ನರೇಂದ್ರ ಕಾಲೇಜಿನಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ

ಪುತ್ತೂರು: ಶಿವಾಜಿ ಇಂದು ಸ್ವಶಕ್ತಿಯಿಂದ ಹಿಂದೂ ಸಾಮ್ರಾಜ್ಯಕ್ಕೆ, ಅಭೀಷಕ್ತನಾದ ದಿನವಾಗಿದ್ದು, ಶ್ರೇಷ್ಟ ಶುದ್ಧ ತ್ರಯೋದಶಿಯನ್ನು ರಾಷ್ಟ್ರಕ್ಕೆ ಪರ್ವದಿನವಾಗಿ, ಹಿಂದೂ ಸಾಮ್ರಾಜ್ಯ ದಿನೋತ್ಸವವಾಗಿ, ರಾಷ್ಟ್ರಜಾಗರಣ ಮಹೋತ್ಸವವಾಗಿ ಆಚರಿಸಲಾಗುತ್ತದೆ ಎಂದು ವಿದ್ಯಾಭಾರತಿ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ ಚಂದ್ರಶೇಖರ ದೇಲಂಪಾಡಿ ಹೇಳಿದರು. ಅವರು ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆಯ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ ಮಾತನಾಡಿ, ಶಿವಾಜಿಯ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಮರ್ಥರಾಗಬೇಕು ಎಂದು ಹೇಳಿದರು. ಕಾಲೇಜಿನ ಉಪನ್ಯಾಸಕರು, […]

ನರೇಂದ್ರ ಕಾಲೇಜಿನಲ್ಲಿ ಹಿಂದೂ ಸಾಮ್ರಾಜ್ಯ ದಿವಸ್ ಆಚರಣೆ Read More »

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದ್ದು, ಗುಂಡಿಗೆ ಬಲಿಯಾದ ಯೋಧ ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(25) ಎಂದು ತಿಳಿದು ಬಂದಿದೆ. ಮಂದಿರದ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಸಹ ಸಿಬ್ಬಂದಿ ಅಲ್ಲಿಗೆ ಓಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಯೋಧನ ಸಾವು

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು Read More »

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನ ಸಂಬಂಧಿಕರ ಮನೆಯಲ್ಲಿ ಪತ್ತೆ

ಉಜಿರೆ :ಉಜಿರೆ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕು ಕಸಬಾ ಹೋಬಳಿ ದೇವಾಂಗ ರಸ್ತೆಯ ದಿವ್ಯಾ ಎಸ್ ಎಂಬವರು ಉಜಿರೆ ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜುನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುತ್ತೇನೆ ಎಂದು ನಿಲಯ ಪಾಲಕಿಯಲ್ಲಿ ಅನುಮತಿ ಪಡೆದುಕೊಂಡು ಹೋದವಳು, ಹಾಸ್ಟೇಲ್ ಗೂ ವಾಪಸ್ಸು ಬರದೇ, ಕಾಲೇಜಿಗೂ ಹೋಗದೇ,

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನ ಸಂಬಂಧಿಕರ ಮನೆಯಲ್ಲಿ ಪತ್ತೆ Read More »

ಫ್ರಿಡ್ಜ್ ಸ್ಫೋಟಗೊಂಡ ಮನೆಗೆ‌ ಮಾಜಿ ಶಾಸಕ ಸಂಜೀವ‌ ಮಠಂದೂರು ಭೇಟಿ

ಪುತ್ತೂರು : ಮನೆಯೊಂದರಲ್ಲಿ ಫ್ರಿಡ್ಜ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ ಘಟನೆ ಜಿಡೆಕಲ್ಲು ಕಾಲೇಜು ಸಮೀಪ ನಿನ್ನೆ ನಡೆದಿದ್ದು, ಘಟನಾ ಸ್ಥಳಕ್ಕೆ ಇಂದು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದರು.  ಈ ಸಂದರ್ಭದಲ್ಲಿ ನಗರಸಭಾ ಆಯುಕ್ತರಿಗೆ ಕರೆ ಮಾಡಿ ಮನೆ ದೊರಕಿಸಿಕೊಡಬೇಕಾಗಿ ಮನವಿ ಮಾಡಿದ್ದಾರೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಎಂಬವರ ಮನೆಯಲ್ಲಿ ರೆಫ್ರಿಜರೇಟ‌ರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಿಂದಾಗಿ ಮನೆಗೆ ಸಂಪೂರ್ಣ ಹಾನಿಯಾದ ಹಿನ್ನೆಲೆ ಆರ್ಥಿಕ ನೆರವು ನೀಡಿದ್ದಾರೆ.

ಫ್ರಿಡ್ಜ್ ಸ್ಫೋಟಗೊಂಡ ಮನೆಗೆ‌ ಮಾಜಿ ಶಾಸಕ ಸಂಜೀವ‌ ಮಠಂದೂರು ಭೇಟಿ Read More »

ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಹತ್ತನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಉಪ್ಪಿನಂಗಡಿ: ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿ ಹತ್ತನೇ ತರಗತಿಯ ಬಾಲಕನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಬಾಲಕ ಹೇಮಾವತಿ ಅವರ ಮನೆಯ ತಂಗಿದ್ದು, ಈತ ಅವರ ಅಕ್ಕನ ಮಗನಾಗಿದ್ದು, ಹತ್ತನೇ ತರಗತಿ ವಿದ್ಯಾರ್ಥಿ. ಬಾಲಕ ಹೇಮಾವತಿ ಅವರು ಮಲಗಿದ್ದಲ್ಲಿ ಹೋಗಿ ದೇಹ ಸುಖ ಬಯಸಿದ್ದಾನೆ. ಇದಕ್ಕೆ ಹೇಮಾವತಿ ಪ್ರತಿರೋದ ಮಾಡಿದ್ದು, ಈ ವೇಳೆ ಆರೋಪಿ ಬಾಲಕ ಕತ್ತು ಹಿಸುಕಿ ಕೊಲೆ

ಉಪ್ಪಿನಂಗಡಿ ಹೇಮಾವತಿ ಕೊಲೆ ಪ್ರಕರಣ | ಹತ್ತನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು Read More »

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ | ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಜನರು ನೊಂದು ನೋವಿನಲ್ಲಿ ಬರುವ ಜಾಗ ಇದ್ರೆ ಅದು ಆಸ್ಪತ್ರೆ ಮತ್ತು ಪೊಲೀಸ್ ಸ್ಟೇಷನ್. ಆದರೆ ಪೊಲೀಸ್ ಠಾಣೆಗೆ ಹೆದರಿ ಹೋಗುವವರಿದ್ದಾರೆ. ಆಸ್ಪತ್ರೆಗೆ ನೋವು ತೆಗೆದು ಕೊಂಡು ಬರುವವರು ಇದ್ದಾರೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಗೆ ಬರುವವರಿಗೆ ಸ್ಪಂದನೆ ಸಿಗಬೇಕು. ನೊಂದು ಬಂದವರಿಗೆ ಮೊದಲ ಸ್ಪಂದನೆ ನೀಡಿ ಎಂದು ಶಾಸಕ ಅಶೋಕ್ ಕುಮಾರ್ ರೈ ಆಸ್ಪತ್ರೆಯ ವೈದ್ಯರುಗಳಿಗೆ ಸೂಚನೆ ನೀಡಿದರು. ಸರಕಾರಿ ಆಸ್ಪತ್ರೆಯಲ್ಲಿ ನಡೆದ ನೂತನ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ | ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ Read More »

ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ !

ಮಂಜೇಶ್ವರ: ಆರೋಗ್ಯ ಅಧಿಕಾರಿಯೊಬ್ಬರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಪತ್ತನಂತ್ತಿಟ್ಟದ ಮನೋಜ್ (45) ಎಂಬವರ ಶವ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದ ಮನೋಜ್ ಅವರು ಮಂಜೇಶ್ವರ ಎಸ್ ಐ ಟಿ ಶಾಲಾ ಸಮೀಪದ ವಸತಿ ಗೃಹದಲ್ಲಿ ವಾಸವಾಗಿದ್ದರು. ದುರ್ವಾಸನೆ ಕಂಡು ಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಓರ್ವರೇ ಈ ಕೊಠಡಿಯಲ್ಲಿದ್ದರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಹೃದಯಘಾತದಿಂದ

ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ ! Read More »

ರೈಲಿಗೆ ಸಿಲುಕಿ ಯುವತಿ ಮೃತ್ಯು !

ತುಮಕೂರು : ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ವರ್ಷಿಣಿ (19) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ವರ್ಷಿಣಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದಳು. ತನ್ನ ಊರಿನಿಂದ ಕಾಲೇಜಿಗೆ ಪ್ರತಿದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ನಿನ್ನೆ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ

ರೈಲಿಗೆ ಸಿಲುಕಿ ಯುವತಿ ಮೃತ್ಯು ! Read More »

ತುಳು ಚಲನಚಿತ್ರ ನಟಿ ಪುತ್ತೂರಿನ ಪ್ರತಿಭೆಗೆ ‘ಕೋಸ್ಟಲ್ ಫಿಲ್ಮ್ ಅವಾರ್ಡ್’

ಪುತ್ತೂರು : ಪುತ್ತೂರಿನ ಚೆಲುವೆ ರಚನಾ ರೈ ಅವರಿಗೆ ‘ಉತ್ತಮ ತುಳು ಚಲನಚಿತ್ರ ನಟಿ’ ಕೋಸ್ಟಲ್ ಫಿಲ್ಮ್ ಅವಾರ್ಡ್ ಲಭಿಸಿದೆ. ಜೂ.16ರಂದು ಮೂಲ್ಕಿ ನುಂದರ್ ರಾಮ್ ಶೆಟ್ಟಿ ಕನ್ವೆನ್ಸನ್ ಸೆಂಟರ್ ನಲ್ಲಿ ಗಣ್ಯರು, ತುಳು ಚಲನಚಿತ್ರರಂಗದ ನಟ, ನಟಿಯರು, ನಿರ್ಮಾಪಕರು, ನಿರ್ದೇಶಕರು, ಗಾಯಕರು, ತಾಂತ್ರಿಕ ವರ್ಗದವರೆಲ್ಲರ ಉಪಸ್ಥಿತಿಯಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ 2024ರಲ್ಲಿ  ಪ್ರಶಸ್ತಿ ಪ್ರದಾನ ಮಾಡಲಾಯಿತು. ರಚನಾ ರೈ ಪುತ್ತೂರು ಹಾರಾಡಿ ಶಾಲಾ ಶಿಕ್ಷಕಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ

ತುಳು ಚಲನಚಿತ್ರ ನಟಿ ಪುತ್ತೂರಿನ ಪ್ರತಿಭೆಗೆ ‘ಕೋಸ್ಟಲ್ ಫಿಲ್ಮ್ ಅವಾರ್ಡ್’ Read More »

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಯೋಗ ತರಬೇತಿ ಉದ್ಘಾಟನೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ತರಬೇತಿಯನ್ನು ಆರಂಭಗೊಳಿಸಲಾಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಮನಸ್ಸು ಮತ್ತು ದೇಹದ ಸಂಯೋಗವೇ ಯೋಗ. ಇದರ ಭಾಗವಾದ ಸುದರ್ಶನ ಕ್ರಿಯಾ ಯೋಗವನ್ನು ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡುವಂತೆ ತರಬೇತಿ ನೀಡಲಾಗುತ್ತದೆ. ಇದರ ಅಭ್ಯಾಸದಿಂದ ಒಬ್ಬ  ವ್ಯಕ್ತಿಯು ಸನಾತನ ಧರ್ಮದ ನಿಜವಾದ ಅನುಯಾಯಿಯಾಗುತ್ತಾನೆ ಎಂದು ಹೇಳಿದ ಅವರು, ನಕರಾತ್ಮಕ ಭಾವನೆಗಳಾದ ಸಿಟ್ಟು ಗೊಂದಲಗಳು ಮನುಷ್ಯನ ಉಸಿರಾಟದ ವೇಗವನ್ನು ಹೆಚ್ಚಿಸುತ್ತವೆ.

ಅಂಬಿಕಾ ಪ.ಪೂ.ವಿದ್ಯಾಲಯದಲ್ಲಿ ಯೋಗ ತರಬೇತಿ ಉದ್ಘಾಟನೆ Read More »

error: Content is protected !!
Scroll to Top