ರೈತರ ಕುಮ್ಕಿ ಜಮೀನನ್ನು ಗುತ್ತಿಗೆ ನೀಡಲು ಆಕ್ಷೇಪ | ಲೀಸಿಗೆ ಅರ್ಜಿ ಹಾಕುವುದು ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ರೈತರಿಗೆ ಯಂ.ಜಿ.ಸತ್ಯನಾರಾಯಣ ಭಟ್ ಸಲಹೆ.

ಪುತ್ತೂರು: ಕರ್ನಾಟಕ ಸರಕಾರ ಮಾ.12, 2024ರ ಸುತ್ತೋಲೆ ಸಂಖ್ಯೆ ಆರ್‌ಡಿ07 ಎಲ್‌ಜಿಪಿ 2023 ರಂತೆ 30 ವರ್ಷಗಳ ಗೇಣಿ ಮೌಲ್ಯವನ್ನು ಏಕಗಂಟಿನಲ್ಲಿ ಸರಕಾರಕ್ಕೆ ಪಾವತಿ ಮಾಡಿ ಅನುಭವಿಸಬಹುದು ಎಂಬ ವಿಚಾರಕ್ಕೆ ಸಂಬಂಧಿಸಿರುವ ಸುತ್ತೋಲೆ ಬೆಳಕಿಗೆ ಬಂದಿದ್ದು, ಈ ಸುತ್ತೋಲೆಯಿಂದ ರೈತರು ಭಯ ಪಡುವ ಅವಶ್ಯಕತೆಯಿಲ್ಲ.ಕುಮ್ಕಿದಾರರು ದಾಖಲೆಯನ್ನು ಸರಿ ಮಾಡಿ ಇಟ್ಟುಕೊಳ್ಳಿ. ಮೂಲ ದಾಖಲೆಯನ್ನು ಅದಕ್ಕೆ ಸಂಬಂಧಿಸಿ ಇಟ್ಟುಕೊಂಡರೆ ಲೀಸ್ ಅಗತ್ಯವಿಲ್ಲ. ಲೀಸಿಗೆ ಅರ್ಜಿ ಹಾಕುವುದು ಅಕ್ರಮ ಎಂದು ಕುಮ್ಕಿ ಹಕ್ಕು ಹೋರಾಟದ ಸಂಚಾಲಕ ಯಂ.ಜಿ.ಸತ್ಯನಾರಾಯಣ ಭಟ್ ಹೇಳಿದ್ದಾರೆ. […]

ರೈತರ ಕುಮ್ಕಿ ಜಮೀನನ್ನು ಗುತ್ತಿಗೆ ನೀಡಲು ಆಕ್ಷೇಪ | ಲೀಸಿಗೆ ಅರ್ಜಿ ಹಾಕುವುದು ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ರೈತರಿಗೆ ಯಂ.ಜಿ.ಸತ್ಯನಾರಾಯಣ ಭಟ್ ಸಲಹೆ. Read More »

ಶಾಲಾ ಮೈದಾನಗಳಲ್ಲಿ ಹಿಂದೂ ಹಬ್ಬ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ | ಶಿಕ್ಷಣ ಇಲಾಖೆಯಿಂದ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ ?

ಮಂಗಳೂರು: ಶಾಲಾ ಮೈದಾನಗಳಲ್ಲಿ ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆಗೆ ಈ ಬಾರಿ ಬ್ರೇಕ್ ಬೀಳುವ ಸಾಧ್ಯತೆಯಿದ್ದು, ಈ ಕುರಿತು ದ.ಕ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೂಲಕ ಶಿಕ್ಷಣ ಇಲಾಖೆಯ ಸುತ್ತೋಲೆ ಮಂಗಳೂರಿನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಸುತ್ತೋಲೆಯಲ್ಲಿ ಶಾಲೆಗಳನ್ನ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಹೇಳಲಾಗಿದೆ. ಈ ಮೂಲಕ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಖಡಕ್ ಸಂದೇಶವನ್ನ ಸುತ್ತೋಲೆಯ ಮೂಲಕ ಹೊರಡಿಸಲಾಗಿದೆ.

ಶಾಲಾ ಮೈದಾನಗಳಲ್ಲಿ ಹಿಂದೂ ಹಬ್ಬ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ | ಶಿಕ್ಷಣ ಇಲಾಖೆಯಿಂದ ಹೊರಡಿಸಿದ ಸುತ್ತೋಲೆಯಲ್ಲಿ ಏನಿದೆ ? Read More »

ಪಂಜದಲ್ಲಿ ಜನಸಂಪರ್ಕ ಅಭಿಯಾನ ಹಾಗೂ ಬೃಹತ್  ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ

ಪಂಜ: ಪುತ್ತೂರು ಭಾರತೀಯ ಅಂಚೆ ಇಲಾಖೆ ಮತ್ತು ಪಂಜ ಲಯನ್ಸ್‌ ಕ್ಲಬ್ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ಜು. 18 ರಂದು ಪಂಜ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಜರುಗಿತು. ಪಂಜ ನಾಡ ಕಚೇರಿ, ಕಂದಾಯ ನಿರೀಕ್ಷಕ ರಂಜನ್ ಕಲ್ಕುದಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪಂಜ ಲಯನ್ಸ್‌ ಕ್ಲಬ್ ಅಧ್ಯಕ್ಷ ಶಶಿಧರ್ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾದ ಪುತ್ತೂರು ವಿಭಾಗದ ಅಂಚೆ ಹಿರಿಯ ಅಧೀಕ್ಷಕ

ಪಂಜದಲ್ಲಿ ಜನಸಂಪರ್ಕ ಅಭಿಯಾನ ಹಾಗೂ ಬೃಹತ್  ಆಧಾರ್ ನೋಂದಣಿ ಮತ್ತು ತಿದ್ದುಪಡಿ ಅಭಿಯಾನ Read More »

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ | ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸಂಚಾರಕ್ಕೆ ಬದಲಿ ರಸ್ತೆ ಸೂಚನೆ

ಮಾಣಿ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಚಲಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಪೊಲೀಸರು ಮಾಹಿತಿ ನೀಡುತ್ತಿದ್ದಾರೆ. ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ | ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸಂಚಾರಕ್ಕೆ ಬದಲಿ ರಸ್ತೆ ಸೂಚನೆ Read More »

ಬಂಟ್ವಾಳ ಕಾಂಕ್ರಿಟ್ ರಸ್ತೆ ಕುಸಿತ | ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ

ಬಂಟ್ವಾಳ : ಕೊಲ್ನಾಡು ಗ್ರಾಮದ ಸುರಿಬೈಲ್- ಖಂಡಿಗ ರಸ್ತೆಯಲ್ಲಿ ಕಿರು ಸೇತುವೆಯ ತಳ ಭಾಗದಲ್ಲಿ ಅಳವಡಿಸಲಾದ ಮೋರಿ ಕೊಚ್ಚಿ ಹೋಗಿ ಸೇತುವೆಯು ಅಪಾಯಕಾರಿ ಸ್ಥಿತಿಗೆ ತಲುಪಿದೆ. ಸೇತುವೆಯ ಮೇಲೆ ಸಂಚಾರ ನಿಷೇಧಿಸಲಾಗಿದೆ. ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಹಿನ್ನೆಲೆ ಸೇತುವೆಯ ಮೇಲೆ ನಿಂತು, ನದಿ ಪಾತ್ರಗಳಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ನದಿ ಪಾತ್ರಗಳಲ್ಲಿ ನಿಂತು ಫೋಟೋಗ್ರಫಿ, ಸೆಲ್ಸಿ ತೆಗೆಯುವುದನ್ನೂ ನಿಷೇಧಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾ‌ರ್ ತಿಳಿಸಿದ್ದಾರೆ.

ಬಂಟ್ವಾಳ ಕಾಂಕ್ರಿಟ್ ರಸ್ತೆ ಕುಸಿತ | ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ Read More »

ಜು.28: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ  ‘ಕಂಡಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಈಶ್ವರಮಂಗಲ ಒಕ್ಕಲಿಗ ಗೌಡ ಸೇವಾ ಸಂಘ, ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಈಶ್ವರಮಂಗಲ ಇವರ ಸಹಯೋಗದಲ್ಲಿ ಜು. 28 ರಂದು ಈಶ್ವರಮಂಗಲ ಮರಕ್ಕಡ  ಗದ್ದೆಯಲ್ಲಿ ನಡೆಯಲಿದೆ. ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾಕೂಟದೊಂದಿಗೆ “ಕಂಡಡೊಂಜಿ ದಿನ” ಕಾರ್ಯಕ್ರಮ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು. 16 ರಂದು ನಡೆಯಿತು.  ಈ ಸಂದರ್ಭದಲ್ಲಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಈಶ್ವರಮಂಗಲ

ಜು.28: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ  ‘ಕಂಡಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಐರಾವತ ಬಸ್ಸಿಗೆ ಬೆಂಕಿ | ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ತಪ್ಪಿದ ಅನಾಹುತ

ಉಪ್ಪಿನಂಗಡಿ: ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಂದು ಬೆಳಿಗ್ಗೆ ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ನಡೆದಿದೆ. ಬೆಂಕಿ ಹತ್ತಿಕೊಂಡ ತಕ್ಷಣ ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದೆ. ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಯಾದ ಇಸಾಕ್, ಇನ್ಸಾಲ್, ಸ್ಥಳೀಯರಾದ ಜಾಯಿ, ಸ್ನೇಕ್

ಐರಾವತ ಬಸ್ಸಿಗೆ ಬೆಂಕಿ | ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ತಪ್ಪಿದ ಅನಾಹುತ Read More »

ಗುಡ್ಡ ಕುಸಿತ : ಮಣ್ಣಿನಡಿ ಸಿಲುಕಿದ  ಕಾರು

ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಪು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಗುಡ್ಡ ಕುಸಿದ ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗುಡ್ಡ ಕುಸಿತದಿಂದ ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವುಗೊಳಿಸಲಾಗುತ್ತಿದೆ. ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬುಧವಾರ

ಗುಡ್ಡ ಕುಸಿತ : ಮಣ್ಣಿನಡಿ ಸಿಲುಕಿದ  ಕಾರು Read More »

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ

ಪುತ್ತೂರು: ಪ್ರತಿಯೊಂದು ವಿಷಯಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಅಂತಹ ಜ್ಞಾನವನ್ನು ಶಿಕ್ಷಣ ಒದಗಿಸಿಕೊಡುತ್ತದೆ. ಶಿಕ್ಷಣ ಸಂಸ್ಥೆಗಳು ಮೌಖಿಕ ಸಂಗತಿಗಳೊಂದಿಗೆ ಪ್ರಾಯೋಗಿಕ ವಿಚಾರಗಳನ್ನೂ ತಿಳಿಸಿಕೊಟ್ಟಾಗ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವೆನಿಸುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ರಕ್ಷಕ – ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶಭಕ್ತಿಯನ್ನು

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಭೆ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ಇಂದು (ಜು.18) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು (ಜು.18) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ಇಂದು (ಜು.18) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top