140 ಕೋಳಿಗಳನ್ನು ಬಲಿ ಪಡೆದ ಮದುವೆಯ ಡಿ.ಜೆ. ಸದ್ದು

ಲಕ್ನೋ: ಮದುವೆಯ ಮೆರವಣಿಗೆಯಲ್ಲಿ ಬಳಸಿದ ಬಾರಿ ಸದ್ದಿನ ಡಿ.ಜೆ. ಗೆ ತನ್ನ 140 ಕೋಳಿಗಳು ಸಾವನ್ನಪ್ಪಿವೆ ಎಂದು ಆರೋಪಿಸಿ, ಕೋಳಿಗಳ ಮಾಲೀಕ ಪೊಲೀಸರಿಗೆ ದೂರು ನೀಡಿದ್ದಾನೆ. ಉತ್ತರ ಪ್ರದೇಶದ ಸುಲ್ತಾನಪುರದ ಗ್ರಾಮವೊಂದರಲ್ಲಿ ಈ ಘಟನೆ ನಡೆದಿರುವುದಾಗಿದೆ. ತನ್ನ ಕೋಳಿ ಸಾಕಾಣಿಕೆ ಪ್ರದೇಶದ ಸಮೀಪ ಭಾರೀ ಸದ್ದಿನ ಜೊತೆಗೆ ಡಿ. ಜೆ. ಹಾಕಿಕೊಂಡು ಮದುವೆಯ ಮೆರವಣಿಗೆ ಸಾಗಿದೆ. ಇದರಿಂದ ಭಯಭೀತವಾದ 180 ಕೋಳಿಗಳು ‌ಪ್ರಾಣ ಬಿಟ್ಟಿವೆ‌ ಎಂದು ಸಬೀರ್ ಅಲಿ ಎಂಬವರು ದೂರಿನಲ್ಲಿ ಹೇಳಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು […]

140 ಕೋಳಿಗಳನ್ನು ಬಲಿ ಪಡೆದ ಮದುವೆಯ ಡಿ.ಜೆ. ಸದ್ದು Read More »

ತಾಯಿಯೊಂದಿಗೆ ಬಟ್ಟೆ ಖರೀದಿಗೆ ಹೋಗಿದ್ದ ಹುಡುಗ ವಿದ್ಯುತ್ ತಂತಿ ಸ್ಪರ್ಶದಿಂದ ಸಾವು

ಬೆಂಗಳೂರು: ತಾಯಿಯೊಂದಿಗೆ ಬಟ್ಟೆ ಖರೀದಿಸಲು ಬಂದು ಬೈಕ್ ಪಾರ್ಕ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ಬಿದ್ದು ಶಾಕ್ ಹೊಡೆದು ಮಗ ಮೃತಪಟ್ಟಿದ್ದು, ಇದನ್ನು ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಸೇರಿದ ಹೃದಯ ವಿದ್ರಾವಕ ಘಟನೆ ಶಿವಾಜಿನಗರದಲ್ಲಿ ನಡೆದಿದೆ. ಮೃತನನ್ನು ‌ಸಯ್ಯದ್ ಸುಫಿಯಾನ್ (17) ಎಂದು ಗುರುತಿಸಲಾಗಿದೆ. ಮಗನ ಸಾವನ್ನು ಕಣ್ಣಾರೆ ಕಂಡು ಅನಾರೋಗ್ಯಕ್ಕೆ ತುತ್ತಾದ ತಾಯಿ ಉಮೇ ‌ಸಲ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದ್ವಿತೀಯ ಪಿಯುಸಿ‌ಗೆ ಕಾಲೇಜಿಗೆ ಹೋಗಲು ಬಟ್ಟೆ ಖರೀದಿಗೆಂದು ಆತ ತಾಯಿಯ ಜೊತೆಗೆ

ತಾಯಿಯೊಂದಿಗೆ ಬಟ್ಟೆ ಖರೀದಿಗೆ ಹೋಗಿದ್ದ ಹುಡುಗ ವಿದ್ಯುತ್ ತಂತಿ ಸ್ಪರ್ಶದಿಂದ ಸಾವು Read More »

ಅಶಕ್ತ ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ, ಪುನರ್ವಸತಿ ಕಲ್ಪಿಸಿದ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರು

ಪುತ್ತೂರು: ಒಳ ರೋಗಿಯಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊಡಿಂಬಾಡಿಯ ದಾರಂದಕುಕ್ಕು ನಿವಾಸಿ ಲಕ್ಷ್ಮೀ (80) ಎಂಬ ವೃದ್ಧೆಗೆ ಪುನರ್ವಸತಿ ಕಲ್ಪಿಸಿ‌ ಮಾನವೀಯತೆ ಮೆರೆದ ಹೃದಯಸ್ಪರ್ಶಿ ಘಟನೆ ನಡೆದಿದೆ. ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಸಾಯುವ ಸ್ಥಿತಿಗೆ ತಲುಪಿದ್ದ ಲಕ್ಷ್ಮೀ ಅಮ್ಮನಿಗೆ ಸರ್ಕಾರಿ ಆಸ್ಪತ್ರೆಯ ಡಾ. ಯದುರಾಜ್ ‌ಡಿ. ಕೆ. ಅವರ ತಂಡ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಿಂದ ಆ ತಾಯಿ ಚೇತರಿಸಿಕೊಂಡು ನಡೆದಾಡುವ ಸ್ಥಿತಿಗೆ ಬಂದಿದ್ದಾರೆ. ಆ ಬಳಿಕ ಲಕ್ಷ್ಮೀ ಅಮ್ಮನನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳ ಮನವಿಯ ಮೇರೆಗೆ ಮಹಿಳಾ

ಅಶಕ್ತ ವೃದ್ಧೆಗೆ ಸೂಕ್ತ ಚಿಕಿತ್ಸೆ ನೀಡಿ, ಪುನರ್ವಸತಿ ಕಲ್ಪಿಸಿದ ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರು Read More »

ಡಿವೈಡರ್‌ ಹಾರಿದ ಪಿಕಪ್‌ : 15 ಕಾರ್ಮಿಕರು ಸಾವು

ಭೋಪಾಲ್ : ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ 10.30ರ ಸುಮಾರಿಗೆ ಸಂಭವಿಸಿದೆ. ತಿರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಲಿಯಾ ಬೈಪಾಸ್ ಬಳಿಯ ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 46 ಕಾರ್ಮಿಕರನ್ನು ಈ ಪಿಕಪ್ ಹೊತ್ತೊಯ್ಯುತ್ತಿತ್ತು. ಪಿಕಪ್ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಸಿಕೊಂಡಿದ್ದ ಕಾರಣ ಅತಿ ವೇಗದಿಂದಾಗಿ ನಿಯಂತ್ರಣ

ಡಿವೈಡರ್‌ ಹಾರಿದ ಪಿಕಪ್‌ : 15 ಕಾರ್ಮಿಕರು ಸಾವು Read More »

ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಸ್ಫೋಟ ಬೆದರಿಕೆ

ಸೀಸಿಯಮ್ ವಿಕಿರಣ ಹಾಯಿಸಿ ಸ್ಫೋಟಿಸುವ ಎಚ್ಚರಿಕೆ ನಾಗಪುರ : ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಮತ್ತು ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಗುರಿಯಾಗಿಸಿಕೊಂಡು ವಿಕಿರಣಶೀಲ ವಸ್ತುಗಳ ಮೂಲಕ ದಾಳಿ ನಡೆಸುವ ಬೆದರಿಕೆ ಪತ್ರವೊಂದು ಪೊಲೀಸ್ ಇಲಾಖೆಗೆ ಲಭ್ಯವಾಗಿದೆ. ಪತ್ರದ ಗಂಭೀರತೆಯನ್ನು ಅರಿತ ಪೊಲೀಸ್ ಆಯುಕ್ತರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಭಯೋತ್ಪಾದನಾ ನಿಗ್ರಹ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಮುಂಬೈನಿಂದ ಆಗಮಿಸಿದ ಪರಮಾಣು ಶಕ್ತಿ ತಜ್ಞರ ವಿಶೇಷ

ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಸ್ಫೋಟ ಬೆದರಿಕೆ Read More »

ಪ್ರಿವೆಡ್ಡಿಂಗ್‌ ಶೂಟ್‌ಗೆ ಹೋಗುವಾಗ ಅಪಘಾತ : ವರ ಸಾವು

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆಏರಬೇಕಿದ್ದ ವರನೊಬ್ಬ ಪ್ರಿವೆಡ್ಡಿಂಗ್ ಶೂಟ್‌ಗೆ ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು ಎಲ್‌.ಎನ್. (29) ಎಂದು ಗುರುತಿಸಲಾಗಿದೆ.ಮೇ 10ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಇಂದು ಬೆಳಗ್ಗೆ ಮನು ಪ್ರಿವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ಹೊರಟಿದ್ದರು. ಕಾರು ಸಕಲೇಶಪುರದ

ಪ್ರಿವೆಡ್ಡಿಂಗ್‌ ಶೂಟ್‌ಗೆ ಹೋಗುವಾಗ ಅಪಘಾತ : ವರ ಸಾವು Read More »

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದಲ್ಲಿ ವಿಶೇಷ ಕ್ರಮ

ತೋಟಕ್ಕೆ ಭೇಟಿ ಮಾಹಿತಿ ಪಡೆದ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸುಳ್ಯ: ಕರಾವಳಿಯಲ್ಲಿ ಅಡಿಕೆ ಬೆಳೆಯನ್ನು ಬಹಳ ಕಾಲದಿಂದ ಬಾಧಿಸುತ್ತಿರುವ ಎಲೆಚುಕ್ಕಿ ರೋಗಕ್ಕೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ಮಿಷನ್ ಫಾರ್ ಇಂಟೆಗ್ರೇಟೆಡ್ ಡೆವಲಪ್ಮೆಂಟ್ ಆಫ್ ಹಾರ್ಟಿಕಲ್ಚರ್ ಯೋಜನೆಯಡಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ವ್ಯಾಪಕವಾಗಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದ ಗುತ್ತಿಗಾರಿನಲ್ಲಿ ಅಳವಡಿಸಿರುವ ವಿಶೇಷ ಪ್ರಾತಕ್ಷಿಕೆ ಕುರಿತಂತೆ ಬುಧವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ತೋಟಕ್ಕೆ ಭೇಟಿ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸುಳ್ಯದಲ್ಲಿ ವಿಶೇಷ ಕ್ರಮ Read More »

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿತ : ಪ್ರವಾಸಕ್ಕೆ ಬಂದವರ ದುರಂತ ಅಂತ್ಯ

ಮಳೆಯಿಂದ ರಕ್ಷಣೆ ಪಡೆಯಲು ಆಶ್ರಯಿಸಿದ ಗೋಡೆಯೇ ಮೃತ್ಯುವಾಯಿತು ಬೆಂಗಳೂರು: ಬುಧವಾರ ಸಂಜೆ ಸುರಿದ ರಣಮಳೆಯಿಂದಾಗಿ ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಸಂಭವಿಸಿದ ಗೋಡೆ ಕುಸಿತದ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ 7 ಮಂದಿ ದುರ್ಮರಣಕ್ಕೀಡಾಗಿದ್ದು, ಈ ದುರಂತ ಆಡಳಿತ ವ್ಯವಸ್ಥೆಯ ವಿರುದ್ಧ ಜನ ಆಕ್ರೋಶಿತರಾಗುವಂತೆ ಮಾಡಿದೆ. ನಿನ್ನೆ ಸಂಜೆ ನಗರದಾದ್ಯಂತ ದಿಢೀರ್ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಗೋಡೆಯ ಪಕ್ಕದಲ್ಲೇ ಆಶ್ರಯ

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿತ : ಪ್ರವಾಸಕ್ಕೆ ಬಂದವರ ದುರಂತ ಅಂತ್ಯ Read More »

ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದ ಪಶ್ಚಿಮ ಬಂಗಾಳದ ಚುನಾವಣಾ ಸಮೀಕ್ಷೆ

ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾದ ರಾಜ್ಯದಲ್ಲಿ ಈ ಸಲವೂ ನಿರಾಶೆ ಕಾದಿದೆಯೇ? ನವದೆಹಲಿ: ಪಂಚರಾಜ್ಯಗಳ ಚುನಾವಣೆಗಳು ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು 3 ರಾಜ್ಯಗಳಲ್ಲಿ ಯಥಾಸ್ಥಿತಿ ಮುಂದುವರಿಯುವ, ಕೇರಳದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಮರಳುವ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ತುರುಸಿನ ಹೋರಾಟದ ಸುಳಿವು ನೀಡಿವೆ. ಈ ಪೈಕಿ ಎಲ್ಲರಲ್ಲೂ ಭಾರಿ ಕುತೂಹಲ ಹುಟ್ಟಿಸಿರುವುದು ಪಶ್ಚಿಮ ಬಂದಾಳದ ಭವಿಷ್ಯ. ಮಮತಾ ಬ್ಯಾನರ್ಜಿಯ 15 ವರ್ಷಗಳ ಆಡಳಿತವನ್ನು ಕೊನೆಗಾಣಿಸಲು ಬಿಜೆಪಿ ತನ್ನ ಸರ್ವ ಸಾಮರ್ಥ್ಯವನ್ನು ಬಳಸಿ

ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದ ಪಶ್ಚಿಮ ಬಂಗಾಳದ ಚುನಾವಣಾ ಸಮೀಕ್ಷೆ Read More »

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ : ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಾರ್ತಿಕ್ (23) ಎಂಬ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿ ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು Read More »

error: Content is protected !!
Scroll to Top