ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸುಳ್ಯ ತಾಲೂಕಿನ ಧರ್ಮಜಾಗೃತಿ ಹಾಗೂ ಸಮುದಾಯ ಸಮ್ಮಿಲನ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಹಗಲಿರುಳು ಸೇವೆ ಸಲ್ಲಿಸಿದ ಎಲ್ಲರಿಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಶುಭ ಅನುಗ್ರಹ ಸಂದೇಶವನ್ನು ರವಾನಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಅನುಗ್ರಹ ಸಂದೇಶದಲ್ಲಿ, ಮಹಾಸ್ವಾಮೀಜಿ ಅವರು ಸಮುದಾಯದ ಸರ್ವಜನರಲ್ಲಿ ಧರ್ಮಜಾಗೃತಿಯ ಸಂಚಲನವನ್ನುಂಟು ಮಾಡಿರುವುದು ಸೌಭಾಗ್ಯವೇ ಸರಿ. ಈ ಕಾರ್ಯಕ್ರಮ […]

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ Read More »

ಅಲ್ಪಸಂಖ್ಯಾತರ ಓಲೈಕೆ ಮೂಲಕ ಓಟ್‍ ಬ್ಯಾಂಕ್‍ ಗಾಗಿ ಕಾಂಗ್ರೆಸ್‍ ನಿಂದ ಸಂವಿಧಾನ ಬದಲಾವಣೆಯ ನೀಚ ರಾಜಕಾರಣ : ಕಿಶೋರ್ ಕುಮಾರ್ ಪುತ್ತೂರು | ಡಿ.ಕೆ.ಶಿವಕುಮಾರ್ ವಿರುದ್ಧ ಬೃಹತ್‍ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್‍ ಆಡಳಿತಕ್ಕೆ ಬಂದ ಬಳಿಕ ಜನಸಾಮಾನ್ಯರು ಕ್ಲಿಷ್ಟಕರ ಜೀವನ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಜನರ ಹಾದಿ ತಪ್ಪಿಸುತ್ತಿದ್ದಾರೆ. ಇದೀಗ ಬಾಬಾಸಾಹೇಬ್‍ ಅಂಬೇಡ್ಕರ್ ಬರೆದ ಸಂವಿಧಾನವನ್ನು ಮುಸಲ್ಮಾನರ ಓಲೈಕೆಗಾಗಿ ಬದಲಾವಣೆ ಮಾಡಲು ಹೊರಟು ಸಂವಿಧಾನಕ್ಕೆ ಅವಮಾನ ಮಾಡುವ ನೀಚ ರಾಜಕೀಯಕ್ಕಿಳಿದಿದ್ದಾರೆ ಡಿ.ಕೆ.ಶಿವಕುಮಾರ್ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪಿಸಿದರು. ಅವರು ಮಂಗಳವಾರ ಸಂಜೆ ದರ್ವೆ ವೃತ್ತದ ಬಳಿಕ ಪುತ್ತೂರು ಬಿಜೆಪಿ ವತಿಯಿಂದ ಮುಸಲ್ಮಾನರಿಗಾಗಿ ಸಂವಿಧಾನ ಬದಲಾಯಿಸಲು ಹೊರಟ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನಡೆದ

ಅಲ್ಪಸಂಖ್ಯಾತರ ಓಲೈಕೆ ಮೂಲಕ ಓಟ್‍ ಬ್ಯಾಂಕ್‍ ಗಾಗಿ ಕಾಂಗ್ರೆಸ್‍ ನಿಂದ ಸಂವಿಧಾನ ಬದಲಾವಣೆಯ ನೀಚ ರಾಜಕಾರಣ : ಕಿಶೋರ್ ಕುಮಾರ್ ಪುತ್ತೂರು | ಡಿ.ಕೆ.ಶಿವಕುಮಾರ್ ವಿರುದ್ಧ ಬೃಹತ್‍ ಪ್ರತಿಭಟನೆ Read More »

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ,  ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ  ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಾ, 25 ರಂದು  ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮವನ್ನು ಕೆ.ಎಸ್.ಎಸ್ ಕಾಲೇಜಿನ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್ ಉದ್ಘಾಟಿಸಿದರು.  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ Read More »

SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ

ಪುತ್ತೂರು : ತಾಲೂಕು ಬೆಳಿಯೂರು ಕಟ್ಟೆಯಲ್ಲಿ ಶ್ರೀರಾಮ ಸಮುದಾಯ ಶಾಖೆಯ ಮಾತೃ ಪೂಜನ, ಮಾತೃ ವಂದನ,ಮಾತೃ ಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮ  ಮಾ.23 ಭಾನುವಾರದಂದು ನಡೆಯಿತು. ಪ್ರಾಂತ ಪ್ರಶಿಕ್ಷಣ ಪ್ರಮುಖರು ಲಕ್ಷ್ಮೀ ನಾರಾಯಣ, ಇವರು ತಾಯಿ ಹೃದಯದ ಅಂತಕರಣದ ವಿವಿಧ ಸ್ತರಗಳನ್ನು ಭಾವುಕರಾಗಿ ತಿಳಿಸಿದ ರೀತಿ  ಜನ್ಮ ಜನ್ಮಾoತರದ ನೆನಪು ಇರುವಂತೆ  ಮೂಡಿಸಿರುತ್ತಾರೆ. ಮಾತ್ರವಲ್ಲ ಮಾತೃ ಧ್ಯಾನದ ಮೂಲಕ ತಾಯಿ ಮತ್ತು ನಮ್ಮ ರಕ್ತ ಸಂಬಂಧವನ್ನು ಮತ್ತೆ ಹಸಿರಾಗಿಸಿ ನಮ್ಮ ಉಸಿರಿನಲ್ಲಿ  ಬೆರೆತಿರುವುದನ್ನು  ಅರಿವಿಗೆ ತಂದರು.

SPYSS ಹಾಗೂ ಶ್ರೀ ರಾಮ ಸಮುದಾಯ ಭವನ ಶಾಖೆ ಬೆಳಿಯೂರುಕಟ್ಟೆ ಇದರ ಸಹಯೋಗದಲ್ಲಿ ಮಾತೃ ವಂದನ ಕಾರ್ಯಕ್ರಮ Read More »

ಮಾಣಿ ಶ್ರೀರಾಮಚಂದ್ರಾಪುರ ಮಠದ ಗುಡ್ಡಕ್ಕೆ  ಬೆಂಕಿ ಅವಘಡ

ಬಂಟ್ವಾಳ: ತಾಲೂಕಿನ ಮಾಣಿ ಪೆರಾಜೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಗುಡ್ಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಹಿನ್ನಲೆ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು 1,000 ಕೋಕಂ ಸಸಿಗಳು ಸುಟ್ಟೋಗಿದೆ ಎನ್ನಲಾಗಿದೆ. ಸ್ಥಳೀಯರು ನೀರು ಸುರಿದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಹೊತ್ತಿಕೊಂಡ ಬೆಂಕಿ ನಂದಿ ಹೋಗಲಿಲ್ಲ ಎನ್ನಲಾಗಿದೆ. ತೀವ್ರ ಶಾಖದಿಂದಾಗಿ ಬೆಂಕಿ ಬೆಟ್ಟದಾದ್ಯಂತ ಹರಡಿದೆ. ಬಳಿಕ  ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ಬೆಂಕಿಯಲ್ಲಿ ಸುಮಾರು 50 ಹಣ್ಣು ಬಿಡುವ

ಮಾಣಿ ಶ್ರೀರಾಮಚಂದ್ರಾಪುರ ಮಠದ ಗುಡ್ಡಕ್ಕೆ  ಬೆಂಕಿ ಅವಘಡ Read More »

ಒಲಿಂಪಿಯಾಡ್ ಪರೀಕ್ಷೆ : ಅಂಬಿಕಾ ಸಿಬಿಎಸ್‍ ಇ ಸಂಸ್ಥೆಯಿಂದ ಎರಡನೆಯ ಹಂತಕ್ಕೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

ಪುತ್ತೂರು: ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಕಳೆದ ಡಿಸೆಂಬರ್ ತಿಂಗಳಿನಲ್ಲಿ ನವದೆಹಲಿಯ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆ ಬರೆದಿದ್ದು, ಪರೀಕ್ಷೆ ಬರೆದಿದ್ದ ಒಟ್ಟು 512 ವಿದ್ಯಾರ್ಥಿಗಳಲ್ಲಿ ಸಂಸ್ಥೆಯ ಒಟ್ಟು ನಾಲ್ಕು ಮಂದಿ ವಿದ್ಯಾರ್ಥಿಗಳು ಎರಡನೆಯ ಹಂತಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ 90 ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, 54 ವಿದ್ಯಾರ್ಥಿಗಳು ಬೆಳ್ಳಿಯ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, 27 ವಿದ್ಯಾರ್ಥಿಗಳು ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನೂ, ಉಳಿದಂತೆ

ಒಲಿಂಪಿಯಾಡ್ ಪರೀಕ್ಷೆ : ಅಂಬಿಕಾ ಸಿಬಿಎಸ್‍ ಇ ಸಂಸ್ಥೆಯಿಂದ ಎರಡನೆಯ ಹಂತಕ್ಕೆ ನಾಲ್ವರು ವಿದ್ಯಾರ್ಥಿಗಳು ಆಯ್ಕೆ Read More »

ದ.ಕ. ಜಿಲ್ಲಾ ಬಿಜೆಪಿಯಿಂದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ

ಪುತ್ತೂರು : ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸರಕಾರದ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಯಿತು. ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದ ಬಳಿ ಇರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಬಿಜೆಪಿಯಿಂದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ Read More »

ಭರ್ಜರಿ ಪ್ರದರ್ಶನಗೊಳ್ಳುತ್ತಿರುವ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಿಗ್ಗೆ 10.45 ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.26 ಬುಧವಾರದಂದು ಬೆಳಿಗ್ಗೆ 10.45ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಭರ್ಜರಿ ಪ್ರದರ್ಶನಗೊಳ್ಳುತ್ತಿರುವ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಿಗ್ಗೆ 10.45 ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌?

ವೈರಲ್‌ ಆಯಿತು ಕೊಳಕು ಬೈಗುಳದ ಸ್ಕ್ರೀನ್‌ಶಾಟ್‌ ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸಚಿವರಿಗೆ ದಿನಕ್ಕೊಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ಇದೀಗ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸರದಿ. ಫೇಸ್‌ಬುಕ್​​ನಲ್ಲಿ ತನ್ನ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ಭೈರತಿ ಸುರೇಶ್ ತೀರಾ ಕೊಳಕು ಭಾಷೆಯಲ್ಲಿ ನಿಂದಿಸಿರುವ ಕೆಲವು ಸ್ಕ್ರೀನ್‌ಶಾಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿವೆ. ಸಚಿವರು ಬಳಸಿದ ಭಾಷೆಯ ಬಗ್ಗೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದು ಕಾಂಗ್ರೆಸ್‌ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮೆಂಟ್‌ ಮಾಡಿದ ವ್ಯಕ್ತಿಯನ್ನುದ್ದೇಶಿಸಿ

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌? Read More »

ಫೇಸ್‍ ಬುಕ್‍ನಲ್ಲಿ ಷೇರ್ ಟ್ರೇಡಿಂಗ್‍ ಜಾಹಿರಾತು ಮೂಲಕ ವಂಚನೆ | 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಮಂಗಳೂರು: ಷೇರು ಟ್ರೇಡಿಂಗ್ ಕುರಿತಾಗಿ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿದ ವ್ಯಕ್ತಿಯೋರ್ವ 38,53,961 ರೂ. ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿ ಬಂದ ಲಿಂಕ್‍ ನಲ್ಲಿ ವೈಯಕ್ತಿಕ ಮಾಹಿತಿಯನ್ನು  ತಿಳಿಸಿದ ಬಳಿಕ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಷೇರು ಟ್ರೇಡಿಂಗ್‌ನಲ್ಲಿ ನೋಂದಣಿ ಮಾಡಲು 21 ಸಾವಿರ ರೂ. ಹಣ ವರ್ಗಾವಣೆ ಮಾಡುವಂತೆ ಹೇಳಿದ್ದಾನೆ. ವಂಚಕ ಕಳುಹಿಸಿದ ಯುಪಿಐ ಐಡಿಗಳಿಗೆ ಹಣವನ್ನು ಪಾವತಿಸಿದ್ದಾನೆ. ಬಳಿಕ ಟ್ರೇಡಿಂಗ್ ಕಂಪೆನಿಯವರು ಕರೆ ಮಾಡಿ

ಫೇಸ್‍ ಬುಕ್‍ನಲ್ಲಿ ಷೇರ್ ಟ್ರೇಡಿಂಗ್‍ ಜಾಹಿರಾತು ಮೂಲಕ ವಂಚನೆ | 38 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ Read More »

ಮಾ.27ರಂದು ಸಂಸತ್ತಿನಲ್ಲಿ ಛಾವಾ ಸಿನಿಮಾದ ವಿಶೇಷ ಪ್ರದರ್ಶನ

ಚಿತ್ರ ವೀಕ್ಷಿಸಲಿರುವ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ನವದೆಹಲಿ: ಈಗಾಗಲೇ ಜಾಗತಿಕವಾಗಿ ಭರ್ಜರಿ ಯಶಸ್ಸು ಕಂಡಿರುವ ಹಾಗೂ ಒಂದು ವರ್ಗದ ಆಕ್ರೋಶಕ್ಕೂ ಗುರಿಯಾಗಿರುವ ಹಿಂದಿಯ ಛಾವಾ ಸಿನಿಮಾ ಮಾ.27ರಂದು ಸಂಸತ್ತಿನಲ್ಲಿ ಪ್ರದರ್ಶನಗೊಳ್ಳಲಿದೆ. ಸಂಸತ್ತಿನಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ವಿಕ್ಕಿ ಕೌಶಲ್ ನಟನೆಯ ಛಾವಾ ಸಿನಿಮಾ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಮರಾಠ ದೊರೆ ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಸಂಭಾಜಿ ಮಹಾರಾಜರ ಜೀವನಾಧಾರಿತ ಛಾವಾ ಸಿನಿಮಾವನ್ನು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿರುವ ಬಾಲಯೋಗಿ ಸಭಾಂಗಣದಲ್ಲಿ

ಮಾ.27ರಂದು ಸಂಸತ್ತಿನಲ್ಲಿ ಛಾವಾ ಸಿನಿಮಾದ ವಿಶೇಷ ಪ್ರದರ್ಶನ Read More »

error: Content is protected !!
Scroll to Top