ಆಗುಂಬೆ ಘಾಟ್ ನಲ್ಲಿ ರಸ್ತೆ ಬಿರುಕು | ವಾಹನ ಸಂಚಾರ ನಿಷೇಧ

ಶಿವಮೊಗ್ಗ: ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗುಂಬೆ ಘಾಟ್ ನಲ್ಲಿ ಘನ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಭೂ ಕುಸಿತ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಘನ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ ಮತ್ತು ಸಿದ್ದಾಪುರ- ಕುಂದಾಪುರ- ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಬಳಿ ಇತ್ತೀಚೆಗಷ್ಟೇ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಉಂಟಾಗಿದೆ. […]

ಆಗುಂಬೆ ಘಾಟ್ ನಲ್ಲಿ ರಸ್ತೆ ಬಿರುಕು | ವಾಹನ ಸಂಚಾರ ನಿಷೇಧ Read More »

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ : ರಾಷ್ಟ್ರಪತಿ ದ್ರೌಪದಿ ಮುರ್ಮು

70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ(ಜೂ.28) ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದರ ಅನ್ವಯ 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯುತ್ತಾರೆ’ ಎಂದರು. ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿ 55

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ : ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ | ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ

ಪುತ್ತೂರು:  ಅಶೋಕ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಲೇ ಇದ್ದು ಪ್ರತೀ ರಂಗದಲ್ಲೂ ಇದನ್ನು ಕಾಣಲು ಸಾಧ್ಯವಾಗಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರು ಹೇಳಿದರು. ಅವರು ಪುತ್ತೂರು- ಕೌಡಿಚ್ಚಾರ್ ಸಿಟಿ ಬಸ್ ವ್ಯವಸ್ಥೆಗೆ ಕೌಡಿಚ್ಚಾರ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು. ಕೌಡಿಚ್ಚಾರ್‌ಗೆ ಸಿಟಿ ಬಸ್ ವ್ಯವಸ್ಥೆ ಆಗಬೇಕು, ಇಲ್ಲಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಸಕರಿಗೆ ತಿಳಿಸಿ ಸಿಟಿ ಬಸ್ ವ್ಯವಸ್ಥೆ ಮಾಡುವ

ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ | ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ Read More »

ಬಂಟ್ವಾಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ

ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಬಂಟ್ವಾಳ ತಾಲೂಕು ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿ ಪರ ಕೃಷಿಕ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಗೌಡ ಗಿರಿನಿವಾಸ ಕಟ್ಟತ್ತಿಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಂಟ್ವಾಳ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಶಾಸಕ ರಾಜೇಶ್ ನಾಯ್ಕ್, ಉಳಿಪ್ಪಾಡಿಗುತ್ತು, ತಹಶೀಲ್ದಾರ್ ಅರ್ಚನಾ ಡಿ. ಭಟ್, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಗೌರವ ಸಲಹೆಗಾರ, ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಗೌಡ ಅಳಿಕೆ,

ಬಂಟ್ವಾಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ Read More »

ಭೀಕರ ರಸ್ತೆ ಅಪಘಾತ  | 13 ಮಂದಿ  ಸಾವು

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಮೃತಪಟ್ಟವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಭೀಕರ ರಸ್ತೆ ಅಪಘಾತ  | 13 ಮಂದಿ  ಸಾವು Read More »

ನರೇಂದ್ರ ಪ.ಪೂ ಕಾಲೇಜಿನಲ್ಲಿ ನಿತ್ಯಜೀವನದಲ್ಲಿ ಪರಿಸರ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು: ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಪರಿಸರ ಮಾಲಿನ್ಯ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸುವುದೇ ಅಸಾಧ್ಯವಾಗುತ್ತದೆ. ಆದುದರಿಂದ  ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಾಬ್ದಾರಿ ನಮ್ಮದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕ, ಪರಿಸರದ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ ನಿತ್ಯಜೀವನದಲ್ಲಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ನಿತ್ಯಜೀವನದಲ್ಲಿ ಪರಿಸರ ಬಗ್ಗೆ ವಿಶೇಷ ಉಪನ್ಯಾಸ Read More »

ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು

ಬೆಳ್ತಂಗಡಿ : ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತಪಟ್ಟ ‍ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು ನಡೆದಿದೆ. ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ (21) ಮೃತಪಟ್ಟ ಯುವತಿ. ಪ್ರತೀಕ್ಷಾ ಸಂಜೆ ಮನೆಯ ರಸ್ತೆ ಸಮೀಪ ಪಾರ್ಸೆಲ್ ಬಂದಿದ್ದರಿಂದ ರಸ್ತೆಗೆ ಬಂದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಸ್ಥಳದಲ್ಲಿದ್ದ

ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು Read More »

ವಿಜಯನಗರದ ವೈಭವವನ್ನು ಬೆಂಗಳೂರಿನಲ್ಲೂ ಸ್ಥಾಪಿಸಬೇಕು ಎಂಬ ಕೆಂಪೇಗೌಡರ ಛಲ ಇಡೀ ದೇಶ ಮೆಚ್ಚುವಂತದ್ದು | ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಸುರೇಶ್ ಬೈಲು | ಎಸ್‍ ಎಸ್‍ ಎಲ್‍ ಸಿ, ಪಿಯುಸಿ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಕಡಬ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಕಡಬ ಒಕ್ಕಲಿಗ ಸಮುದಾಯ ಭವನದಲ್ಲಿ ಗುರುವಾರ ಆಚರಿಸಲಾಯಿತು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಪ್ರಧಾನ ಭಾಷಣ ಮಾಡಿ, ಬೆಂಗಳೂರಿನ ನಿರ್ಮಾತೃ ನಾಡಪ್ರಭು ತನ್ನ ದೂರದೃಷ್ಟಿತ್ವದಿಂದ ಬೆಂಗಳೂರನ್ನು ಕಟ್ಟಿ ಸುಂದರ ನಗರವನ್ನಾಗಿ ಮಾಡಿದ್ದಾರೆ. ಅವರ ಆಡಳಿತ ಇಂದು ಜನಮಾನಸದಲ್ಲಿ ಪ್ರಸ್ತುತ ಎನಿಸಿದೆ. ಅವರ ಕಂಚಿನ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದ್ದಲ್ಲದೆ,  ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಡಲಾಗಿದೆ.

ವಿಜಯನಗರದ ವೈಭವವನ್ನು ಬೆಂಗಳೂರಿನಲ್ಲೂ ಸ್ಥಾಪಿಸಬೇಕು ಎಂಬ ಕೆಂಪೇಗೌಡರ ಛಲ ಇಡೀ ದೇಶ ಮೆಚ್ಚುವಂತದ್ದು | ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಸುರೇಶ್ ಬೈಲು | ಎಸ್‍ ಎಸ್‍ ಎಲ್‍ ಸಿ, ಪಿಯುಸಿ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ Read More »

ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.28 ರಂದು ರಜೆ ಘೋಷಿಸಲಾಗಿದೆ. ಈ ಕುರಿತು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ Read More »

ಮಂಗಳೂರಿನಲ್ಲಿ ಅದ್ದೂರಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ

ಮಂಗಳೂರು: ದ.ಕ.ಜಿಲ್ಲಾ ಪಂಚಾಯತ್‍ ಹಾಗೂ ದ.ಕ.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಗುರುವಾರ ಮಂಗಳೂರಿನಲ್ಲಿ ನಡೆಯಿತು. ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ಪಂಚಾಯಿತಿ ಸಿಇಒ ಆನಂದ್, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಜಾನ್‍ ಕುಟಿನ್ಹೊ, ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಮಂಗಳೂರು ತಾಲೂಕು

ಮಂಗಳೂರಿನಲ್ಲಿ ಅದ್ದೂರಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ Read More »

error: Content is protected !!
Scroll to Top