ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಸಂಭ್ರಮ | ಗಣಪತಿ ಹೋಮ, ಶ್ರೀ ಲಕ್ಷ್ಮೀ ಪೂಜೆಯೊಂದಿಗೆ 10ನೇ ವರ್ಷಕ್ಕೆ ಪಾದಾರ್ಪಣೆಗೈದ ಶಾಖೆ | ಖಾಸಗಿ, ಜಾತಿಯ ಹಿನ್ನಲೆಯಲ್ಲಿ ಆರಂಭಗೊಂಡ ಸಹಕಾರಿ ಸಂಘ ಅತ್ಯುನ್ನತ ಸಹಕಾರ ಸಂಘವಾಗಿ ಬೆಳೆದಿದೆ : ಚಿದಾನಂದ ಬೈಲಾಡಿ
ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಕುಂಬ್ರ ಶಾಖೆಯ ದಶಮಾನೋತ್ಸವ ಕಾರ್ಯಕ್ರಮ ಇಂದು ಬೆಳಿಗ್ಗೆ ಶಾಖೆಯಲ್ಲಿ ನಡೆಯಿತು. ದಶಮಾನೋತ್ಸವದ ಅಂಗವಾಗಿ ಗಣಹೋಮ, ಶ್ರೀ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, 2002 ರಲ್ಲಿ ಡಿ.ವಿ.ಸದಾನಂದ ಗೌಡರು ಶಾಸಕರಾಗಿದ್ದಾಗ ಸಮಾನ ಮನಸ್ಕರ ಕಲ್ಪನೆಯಂತೆ ಪುತ್ತೂರಿನಲ್ಲಿ ಪ್ರಥಮ ಶಾಖೆಯನ್ನು 2002 ರಲ್ಲಿ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಮೋಹನ ಗೌಡ ನೇತೃತ್ವ ವಹಿಸಿದ್ದರು. ತನ್ನದೇ ಆದ ಕಾರ್ಯಶೈಲಿಯಲ್ಲಿ ಚಟುವಟಿಕೆಗಳನ್ನು ಮಾಡುತ್ತಾ 2009 ರಲ್ಲಿ ಕಡಬ, […]










