ಸವಣೂರಿನಲ್ಲಿ ವಿದ್ಯಾರಶ್ಮಿ ಹೊಟೇಲ್ ಶುಭಾರಂಭ

ಪುತ್ತೂರು: ಸವಣೂರು ಪದ್ಮಾಂಭಾ ಪೆಟ್ರೋಲ್‌ ಪಂಪ್‌ ಹತ್ತಿರ ವಿದ್ಯಾರಶ್ಮಿ ಕ್ಯಾಂಟೀನ್ (ಮಾಂಸಾಹಾರಿ ಮತ್ತು ಸಸ್ಯಹಾರಿ ಊಟ ಹಾಗೂ ಉಪಹಾರ) ಜು. 9 ರಂದು ಹೊಸ ಆಡಳಿತದೊಂದಿಗೆ ಶುಭಾರಂಭಗೊಂಡಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಯವರು ದೀಪ ಬೆಳಗಿಸಿ, ವಿದ್ಯಾರಶ್ಮಿ ಕ್ಯಾಂಟೀನ್‌ ನ್ನು ಉದ್ಘಾಟಿಸಿ, ಶುಭಕೋರಿದರು. ಅರ್ಚಕ ಶಿವ ಭಟ್ ಸಾಮಗಾನರವರು ಪೂಜಾ ವಿಧಿವಿಧಾನವನ್ನು ನಡೆಸಿಕೊಟ್ಟರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಸಂಸ್ಥೆಯ […]

ಸವಣೂರಿನಲ್ಲಿ ವಿದ್ಯಾರಶ್ಮಿ ಹೊಟೇಲ್ ಶುಭಾರಂಭ Read More »

ಕೆರೆಗೆ ಬಿದ್ದು ಮಹಿಳೆ ಮೃತ್ಯು

ಪೆರಾಬೆ: ಹುಲ್ಲು ತರಲೆಂದು ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಜು.8ರಂದು ಬೆಳಿಗ್ಗೆ ನಡೆದಿದೆ. ಕಡಬ ತಾಲೂಕು ಪೆರಾಬೆ ಗ್ರಾಮದ ಬಲಂಪೋಡಿ ನಿವಾಸಿ ಉಮೇಶ್ ರೈ ಅವರ ಪತ್ನಿ ಶಶಿಕಲಾ(58) ಮೃತಪಟ್ಟವರು. ಉಮೇಶ್ ರೈ- ಶಶಿಕಲಾ ದಂಪತಿಯ ಪುತ್ರಿಯನ್ನು ವಿವಾಹ ಮಾಡಿಕೊಡಲಾಗಿದ್ದು ಪುತ್ರ ಕೃತನ್ ರೈ ತೆಲಂಗಾಣದಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಉಮೇಶ್ ರೈ ಹಾಗೂ ಶಶಿಕಲಾ ದಂಪತಿ ಮಾತ್ರ ಮನೆಯಲ್ಲಿದ್ದು ಜು.8ರಂದು ಬೆಳಿಗ್ಗೆ 6 ಗಂಟೆಗೆ ಎದ್ದು ಎಂದಿನಂತೆ

ಕೆರೆಗೆ ಬಿದ್ದು ಮಹಿಳೆ ಮೃತ್ಯು Read More »

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹರ್ಯಾಣ ಮೆಹನುವಾಡ್ ಜಿಲ್ಲೆಯ ನಂಗಲ್‌ ಮವರಿಪುರ್ ನಿವಾಸಿ, ಮಹಮ್ಮದ್ ನಾಸೀ‌ರ್ ಬಂಧಿತ ಆರೋಪಿ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ರವಿ.ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಜಂಬೂರಾಜ್ ಮಹಾಜನ್ ರವರ ಮಾರ್ಗದರ್ಶನದಲ್ಲಿ ಎ.ಎಸ್.ಐ ಪರಮೇಶ್ವ‌ರ್ ಕೆ, ಹೆಚ್.ಸಿ ಮಧು ಕೆ ಎನ್, ಪಿ.ಸಿ ಮಂಜುನಾಥ್‌ ರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ 5.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ವೈಟ್ ಲಿಫ್ಟಿಂಗ್ ಸ್ಪರ್ಧೆ : ನರೇಂದ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸಿಂಚನಾ ಬಿ. 5ನೇ ಸ್ಥಾನ

ಪುತ್ತೂರು: ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ವೈಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಿಂಚನಾ ಬಿ. ಐದನೇ ಸ್ಥಾನ ಪಡೆದಿದ್ದಾರೆ. ಮಧ್ಯಪ್ರದೇಶದ ಇಂದೋರ್ ನ ಶ್ರೀರಾಮ್ ಜಿಮ್ನಾಸಿಯಮ್ ನಲ್ಲಿ 5 ದಿನಗಳ ಕಾಲ ನಡೆದ ಎಎಸ್ ಎಂಐಟಿಎ ಖೇಲೋ ಇಂಡಿಯಾ ಮಹಿಳೆಯರ ಯೂತ್ ವಿಭಾಗದ 76 ಕೆಜಿ  ವೈಟ್‌ ಲಿಫ್ಟಿಂಗ್ ಝೋನಲ್ ಲೀಗ್ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಬಿ. ಭಾಗವಹಿಸಿ ಐದನೇ ಸ್ಥಾನವನ್ನು ಪಡೆದಿರುತ್ತಾರೆ. ಇವರು ಬೆಟ್ಟಂಪಾಡಿಯ

ವೈಟ್ ಲಿಫ್ಟಿಂಗ್ ಸ್ಪರ್ಧೆ : ನರೇಂದ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸಿಂಚನಾ ಬಿ. 5ನೇ ಸ್ಥಾನ Read More »

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ  ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಸೇರಿದಂತೆ ಮೀನುಗಾರರು ನದಿ ತೀರಕ್ಕೆ ತೆರಳುವುದು, ಮೀನುಗಾರಿಕೆ ಮಾಡುವುದು ನಿಷೇಧಿಸಲಾಗಿದೆ.

ಭಾರೀ ಮಳೆ : ನಾಳೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

ಭಾರೀ ಮಳೆ : ನಾಳೆ ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ಉಡುಪಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಸೇರಿದಂತೆ ಮೀನುಗಾರರು ನದಿ ತೀರಕ್ಕೆ ತೆರಳುವುದು, ಮೀನುಗಾರಿಕೆ ಮಾಡುವುದು ನಿಷೇಧಿಸಲಾಗಿದೆ.

ಭಾರೀ ಮಳೆ : ನಾಳೆ ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

ಗುಮ್ಮಟಗದ್ದೆಗೆ ನಾಳೆಯಿಂದ ಬಸ್ ಸೇವೆ ಆರಂಭ : ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಪುತ್ತೂರಿನಿಂದ ಪರ್ಲಡ್ಕ- ವಳತ್ತಡ್ಕ, ಮಾರ್ಗವಾಗಿ ಗುಮ್ಮಟಗದ್ದೆಗೆ ನಾಳೆಯಿಂದ ಸರಕಾರಿ ಬಸ್ ಸೇವೆ ಆರಂಭವಾಗಲಿದೆ. ಚೆಲ್ಯಡ್ಕ ಸೇತುವೆ ಮುಳುಗಡೆ ಮತ್ತು ಅಪಾಯಕಾರಿಯಾಗಿದೆ ಎಂದು ಕಳೆದ ವಾರದ ಹಿಂದೆ ಈ ಮಾರ್ಗದ ಬಸ್ ಸೇವೆಯನ್ನು ಜಿಲ್ಲಾಧಿಕಾರಿ ರದ್ದು ಮಾಡಿದ್ದರು. ಈ ಬಗ್ಗೆ ಸ್ಥಳೀಯರು ರಸ್ತೆ ಸಂಚಾರಕ್ಕೆ ಮುಕ್ತಗೊಳಿಸುವಂತೆ ಶಾಸಕ ಅಶೋಕ್ ರೈ ಅವರಲ್ಲಿ‌ಮನವಿ ಮಾಡಿದ್ದರು. ಬಸ್‌ ಇಲ್ಲದೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದನ್ನು ‌ಗಮನಿಸಿಸ ಶಾಸಕರು ಬಸ್ ಸೇವೆ ಆರಂಬಿಸುವಂತೆ ‌ಸೂಚನೆ ನೀಡಿದ್ದರು.‌ಅದರಂತೆ ನಾಳೆಯಿಂದ ಬಸ್ ಸೇವೆ ಆರಂಭವಾಗಲಿದೆ .

ಗುಮ್ಮಟಗದ್ದೆಗೆ ನಾಳೆಯಿಂದ ಬಸ್ ಸೇವೆ ಆರಂಭ : ಶಾಸಕ ಅಶೋಕ್ ರೈ ಸೂಚನೆ Read More »

ಸಾಮೆತ್ತಡ್ಕ ಶಾಲೆಯಲ್ಲಿ ಪೋಕ್ಸೋ ಕಾಯ್ದೆ ಅರಿವು ಕಾರ್ಯಕ್ರಮ

ಪುತ್ತೂರು: ನಗರದ ಸಾಮೆತ್ತಡ್ಕ ಶಾಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಮಕ್ಕಳಿಗೆ ಅರಿವು ಕಾರ್ಯಕ್ರಮ ‘ನಾವು ಮನುಜರು’ ಹಾಗೂ ‘ಉಪಲಾಷಿತ ಯೋಜನೆ’ ಯ ಅನುಷ್ಠಾನ ಕಾರ್ಯಕ್ರಮ ಇಂದು ನಡೆಯಿತು. ಇಲಾಖೆಯ ನಿರ್ದೇಶನದಂತೆ ‘ನಮ್ಮ ಶಾಲೆ’ ಸ. ಹಿ. ಪ್ರಾ. ಶಾಲೆ ಸಾಮೆತ್ತಡ್ಕದಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು. ಪುತ್ತೂರು ನಗರ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಕಾರ್ಯಕ್ರಮವನ್ನು ನಡೆಸಿಕೊಟ್ಟು ಪೋಕ್ಸೋ ಕಾಯ್ದೆಯ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕಿ ಮರಿಯಾ ಅಶ್ರಫ್ ಉಪಸ್ಥಿತರಿದ್ದರು.

ಸಾಮೆತ್ತಡ್ಕ ಶಾಲೆಯಲ್ಲಿ ಪೋಕ್ಸೋ ಕಾಯ್ದೆ ಅರಿವು ಕಾರ್ಯಕ್ರಮ Read More »

ಕೇರಳದಲ್ಲಿ ಮೆದುಳು ತಿನ್ನುವ ಸೋಂಕು l ಮುಂಜಾಗೃತಾ ಕ್ರಮವಾಗಿ ದ.ಕ.ದಲ್ಲಿ ಹೈ ಅಲರ್ಟ್

ಮಂಗಳೂರು: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ನೇಗ್ಲೇರಿಯಾ ಪೌಲೇರಿ ಹೆಸರಿನ ಅಪರೂಪ, ಅಪಾಯಕಾರಿ ಸೂಕ್ಷ್ಮಾಣು ಜೀವಿ ಮೆದುಳು ತಿನ್ನುವ ಅಮೀಬಾ ಆಗಿದೆ. ಮಳೆ ನೀರು, ಕಲುಷಿತ ನೀರಿನ ಹೊಂಡಗಳಲ್ಲಿ ಈಜುವಾಗ ಎಚ್ಚರವಹಿಸುವ ಅಗತ್ಯವಿದೆ. ಕಲುಷಿತ ನೀರಿನಲ್ಲಿ ಈಜುವಾಗ ಈ

ಕೇರಳದಲ್ಲಿ ಮೆದುಳು ತಿನ್ನುವ ಸೋಂಕು l ಮುಂಜಾಗೃತಾ ಕ್ರಮವಾಗಿ ದ.ಕ.ದಲ್ಲಿ ಹೈ ಅಲರ್ಟ್ Read More »

ಕಾಣಿಯೂರು ದಿ ಪವರ್ ಪ್ಲಸ್ ಸಂಸ್ಥೆಯ ರಾಧಾಕೃಷ್ಣ ಗೌಡರಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನಿಂದ ಸೇವಾ ರತ್ನ ಪ್ರಶಸ್ತಿ

ಕಡಬ : ತಾಲೂಕಿನ ಕಾಣಿಯೂರು ಏಲಡ್ಕ ರಜತ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ದಿ ಪವರ್ ಪ್ಲಸ್ ಸೋಲಾರ್ ಸಂಸ್ಥೆಯ ರಾಧಾಕೃಷ್ಣ ಗೌಡರಿಗೆ ಮ್ಯಾಕ್ಸ್ ಲೈಫ್‍ ಇನ್ಸೂರೆನ್ಸ್ ನಿಂದ ಸೇವಾ ರತ್ನ ನೀಡಿ ಪುರಸ್ಕರಿಸಲಾಗಿದೆ. ಜು.5 ರಂದು ಮಂಗಳೂರು ರೀಜನಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮ್ಯಾಕ್ಸ್ ಲೈಫ್‍ ಇನ್ಸೂರೆನ್ಸ್ ಮ್ಯಾನೇಜರ್ ಪೂಜಿತ್, ಜಗದೀಶ್‍ ಬೆಳ್ಳಾರೆ, ತಾರನಾಥ ಪುತ್ತೂರು ಉಪಸ್ಥಿತರಿದ್ದರು.

ಕಾಣಿಯೂರು ದಿ ಪವರ್ ಪ್ಲಸ್ ಸಂಸ್ಥೆಯ ರಾಧಾಕೃಷ್ಣ ಗೌಡರಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನಿಂದ ಸೇವಾ ರತ್ನ ಪ್ರಶಸ್ತಿ Read More »

error: Content is protected !!
Scroll to Top