ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸುಳ್ಯ ತಾಲೂಕಿನ ಧರ್ಮಜಾಗೃತಿ ಹಾಗೂ ಸಮುದಾಯ ಸಮ್ಮಿಲನ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಹಗಲಿರುಳು ಸೇವೆ ಸಲ್ಲಿಸಿದ ಎಲ್ಲರಿಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಶುಭ ಅನುಗ್ರಹ ಸಂದೇಶವನ್ನು ರವಾನಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಅನುಗ್ರಹ ಸಂದೇಶದಲ್ಲಿ, ಮಹಾಸ್ವಾಮೀಜಿ ಅವರು ಸಮುದಾಯದ ಸರ್ವಜನರಲ್ಲಿ ಧರ್ಮಜಾಗೃತಿಯ ಸಂಚಲನವನ್ನುಂಟು ಮಾಡಿರುವುದು ಸೌಭಾಗ್ಯವೇ ಸರಿ. ಈ ಕಾರ್ಯಕ್ರಮ […]

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ Read More »

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ

ಪುತ್ತೂರು: ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ “ಭಾವ ತೀರ ಯಾನ” ಫೆ.21 (ನಾಳೆ) ರಾಜ್ಯಾದ್ಯಾಂತ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ್ದಾರೆ, ನವಿರಾದ ಪ್ರೇಮ ಪ್ರೀತಿಗಳ ಭಾವನೆಗಳ ತೀರದುದ್ದಕ್ಕೂ ಯಾನಕ್ಕೆ ಕರೆದೊಯ್ಯುವ ಸಿನಿಮಾ ಭಾವ ತೀರ ಯಾನ ಪುತ್ತೂರಿನ ಜಿಎಲ್‍ ಒನ್‍ ಮಾಲ್‍ ನಲ್ಲಿರುವ ಭಾರತ್ ಸಿನಿಮಾಸ್ – Screen 2

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ Read More »

ಬಿರುಮಲೆ ಬೆಟ್ಟದಲ್ಲಿ 5 ಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರ ಲೋಕಾರ್ಪಣೆ

ಪುತ್ತೂರು: ಹಿರಿಯರಾಗಿರುವ ಅರಿಯಡ್ಕ ಚಿಕ್ಕಪ್ಪ ನಾಯಕ್ ಅವರ 91ನೇ ಹುಟ್ಟುಹಬ್ಬ, ಹಾಗೂ ಅವರ ನವತಿ ಸಂಭ್ರಮದ ಸವಿನೆನಪಿನ “ವೀಕ್ಷಣಾಗೋಪುರ ಲೋಕಾರ್ಪಣೆ “ಕಾರ್ಯಕ್ರಮ ಗುರುವಾರ ಬಿರುಮಲೆ ಬೆಟ್ಟದಲ್ಲಿ ನಡೆಯಿತು. ಪುತ್ತೂರಿನ ಹಿರಿಯ ಸಹೃದಯಿ ಸಾಮಾಜಿಕ ಕಳಕಳಿ ಹೊಂದಿರುವ ಈಗಾಗಲೇ ತೊಂಬತ್ತು ನವತಿ ಸಂಭ್ರಮ ಆಚರಿಸಿಕೊಂಡಿರುವ ಪುತ್ತೂರಿನ ಅರಿಯಡ್ಕ ಚಿಕ್ಕಪ್ಪ ನಾಯಕ್ ಅವರ ನವತಿ ಸಂಭ್ರಮದ ಅಂಗವಾಗಿ ಸುಮಾರು ಐದುಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರವನ್ನು ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರು ಟೇಪ್ ಕತ್ತರಿಸಿ, ದೀಪ ಪ್ರಜ್ವಲನಗೊಳಿಸಿ ಲೋಕಾರ್ಪಣೆಗೊಳಿಸಿದರು. ಅವರ

ಬಿರುಮಲೆ ಬೆಟ್ಟದಲ್ಲಿ 5 ಲಕ್ಷ ರೂ. ವೆಚ್ಚದ ವೀಕ್ಷಣಾ ಗೋಪುರ ಲೋಕಾರ್ಪಣೆ Read More »

ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿಯ ಮೃತ್ಯು

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ. ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ಹೋಗಿದ್ದರು. ಈ ವೇಳೆ ಬೆಡ್ ಮೇಲೆ ಕುಳಿತು ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಂತೆ ಕುಳಿತಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿಯ ಮೃತ್ಯು Read More »

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ | ಪುರಸಭೆ ಮಾಜಿ ಅಧ್ಯಕ್ಷ ಯು.ಲೋಕೇಶ್‍ ಹೆಗ್ಡೆ ದಂಪತಿಗೆ ಸನ್ಮಾನ

ಪುತ್ತೂರು: ದೇಶದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿಯಿಂದ ಒಂದು ವರ್ಷಗಳ ಕಾಲ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಾಜಪೇಯಿಯವರು ಪುತ್ತೂರು ಭೇಟಿ ಕಾರ್ಯಕ್ರಮದಲ್ಲಿ ಭಾಗಹಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದ್ದು, 1991 ರಲ್ಲಿ ಪುತ್ತೂರಿನಲ್ಲಿ ವಾಜಪೇಯಿ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಪುರಸಭೆ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ ದಂಪತಿಯನ್ನು ಪುತ್ತೂರು ಬಿಜೆಪಿಯಿಂದ ಬುಧವಾರ ಉರ್ಲಾಂಡಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಮಾಜಿ ಪುರಸಭೆ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ | ಪುರಸಭೆ ಮಾಜಿ ಅಧ್ಯಕ್ಷ ಯು.ಲೋಕೇಶ್‍ ಹೆಗ್ಡೆ ದಂಪತಿಗೆ ಸನ್ಮಾನ Read More »

ಮಗುವಿಗೆ ಜನ್ಮವಿತ್ತ 9ನೇ ತರಗತಿ ಅಪ್ರಾಪ್ತೆ ವಿದ್ಯಾರ್ಥಿ | ಮಗುವಿಗೆ ತಂದೆಯಾದ 10 ನೇ ತರಗತಿ ವಿದ್ಯಾರ್ಥಿ | ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲು

ರಾಜಸ್ಥಾನ : 9ನೇ ತರಗತಿ ವಿದ್ಯಾರ್ಥಿಯೋರ್ವಳು  ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ರಾಜಸ್ಥಾನದ ಬಾರಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಬಂದಿದೆ. ಈ ಪ್ರಕರಣದಲ್ಲಿ ಅತ್ಯಂತ  ವಿಸ್ಮಯವಾದ ವಿಷಯವೊಂದು ತಿಳಿದಿದೆ, ಅದೇನೆಂದರೆ ಮಗುವಿಗೆ ಜನ್ಮ ನೀಡಲು ಕಾರಣಕರ್ತ ಬಾಲಕಿಯ ಶಾಲೆಯಲ್ಲಿ ಓದುತ್ತಿದ್ದು, 10 ನೇ ತರಗತಿ ವಿದ್ಯಾರ್ಥಿ , ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಸಂತ್ರಸ್ತೆಯ ದೂರಿನ ಮೇರೆಗೆ,  ಆರೋಪಿ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕೆಲವು ತಿಂಗಳುಗಳಿಂದ ಇಬ್ಬರ

ಮಗುವಿಗೆ ಜನ್ಮವಿತ್ತ 9ನೇ ತರಗತಿ ಅಪ್ರಾಪ್ತೆ ವಿದ್ಯಾರ್ಥಿ | ಮಗುವಿಗೆ ತಂದೆಯಾದ 10 ನೇ ತರಗತಿ ವಿದ್ಯಾರ್ಥಿ | ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲು Read More »

ಛತ್ರಪತಿ ಶಿವಾಜಿ, ಶ್ರೀ ಸಂತ ಕವಿ ಸರ್ವಜ್ಞರ ಕುರಿತು ಪ್ರಸ್ತುತ ಓದಿ ತಿಳಿದುಕೊಳ್ಳಬೇಕಾದ ಅಗತ್ಯವಿದೆ : ಸ್ಟೆಲ್ಲಾ ವರ್ಗೀಸ್ | ಛತ್ರಪತಿ ಶಿವಾಜಿ, ಶ್ರೀ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಕುಲಾಲ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಹಾಗೂ ಶ್ರೀ ಸಂತ ಕವಿ ಸರ್ವಜ್ವ ಜಯಂತಿ ಆಚರಣೆ ಪುತ್ತೂರು ಮಿನಿ ವಿಧಾನಸೌಧದದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಸಹಾಯ ಉಪವಿಭಾಗ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಮಾತನಾಡಿ, ದೇಶಕ್ಕೆ ಉತ್ತಮ ಸಂದೇಶ ನೀಡಿ, ಉತ್ತಮ ಆಡಳಿತ ನಡೆಸಿದ ಛತ್ರಪತಿ ಶಿವಾಜಿ ಹಾಗೂ ತನ್ನ

ಛತ್ರಪತಿ ಶಿವಾಜಿ, ಶ್ರೀ ಸಂತ ಕವಿ ಸರ್ವಜ್ಞರ ಕುರಿತು ಪ್ರಸ್ತುತ ಓದಿ ತಿಳಿದುಕೊಳ್ಳಬೇಕಾದ ಅಗತ್ಯವಿದೆ : ಸ್ಟೆಲ್ಲಾ ವರ್ಗೀಸ್ | ಛತ್ರಪತಿ ಶಿವಾಜಿ, ಶ್ರೀ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ Read More »

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ | ದ್ವಿತೀಯ ಪಿಯುಸಿ  ಪರೀಕ್ಷೆಗೆ ನಿಯಮಗಳು ಅನ್ವಯ

ಮಾರ್ಚ್ ತಿಂಗಳಲ್ಲಿ ಶಾಲಾ- ಕಾಲೇಜುಗಳಿಗೆ ಪರೀಕ್ಷೆಗಳು ಆರಂಭವಾಗಿದ್ದು.  ವಿದ್ಯಾರ್ಥಿಗಳು ಪರೀಕ್ಷೆ ಸಲುವಾಗಿ ಪೂರ್ವತಯಾರಿಯನ್ನು ನಡೆಸುತ್ತಿದ್ದಾರೆ.  ಇದೇ ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ವಿದ್ಯಾರ್ಥಿಗಳು ಪರೀಕ್ಷೆಯ ಪೂರ್ ಸಿದ್ದತೆಯಲ್ಲಿದ್ದರೆ. ಎಕ್ಸಾಮ್‍ ಬೋರ್ಡ್‍ ಯಾವುದೇ ತೊಂದರೆಯಾಗದಂತೆ ಕಟ್ಟುನಿಟ್ಟಿನ ನಿಯಮ- ಸೂಚನೆಗಳ ಪೂರ್ವ ತಯಾರಿಯನ್ನು ಮಾಡಿದೆ.  ಈ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ | ದ್ವಿತೀಯ ಪಿಯುಸಿ  ಪರೀಕ್ಷೆಗೆ ನಿಯಮಗಳು ಅನ್ವಯ Read More »

ಲಾರಿ – ರಿಕ್ಷಾ ನಡುವೆ ಅಪಘಾತ  | ಮೂವರು ಮಹಿಳೆಯರಿಗೆ ಗಂಭೀರ ಗಾಯ

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗದ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದ್ದು, ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎನ್ನಲಾಗಿದೆ. ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಪುತ್ತೂರು

ಲಾರಿ – ರಿಕ್ಷಾ ನಡುವೆ ಅಪಘಾತ  | ಮೂವರು ಮಹಿಳೆಯರಿಗೆ ಗಂಭೀರ ಗಾಯ Read More »

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ

ಪ್ರಚೋದನಕಾರಿ ಭಾಷಣ ಮಾಡಿ ಜನರನ್ನು ಕೆರಳಿಸಿದ್ದ ಮೌಲ್ವಿ ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್‌ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ. ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಲು ಕುಮ್ಮಕ್ಕು ನೀಡಿದ್ದ ಮೌಲ್ವಿ ಕೊನೆಗೂ ಬಂಧನ Read More »

ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶ | ಕಾರ್ಮಿಕನೋರ್ವ ಮೃತ್ಯು..!

ಉಪ್ಪಿನಂಗಡಿ : ತೋಟದಲ್ಲಿ ಎಳನೀರನ್ನು ಕೀಳುತ್ತಿರುವಾಗ ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ. ಈ ವೇಳೆ  ತೋಟದ ಕಾರ್ಮಿಕ ದಾವಣಗೆರೆ ಮೂಲದ ವೀರಭದ್ರರವರು ಆಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ಬಜತ್ತೂರು ಗ್ರಾಮದ ಕುವೆಚ್ಚಾರ್ ನಲ್ಲಿ ನಡೆದಿದೆ. ಕುವೆಚ್ಚಾರ್ ತೋಟದಲ್ಲಿ ಕರ್ತವ್ಯ ನಿರ್ವಸುತ್ತಿದ್ದ ವೇಳೆ ತೋಟದಲ್ಲಿದ್ದ ತೆಂಗಿನ ಮರದಿಂದ ಸೀಯಾಳವೊಂದನ್ನು ಕೀಳಲೆಂದು ದೋಟಿ ಬಳಸಲು ಮುಂದಾದಾಗ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ದೋಟಿಗೆ ಸ್ಪರ್ಶವಾಗಿ ವೀರಭದ್ರ ವಿದ್ಯುತ್ ಸ್ಪರ್ಶಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೀರಭದ್ರ

ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶ | ಕಾರ್ಮಿಕನೋರ್ವ ಮೃತ್ಯು..! Read More »

error: Content is protected !!
Scroll to Top