ಯುವಕ ವಿಶ್ವನಾಥ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಂಜಳದಿಂದ ವರದಿಯಾಗಿದೆ. ವಿಶ್ವನಾಥ ಅಲಿಯಾಸ್ ವೇಣು (32) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವಿಶ್ವನಾಥ ಮನೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ತಂದೆ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕ ವಿಶ್ವನಾಥ ನೇಣು ಬಿಗಿದು ಆತ್ಮಹತ್ಯೆ Read More »










