ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ

ಪುತ್ತೂರು: ಪುತ್ತೂರು ನವ್ಯಶ್ರೀ ಮಹಿಳಾ ಮಂಡಲ ಹಾಗೂ ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ ಮಂಗಳವಾರ ಸಂಜೆ ಕಲ್ಲಾರೆ ಶ್ರೀ ಗುರು ರಾಘವೇಂದ್ರ ಮಠದ ಕಲ್ಯಾಣ ಮಂಠಪದಲ್ಲಿ ನಡೆಯಿತು. ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪರ ನೇತೃತ್ವದಲ್ಲಿ ರಾಜೇಶ್‍ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ನೂರಾರು ಮಂದಿ ಪೂಜಾ ಸೇವೆ ಮಾಡಿಸಿದರು.

ಸಾಮೂಹಿಕ ಶ್ರೀ ಸಂಕಷ್ಟ ಚತುರ್ಥಿ ವೃತ ಕಲ್ಪೋಕ್ತ ಪೂಜೆ Read More »

ಅಂಗನವಾಡಿಯಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿಯಿಂದ ಸಹಮತ : ಸಚಿವೆ ಲಕ್ಷ್ಮೀ ಹೆಬ್ಬಾಳ್‍ ಕರ್

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್‍ ಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಅಂಗನವಾಡಿಯಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿಯಿಂದ ಸಹಮತ : ಸಚಿವೆ ಲಕ್ಷ್ಮೀ ಹೆಬ್ಬಾಳ್‍ ಕರ್ Read More »

ನೇಪಾಳ ವಿರೋಧಿ ಶಕ್ತಿಗಳಿಂದ ವಿರೋಧವಿದ್ದರೂ ನೇಪಾಳವು ಹಿಂದೂ ರಾಷ್ಟ್ರದತ್ತ ಮುಂದೆ ಸಾಗುತ್ತಿದೆ : ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ

ಗೋವಾ: ಇಂದು, ನೇಪಾಳದಲ್ಲಿ ಬಹುಸಂಖ್ಯಾತ ಹಿಂದೂ ಸಮಾಜವಿದ್ದರೂ ಹಿಂದೂಗಳು ಮಾತ್ರ ಚೀನಾ, ಯುರೋಪ ಯೂನಿಯನ ಮುಂತಾದ ವಿದೇಶಿ ಶಕ್ತಿಗಳ ಆರ್ಥಿಕ ಸಹಾಯದಿಂದಾಗಿ ಅವರ ಆಲೋಚನೆಗಳಿಗೆ ಅನುಗುಣವಾಗಿ ಕಾರ್ಯ ಮಾಡುತ್ತಿದ್ದಾರೆ ಎಂದು ನೇಪಾಳದ ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ ಆರೋಪಿಸಿದ್ದಾರೆ. ಅವರು ಗೋವಾ ಪೋಂಡಾ `ಶ್ರೀ ರಾಮನಾಥ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಂಗಣದಲ್ಲಿ ಆಯೋಜಿಸಲಾದ ಜಾಗತಿಕ ಮಟ್ಟದ ಹಿಂದೂ ಸಂಘಟನೆ ವಿಷಯದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತದ ಮೂಲಭೂತವಾದಿ ಎಡಪಂಥೀಯ ಸಿದ್ಧಾಂತದ ಕೆಲವು ವಿಶ್ವವಿದ್ಯಾಲಯಗಳಿಂದ 

ನೇಪಾಳ ವಿರೋಧಿ ಶಕ್ತಿಗಳಿಂದ ವಿರೋಧವಿದ್ದರೂ ನೇಪಾಳವು ಹಿಂದೂ ರಾಷ್ಟ್ರದತ್ತ ಮುಂದೆ ಸಾಗುತ್ತಿದೆ : ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ Read More »

ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿ ಸರಕಾರದ ಉದ್ಘಾಟನೆ

ಸವಣೂರು: ಸವಣೂರಿನ ವಿದ್ಯಾರಶ್ಮಿಯಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸರಕಾರವನ್ನು ಸಂಚಾಲಕರಾದ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಾಥಮಿಕ ಅರಿವು ಈ ವಿದ್ಯಾರ್ಥಿ ಸರಕಾರದ ಚಟುವಟಿಕೆಗಳ ಸಿಗುತ್ತದೆ. ಈ ಮೂಲಕ ನೀವು ಸಮರ್ಪಕತೆಯನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದರು. ಮುಖ್ಯ ಅತಿಥಿಯವರಾಗಿ ಆಗಮಿಸಿದ್ದ ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಿಥಾಲಿ ಪ್ರಸನ್ನ ಅವರು ಮಾತನಾಡಿ ವಿದ್ಯಾರ್ಥಿ ಸರಕಾರದ ಪದಾಧಿಕಾರಿಗಳು ಯಾವುದೇ ತಪ್ಪು ಮಾಡದೇ

ವಿದ್ಯಾರಶ್ಮಿಯಲ್ಲಿ ವಿದ್ಯಾರ್ಥಿ ಸರಕಾರದ ಉದ್ಘಾಟನೆ Read More »

ದಿವಂಗತ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ  ಹಾಗೂ ಲೇಖನ ಸ್ಪರ್ಧೆ

ಪುತ್ತೂರು: ವರ್ತನಾ ವಿಶ್ಲೇಷಕ, ಆಪ್ತ ಸಲಹೆಗಾರ, ಸಾಹಿತಿ ದಿ. ಗಂಗಾಧರ ಬೆಳ್ಳಾರೆ ಅವರನ್ನು ನೆನಪಿಸುವ ಸಲುವಾಗಿ ನಾಡಿನ ಖ್ಯಾತ  ವರ್ತನಾ ವಿಶ್ಲೇಷಕರು, ಆಪ್ತ ಸಲಹೆಗಾರರು, ಚಿಂತಕರಿಂದ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಎಂಬ ಒಂದು ದಿನದ ಕಾರ್ಯಗಾರವನ್ನು ಜುಲೈ 21 ರಂದು ಪುತ್ತೂರಿನಲ್ಲಿ  ಹಮ್ಮಿಕೊಳ್ಳಲಾಗಿದೆ. ಕಾರ್ಯದಲ್ಲಿ ಗಂಗಾಧರ ಬೆಳ್ಳಾರೆ ಅವರ ಮಾತಿನ ಹಾಗೂ ಬರಹದ ಅಭಿಮಾನಿಗಳು, ಅವರ ಶಿಷ್ಯ ವರ್ಗ, ಅವರಿಂದ ಉಪ ಕೃತರಾದವರು ಭಾಗವಹಿಸಬಹುದಾಗಿದೆ. ಪ್ರವೇಶ ಉಚಿತ, ನೊಂದಣಿ ಖಡ್ಡಾಯವಾಗಿದೆ. ಕಾರ್ಯಗಾರದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ ಹೆಸರು

ದಿವಂಗತ ಗಂಗಾಧರ ಬೆಳ್ಳಾರೆ ಮಾತಿನ ಬೆಳಕು ಒಂದು ದಿನದ ಕಾರ್ಯಗಾರ  ಹಾಗೂ ಲೇಖನ ಸ್ಪರ್ಧೆ Read More »

ಜೂ.27 : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ

ಪುತ್ತೂರು : ಬನ್ನೂರು ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನ ಮಹೋತ್ಸವ ಕಾರ್ಯಕ್ರಮ ಜೂ.27 ರಂದು ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟರಮಣ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾರ್ಪೊರೇಷನ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಟಿ.ಜಿ.ಗೌಡ ಥಾಲಿಪಡ್ಪು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಎವಿಜಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಎ.ವಿ. ನಾರಾಯಣ ಉಪಸ್ಥಿತಿರುವವರು ಎಂದು ಶಾಲೆ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.27 : ಬನ್ನೂರು ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ Read More »

ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ

ಪುತ್ತೂರು: ದೃಢ ನಿಶ್ಚಯ ಮಾಡಿ ಛಲದಿಂದ ಮುನ್ನುಗ್ಗಿದಾಗ ಯಶಸ್ಸು ಸಾಧ್ಯ. ಆ ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರಯತ್ನಪಡಬೇಕು. ಪರಿಶ್ರಮವಿಲ್ಲದೆ ಫಲ ದೊರಕುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ನಮ್ಮ ಗುರಿಯೆಡೆಗೆ ನಿರಂತರವಾದ ನಡಿಗೆಯನ್ನು ನಾವು ನಡೆಸುತ್ತಿರಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್.ನಟ್ಟೋಜ ಹೇಳಿದರು. ಅವರು ಅಂಬಿಕಾ ನೀಟ್ ಅಕಾಡೆಮಿ ವತಿಯಿಂದ ಆಯೋಜಿಸಲಾದ ನೀಟ್ ಮರುಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ದೀರ್ಘಾವಧಿ ತರಗತಿಗಳನ್ನು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ,

ಅಂಬಿಕಾದಲ್ಲಿ ನೀಟ್ ರಿಪೀಟರ್ಸ್ ಬ್ಯಾಚ್ ತರಗತಿಗಳಿಗೆ ಚಾಲನೆ Read More »

ಹಾಲಿನ ದರ 2.10 ರೂ. ಏರಿಕೆ !

ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ನ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ಲೀಟರ್ ಹಾಲಿನ ದರ 2.10 ರೂ. ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ

ಹಾಲಿನ ದರ 2.10 ರೂ. ಏರಿಕೆ ! Read More »

ಸರ್ಕಾರಿ ಬಸ್ ಅವ್ಯವಸ್ಥೆ | ವಿದ್ಯಾರ್ಥಿಗಳ ಸಮಸ್ಯೆ  ಆಲಿಸಿದ ಶಾಸಕ ಅಶೋಕ್ ರೈ | ಸಮಸ್ಯೆ  ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಶಾಸಕ ಅಶೋಕ್ ಕುಮಾರ್ ರೈಯವರು ಜೂ.24 ರಂದು ಭೇಟಿ ನೀಡಿದರು. ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಜೊತೆ ರೂಟ್ ಬಸ್ ಸಂಚಾರದ ವ್ಯವಸ್ಥೆ ಮತ್ತು ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸರಕಾರಿ ಬಸ್ ಸರಿಯಾದ ಸಮಯಕ್ಕೆ ಬರುತ್ತಿಲ್ಲ, ಕೆಲವೊಂದು ಬಾರಿ ಬಸ್ ಇರುವುದಿಲ್ಲ, ಬಸ್ ಖಾಲಿ ಇದ್ದರೂ ನಿಲ್ಲಿಸುವುದಿಲ್ಲ, ಬಸ್ ಸಮಯ ಪಾಲನೆಯಿಲ್ಲ, ನಾವು ಬಸ್ ನಿಲ್ದಾಣದಲ್ಲೇ ಬಸ್ ಗಾಗಿ ಕಾಯುತ್ತಿದ್ದರೂ ಬಸ್ ಇಲ್ಲ ಎಂಬ ಬಗ್ಗೆ ಸಂಬಂಧಿಸಿದವರು ಯಾವುದೇ

ಸರ್ಕಾರಿ ಬಸ್ ಅವ್ಯವಸ್ಥೆ | ವಿದ್ಯಾರ್ಥಿಗಳ ಸಮಸ್ಯೆ  ಆಲಿಸಿದ ಶಾಸಕ ಅಶೋಕ್ ರೈ | ಸಮಸ್ಯೆ  ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ Read More »

ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ  ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್  

ಸುಬ್ರಹ್ಮಣ್ಯ: ರಾಜ್ಯದ ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್  ಹಾಗೂ ಅವರ ಕುಟುಂಬ ಸಹಿತವಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.  ದೇವಳಯದಲ್ಲಿ ಮಧ್ಯಾಹ್ನದ ಮಹಾಪೂಜೆಯಲ್ಲಿ ಪಾಲ್ಗೊಳ್ಳಲಿರುವ ಡಿ ಕೆ  ಶಿವಕುಮಾರ್ ಕುಟುಂಬ ಸಂಜೆ ಆಶ್ಲೇಷ ಬಲಿ ಸೇವೆ ನೆರವೇರಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಉಪ ಮುಖ್ಯ ಮಂತ್ರಿಗಳನ್ನು ಹೂ ಗುಚ್ಚ ನೀಡಿ ಸ್ವಾಗತಿಸಿದರು. ಕಾಂಗ್ರೆಸ್  ಮುಖಂಡರು ಹಾಗೂ ಕಾರ್ಯಕರ್ತರಿಂದ ಸ್ವಾಗತ ಕೋರಿದರು.

ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ  ಉಪ ಮುಖ್ಯಮಂತ್ರಿ ಡಿ  ಕೆ  ಶಿವಕುಮಾರ್   Read More »

error: Content is protected !!
Scroll to Top