ದ..ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆ | ದ.ಕ. ಕ್ಕೆ ಯತೀಶ್ ಎನ್. | 25 ಮಂದಿಯನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ

ಪುತ್ತೂರು: ರಾಜ್ಯ ಸರಕಾರ 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾತ್ರೋ ರಾತ್ರಿ ಈ ಕ್ರಮ ಕೈಗೊಂಡಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್. ಅವರನ್ನು ನೇಮಕ ಮಾಡಲಾಗಿದೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್ ವರ್ಗಾವಣೆಯಾಗಿದ್ದಾರೆ. ವರ್ಗಾವಣೆಗೊಂಡ 25 ಮಂದಿ ಐಪಿಎಸ್ ಅಧಿಕಾರಿ ವಿವರ ಈ ಕೆಳಗಿನಂತಿದೆ. ಲಾಬೂರಾಮ್ : ಐಜಿಪಿ ಕೇಂದ್ರ ವಲಯ, […]

ದ..ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆ | ದ.ಕ. ಕ್ಕೆ ಯತೀಶ್ ಎನ್. | 25 ಮಂದಿಯನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ Read More »

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರವಾರ ಜಿಲ್ಲೆಗೆ ವರ್ಗಾವಣೆ

ಕಡಬ: ಕ್ಯೊಲ ಪಶುಸಂಗೋಪನೆ ಇಲಾಖೆಯ  ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಅಧಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಗೌಡ ಕೆ.ಇ. ಕೆಮ್ಮಾಯಿ  ಅವರಿಗೆ ಕಾರವಾರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ ಪಶುಪಾಲನೆ  ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ಸಹಾಯಕ ಆಡಳಿತ ಅಧಿಕಾರಿಯಾಗಿ  ಮುಂಬಡ್ತಿಯಾಗಿ ವರ್ಗಾವಣೆಗೊಂಡಿದ್ದಾರೆ. ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಕಛೇರಿ ಮಂಗಳೂರು ಇಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ  ಅಲ್ಲಿಂದ ಪದನ್ನೋತಿ ಗೊಂಡು  ಜಾನುವಾರು ಸಂವರ್ಧನಾ ಹಾಗೂ ತರಬೇತಿ ಕೇಂದ್ರ ಕ್ಯೊಲ ಇಲ್ಲಿ ಕಳೆದ 9

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರವಾರ ಜಿಲ್ಲೆಗೆ ವರ್ಗಾವಣೆ Read More »

ಪ್ರಗತಿಪರ ಕೃಷಿಕ ಅವಿನಾಶ್ ಕೊಡಂಕಿರಿ ಅವರಿಗೆ ‘ಅರಣ್ಯ ಮಿತ್ರ’ ಪ್ರಶಸ್ತಿ | ಕಾಡು ಮಾವು ಹಣ್ಣು, ಗಿಡಗಳ ರಕ್ಷಣೆಗೆ ಒಲಿಯಿತು ಪ್ರಶಸ್ತಿ

ಪುತ್ತೂರು: ಪರಿಸರ, ವನಸಂರಕ್ಷಣೆ ಹಾಗೂ ನೀರಿಂಗಿಸುವಿಕೆಯನ್ನು ಆದ್ಯತೆಯ ವಿಷಯಗಳನ್ನಾಗಿ ಮೈಗೂಡಿಸಿಕೊಂಡ ಪುತ್ತೂರು ತಾಲೂಕಿನ ಅವಿನಾಶ ಕೊಡಂಕಿರಿ, ನರಿಮೊಗ್ರು ಅವರು ಅರಣ್ಯ ಮಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪರಿಸರ ಸಂರಕ್ಷಣೆಯ ನೆಲೆಯಲ್ಲಿ ತನ್ನ ಜಮೀನಿನ 5 ಎಕ್ರೆ ಪ್ರದೇಶದಲ್ಲಿ 300 ವಿವಿಧ ಕಾಡು ಮಾವು ಗಿಡಗಳು, ಅಳಿವಿನಂಚಿನಲ್ಲಿರುವ ಕಾಡು ಹಣ್ಣುಗಳ ಗಿಡಗಳನ್ನು ಬೆಳೆಸಿ ಮಾನವ ಹಸ್ತಕ್ಷೇಪ ಇಲ್ಲದ ರೀತಿಯಲ್ಲಿ ಕಾಡನ್ನು ಕಾಪಾಡಿ ಪ್ರಾಣಿ, ಪಕ್ಷಿಗಳಿಗೆ ಆಹಾರವನ್ನು ಒದಗಿಸುವ ಹಣ್ಣು-ಹಂಪಲುಗಳ ಬೀಜಗಳನ್ನು ಬಿತ್ತಿ, ಗಿಡಗಳನ್ನು ಪೋಷಿಸಿ ಕಾಡನ್ನು ಬೆಳೆಸಿರುವುದರ ಜತೆಗೆ  ವೃತ್ತಿಯಲ್ಲಿ

ಪ್ರಗತಿಪರ ಕೃಷಿಕ ಅವಿನಾಶ್ ಕೊಡಂಕಿರಿ ಅವರಿಗೆ ‘ಅರಣ್ಯ ಮಿತ್ರ’ ಪ್ರಶಸ್ತಿ | ಕಾಡು ಮಾವು ಹಣ್ಣು, ಗಿಡಗಳ ರಕ್ಷಣೆಗೆ ಒಲಿಯಿತು ಪ್ರಶಸ್ತಿ Read More »

ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ

ದೆಹಲಿ: ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ದ. ಕಳೆದ 10 ವರ್ಷಗಳಲ್ಲಿ ಭಾರತದ ಸಾಮರ್ಥ್ಯವು ಬದಲಾಗಿದೆ. ನಾವು ದೇಶದ ಸುರಕ್ಷತೆಯನ್ನೇ ಧೈಯವನ್ನಾಗಿಸಿಕೊಂಡು ಆಡಳಿತ ನಡೆಸಿದ್ದೇವೆ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ನಾವು ರೂಪಿಸಿಕೊಂಡಿದ್ದೇವೆ ಹೀಗೆಂದು ಪ್ರತಿಪಕ್ಷಗಳ ಗಲಾಟೆ ಗದ್ದಲದ ನಡುವೆ ಪ್ರಧಾನಿ ನರೇಂದ್ರ ಮೋದಿ ಘರ್ಜಿಸಿದ್ದಾರೆ. 2014ರಲ್ಲಿ ದೇಶದ ಜನ ಸಂಕಷ್ಟದಲ್ಲಿದ್ದರು. ಜನರಿಗೆ ಸರಿಯಾದ ಮನೆ ಇರಲಿಲ್ಲ, ಒಂದು ಗ್ಯಾಸ್ ಕನೆಕ್ಷನ್ ಇರಲಿಲ್ಲ. ಪ್ರತಿಯೊಂದು ಸರ್ಕಾರದ ಕೆಲಸಕ್ಕೂ ಲಂಚ ನೀಡಬೇಕಿತ್ತು. ಪ್ರತಿಯೊಂದು ಕ್ಷೇತ್ರಗಳಲ್ಲೂ ಭ್ರಷ್ಟಾಚಾರ

ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ Read More »

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಯಾಗಳ ಆಯ್ಕೆ

ಬಂಟ್ವಾಳ: ಲೋಕಸಭಾ ಚುನಾವಣೆ ಮುಗಿದು ಕೆಲವೊಂದು ಮಂಡಲಗಳ ಪದಾಧಿಕಾರಿಯಾಗಳ ಆಯ್ಕೆ ಪ್ರಕ್ರಿಯೆ ಬಾಕಿ ಇದ್ದು ಪ್ರಸ್ತುತ ನಿಯುಕ್ತಿಯಾಗುವಂತೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಕ್ಷೇತ್ರ ಸಮಿತಿ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ. ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಗೋವಿಂದ ಪ್ರಭು, ರವೀಶ್‍ ಶೆಟ್ಟಿ, ಪುಷ್ಪರಾಜ್ ಚೌಟ, ರೇಷ್ಮಾ ಶಂಕರಿ ಭಟ್‍, ಶ್ರೀಕಾಂತ್ ಶೆಟ್ಟಿ, ಅರುಣ್ ರೋಶನ್ ಡಿ’’ಸೋಜಾ, ಪ್ರಧಾನ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಕೋಶಾಧಿಕಾರಿಯಾಗಿ ದಿನೇಶ್‍ ಭಂಡಾರಿ, ಕಾರ್ಯದರ್ಶಿಗಳಾಗಿ ಪ್ರಭಾಕರ

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಯಾಗಳ ಆಯ್ಕೆ Read More »

ಬಸ್ ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು

ಮಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ ಬ್ಯಾಗ್ ಕಳವಾಗಿರುವುದಾಗಿ ವರದಿಯಾಗಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್ ನ ಲಾಕರ್ ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್ ಬ್ಯಾಗ್ ನಲ್ಲಿ ಹಾಕಿ ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ನಲ್ಲಿ ಇತರ ಲಗೇಜ್ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ. ಹಾಸನ ತಲುಪಿದಾಗ ಅವರ

ಬಸ್ ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು Read More »

ಡೆಂಗ್ಯೂ: 13 ವರ್ಷದ ಬಾಲಕಿ ಮೃತ್ಯು

ಹಾಸನ: ತಾಲೂಕಿನ ಬೊಮ್ಮನಾಯಕಹಳ್ಳಿ ಗ್ರಾಮದ 13 ವರ್ಷದ ಬಾಲಕಿ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ. ಅಕ್ಷತಾ (13) ಮೃತ ಬಾಲಕಿ, ಕೂಲಿ ಕೆಲಸ ಮಾಡುತ್ತಿದ್ದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿ ಪುತ್ರಿ ಅಕ್ಷತಾ, ಹಾಸನದ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದರು. ಕಳೆದ ಬುಧವಾರ ಜ್ವರಕ್ಕೆ ತುತ್ತಾಗಿದ್ದ ಈಕೆಗೆ ಬೊಮ್ಮನಾಯಕಹಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಬಾಲಕಿ ಗುಣಮುಖಳಾಗದೇ ಇದ್ದ ಕಾರಣ ಪೋಷಕರು ಆಕೆಯನ್ನ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅಕ್ಷತಾ

ಡೆಂಗ್ಯೂ: 13 ವರ್ಷದ ಬಾಲಕಿ ಮೃತ್ಯು Read More »

ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ : ಧರ್ಮಸ್ಥಳದ ಜೋಡುಸ್ಥಾನದಲ್ಲಿ ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ. ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು. ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ಪತಿ, ತಂದೆ, ತಾಯಿ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಾಜ್ಯಮಟ್ಟದ ಅಂತರ್ ಕಾಲೇಜು ಅತ್ಲೆಟಿಕ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುರುಷರ ವಿಭಾಗದಲ್ಲಿ ಚಾಂಪಿಯನ್, ಮಹಿಳೆಯರ ವಿಭಾಗದಲ್ಲಿ ರನ್ನರ್ ಅಪ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 25 ನೇ ಅಂತರ್ ಕಾಲೇಜು ಅತ್ಲೆಟಿಕ್ ಸ್ಪರ್ಧೆಯಲ್ಲಿ ಪುರುಷರ ವಿಭಾಗದ ಚಾಂಪಿಯನ್‌ಶಿಪ್ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಟ್ರೋಫಿಯೊಂದಿಗೆ ಸತತ ಮೂರನೇ ಬಾರಿ ಕೂಟದ ಸಮಗ್ರ ಪ್ರಶಸ್ತಿಯನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮೈಸೂರು ವಿಭಾಗದ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಾಜ್ಯಮಟ್ಟದ ಅಂತರ್ ಕಾಲೇಜು ಅತ್ಲೆಟಿಕ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುರುಷರ ವಿಭಾಗದಲ್ಲಿ ಚಾಂಪಿಯನ್, ಮಹಿಳೆಯರ ವಿಭಾಗದಲ್ಲಿ ರನ್ನರ್ ಅಪ್ Read More »

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಮಾಣಿಲ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಮಾತನಾಡಿ, ಅಳಿಕೆ ಪಟ್ಲ ಫೌಂಡೇಶನ್ ನ ಕಾರ್ಯಚಟುವಟಿಕೆಗಳು, ಧ್ಯೇಯೋದ್ದೇಶಗಳ ಬಗ್ಗೆ ಸವಿವರ ಮಾಹಿತಿ ನೀಡಿ ನಾಟ್ಯ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಲಾ ನೈಪುಣ್ಯತೆ ಪಡೆಯುವಂತೆ

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ Read More »

error: Content is protected !!
Scroll to Top