ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸುಳ್ಯ ತಾಲೂಕಿನ ಧರ್ಮಜಾಗೃತಿ ಹಾಗೂ ಸಮುದಾಯ ಸಮ್ಮಿಲನ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಹಗಲಿರುಳು ಸೇವೆ ಸಲ್ಲಿಸಿದ ಎಲ್ಲರಿಗೂ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಶುಭ ಅನುಗ್ರಹ ಸಂದೇಶವನ್ನು ರವಾನಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರ ಅನುಗ್ರಹ ಸಂದೇಶದಲ್ಲಿ, ಮಹಾಸ್ವಾಮೀಜಿ ಅವರು ಸಮುದಾಯದ ಸರ್ವಜನರಲ್ಲಿ ಧರ್ಮಜಾಗೃತಿಯ ಸಂಚಲನವನ್ನುಂಟು ಮಾಡಿರುವುದು ಸೌಭಾಗ್ಯವೇ ಸರಿ. ಈ ಕಾರ್ಯಕ್ರಮ […]

ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಸಮುದಾಯ ಸಮ್ಮಿಲನ, ಧರ್ಮಜಾಗೃತಿ ಯಶಸ್ವಿ: ಡಾ. ಧರ್ಮಪಾಲನಾಥ ಸ್ವಾಮೀಜಿ Read More »

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಇ.ಡಿ.ದಾಳಿ

ಮಾಜಿ ಸಿಎಂ ಮಗಳು, ಅಳಿಯನಿಗೂ ಇ.ಡಿ. ದಾಳಿಯ ಶಾಕ್‌ ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಅಧಿಕಾರದಿಂದ ನಿರ್ಗಮಿಸಿದ ಬೆನ್ನಿಗೆ ಇ.ಡಿ. ದಾಳಿಯ ಬಿಸಿ ತಟ್ಟಿದೆ. ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ (CMRL) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬುಧವಾರ ಕೇರಳದಾದ್ಯಂತ 10 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಹಾಗೂ

ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಇ.ಡಿ.ದಾಳಿ Read More »

ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಆಭರಣ ದೋಚಿದ ಯುವಕರು

ಸೋಷಿಯಲ್‌ ಮೀಡಿಯಾ ಮೂಲಕ ಪರಿಚಯವಾದ ಯುವಕರಿಂದ ಯುವತಿಗೆ ಮೋಸ ಉಡುಪಿ: ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಆಕೆಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಮನೆಯಿಂದ ಲಕ್ಷಗಟ್ಟಲೆ ಬೆಲೆಬಾಳುವ ಆಭರಣಗಳನ್ನು ತರಿಸಿಕೊಂಡು ವಂಚಿಸಿದ ಇಬ್ಬರು ಪಾತಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ಸಮೀಪದ ತೆಕ್ಕಟ್ಟೆ ಕುಂಭಾಶಿಯ ಜಿತೇಂದ್ರ ಶೆಟ್ಟಿ (25) ಹಾಗೂ ಕುರ್ವಾಡಿಯ ಸುಶಾನ್‌ ಪೂಜಾರಿ ಬಂಧಿತ ಪಾತಕಿಗಳು. ಅವರ ವಿರುದ್ಧ ಪೋಕ್ಸೋ, ಜೇವ ಬೆದರಿಕೆ ಮತ್ತು ವಂಚನೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಮಲ್ಪೆಯ ಕೊಡವೂರಿನ 17ರ ಹರೆಯದ

ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಆಭರಣ ದೋಚಿದ ಯುವಕರು Read More »

ಮಧ್ಯರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಆಪ್ತರ ಸಭೆ

ಕ್ಷಣಕ್ಷಣಕ್ಕೆ ಕುತೂಹಲ ಕೆರಳಿಸುತ್ತಿರುವ ರಾಜಕೀಯ ವಿದ್ಯಮಾನ ಬೆಂಗಳೂರು: ದೆಹಲಿಯಿಂದ ವಿಶೇಷ ವಿಮಾನದಲ್ಲಿ ನಿನ್ನೆ ರಾತ್ರಿ ವಾಪಸ್ ಆದ ಬೆನ್ನಲ್ಲೇ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ತಡರಾತ್ರಿ ಸಣ್ಣ ಸಭೆ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯನವರನ್ನು ಸಚಿವರಾದ ಕೃಷ್ಣಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಬರಮಾಡಿಕೊಂಡರು. ನಂತರ ಮುಖ್ಯಮಂತ್ರಿಗಳ ಕಾರಿನಲ್ಲೇ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಶಾಸಕ ಪೊನ್ನಣ್ಣ ಅವರು ಸಿಎಂ ನಿವಾಸಕ್ಕೆ ಆಗಮಿಸಿದರು. ಸಿಎಂ ಮನೆಗೆ ಬಂದ ನಂತರ ಗೃಹ

ಮಧ್ಯರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಆಪ್ತರ ಸಭೆ Read More »

ಚಿಪ್ಸ್‌, ಪಫ್ಸ್‌ಗಳಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ!

ಬೇಕರಿ ತಿನಿಸುಗಳಲ್ಲಿ ವ್ಯಾಪಕವಾಗಿ ರಾಸಾಯನಿಕ ಬಳಸುತ್ತಿರುವುದು ಪತ್ತೆ ಬೆಂಗಳೂರು : ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ ಎಂದು ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಕರ್ಷಣೆಗಾಗಿ ಸಿಹಿತಿಂಡಿಗಳು, ಪಫ್ಸ್‌, ಚಿಪ್ಸ್‌ಮುಂತಾದ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್‌ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಇಲಾಖೆಯ ಪ್ರಯೋಗಾಲಯದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯದ ಮೂಲೆ ಮೂಲೆಗಳ ಬೇಕರಿಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು

ಚಿಪ್ಸ್‌, ಪಫ್ಸ್‌ಗಳಲ್ಲೂ ಇದೆ ಕ್ಯಾನ್ಸರ್‌ಕಾರಕ ಅಂಶ! Read More »

ಬಸ್‌-ಟೆಂಪೋ ಟ್ರಾವೆಲರ್‌ ಡಿಕ್ಕಿ : ಮಹಿಳೆ ಸಾವು, 7 ಮಂದಿಗೆ ಗಾಯ

ಸುಬ್ರಹ್ಮಣ್ಯ ದೇವಸ್ಥಾನ ಯಾತ್ರಾರ್ಥಿಗಳಿದ್ದ ಟೆಂಪೋ ಟ್ರಾವೆಲರ್‌ ಸುಳ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಮೇ 25ರಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯದತ್ತ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಎಂಬವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ 14

ಬಸ್‌-ಟೆಂಪೋ ಟ್ರಾವೆಲರ್‌ ಡಿಕ್ಕಿ : ಮಹಿಳೆ ಸಾವು, 7 ಮಂದಿಗೆ ಗಾಯ Read More »

ಪಶ್ಚಿಮ ಬಂಗಾಳದ ಗಡಿಭಾಗಗಳಲ್ಲಿ ಸಾಲುಗಟ್ಟಿ ನಿಂತ ಬಾಂಗ್ಲಾದೇಶಿ ಅಕ್ರಮ ವಲಸಿಗರು

ಡಿಟೆಕ್ಟ್‌-ಡಿಲೀಟ್‌-ಡಿಪೊರ್ಟ್‌ ನೀತಿ ಘೋಷಣೆಯಾದ ಬಳಿಕ ತಾಯ್ನಾಡಿಗೆ ಧಾವಿಸುತ್ತಿರುವ ಅಕ್ರಮ ವಲಸಿಗರು ಕೋಲ್ಕತ್ತಾ: ಬಿಜೆಪಿ ಸರ್ಕಾರದ ನೂತನ “ಪತ್ತೆ ಹಚ್ಚಿ, ಪಟ್ಟಿಯಿಂದ ಹೆಸರು ಅಳಿಸಿ ಮತ್ತು ಗಡೀಪಾರು ಮಾಡಿ” (detect, delete and deport) ನೀತಿಯ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಹಲವು ಗಡಿ ಪ್ರದೇಶಗಳಿಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಎನ್ನಲಾದ ಅಪಾರ ಸಂಖ್ಯೆಯ ಜನರು ಲಗ್ಗೆ ಇಡುತ್ತಿದ್ದಾರೆ. ಉತ್ತರ 24 ಪರಗಣ ಮತ್ತು ಮಾಲ್ಡಾ ಜಿಲ್ಲೆಗಲ್ಲಿ ಕಂಡುಬರುತ್ತಿರುವ ದೃಶ್ಯಗಳು, ನುಸುಳುಕೋರ ವಿರೋಧಿ ಅಭಿಯಾನ ಕೇವಲ ರಾಜಕೀಯ ಭಾಷಣಕ್ಕೆ ಸೀಮಿತವಾಗದೆ

ಪಶ್ಚಿಮ ಬಂಗಾಳದ ಗಡಿಭಾಗಗಳಲ್ಲಿ ಸಾಲುಗಟ್ಟಿ ನಿಂತ ಬಾಂಗ್ಲಾದೇಶಿ ಅಕ್ರಮ ವಲಸಿಗರು Read More »

ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ?

ಕೊನೆಗೂ ಪಟ್ಟ ಬಿಡಲು ಸಿದ್ದರಾಮಯ್ಯ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್‌ ಬೆಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ ತಲುಪಿದ್ದು, ಕೊನೆಗೂ ಕಾಂಗ್ರೆಸ್‌ ಹೈಕಮಾಂಡ್‌ ಅಧಿಕಾರ ಬಿಟ್ಟುಕೊಡುವಂತೆ ಸಿದ್ದರಾಮಯ್ಯನವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್‌ಫಾಸ್ಟ್ ಇರಲಿದೆ. ಬ್ರೇಕ್‌ಫಾಸ್ಟ್ ಬಳಿಕ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಗುರುವಾರ ರಾಜೀನಾಮೆ ಬಳಿಕ

ಕುರ್ಚಿ ಕಿತ್ತಾಟ ಫೈನಲ್‌ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ? Read More »

ಮರದ ಗೆಲ್ಲು ಕಡಿಯುವ ‌ವಿಷಯಕ್ಕೆ ಗಲಾಟೆ: ದೂರು ದಾಖಲು

ಬಂಟ್ವಾಳ: ಮರದ ಗೆಲ್ಲು ಕಡಿಯುವ ‌ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ದೂರು ದಾಖಲಾಗಿರುವ ಘಟನೆ ಸಮೀಪ ನಡು ಗ್ರಾಮದಲ್ಲಿ ನಡೆದಿದೆ. ಸುರೇಶ್ ರೈ ಎಂಬವರ ತಾಯಿಯ ಮನೆಗೆ ಸೋಮನಾಥ ಭಂಡಾರಿ ಎಂಬವರು ನೋಡಿಕೊಳ್ಳುತ್ತಿದ್ದ ಮರದ ಕೊಂಬೆ ತಾಗುತ್ತಿತ್ತು. ಇದನ್ನು ಕಡಿಯುವಂತೆ ಹಲವು ಬಾರಿ ಸೂಚಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆ ಸುರೇಶ್ ಅವರೇ ಕಡಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಸೋಮನಾಥ್ ಅವರು ಸ್ಥಳಕ್ಕೆ ಬಂದು ಸುರೇಶ್ ಅವರಿಗೆ ಕಲ್ಲು, ತೆಂಗಿನಕಾಯಿ‌ಗಳನ್ನು ಎಸೆದು ಹಲ್ಲೆ ನಡೆಸಿದ್ದಾರೆ.ಹಾಗೆಯೇ ಮದ್ಯೆ

ಮರದ ಗೆಲ್ಲು ಕಡಿಯುವ ‌ವಿಷಯಕ್ಕೆ ಗಲಾಟೆ: ದೂರು ದಾಖಲು Read More »

ದೈವಕ್ಕೆ ಅಪಮಾನ: ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆ ಯಾಚಿಸಿದ ರಣವೀರ್ ಸಿಂಗ್

ಬೆಂಗಳೂರು: ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ಚಿತ್ರದಲ್ಲಿ ಬರುವ ದೈವದ ಪಾತ್ರಕ್ಕೆ ಅವಮಾನ ಮಾಡಿದ್ದು, ಆ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆ ಯಾಚನೆ ಮಾಡಿದ್ದಾರೆ. ಯಾರಿಗೂ ಮಾಹಿತಿ ಸಿಗದ ಹಾಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ, ಪೂಜೆ ಸಲ್ಲಿಸಿ, ಕ್ಷಮೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲೇ ರಣವೀರ್ ತಮ್ಮ ಎಕ್ಸ್ ಖಾತೆಯ ಮೂಲಕ ದೈವ ಭಕ್ತರಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡಿ

ದೈವಕ್ಕೆ ಅಪಮಾನ: ಚಾಮುಂಡಿ ಬೆಟ್ಟಕ್ಕೆ ತೆರಳಿ ಕ್ಷಮೆ ಯಾಚಿಸಿದ ರಣವೀರ್ ಸಿಂಗ್ Read More »

ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳ ರಕ್ಷಣೆ

ಬಳ್ಳಾರಿ: ಕಸಾಯಿಖಾನೆಗೆ ತೆಗೆದುಕೊಂಡು ಹೋಗುವುದಕ್ಕಾಗಿ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳನ್ನು ಹಳೇ ಬೈಪಾಸ್ ಬಳಿಯ ಗೋಲಬಡಿ ‌ದಾರಿಯಲ್ಲಿ ರಕ್ಷಣೆ ಮಾಡಲಾಗಿದೆ. ಹಿಂದೂ ಸಂಘಟನೆಗಳು ನೀಡಿದ ಮಾಹಿತಿಯನ್ನು ಆಧರಿಸಿ ಕೌಲಬಜಾರ್ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಾತಕ್ಕಾಗಿ ಇಷ್ಟೊಂದು ಗೋವುಗಳನ್ನು ಕೊಟ್ಟಿಗೆಯಲ್ಲಿ ಇರಿಸಲಾಗಿದೆ ಎನ್ನುವ ಪ್ರಶ್ನೆಗೆ ಸೂಕ್ತ ಉತ್ತರ ಸಿಕ್ಕಿಲ್ಲ ಎಂದು ವರದಿಯಾಗಿದೆ. ಸದ್ಯ ಕೊಟ್ಟಿಗೆಯಲ್ಲಿ ಕೂಡಿ ಹಾಕಲಾಗಿದ್ದ ಎಲ್ಲಾ ಗೋವುಗಳನ್ನು ರಕ್ಷಣೆ ಮಾಡಲಾಗಿದ್ದು, ಅವುಗಳನ್ನು ಗೋಶಾಲೆೆಗೆ ರವಾನೆ ಮಾಡುವುದಾಗಿ ಪೊಲೀಸರು

ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 50 ಕ್ಕೂ ಅಧಿಕ ಗೋವುಗಳ ರಕ್ಷಣೆ Read More »

error: Content is protected !!
Scroll to Top