ಆಗುಂಬೆ ಘಾಟ್ ನಲ್ಲಿ ರಸ್ತೆ ಬಿರುಕು | ವಾಹನ ಸಂಚಾರ ನಿಷೇಧ
ಶಿವಮೊಗ್ಗ: ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗುಂಬೆ ಘಾಟ್ ನಲ್ಲಿ ಘನ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಭೂ ಕುಸಿತ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಘನ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ ಮತ್ತು ಸಿದ್ದಾಪುರ- ಕುಂದಾಪುರ- ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಬಳಿ ಇತ್ತೀಚೆಗಷ್ಟೇ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಉಂಟಾಗಿದೆ. […]
ಆಗುಂಬೆ ಘಾಟ್ ನಲ್ಲಿ ರಸ್ತೆ ಬಿರುಕು | ವಾಹನ ಸಂಚಾರ ನಿಷೇಧ Read More »










