ವಿನಂತಿಸಿಕೊಂಡಿದೆ.

ಎ. 27: ಲೋಕ ಕಲ್ಯಾಣಕ್ಕಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರನಿಗೆ ಸಿಯಾಳಾಭಿಷೇಕ Read More »

ಮಾಜಿ ಪತ್ನಿಯ ಸಂಬಂಧಿಕರ ‌ಮೇಲೆ ಹಲ್ಲೆಗೆ ಯತ್ನ: ಆರೋಪಿ ಅಂದರ್

ಮಂಗಳೂರು: ಕುಟುಂಬ ಕಲಹದ ಹಿನ್ನೆಲೆ ಪತ್ನಿಯ ಸಂಬಂಧಿಕರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ವಾಮಂಜೂರಿನ ನವೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವೀನ್ ಪತ್ನಿ ವಿಚ್ಛೇದನ ಪಡೆದು ಕೆಲವು ತಿಂಗಳುಗಳಿಂದ ಜೋಕಟ್ಟೆಯಲ್ಲಿ ಬೇರೆ ವಾಸವಿದ್ದರು. ಇದೇ ಸಿಟ್ಟಿನಲ್ಲಿ ನವೀನ್ ಕತ್ತಿ ಹಿಡಿದು ಜೋಕಟ್ಟೆಗೆ ರಾತ್ರಿ ಬೈಕ್‌ನಲ್ಲಿ ಆಗಮಿಸಿದ್ದಾನೆ. ನವೀನ್ ಕಳವರದ ದೇವಿಪ್ರಸಾದ್ ಎಂಬವರ ಮೇಲೆ ಹಲ್ಲೆ ನಡೆಸುವ ಹಿನ್ನೆಲೆ ಆಯುಧದ ಜೊತೆ ಬಂದಿದ್ದಾನೆ. ದೇವಿಪ್ರಸಾದ್ ಮತ್ತು ಪೋಷಕರ ಮೇಲೆ ಹಲ್ಲೆಗೆ ಪ್ರಯತ್ನ ಮಾಡಿದ್ದಾನೆ. ತಕ್ಷಣವೇ ದೇವಿಪ್ರಸಾದ್

ಮಾಜಿ ಪತ್ನಿಯ ಸಂಬಂಧಿಕರ ‌ಮೇಲೆ ಹಲ್ಲೆಗೆ ಯತ್ನ: ಆರೋಪಿ ಅಂದರ್ Read More »

ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಪುತ್ತೂರು: ಕಲ್ಲೇಗ ‌ಟೈಗರ್ಸ್ ಹುಲಿ ವೇಷ ತಂಡದ ಅಕ್ಷಯ್ ಕಲ್ಲೇಗ ಎಂಬ ಯುವಕನನ್ನು ಹತ್ಯೆ ಮಾಡಿದ 1 ಮತ್ತು 2 ನೇ ಆರೋಪಿಗಳಿಗೆ ಪುತ್ತೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿ ಆದೇಶ ನೀಡಿದೆ. ನವೆಂಬರ್ 6, 2023 ರಂದು ರಾತ್ರಿ ವೇಳೆ ನೆಹರೂ ನಗರದಲ್ಲಿ ಅಕ್ಷಯ್ ಕಲ್ಲೇಗನ ಮೇಲೆ ಭೀಕರ ಹಲ್ಲೆ ನಡೆಸಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣದ 1 ನೇ ಆರೋಪಿ ಪಡೀಲಿನ ಮನೀಶ್, 2 ನೇ ಆರೋಪಿ ಕೃಷ್ಣನಗರದ ‌ಚೇತನ್

ಅಕ್ಷಯ್ ಕಲ್ಲೇಗ ಹತ್ಯೆ: 1 ಮತ್ತು 2 ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ: ಅಪಾರ ನಷ್ಟ

ಕಾರ್ಕಳ: ಗಾಂಧಿ ಮೈದಾನದ ಹತ್ತಿರದಲ್ಲಿರುವ ಶಾಂಭವಿ ಡಿವೈನ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಎಸಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಈ ದುರಂತ ನಡೆದಿದ್ದು, ಸುಮಾರು ಐದು ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸಂದೀಪ್ ಹೆಗ್ಡೆ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯಲ್ಲಿದ್ದ ಟಿವಿ ಸೇರಿದಂತೆ ಇತರ ಪರಿಕರಗಳು ಬೆಂಕಿಗೆ ಆಹುತಿಯಾಗಿವೆ.

ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ: ಅಪಾರ ನಷ್ಟ Read More »

ಕಾಡಾನೆ ದಾಳಿ: ಮೂವರು ಇಟಿಎಫ್ ಸಿಬ್ಬಂದಿಗೆ ಗಾಯ

ಹಾಸನ: ಇಟಿಎಫ್‌ನ ಮೂವರು ಸಿಬ್ಬಂದಿ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬೇಲೂರಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳನ್ನು ರಮೇಶ್, ವಿಶ್ವ, ಜೀವನ್ ಎಂದು ಗುರುತಿಸಲಾಗಿದೆ. ಅದರಲ್ಲಿ ರಮೇಶ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ‌. ಗ್ರಾಮದ ಹಾಸ್ಟೆಲ್ ಹಿಂಭಾಗದಲ್ಲಿ ಸಿಬ್ಬಂದಿ ಮೇಲೆ ಆನೆ ದಾಳಿ ನಡೆದಿರುವುದಾಗಿದೆ. ಕಾಡಾನೆಗಳ ಹೆಜ್ಜೆಗುರುತು ಹಿಂಬಾಲಿಸಿಕೊಂಡು ಈ ಸಿಬ್ಬಂದಿ ಮುನ್ನಡೆಯುತ್ತಿದ್ದರು. ಈ ಸಮಯದಲ್ಲಿ ಇವರ ಮೇಲೆ ಏಕಾಏಕಿ ಆನೆ ದಾಳಿ ನಡೆದಿರುವುದಾಗಿದೆ. ಹಾಸನ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗೆ

ಕಾಡಾನೆ ದಾಳಿ: ಮೂವರು ಇಟಿಎಫ್ ಸಿಬ್ಬಂದಿಗೆ ಗಾಯ Read More »

error: Content is protected !!
Scroll to Top