ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿಟ್ಲ ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದಲ್ಲಿ ಆರ್ಥಿಕ ವರ್ಷದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂಘಕ್ಕೆ ಗ್ರೆಡಿಂಗ್ ರಿಪೋರ್ಟನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆದಿಲ ಎ.ಬಿ  ಒಕ್ಕೂಟಗಳ ಸೇವಾ ಪ್ರತಿನಿಧಿಗಳು, ನಿಕಟ ಪೂರ್ವ ಅಧ್ಯಕ್ಷರುಗಳು, ವಲಯ ಮೇಲ್ವಿಚಾರಕರು, ತಾಲೂಕಿನ ವಿಚ ಕ್ಷಣಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಪ್ರಗತಿ ಬಂದು ಸ್ವಸಹಾಯ ಸಂಘಗಳ ಕ್ವೀಕ್ಕ್ ಆಡಿಟ್ ಮತ್ತು ಆಂತರಿಕ ಲೆಕ್ಕಪರಿಶೋಧನೆಗೆ ಚಾಲನೆ Read More »

ಪವರ್ ಟಿ ವಿ ಪ್ರಸಾರ ಸ್ಥಗಿತ: ಹೈಕೋರ್ಟ್ ಆದೇಶ

ಬೆಂಗಳೂರು: ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ತಕ್ಷಣಕ್ಕೆ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ನಿಲ್ಲಿಸಬೇಕೆಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಕೇಂದ್ರ ವಲಯದ ಐಜಿ ಬಿಆರ್ ರವಿಕಾಂತೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ಎಂ ರಮೇಶ್ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಚಾನೆಲ್ ಗೆ ಪರವಾನಗಿ ನವೀಕರಿಸದ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ಕರ್ನಾಟಕ ಹೈಕೋರ್ಟ್, ನಿನ್ನೆ

ಪವರ್ ಟಿ ವಿ ಪ್ರಸಾರ ಸ್ಥಗಿತ: ಹೈಕೋರ್ಟ್ ಆದೇಶ Read More »

ಲೋಕಸಭೆ : ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

ಹೊಸದಿಲ್ಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ಘೋಷಿಸಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ತಿಳಿಸಿದ್ದಾರೆ. ಉಳಿದ ಪದಾಧಿಕಾರಿಗಳನ್ನು ಬಳಿಕ ಆಯ್ಕೆ ಮಾಡಲಾಗುವುದು ಎಂದು

ಲೋಕಸಭೆ : ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ Read More »

ಅಮರನಾಥ ಯಾತ್ರಿಕರಿಗೆ ಭಯೋತ್ಪಾದಕ ದಾಳಿ ಬೆದರಿಕೆ | ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ

ಜಮ್ಮು ಕಾಶ್ಮೀರ: ಜೂ. 29ರಿಂದ ಪ್ರಸಿದ್ಧ ಅಮರನಾಥ ಯಾತ್ರೆ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಅಮರನಾಥ ಬೇಸ್ ಕ್ಯಾಂಪ್ ಗೂ 3 ಹಂತದ ಭದ್ರತೆ ಒದಗಿಸಲಾಗಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ 260 ಡಿಗ್ರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾತ್ರೆ ಸಾಗುವ ಹೆದ್ದಾರಿಯ ಸುರಕ್ಷತೆ ಖಾತರಿಗಾಗಿ ವಾಹನಗಳನ್ನು ಪರಿಶೀಲಿಸಲು 60 ಕ್ಯಾಮರಾಗಳು, ಬಾಡಿ ಸ್ಕ್ಯಾನರ್ ಗಳನ್ನು ಅಳವಡಿಸಲಾಗಿದೆ. ಜೊತೆಗೆ ರಂಭಾನ್ ಜಿಲ್ಲೆಯ ಉಧಂಪುರದಿಂದ ಬನಿಹಾಲ್

ಅಮರನಾಥ ಯಾತ್ರಿಕರಿಗೆ ಭಯೋತ್ಪಾದಕ ದಾಳಿ ಬೆದರಿಕೆ | ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ Read More »

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ | ನಾಲ್ವರು ಜೀಪು ಚಾಲಕರ ಬಂಧನ

ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಯ ಮಧ್ಯದಲ್ಲಿರುವ ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆ ಘಾಟಿಯ ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸ್ಥಳೀಯ ಜೀಪು ಚಾಲಕರ ಬಂಧನವಾಗಿದೆ. ಇತ್ತೀಚೆಗೆ ಪಟ್ಲಬೆಟ್ಟಕ್ಕೆ ತೆರಳಿದ ಮಂಗಳೂರಿನ ಬೈಕರ್ಸ್ ಮೇಲೆ ಸ್ಥಳೀಯ ಜೀಪು ಚಾಲಕರು ಹಲ್ಲೆ ಮಾಡಿದ್ದರು. ಇದೀಗ ನಾಲ್ವರು ಜೀಪು ಚಾಲಕರ ಬಂಧನವಾಗಿದೆ. ಹಾಸನ ಜಿಲ್ಲಾ ಕೇಂದ್ರದಿಂದ ಪಟ್ಲ ಬೆಟ್ಟ 80 ಕಿ.ಮೀ ದೂರದಲ್ಲಿದೆ. ಸುಬ್ರಹ್ಮಣ್ಯದಿಂದ 30ಕಿಮೀ ದೂರದಲ್ಲಿರುವ ಈ ಬೆಟ್ಟ ವೀಕ್ಷಣೆಗೆ ಪ್ರತಿದಿನ ಸಾವಿರಾರು ಪ್ರವಾಸಿಗರು

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ | ನಾಲ್ವರು ಜೀಪು ಚಾಲಕರ ಬಂಧನ Read More »

ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ | ಒಂದೇ ಕುಟುಂಬದ ನಾಲ್ವರು ಮೃತ್ಯು

ಉಳ್ಳಾಲ: ಭಾರೀ ಮಳೆಗೆ ಬೆಳ್ಳಂಬೆಳಗ್ಗೆ ಮನೆಯ ಹಿಂಬದಿಯ ಕಂಪೌಂಡ್ ಕುಸಿದುಬಿದ್ದು ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ನಡೆದಿದೆ. ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40), ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟವರು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ

ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ | ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ಮನೆ‌ಮನೆಗೆ ಹಕ್ಕು ಪತ್ರ ವಿತರಣೆ ಮಾಡಿಯೇ ಸಿದ್ಧ: ಶಾಸಕ ಅಶೋಕ್ ರೈ | ಅಕ್ರಮ-ಸಕ್ರಮ ಬೈಠಕ್

ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತಿನಂತೆ ಗ್ರಾಮದ‌ ಪ್ರತೀ ‌ಮನೆ ಮನೆಗೂ ಹಕ್ಕು ಪತ್ರ ತಲುಪಿಸುವ ಕೆಲಸವನ್ನು ಮಾಡಿಯೇ ಸಿದ್ದ ಶಾಸಕ ಅಶೋಕ್ ರೈ ಹೇಳಿದರು. ಅವರು ನೆಟ್ಟಣಿಗೆ ಮುಡ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಅಕ್ರಮ ಸಕ್ರಮ ಬೈಠಕ್ ಹಾಗೂ ಹಕ್ಕು‌ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡಲಾಗಿದೆ. ಒಟ್ಟು  13000 ಅರ್ಜಿಗಳು ಇದೆ. ಇವೆಲ್ಲವನ್ನೂ ಹಂತ ಹಂತವಾಗಿ ವಿಲೇವಾರಿ ಮಾಡಿಯೇ

ಮನೆ‌ಮನೆಗೆ ಹಕ್ಕು ಪತ್ರ ವಿತರಣೆ ಮಾಡಿಯೇ ಸಿದ್ಧ: ಶಾಸಕ ಅಶೋಕ್ ರೈ | ಅಕ್ರಮ-ಸಕ್ರಮ ಬೈಠಕ್ Read More »

ರೋಟರಿ ಯುವದಿಂದ ನಿರ್ಗತಿಕ ವೃದ್ಧರೊಬ್ಬರ ರಕ್ಷಣೆ | ದೀಪಶ್ರೀ ವೃದ್ಧಾಶ್ರಮಕ್ಕೆ ಸೇರ್ಪಡೆ

ಪುತ್ತೂರು: ಪುತ್ತೂರಿನ ಎಪಿಎಂಸಿ  ಪ್ರಾಂಗಣದ ಬಸ್ಸು ತಂಗುದಾಣದಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿದ್ದ  ಸುಮಾರು 70 ವರ್ಷ ವಯೋಮಾನದ   ವೆಂಕಪ್ಪ ಶೆಟ್ಟಿ ಅವರನ್ನು ಜಿಡೆಕಲ್ಲಿನ ದೀಪಶ್ರೀ ವೃದ್ಧರ ಹಾಗೂ ನಿರ್ಗತಿಕರ  ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅವರು ರೋಟರಿ ಕ್ಲಬ್ ಪುತ್ತೂರು ಯುವದ  ಪೂರ್ವಾಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರನ್ನು ಸಂಪರ್ಕಿಸಿ ಪುನರ್ವಸತಿ ಕಲ್ಪಿಸಲು ಕೋರಿದ ಮೇರೆಗೆ ಪುತ್ತೂರು ಉಮೇಶ್ ನಾಯಕ್ ಅವರು  ಪೋಲಿಸ್ ಇಲಾಖೆಯ ಸಹಕಾರದಿಂದ ಈ ವೃದ್ಧರನ್ನು ರಕ್ಷಿಸಿ 

ರೋಟರಿ ಯುವದಿಂದ ನಿರ್ಗತಿಕ ವೃದ್ಧರೊಬ್ಬರ ರಕ್ಷಣೆ | ದೀಪಶ್ರೀ ವೃದ್ಧಾಶ್ರಮಕ್ಕೆ ಸೇರ್ಪಡೆ Read More »

ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ಕಾಮಗಾರಿ ವೀಕ್ಷಿಸಿದ ಡಿ.ಕೆ.ಶಿ.

ಕಡಬ: ತಾಲೂಕಿನ ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಸಂಜೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಸಮುದಾಯ ಭವನದ ಕುರಿತು ಮಾಹಿತಿ ನೀಡಿ ಮುಂದಿನ ಅಭಿವೃದ್ಧಿಗಾಗಿ ಸಹಕಾರ ಕೋರಿ ಮನವಿ ನೀಡಿದರು. ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಸರಕಾರದ ವತಿಯಿಂದ ಹಾಗೂ ವೈಯಕ್ತಿಕವಾಗಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಒಕ್ಕಲಿಗ ಗೌಡ ಸೇವಾ

ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ಕಾಮಗಾರಿ ವೀಕ್ಷಿಸಿದ ಡಿ.ಕೆ.ಶಿ. Read More »

ನೇಣು ಬಿಗಿದು ಯುವತಿ ವಿದ್ಯಾ ಆತ್ಮಹತ್ಯೆ

ಬೆಳ್ತಂಗಡಿ : ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪ ನಡೆದಿದೆ. ಕೊಳಂಬೆ ಉಮೇಶ್ ಗೌಡ ಎಂಬವರ ಪುತ್ರಿ ವಿದ್ಯಾ (22) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ಇರುತ್ತಿದ್ದ ವಿದ್ಯಾ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ನೇಣು ಬಿಗಿದು ಯುವತಿ ವಿದ್ಯಾ ಆತ್ಮಹತ್ಯೆ Read More »

error: Content is protected !!
Scroll to Top