ಜಹೀರ್ ಇಕ್ಬಾಲ್ ಜತೆ ನಟಿ ಸೋನಾಕ್ಷಿ ಮದುವೆ ಫಿಕ್ಸ್ | ಲವ್ ಜಿಹಾದ್ ಆರೋಪ

ಸದ್ಯ ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿ ಹಿಂದೂ ಸಂಘಟನೆಗಳು ಬಲಿಯಾಗುತ್ತಿರುವ ಹಿಂದೂ ಯುವತಿಯರ ರಕ್ಷಣೆಗೆ ಹಲವು ಪ್ರಯತ್ನಗಳನ್ನು ಮಾಡಿದರು. ಆದರೆ ಈ ಲವ್ ಜಿಹಾದ್ ಅಟ್ಟಹಾಸ ಕಮ್ಮಿಯಾಗಿಲ್ಲ. ಸೋನಾಕ್ಷಿ ಸಿನ್ಹಾ ಅವರು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುತ್ತಿರುವುದು ಲವ್ ಜಿಹಾದ್ ಎನ್ನುವು ಆರೋಪ ಕೇಳಿ ಬಂದರೂ ಇದರ ವಿರುದ್ಧ ಯಾರು ಧ್ವನಿ ಎತ್ತುತ್ತಿಲ್ಲ. ಹಾಗಾದರೆ ಈ ಸೆಲೆಬ್ರಿಟಿಗಳು, ಶ್ರೀಮಂತರ ಈ ನಡೆಯ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇದು ನಿಜಕ್ಕೂ ಗಂಭೀರವಾದ ವಿಚಾರ. ಏಕೆಂದರೆ ಎಷ್ಟೋ ಜನ […]

ಜಹೀರ್ ಇಕ್ಬಾಲ್ ಜತೆ ನಟಿ ಸೋನಾಕ್ಷಿ ಮದುವೆ ಫಿಕ್ಸ್ | ಲವ್ ಜಿಹಾದ್ ಆರೋಪ Read More »

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ : 25 ಸಾವಿರ ದಂಡ ವಿಧಿಸಿ ಆದೇಶ

ಶಿವಮೊಗ್ಗ : ಅಪ್ರಾಪ್ತನೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ. ಮಗನಿಗೆ ತಂದೆಯೇ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ತೀರ್ಥಹಳ್ಳಿ ನ್ಯಾಯಾಲಯವು ತಂದೆಗೆ 25,000 ರೂ. ದಂಡ ವಿಧಿಸಿದೆ. ದ್ವಿಚಕ್ರ ವಾಹನ ಚಾಲನೆ ಮಾಡಿದ 17 ವರ್ಷದ ಅಪ್ರಾಪ್ತ ಮೂಲತಃ ತೀರ್ಥಹಳ್ಳಿಯವನು ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ಟೌನ್ ದೊಡ್ಮನೆ ಕೇರಿ ಬಳಿಕ ಶಿವಮೊಗ್ಗ ಸಂಚಾರ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು.

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ : 25 ಸಾವಿರ ದಂಡ ವಿಧಿಸಿ ಆದೇಶ Read More »

ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

ಪುತ್ತೂರು: ಮನಸ್ಸನ್ನು ಹಿಡಿತದಲ್ಲಿಟ್ಟುಕೊಳ್ಳಲು ಯೋಗ ಅತ್ಯಗತ್ಯ. ಯೋಗದ ಯಾವುದೇ ಪ್ರಕಾರಗಳಿರಲಿ ಆಸನ, ಪ್ರಾಣಾಯಾಮ, ಏಕಾಗ್ರತೆಯೊಂದಿಗೆ ಮಾಡುವ ಧ್ಯಾನ ಎಲ್ಲದರಲ್ಲೂ ಮೂಲವಾಗಿರುವಂತಹದ್ದು ಉಸಿರಾಟ.  ಉಸಿರಾಟ ಶರೀರದ ಎಲ್ಲ ಕೆಲಸಗಳನ್ನು ನಿಯಂತ್ರಿಸುವುದು, ಶರೀರ ಮತ್ತು ಮನಸ್ಸಿನ ಏರುಪೇರನ್ನು ನಿಯಂತ್ರಿಸುವುದು. ಯೋಗವು ಆಸನ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ, ಜೀವನ ಶೈಲಿ ಎಲ್ಲವನ್ನು ಒಳಗೊಂಡಿರುವುದು ಎಂದು ಯೋಗಾರೋಗ್ಯ ಸಂಸ್ಥೆಯ ಚಿಕಿತ್ಸಕ, ಯೋಗ ತಜ್ಞ ಡಾ. ಉದಯ ಕುಮಾರ್ ಕೆ. ಹೇಳಿದರು. ಅವರು ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ

ಅಂಬಿಕಾ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ Read More »

ಅರಣ್ಯ ಇಲಾಖೆ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ತಾಲೂಕು ಮಟ್ಟದ ವನಮಹೋತ್ಸವ | ಶಾಲೆ, ರಸ್ತೆ ಬದಿಗಳಲ್ಲಿ ಗಿಡ ನಾಟಿ

ಪುತ್ತೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಶಾಲೆ ಹಾಗೂ ರಸ್ತೆ ಬದಿಗಳಲ್ಲಿ ಶಾಲೆಗಳಲ್ಲಿ ಗಿಡ ನೆಡುವ ಮೂಲಕ ತಾಲೂಕು ಮಟ್ಟದ ವನಮಹೋತ್ಸವವನ್ನು ಇಂದು ಆಚರಿಸಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹಾರಾಡಿ ಶಾಲೆಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯಾಧಿಕಾರಿ ಬಿ.ಎಂ.ಕಿರಣ್, ಸಿಬ್ಬಂದಿಗಳು, ಟ್ರಸ್ಟ್ ಪ್ರಮುಖರು, ಶಾಲಾ ಶಿಕ್ಷಕರು ಹಾಗೂ ಮಕ್ಕಳು ಪಾಲ್ಗೊಂಡರು. ಬಳಿಕ ಉಪ್ಪಿನಂಗಡಿ ರಸ್ತೆ

ಅರಣ್ಯ ಇಲಾಖೆ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ತಾಲೂಕು ಮಟ್ಟದ ವನಮಹೋತ್ಸವ | ಶಾಲೆ, ರಸ್ತೆ ಬದಿಗಳಲ್ಲಿ ಗಿಡ ನಾಟಿ Read More »

ಮೂಲ ಸೌಕರ್ಯ ಕೊರತೆ, ವಿಪರೀತ‌ ಸೆಖೆ  l  1300 ಹಜ್ ಯಾತ್ರಿಕರು ಮೃತ್ಯು

ಸೌದಿ ಅರೇಬಿಯಾ: ತೀವ್ರವಾದ ತಾಪಮಾನದ ಕಾರಣ 1,300 ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಅಧಿಕೃತ ಪರವಾನಗಿಗಳನ್ನು ಹೊಂದಿರಲಿಲ್ಲ ಎಂದು ಸೌದಿ ಅರೇಬಿಯಾ ಭಾನುವಾರ ಹೇಳಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅಮೆರಿಕ, ಇಂಡೋನೇಷ್ಯಾ, ಭಾರತ ಸೇರಿದಂತೆ 10ಕ್ಕೂ ಹೆಚ್ಚು ರಾಷ್ಟ್ರಗಳಿಂದ ಸುಮಾರು 16 ಲಕ್ಷ ಯಾತ್ರಿಕರು ಹಜ್ ಯಾತ್ರೆಗೈದಿದ್ದರು. ಮಿತಿಮೀರಿದ ತಾಪಮಾನ ಏರಿಕೆಯಿಂದ 1,301 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ. ಸುಮಾರು 3000 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರ ಪೈಕಿ ಶೇ.83 ಮಂದಿ

ಮೂಲ ಸೌಕರ್ಯ ಕೊರತೆ, ವಿಪರೀತ‌ ಸೆಖೆ  l  1300 ಹಜ್ ಯಾತ್ರಿಕರು ಮೃತ್ಯು Read More »

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಸುಬ್ರಹ್ಮಣ್ಯ: ಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿದರು. ಸುಬ್ರಹ್ಮಣ್ಯ ನ ದರ್ಶನ ಪಡೆದ ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು. ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರ ಜೊತೆಗಿದ್ದರು.

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೂ.24 ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪನವರನ್ನು ಗೌರವಿಸಿದರು‌. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶನಾಥ್, ಧರ್ಮಸ್ಥಳದ ಪಿ.ಎಸ್.ಕೃಷ್ಣ ಸಿಂಗ್ ಜೊತೆಯಲ್ಲಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ Read More »

ಸೌತಡ್ಕ ಶ್ರೀ ಮಹಾಗಣಪತಿ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಸೋಮವಾರ ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ,

ಸೌತಡ್ಕ ಶ್ರೀ ಮಹಾಗಣಪತಿ ಸ್ವಾಮಿಯ ದರ್ಶನ ಪಡೆದ ಯಡಿಯೂರಪ್ಪ Read More »

ಪಾಂಡವ ವನಗಮನ ತಾಳಮದ್ದಲೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ‘ಪಾಂಡವ ವನಗಮನ’ ತಾಳ ಮದ್ದಳೆ  ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಮತ್ತು ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ ಸಹಕರಿಸಿದರು. ಅರ್ಥಧಾರಿಗಳಾಗಿ ಸತೀಶ ಆಚಾರ್ಯ ಮಾಣಿ (ಕೌರವ), ದಿವಾಕರ ಆಚಾರ್ಯ ಗೇರುಕಟ್ಟೆ (ದ್ರೌಪದಿ, ಅರ್ಜುನ), ಜಯರಾಮ ಬಲ್ಯ (ಭೀಮ), ಸಂಜೀವ ಪಾರೆಂಕಿ (ಭೀಷ್ಮ ಮತ್ತು ನಕುಲ),

ಪಾಂಡವ ವನಗಮನ ತಾಳಮದ್ದಲೆ Read More »

ಇಂದಿನಿಂದ ಸಂಸತ್ತಿನ ಅಧಿವೇಶನ

ಹೊಸದಿಲ್ಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.  ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನೀಟ್-ಯುಜಿ ಪತ್ರಿಕೆ ಸೋರಿಕೆ, ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಮುಂದೂಡಿಕೆ ವಿಚಾರದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ತಂತ್ರ ರೂಪಿಸಿದ್ದು, ಮೊದಲ ದಿನವೇ ಗದ್ದಲ ನಡೆಯುವ ಸಾಧ್ಯತೆ

ಇಂದಿನಿಂದ ಸಂಸತ್ತಿನ ಅಧಿವೇಶನ Read More »

error: Content is protected !!
Scroll to Top