ಕೇರಳ ಬದಲು ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರಕ್ಕೆ ಪ್ರಸ್ತಾವನೆ

ಕೇರಳ :  ರಾಜ್ಯದ ಹೆಸರನ್ನು “ಕೇರಳಂ” ಬದಲಾಯಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ  ಕೇಂದ್ರಕ್ಕೆ ನಿರ್ಣಯ ವನ್ನು  ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಒಂದು ವರ್ಷದ ಹಿಂದೆ ನಿರ್ಣಯ ಆಂಗೀಕರಿಸಲಾಗಿತ್ತು,ಈ ಬಾರಿ ನಿರ್ಣಯದಲ್ಲಿ  ಅಲ್ಪ ಮಾರ್ಪಾಡು ಮಾಡಲಾಗಿದೆ. ಈ ಹಿಂದೆ ಕೇಂದ್ರ ಸರ್ಕಾರ ಕೆಲವು ತಿದ್ದುಪಡಿ ಉಲ್ಲೇಖಿಸಿ ವಾಪಸ್ ಕಳುಹಿಸಿತ್ತು.ಮುಖ್ಯಮಂತ್ರಿ ಪಿನರಾಯಿ ವಿಜಯನ್ ಮಂಡಿಸಿದ ನಿರ್ಣಯ ಸಂವಿಧಾನ ವಿಧಿ 3 ಅನ್ವಯ  ಕೆಲವೊಂದು ತಿದ್ದುಪಡಿಗಳನ್ನು ತಂದು ರಾಜ್ಯದ ಹೆಸರನ್ನು ಸಂವಿಧಾನ ಮೊದಲ ಷೆಡ್ಯೂಲ್ ಪ್ರಕಾರ ಕೇರಳಂ ಅಧಿಕೃತವಾಗಿ ಬದಲಾಯಿಸಲು ಮನವಿ ಮಾಡಿದೆ.

ಕೇರಳ ಬದಲು ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರಕ್ಕೆ ಪ್ರಸ್ತಾವನೆ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ

ಪುತ್ತೂರು: ಶಾಲಾ ಜೀವನದಲ್ಲಿಯೇ ಮಕ್ಕಳಿಗೆ ಚುನಾವಣಾ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಚುನಾವಣೆಯ ಮೂಲಕ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು. ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಆಕಾಶ್ ಪ್ರಭು, ಉಪನಾಯಕಿಯಾಗಿ 9 ನೇ ತರಗತಿಯ ಸುಪ್ರಜಾ ರಾವ್ ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 7ನೇ ತರಗತಿಯ ಸಾಕ್ಷಿನ್ ಆರ್.ರೈ, ಉಪನಾಯಕನಾಗಿ 6 ನೇ ತರಗತಿಯ ಸ್ಕಂದನ್ ಎಸ್. ಆಯ್ಕೆಯಾದರು. ಸಭಾಪತಿಯಾಗಿ ವರ್ಣಾ.ಕೆ,

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ Read More »

ರಾಜ್ಯಾದ್ಯಂತ ಚಿಕನ್, ಫಿಶ್‍ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ | ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್‌ ಗೆ ಕೃತಕ ಬಣ್ಣ ಬಳಕೆ ಮಾಡದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ ಕೃತಕ ಬಣ್ಣ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ. ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ

ರಾಜ್ಯಾದ್ಯಂತ ಚಿಕನ್, ಫಿಶ್‍ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ | ರಾಜ್ಯ ಸರಕಾರದಿಂದ ಆದೇಶ Read More »

ಸಂತ ಫಿಲೋಮಿನಾ ಕಾಲೇಜಿನಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಅರಿಯಡ್ಕ ಗ್ರಾಮ ಪಂಚಾಯತ್‌ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ  ಎ.ಜೆ. ಶೆಟ್ಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರವನ್ನು ಪಾಪೆಮಜಲು ಹಿ.ಪ್ರಾ. ಶಾಲೆಯಲ್ಲಿ ನಡೆಯಿತು. ಸವಣೂರಿನ ವಿದ್ಯಾ ರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಮಂಗಳೂರು ಎ.ಜೆ. ಶೆಟ್ಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಎಂಡಿಎಸ್‌ ವಿಭಾಗದ

ಸಂತ ಫಿಲೋಮಿನಾ ಕಾಲೇಜಿನಿಂದ ಉಚಿತ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರ Read More »

ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ.ಎಚ್‍. ಆಯ್ಕೆ |  ಸಮರ್ಪಣ್ ವಿಟ್ಲ ಸಂಘಟನೆಯ ಅಧ್ಯಕ್ಷ ಯಶವಂತ ನಿಡ್ಯರಿಂದ ಅಭಿನಂದನೆ

ವಿಟ್ಲ: ರೋಟರಿ ಕ್ಲಬ್ ವಿ ನೂತನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ. ಎಚ್. ಅವರು ಅಧಿಕಾರ ಸ್ವೀಕರಿಸಿದರು. .ಹರೀಶ್ ಪೂಜಾರಿ ಸಿ.ಎಚ್‍. ಅವರು ವಿಟ್ಲ ಪಟ್ಟಣ ಪಂಚಾಯತ್ ನ ಸದಸ್ಯರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿದಂತಹ ಅನುಭವಿ ವಿಟ್ಲ ರೋಟರಿ ಕ್ಲಬ್  ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಸಮರ್ಪಣ್ ವಿಟ್ಲ ಸಂಘಟನೆಯ ಅಧ್ಯಕ್ಷ ಯಶವಂತ ನಿಡ್ಯ ಹಾಗೂ ಸದಸ್ಯರುಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು. ಅವರ ಅಧ್ಯಕ್ಷತೆಯ ಅವಧಿಯಲ್ಲಿ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂಬುದಾಗಿ ಸಮರ್ಪಣ್ ವಿಟ್ಲ ಸಂಘಟನೆಯ

ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಿ.ಎಚ್‍. ಆಯ್ಕೆ |  ಸಮರ್ಪಣ್ ವಿಟ್ಲ ಸಂಘಟನೆಯ ಅಧ್ಯಕ್ಷ ಯಶವಂತ ನಿಡ್ಯರಿಂದ ಅಭಿನಂದನೆ Read More »

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್

ಹೊಸದಿಲ್ಲಿ: ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾನವಚನ ಸ್ವೀಕಾರ ಮಾಡಿದರು. ಅವರು ಕನ್ನಡ ಭಾಷೆಯಲ್ಲಿ ತುಳುನಾಡಿನ ಎಲ್ಲ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸೋಮವಾರ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಗಿದ್ದು,  ಪದ್ಧತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಪ್ರಮಾಣ ವಚನದದ ಕೊನೆಯಲ್ಲಿ “ಮಾತೆರೆಗ್ಲಾ ಸೋಲೈಲು” (ಎಲ್ಲರಿಗೂ ಧನ್ಯವಾದಗಳು) ಎಂದು ತುಳುವಿನಲ್ಲಿ ಹೇಳುವ ಮೂಲಕ ತುಳು ಭಾಷೆಯ ಬಗೆಗಿನ ತನ್ನ

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್ Read More »

ಹಾಲಿಗೆ ನೀರು ಬೆರೆಸಿ ಹೆಚ್ಚುವರಿ ಹಣ ಬೇನಾಮಿ ಖಾತೆಗೆ | ಹಾಲು ಉತ್ಪಾದಕರಿಂದ ಡೈರಿ ಮುಂದೆ ಪ್ರತಿಭಟನೆ

ಚಿಕ್ಕಬಳ್ಳಾಪುರ: ಹಾಲಿಗೆ ನೀರು ಬೆರೆಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ ಲಕ್ಷಾಂತರ ಹಣ ಗುಳುಂ ಮಾಡಿರುವ ಕುರಿತು ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದ ಹಾಲುತ್ಪಾದಕರ ಸಹಕಾರ ಸಂಘದಲ್ಲಿ ಇದೀಗ ಬಯಲಾಗಿದೆ. ಕೆಎಂಎಫ್‍ ಗೆ ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಸೇರಿಸಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು ಬೇನಾಮಿ ಅಕೌಂಟ್

ಹಾಲಿಗೆ ನೀರು ಬೆರೆಸಿ ಹೆಚ್ಚುವರಿ ಹಣ ಬೇನಾಮಿ ಖಾತೆಗೆ | ಹಾಲು ಉತ್ಪಾದಕರಿಂದ ಡೈರಿ ಮುಂದೆ ಪ್ರತಿಭಟನೆ Read More »

ಸುಳ್ಯದಲ್ಲಿ ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಸುಳ್ಯ: ಅಂಬಟೆಡ್ಕದಲ್ಲಿ ಸ್ವಂತ ನಿವೇಶನದ ಮೂಲಕ ನಿರ್ಮಾಣಗೊಂಡ ಬಿಜೆಪಿಯ ನೂತನ ಕಾರ್ಯಾಲಯವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ ಹಾಗೂ

ಸುಳ್ಯದಲ್ಲಿ ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read More »

ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ

ನಂದಿಕೂರು ದೇವರಕಾಡು ನಾಶ ಪಡಿಸಿದ ಪ್ರದೇಶದಲ್ಲಿ ಜನ ವಿರೋಧಿಯಾಗಿ ಅಸ್ತಿತ್ವಕ್ಕೆ ಬರಲು ಹವಣಿಸುತ್ತಿರುವ ಎಂ ಇಲೆವೆನ್ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಯಲು ಕಂಪನಿಗೆ ಮಾಜಿ ಸಚಿವರ ತಂಡದೊಂದಿಗೆ ಹೋಗಿದ್ದ ದಲಿತ ಮುಖಂಡರೊರ್ವರಿಗೆ ಕಂಪನಿಯ ಮಾಲಕ ಎನ್ನಲಾದ ವ್ಯಕ್ತಿ ಹಲ್ಲೆ ನಡೆಸಲು ಮುಂದಾದ ಘಟನೆ ನಡೆದಿದೆ. ಸಾರ್ವಜನಿಕ ಸಭೆಯನ್ನು ನಡೆಸದೆ ಸ್ಥಳೀಯರಿಗೆ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಸದೆ ಏಕಾಏಕಿ ತಲೆ ಎತ್ತಲು ಮುಂದಾಗಿರುವ ಬಯೋ ಡಿಸೇಲ್ ಉತ್ಪಾದನಾ ಕಂಪನಿ ಇದಾಗಿದ್ದು, ಇಲ್ಲಿ ಅಭದ್ರತೆ ಕಾಡುತ್ತಿದೆ. ಕಂಪನಿಯಿಂದ ಹೊರ ಬಿಡುವ

ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ Read More »

ರಷ್ಯಾದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಅಟ್ಟಹಾಸ : 15 ಮಂದಿ ಮೃತ್ಯು

ಮಾಸ್ಕೊ: ರಷ್ಯಾದ ಮೇಲೆ ಉಗ್ರ ದಾಳಿಯಾಗಿದೆ. ಉಗ್ರರು ಯಹೂದಿಗಳ ಪ್ರಾರ್ಥನಾ ಮಂದಿರ ಹಾಗೂ ಎರಡು ಆರ್ಥಡಾಕ್ಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳ ಮೇಲೂ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಚರ್ಚ್ ಪಾದ್ರಿಯ ಶಿರಚ್ಛೇದ ಮಾಡಿದ್ದಾರೆ. ಭೀಕರ ದಾಳಿಯಲ್ಲಿ ಪಾದ್ರಿ, ಪೊಲೀಸರು ಸೇರಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿಯನ್ನು ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಉತ್ತರ ರಷ್ಯಾದ ಕೌಕಾಸ್ ವಲಯದಲ್ಲಿ ಈ ದಾಳಿ ನಡೆದಿದೆ. ಪ್ರತಿ ದಾಳಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ರಷ್ಯಾದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಅಟ್ಟಹಾಸ : 15 ಮಂದಿ ಮೃತ್ಯು Read More »

error: Content is protected !!
Scroll to Top