ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

ಪುತ್ತೂರು: ತಾಲೂಕಿನ ಕುದ್ದುಪದವು-ತೋರಣಕಟ್ಟೆ-ಸಾಜ ಬಿಳಿಯೂರುಕಟ್ಟೆ ರಸ್ತೆ ಅಭಿವೃದ್ಧಿಗೆ 1.80 ಕೋಟಿ ಅನುದಾನ ಒದಗಿಸಲಾಗಿದ್ದು, ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬಲ್ನಾಡು ಗ್ರಾಮಕ್ಕೆ 17.40 ಕೋಟಿ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗಿದೆ. ಇದೀಗ ಈ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಲಾಗಿದ್ದು, ಶೀಘ್ರ ಸಾರ್ವಜನಿಕರಿಗೆ ಲೋಕಾರ್ಪಣೆಯಾಗಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಪ್ರಸ್ತುತ ಜಗತ್ತು ನಮ್ಮ […]

ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ನಗರದ ಬೊಳುವಾರಿನಲ್ಲಿರುವ ಜಾಗದಲ್ಲಿ ಆಶ್ಲೇಷ ಬಲಿ, ಅರ್ಧ ಏಕಾಹ ಭಜನೆ ಹಾಗೂ ಜನಜಾಗೃತಿ ಸಭೆ ಶುಕ್ರವಾರ ರಾತ್ರಿ ನಡೆಯಿತು. ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಡೆಯಬಾರದು ಎಂಬ ಹೋರಾಟಕ್ಕೆ ಸಂಘಟನೆ ಮೂಲಕ ಯಶಸ್ಸು ಸಿಕ್ಕಿದೆ. ಬೊಳುವಾರಿ ಕುಕ್ಕೆ ಕ್ಷೇತ್ರಕ್ಕೆ ಜಾಗ ದಾನ ಕೊಟ್ಟವರು ಬ್ರಾಹ್ಮಣರು. ಈ ಜಾಗವನ್ನು ಮತ್ತೆ ಸ್ವಾಧೀನ ಪಡೆಯಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಾಗಲಿ,

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ Read More »

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ

ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ನಾಳೆ ಅಂದರೆ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು. ಶ್ರೀ ವಿದ್ಯಾಭೂಷಣ ಅವರ ಗಾಯನ ಕಾರ್ಯಕ್ರಮವನ್ನು ಇದೇ ಸಂದರ್ಭ ಏರ್ಪಡಿಸಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣ ಪಕ್ಕವಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ,

ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ Read More »

ಕೊಯಿಲ ಪಶುವೈದ್ಯಕೀಯ ಕಾಲೇಜು, ಗೋಶಾಲೆ, ಕಡಬ ಆಡಳಿತ ಸೌಧ, ತಾಲೂಕು ಪಂ. ಕಟ್ಟಡ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಸಚಿವ ಅಂಗಾರ

ಕಡಬ: ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದಲ್ಲಿ ಮೂಲಭೂತ ವ್ಯವಸ್ಥೆಗಳನ್ನು ಅಳವಡಿಸಿ ಆಮೂಲಾಗ್ರ ಬದಲಾವಣೆ ಮಾಡಲಾಗಿದ್ದು, ಸಾಕಷ್ಟು  ಅಭಿವೃದ್ಧಿ ಕಾರ್ಯಗಳು ನಡೆದಿವೆ.ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಹಾಗೂ ಗೊಶಾಲೆಯನ್ನು ಲೋಕಾರ್ಪಣೆ ಮಾಡಿ ತಾಲೂಕು ಪಂಚಾಯಿತಿ ಕಟ್ಟಡ ಬಳಿ ನಡೆದ ಸಭೆಯಲ್ಲಿ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತು ವಿತರಣೆ ನೆರವೇರಿಸಿ ಅವರು ಮಾತನಾಡಿದರು. ನಾನು ಶಾಸಕನಾದ ಮೇಲೆ ಇಲ್ಲಿಯ ತನಕ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ

ಕೊಯಿಲ ಪಶುವೈದ್ಯಕೀಯ ಕಾಲೇಜು, ಗೋಶಾಲೆ, ಕಡಬ ಆಡಳಿತ ಸೌಧ, ತಾಲೂಕು ಪಂ. ಕಟ್ಟಡ ಉದ್ಘಾಟನೆ | ಉದ್ಘಾಟನೆ ನೆರವೇರಿಸಿದ ಸಚಿವ ಅಂಗಾರ Read More »

ಎಂ.ಸಂಜೀವ ಶೆಟ್ಟಿ ಸಿಲ್ಸ್ಕ್ & ರೆಡಿಮೇಡ್ಸ್ ನ ನೂತನ ಸಂಸ್ಥೆ ಎಂಎಸ್‌ಎಲ್ ಆಲ್ ಎಕ್ಸ್ ಕ್ಲೂಸಿವ್ ಶುಭಾರಂಭ

ಪುತ್ತೂರು: ಜವುಳಿ ಉದ್ಯಮದಲ್ಲೇ ತನ್ನದೇ ಆದ ಛಾಪು ಮೂಡಿಸಿರುವುದಲ್ಲದೆ ಕಳೆದ ಸುಮಾರು 79 ವರ್ಷಗಳ ಪರಂಪರೆಯನ್ನು ಹೊಂದಿರುವ ಪುತ್ತೂರಿನ ಪ್ರತಿಷ್ಠತ ಜವುಳಿ ಮಳಿಗೆ ಎಂ.ಸಂಜೀವ ಶೆಟ್ಟಿ ಸಿಲ್ಕ್ ರೆಡಿಮೇಡ್ಸ್‌ನವರ ನೂತನ ಶಾಖೆ ಬ್ರಾಂಡೆಡ್ ಡ್ರೆಸ್ಸ್‌ಗಳ ಎಕ್ಸ್‌ಕ್ಲೂಸಿವ್ ಮಳಿಗೆ ಎಂಎಸ್‌ಎಸ್ ಆಲ್ ಎಕ್ಸ್‌ಕ್ಲೂಸಿವ್ ಶುಕ್ರವಾರ ಮುಖ್ಯರಸ್ತೆ ಹಳೆ ಅಂಚೆ ಕಚೇರಿ ಬಳಿ ಶುಭಾರಂಭಗೊಂಡಿತು. ಮಳಿಗೆ ಭೇಟಿ ನೀಡಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಜವುಳಿ ಉದ್ಯಮದಲ್ಲಿ ಮಾದರಿಯಾಗಿದ್ದಾರೆ. ದಾನ, ಧರ್ಮದಲ್ಲಿಯೂ ಸಂಜೀವ ಶೆಟ್ಟಿಯವರು ಎತ್ತಿದ

ಎಂ.ಸಂಜೀವ ಶೆಟ್ಟಿ ಸಿಲ್ಸ್ಕ್ & ರೆಡಿಮೇಡ್ಸ್ ನ ನೂತನ ಸಂಸ್ಥೆ ಎಂಎಸ್‌ಎಲ್ ಆಲ್ ಎಕ್ಸ್ ಕ್ಲೂಸಿವ್ ಶುಭಾರಂಭ Read More »

ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ

ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ – ರಸ್ತೆ ಬದಿ ಗಮನಸೆಳೆಯುತ್ತಿರುವ ಆಮಂತ್ರಣ ಕಾರ್ಕಳ : ತುಳುನಾಡಿನ ಕಾರಣಿಕ ಕ್ಷೇತ್ರ ಐತಿಹಾಸಿಕ ಪ್ರಸಿದ್ಧ ಆದಿ ಆಲಡೆ, ಸಿರಿಕ್ಷೇತ್ರ, ಸಿರಿಗಳ ಮೂಲ ಕ್ಷೇತ್ರ, ನಾಲ್ಕು ಸ್ಥಾನ ನಂದಳಿಕೆ ಹೀಗೆ ನಾನಾ ಹೆಸರುಗಳಿಂದ ಪ್ರಖ್ಯಾತವಾಗಿರುವ ನಂದಳಿಕೆ ಮಹಾಲಿಂಗೇಶ್ವರ ದೇಗುಲದ ಸಿರಿಜಾತ್ರೆಯು ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾಗಿದೆ. ಈ ಬಾರಿ ಎಪ್ರಿಲ್‌ 6ರಂದು ನಂದಳಿಕೆ ಜಾತ್ರೆ ನಡೆಯಲಿದ್ದು, ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ ಎಂಬ ಪರಿಸರ ಜಾಗೃತಿಯುಳ್ಳ ಸಂದೇಶದೊಂದಿಗೆ ಜಾತ್ರೆಯ

ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ Read More »

ಕೆನಡಾದಲ್ಲಿ ಖಲಿಸ್ತಾನಿ ಬೆಂಗಲಿಗರಿಂದ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ

ಕೆನಡಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಖಲಿಸ್ತಾನಿ ಬೆಂಬಲಿಗರು ವಿರೂಪಗೊಳಿಸಿದ್ದಾರೆ. ಇದಲ್ಲದೇ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಬರಹಗಳನ್ನು ಬರೆಯಲಾಗಿದೆ. ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್ ನಗರದ ಸಿಟಿ ಹಾಲ್ ಬಳಿ ಈ ಘಟನೆ ನಡೆದಿದ್ದು 2012ರಿಂದ ಇಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಮಹಾತ್ಮ ಗಾಂಧಿಯವರ ಪ್ರತಿಮೆಯು ಆರು ಅಡಿ ಎತ್ತರವಿದೆ. ಇದನ್ನು ಕಂಚಿನಿಂದ ತಯಾರಿಸಲಾಗಿದ್ದು, ಭಾರತ ಸರ್ಕಾರವು ಈ ಪ್ರತಿಮೆಯನ್ನು ಕೆನಡಾಕ್ಕೆ ಉಡುಗೊರೆಯಾಗಿ ನೀಡಿತ್ತು. ವಿಗ್ರಹದ ಸುತ್ತಲೂ ಬಣ್ಣ ಎರಚಲಾಗಿದೆ. ಮಹಾತ್ಮ ಗಾಂಧಿಯವರ ಈ ಪ್ರತಿಮೆಯಲ್ಲಿ

ಕೆನಡಾದಲ್ಲಿ ಖಲಿಸ್ತಾನಿ ಬೆಂಗಲಿಗರಿಂದ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ Read More »

ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ

ಬೆಂಗಳೂರು : ಮಾ.25 ರಂದು ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ ನಗರದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ, ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲು ಹೆಲಿಕಾಪ್ಟರ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ ಎಂದು ಸರ್ಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ. ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮತ್ತು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಮೋದಿ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ನಂತರ

ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ Read More »

ನೆಲ್ಲಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ

ಪುತ್ತೂರು: ಪುತ್ತೂರು ರೋಟರಿ ಕ್ಲಬ್ ಪುತ್ತೂರು ಸಿಟಿ  ಚರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ನೆಲ್ಲಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ರೋಟರಿ ಸಂಘಟನೆ ಉತ್ತಮ  ನಿರ್ಧಾರ ತೆಗೆದುಕೊಂಡು ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಿ ಇತಿಹಾಸ ನಿರ್ಮಿಸಲು ಹೊರಟ್ಟಿದಾರೆ. ಮಕ್ಕಳ ಆರೋಗ್ಯದ ಕಾಳಜಿ ಜತೆ ಸರಕಾರಿ ಶಾಲೆಯ ಉಳಿಸುವ ನಿಟ್ಟಿನಲ್ಲಿ ವಿಗೆ 5 ಕೋಟಿ ವೆಚ್ಚದಲ್ಲಿ 111

ನೆಲ್ಲಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕುಡಿಯುವ ನೀರಿನ ಘಟಕ ಉದ್ಘಾಟನೆ Read More »

ಅಂದು ವೀರಾವೇಶದಿಂದ ಹರಿದೆಸೆದ ಸುಗ್ರೀವಾಜ್ಞೆಯೇ ಇಂದು ಸಂಸತ್‌ ಸದಸ್ಯತ್ವಕ್ಕೆ ಕುತ್ತು ತಂದಿತು

ದೆಹಲಿ : ಮೋದಿ ಕುಲನಾಮ ಹೊಂದಿರುವವರೆಲ್ಲ ಕಳ್ಳರು ಎಂಬರ್ಥ ಬರುವಂತೆ ಮಾಡಿದ ಭಾಷಣ ಕೊನೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತನಕ್ಕೆ ಕುತ್ತು ತಂದಿದೆ. ವಿಶೇಷ ಎಂದರೆ ಕ್ರಿಮಿನಲ್‌ ಪ್ರಕರಣದಲ್ಲಿ ಶಿಕ್ಷೆಯಾದ ಸಂಸದರ ಸದಸ್ಯತ್ವ ತಕ್ಷಣ ರದ್ದುಗೊಳಿಸಬೇಕೆಂಬ ಕೇಂದ್ರ ಸರಕಾರದ ಒಂದು ಸುಗ್ರೀವಾಜ್ಞೆಯನ್ನು ಪ್ರತಿಭಟಿಸಿ ರಾಹುಲ್‌ ಗಾಂಧಿ ಅದರ ಪ್ರತಿಯನ್ನು ಪತ್ರಿಕಾಗೋಷ್ಠಿಯಲ್ಲಿ ಹರಿದೆಸೆದು ವೀರಾವೇಶ ಪ್ರದರ್ಶಿಸಿದ್ದರು. ಆಗ ಕಾಂಗ್ರೆಸಿನ ಯುವರಾಜನಾಗಿ ಕಂಗೊಳಿಸುತ್ತಿದ್ದ ರಾಹುಲ್‌ ಗಾಂಧಿಯ ಪತ್ರಿಕಾಗೋಷ್ಠಿಯ ಈ ವೀರಾವೇಶ ಆ ದಿನಗಳಲ್ಲಿ ಭಾರಿ ಸುದ್ದಿಯಾಗಿತ್ತು. ದೇಶವಿಡೀ

ಅಂದು ವೀರಾವೇಶದಿಂದ ಹರಿದೆಸೆದ ಸುಗ್ರೀವಾಜ್ಞೆಯೇ ಇಂದು ಸಂಸತ್‌ ಸದಸ್ಯತ್ವಕ್ಕೆ ಕುತ್ತು ತಂದಿತು Read More »

error: Content is protected !!
Scroll to Top