ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆ 2ನೇ ವರ್ಷಕ್ಕೆ ಪಾದಾರ್ಪಣೆ |  ಗಣಹೋಮ, ಲಕ್ಷ್ಮೀಪೂಜೆ

ಬೆಳ್ಳಾರೆ: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆ ಒಂದು ವರ್ಷ ಯಶಸ್ವಿಯಾಗಿ ಪೂರೈಸಿ 2 ನೇ ವರ್ಷಕ್ಕೆ ಇಂದು ಪಾದಾರ್ಪಣೆ ಮಾಡಿತು. ಇದರ ಅಂಗವಾಗಿ ಬೆಳಿಗ್ಗೆ ಕಚೇರಿಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ಪ್ರವೀಣ್ ಕುಂಟ್ಯಾನ, ಸಲಹಾ ಸಮಿತಿ ಅಧ್ಯಕ್ಷ ಸತೀಶ್ ಪಾಂಬಾರು, ಉಪಾಧ್ಯಕ್ಷ ಲೋಕೇಶ್ ಚಾಕೋಟೆ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀಧರ ಕಣಜಾಲು, ಸಲಹಾ ಸಮಿತಿ ಸದಸ್ಯರುಗಳಾದ ನಾರಾಯಣ ಗೌಡ […]

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಬೆಳ್ಳಾರೆ ಶಾಖೆ 2ನೇ ವರ್ಷಕ್ಕೆ ಪಾದಾರ್ಪಣೆ |  ಗಣಹೋಮ, ಲಕ್ಷ್ಮೀಪೂಜೆ Read More »

ವನಮಹೋತ್ಸವ ಒಂದು ದಿನಕ್ಕೆ ಸೀಮಿತವಾಗಿರಬಾರದು | ಎ.ವಿ.ಜಿ. ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಟಿ.ಜಿ.ಗೌಡ

ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವು ನಡೆಯಿತು. ನಿವೃತ್ತ ಬ್ಯಾಂಕ್ ಮ್ಯಾನೇಜರ್ ಟಿ. ಜಿ. ಗೌಡ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಎಳವೆಯಿಂದಲೇ ಪರಿಸರದ ಪ್ರಜ್ಞೆ ಮೂಡಿ ಬರಬೇಕು, ಇದು ಕೇವಲ ಶಾಲೆಗಳಲ್ಲಿ ನಡೆಯುವ ಒಂದು ದಿನದ ವನಮಹೋತ್ಸವಕ್ಕೆ ಸೀಮಿತವಾಗಿರದೆ ನಮ್ಮ ದಿನನಿತ್ಯದ ಬದುಕಿನಲ್ಲಿ ಹಾಸು ಹೊಕ್ಕಾಗಿರಬೇಕು ಎಂದು ಹೇಳಿದರು. ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರದ ಬಗ್ಗೆ ಎಚ್ಚೆತ್ತುಕೊಳ್ಳೋಣ

ವನಮಹೋತ್ಸವ ಒಂದು ದಿನಕ್ಕೆ ಸೀಮಿತವಾಗಿರಬಾರದು | ಎ.ವಿ.ಜಿ. ಶಾಲೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಟಿ.ಜಿ.ಗೌಡ Read More »

ಪಂಜ ಸರಕಾರಿ ಕಾಲೇಜಿನಲ್ಲಿ ಕಳ್ಳತನ l ವಿದ್ಯುತ್ ಫ್ಯೂಸ್, ನೆಟ್ ಕೇಬಲ್ ಹೊತ್ತೊಯ್ದ ಕಳ್ಳರು

ಪಂಜ : ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅಪರಿಚಿತರು ಸೊತ್ತುಗಳನ್ನು ಹಾನಿಗೈದು ಎರಡು ದಿನ ಪ್ರತ್ಯೇಕವಾಗಿ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಜು.4 ರಂದು ರಾತ್ರಿ ಕಾಲೇಜಿನಲ್ಲಿ ಕಳ್ಳತನ, ಕಿಟಕಿ ಗಾಜು ಒಡೆದ ಪ್ರಕರಣ ನಡೆದಿತ್ತು. ಜು.5 ರಂದು ರಾತ್ರಿ ಮತ್ತೆ ಕಳ್ಳರು ಕಾಲೇಜು ಕೊಠಾಡಿ ಬಾಗಿಲಿನ ಹಲಗೆ ಮುರಿದಿರುವುದು ಹೊಸದಾಗಿ ಹಾಕಿದ ಪ್ಯೂಸ್ ಕದ್ದಿರುವುದು ಬೆಳಕಿಗೆ ಬಂದಿದೆ. ಪಿ.ಯು.ಕಾಲೇಜಿನಲ್ಲಿ ಕಿಟಕಿ ಗಾಜು ಒಡೆದಿದ್ದು ಮತ್ತು ಅಲ್ಲೇ ಸಮೀಪದಲ್ಲಿರುವ ಹೈಸ್ಕೂಲ್ ಕಟ್ಟದಲ್ಲಿರುವ ಸುಮಾರು 9 ವಿದ್ಯುತ್ ಪ್ಯೂಸ್, ಇಂಟರ್ನೆಟ್

ಪಂಜ ಸರಕಾರಿ ಕಾಲೇಜಿನಲ್ಲಿ ಕಳ್ಳತನ l ವಿದ್ಯುತ್ ಫ್ಯೂಸ್, ನೆಟ್ ಕೇಬಲ್ ಹೊತ್ತೊಯ್ದ ಕಳ್ಳರು Read More »

ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ l 12 ಗಂಟೆಗಳ ಕಾಲ ವಿಮಾನದಲ್ಲಿ ಬಾಕಿಯಾದ ಪ್ರಯಾಣಿಕರು

ಬೆಂಗಳೂರು : ದೆಹಲಿಯಿಂದ ಬೆಂಗಳೂರಿಗೆ ಹಾರಬೇಕಿದ್ದ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ಸಿಬ್ಬಂದಿ ಎಡವಟ್ಟಿನಿಂದಾಗಿ ಪ್ರಯಾಣಿಕರು 12 ಗಂಟೆಗಳ ಕಾಲ ವಿಮಾನದಲ್ಲೇ ಲಾಕ್ ಆಗಿ ಪರದಾಡಿದ ಘಟನೆಯೊಂದು ವರದಿಯಾಗಿದೆ. ನಿನ್ನೆ ಸಂಜೆ ದೆಹಲಿಯಿಂದ ಬೆಂಗಳೂರಿಗೆ ಹೋಗುವ SG 8151ನ ಸ್ಪೈಸ್​​​ಜೆಟ್ ಏರ್​​​​​ಲೈನ್ಸ್ ವಿಮಾನವನ್ನು ಏರಿದ ಸುಮಾರು 60 ಪ್ರಯಾಣಿಕರು ಸತತ 12 ಗಂಟೆಗಳಿಗೂ ಅಧಿಕ ಕಾಲ ವಿಮಾನದೊಳಗೆ ಲಾಕ್ ಆಗಿ ಪರದಾಡಿದ್ದಾರೆ. ತಾಂತ್ರಿಕ ದೋಷ ಎಂದು ನಿನ್ನೆ ಸಂಜೆಯಿಂದ ಬೆಳಗ್ಗೆ ವರೆಗೂ ದೆಹಲಿ ಏರ್ಪೋಟ್​ನಲ್ಲೆ ಫ್ಲೈಟ್ ನಿಲ್ಲಿಸಲಾಗಿದ್ದು ಪ್ರಯಾಣಿಕರನ್ನು ಹೊರಗೆ

ಏರ್​​​​​ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ l 12 ಗಂಟೆಗಳ ಕಾಲ ವಿಮಾನದಲ್ಲಿ ಬಾಕಿಯಾದ ಪ್ರಯಾಣಿಕರು Read More »

ಮಾನಸಿಕ ಖಿನ್ನತೆಗೆ ಅಗ್ನಿವೀರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಆಗ್ರಾ : ಉತ್ತರ ಪ್ರದೇಶದ ಆಗ್ರಾ ವಾಯುನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 22 ವರ್ಷದ ‘ಅಗ್ನಿವೀರ’ ಶ್ರೀಕಾಂತ್ ಕುಮಾ‌ರ್ ಚೌಧರಿ ರೈಫಲ್‌ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಮೃತ ಅಗ್ನಿವೀರ ಶ್ರೀಕಾಂತ್ ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯವರೆಂದು ಗುರುತಿಸಲಾಗಿದೆ. ರಜೆ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದ ಶ್ರೀಕಾಂತ್, ಅದೇ ಒತ್ತಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. “ಶ್ರೀಕಾಂತ್ ಅವರ ಸಾವಿನ ನಿಖರ ಕಾರಣ ತಿಳಿಯಲು ಆಂತರಿಕ ತನಿಖೆಗೆ ಸಮಿತಿ ರಚಿಸಲಾಗಿದೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ,” ಎಂದು

ಮಾನಸಿಕ ಖಿನ್ನತೆಗೆ ಅಗ್ನಿವೀರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ Read More »

ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಪೋಷಕರ ಸಭೆ

ಪುತ್ತೂರು : ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪೋಷಕರ ಸಭೆಯು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದರು. ಶಾಲೆಯ ಶೈಕ್ಷಣಿಕ ವಿಚಾರಗಳ ಬಗ್ಗೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ ಮಾತನಾಡಿ, ಬೆಳೆಯುತ್ತಿರುವ ಎವಿಜಿ ಶಾಲೆಯಲ್ಲಿ ಈ ವರ್ಷ ಶಾಲಾ ಕೊಠಡಿ, ಆಟದ ಮೈದಾನ, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಶೌಚಾಲಯ, ಕಂಪ್ಯೂಟರ್ ಹಾಗೂ ಲೈಬ್ರರಿ ಕೊಠಡಿಗಳು ನಿರ್ಮಾಣವಾಗಿದ್ದು ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಎರಡು ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಶಾಲೆಯ ಬೆಳವಣಿಗೆಯಲ್ಲಿ

ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಪೋಷಕರ ಸಭೆ Read More »

ಡಾ.ಪ್ರಭಾಕರ ಭಟ್ ಕಲ್ಲಡ್ಕರಿಂದ ಗೌರವ ಡಾಕ್ಟರೇಟ್ ಪದವಿ ನಿರಾಕರಣೆ | ಕಾರಣವೇನು ? ಇಲ್ಲಿದೆ ಡಿಟೈಲ್ಸ್

ಮಂಗಳೂರು : ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ವಿವಿ ನೀಡಲು ಉದ್ದೇಶಿಸಿದ್ದ ಗೌರವ ಡಾಕ್ಟರೇಟ್‌ನ್ನು ಸ್ವೀಕರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ಹಾಗೂ ಶಿಕ್ಷಣ, ಸಾಮಾಜಿಕ ಮತ್ತು ಧಾರ್ಮಿಕ ರಂಗಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ನಿರಾಕರಿಸಿದ್ದಾರೆ. ತಾನೊಬ್ಬ ಸಾಮಾನ್ಯ ಸ್ವಯಂಸೇವಕನಾಗಿದ್ದು, ಪಟ್ಟಿಯಿಂದ ತಮ್ಮ ಹೆಸರನ್ನು ಕೈ ಬಿಡಬೇಕೆಂದು ವಿನೀತನಾಗಿ ಕೇಳಿಕೊಳ್ಳುವುದಾಗಿ ಅವರು ವಿಶ್ವವಿದ್ಯಾಲಯದ ಕುಲಪತಿ ನರಸಿಂಹ ಮೂರ್ತಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ನನ್ನಂತಹ ಸರ್ವ ಸಾಮಾನ್ಯ ವ್ಯಕ್ತಿಯನ್ನು ಅತ್ಯಂತ ದೊಡ್ಡ ಅಂತಾರಾಷ್ಟ್ರೀಯ

ಡಾ.ಪ್ರಭಾಕರ ಭಟ್ ಕಲ್ಲಡ್ಕರಿಂದ ಗೌರವ ಡಾಕ್ಟರೇಟ್ ಪದವಿ ನಿರಾಕರಣೆ | ಕಾರಣವೇನು ? ಇಲ್ಲಿದೆ ಡಿಟೈಲ್ಸ್ Read More »

ನರೇಂದ್ರ ಕಾಲೇಜು ವಿದ್ಯಾರ್ಥಿಗಳಿಂದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಪುತ್ತೂರು: ಸ್ವಚ್ಛತೆ ಎಂಬುದು ಭಾರತೀಯ ಸಂಸ್ಕೃತಿಯ ಒಂದು ಅಂಗವಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಇಡೀ ದೇಶವೇ ಮತ್ತೊಮ್ಮೆ ಸ್ಪೂರ್ತಿ ಪಡೆದುಕೊಂಡು ದೇಶ ಸ್ವಚ್ಛತೆಯತ್ತ ಕಾಲಿಡುತ್ತಿದೆ ಎಂದು ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣು ಸೇವಾ ಸಮಿತಿ ಅಧ್ಯಕ್ಷ ಮಧು ನರಿಯೂರು ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯದ ಸಂದರ್ಭ ಅವರು ಮಾತನಾಡಿದರು. ಕುರಿಯ ಉಳ್ಳಾಲ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಮಹಾವಿಷ್ಣು

ನರೇಂದ್ರ ಕಾಲೇಜು ವಿದ್ಯಾರ್ಥಿಗಳಿಂದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ Read More »

ಭಾರೀ ಮಳೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ

ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ಇಂದು ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ಕುರಿತು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ. ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ;ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಮಳೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್‍ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಗ್ಗು ಪ್ರದೇಶವಾದ ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಹೋಗದಂತೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ Read More »

ಎಣ್ಮೂರು ಕೋಟಿ ಚೆನ್ನಯ ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃತದೇಹ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ಬಂಟ್ವಾಳ ಸಮೀಪ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಕುಕ್ಕಿಪಾಡಿ ಗ್ರಾಮದ ರಿಕ್ಷಾಚಾಲಕ ಗಿರೀಶ್ ಎಂಬವರು ಕಾಣೆಯಾಗಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗಿರೀಶ್ ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದರು. ಬುಧವಾರ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಪೊಳಲಿ ಗುರುಪುರ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ ರಿಕ್ಷಾದಲ್ಲಿ ಯಾರೂ ಇಲ್ಲದೇ

ಎಣ್ಮೂರು ಕೋಟಿ ಚೆನ್ನಯ ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃತದೇಹ ಪತ್ತೆ Read More »

error: Content is protected !!
Scroll to Top