ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಇಂದಿನ ಸ್ಪರ್ಧಾತ್ಮಕ ವೃತ್ತಿ ಬದುಕಿನಲ್ಲಿ ಯಶಸ್ವಿ ಕಾಣಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಮಾತನಾಡಿ, ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಾಧನೆ ಅಭೂತಪೂರ್ವ ಇದೆ. ಸಾಧನೆ ನಿಮ್ಮ ಭವಿಷ್ಯಧಲ್ಲಿ, ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು. ವೇದಿಕೆಯಲ್ಲಿ ಕಾಲೇಜಿನ […]

ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ Read More »

ಸುಬ್ರಹ್ಮಣ್ಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ | ತುಂಬಿ ಹರಿಯುತ್ತಿರುವ ಪವಿತ್ರ ಕುಮಾರಧಾರ ನದಿ

ಸುಬ್ರಹ್ಮಣ್ಯ: ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಪವಿತ್ರ ಕುಮಾರಧಾರ ನದಿ ತುಂಬಿ ಹರಿಯುವ ಮೂಲಕ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರ ಕಿಂಡಿ ಆಣೆಕಟ್ಟು ಸಂಪೂರ್ಣ ಮುಳುಗಡೆ ಯಾಗಿದ್ದು, ಭಕ್ತಾದಿಗಳಿಗೆ ನದಿಗಿಳಿಯದಂತೆ ಸೂಚನೆ ನೀಡಲಾಗಿದೆ. ಇದೀಗ ನದಿ ದಡ ದಲ್ಲೇ ಭಕ್ತಾದಿಗಳು ತೀರ್ಥಸ್ನಾನ ಮಾಡುತಿದ್ದಾರೆ. ಕುಮಾರಧಾರ ಉಪನದಿ ದರ್ಪಣ ತೀರ್ಥ ಕೂಡ ಮಳೆನೀರಿನಿಂದ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು, ಹೋಮ್ ಗಾರ್ಡ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಸುಬ್ರಹ್ಮಣ್ಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ | ತುಂಬಿ ಹರಿಯುತ್ತಿರುವ ಪವಿತ್ರ ಕುಮಾರಧಾರ ನದಿ Read More »

ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಸಿಲುಕಿದ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನ ಈ ಸಂದರ್ಭದಲ್ಲಿ ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಗೊಂಡಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಬಿದ್ದ ಮಣ್ಣು ಬಿದ್ದಿರುವುದನ್ನು ಗಮನಿಸಿತಕ್ಷಣ ಎಚ್ಚೆತ್ತು

ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ Read More »

ನಾಳೆ ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ

ಕಡಬ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಜೂ.27 ಗುರುವಾರ ಬೆಳಿಗ್ಗೆ 11 ಕ್ಕೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕರಾದ ಎಸ್‍.ಎಲ್‍.ಭೋಜೇಗೌಡ, ಐವನ್ ಡಿ’ಸೋಜಾ, ಪ್ರತಾಪಸಿಂಹ ನಾಯಕ್, ಮಂಜುನಾಥ ಭಂಡಾರಿ,

ನಾಳೆ ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ Read More »

ಭಾರೀ ಮಳೆ : ನಾಳೆ ಶಾಲೆಗೆ ರಜೆ

ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆಯ ಹಿನ್ನಲೆಯಲ್ಲಿ ತಗ್ಗು ಪ್ರದೇಶ, ನದಿ, ಸಮುದ್ರ ತೀರಕ್ಕೆ ಸಾರ್ವಜನಿಕರು ತೆರಳದಂತೆ, ಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಭಾರೀ ಮಳೆ : ನಾಳೆ ಶಾಲೆಗೆ ರಜೆ Read More »

ರಾಜ್ಯದ 8 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಜೂನ್ 25 ರಿಂದ 29 ರವರೆಗೆ ಹಲವೆಡೆ ಭಾರಿ ಮಳೆಯಾಗಲಿದೆ. ರಾಜ್ಯದ 8 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲ್ಬುರ್ಗಿ, ರಾಯಚೂರು, ಹಾವೇರಿಯಲ್ಲಿ ಸಾಧಾರಣ ಮಳೆ

ರಾಜ್ಯದ 8 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ Read More »

ನಾಳೆ (ಜೂ.27) : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು:  ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 4 ವರ್ಷ ಪೂರೈಸಿ 5 ನೇ ವರ್ಷಕ್ಕೆ ನಾಳೆ ಯಶಸ್ವಿಯಾಗಿ ಪಾದಾರ್ಪಣೆ ಮಾಡಲಿದೆ. ಪಾದಾರ್ಪಣೆ ಅಂಗವಾಗಿ ಜೂ.27 ಗುರುವಾರ ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀ ಪೂಜೆ ಆಲಂಕಾರು ಶಾಖೆಯಲ್ಲಿ ನಡೆಯಲಿದೆ. ಈ ಕುರಿತು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಜೂ.27) : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ Read More »

ಬರೆ ಕುಸಿದು ಮನೆಗೆ ಹಾನಿ

ನಿಂತಿಕಲ್ಲು : ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಎಂಬಲ್ಲಿ ಜೂ 25 ರಂದು ರಾತ್ರಿ ಸುರಿದ ಮಳೆಗೆ ಬರೆ ಕುಸಿದು ಮನೆಗೆ ಹಾನಿಯಾಗಿರುವ ಘಟನೆ ವರದಿಯಾಗಿದೆ. ಐವತ್ತೊಕ್ಲು ಗ್ರಾಮದ ಅಬ್ದುಲ್ ಅಝೀಝ್ ಎಂಬವರ ಮನೆ ಬಳಿ ಇರುವ ಬರೆ ಕುಸಿದು ಮನೆಗೆ ಹಾನಿಯಾಗಿದೆ. ಕಂದಾಯ ಇಲಾಖೆಯವರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ,ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬರೆ ಕುಸಿದು ಮನೆಗೆ ಹಾನಿ Read More »

ನಾಳೆ (ಜೂ.27) : ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಅದ್ದೂರಿಯಿಂದ ನಡೆಯಲಿದೆ ನಾಡಪ್ರಭು ಕೆಂಪೇಗೌಡ ಜಯಂತಿ | ಪೂರ್ವಭಾವಿ ಸಭೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಾಡ ಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಜೂ.27 ಗುರುವಾರ ಬೆಳಿಗ್ಗೆ 10.30 ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು

ನಾಳೆ (ಜೂ.27) : ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಅದ್ದೂರಿಯಿಂದ ನಡೆಯಲಿದೆ ನಾಡಪ್ರಭು ಕೆಂಪೇಗೌಡ ಜಯಂತಿ | ಪೂರ್ವಭಾವಿ ಸಭೆ Read More »

ಲೋಕ ಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ನವದೆಹಲಿ : ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಓಂ ಬಿರ್ಲಾ

ಲೋಕ ಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ Read More »

error: Content is protected !!
Scroll to Top