ಜೂ.20 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ

ಪುತ್ತೂರು: ಉಪ್ಪಿನಂಗಡಿ-ಪುತ್ತೂರು ಮಾರ್ಗದಲ್ಲಿ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್ ಸಪ್ಲೈ ಮತ್ತು ಉಪ್ಪಿನಂಗಡಿ ಎಕ್ಸ್ ಪ್ರೆಸ್ ಫೀಡರ್ ನಲ್ಲಿ ಜೂ.20 ಗುರುವಾರ ಬೆಳಗ್ಗೆ 10 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‍ ನಿಂದ ವಿದ್ಯುತ್ ನಿಲುಗಡೆಗೊಳ್ಳಲಿದೆ. ವಿದ್ಯುತ್ ಸರಬರಾಜಾಗುವ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.20 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ Read More »

ಪುರುಷತ್ವ ಪರೀಕ್ಷೆ ತುಂಬಾ ಮುಜುಗರವಾಗುತ್ತೆ | ಜಡ್ಜ್ ಮುಂದೆ ಅಳಲು ತೋಡಿಕೊಂಡ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆ ಮುಂದುವರಿದಿದ್ದು, ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಮತ್ತೊಮ್ಮೆ ಪುರುಷತ್ವ ಪರೀಕ್ಷೆಗೆ ಮನವಿ ಮಾಡಿಕೊಂಡಿದ್ದಕ್ಕೆ ಪ್ರಜ್ವಲ್ ರೇವಣ್ಣ ತನ್ನ ಅಳಲು ತೋಡಿಕೊಂಡಿದ್ದಾರೆ. ಕೋರ್ಟ್ ವಿಚಾರಣೆ ವೇಳೆ ಆರೋಪಿ ಪ್ರಜ್ವಲ್ ರೇವಣ್ಣ ಅವರು ನಾನು ಎರಡು ಕೇಸ್‌ನಲ್ಲಿ ಒಪ್ಪಿಕೊಂಡು ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗುತ್ತೆ. ಎರಡು ಸಲ ಕೇಳಿದಕ್ಕೆ

ಪುರುಷತ್ವ ಪರೀಕ್ಷೆ ತುಂಬಾ ಮುಜುಗರವಾಗುತ್ತೆ | ಜಡ್ಜ್ ಮುಂದೆ ಅಳಲು ತೋಡಿಕೊಂಡ ಪ್ರಜ್ವಲ್ ರೇವಣ್ಣ Read More »

ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ : ತಡೆದ ಹಿಂದೂ ಕಾರ್ಯಕರ್ತರು

ಸುಳ್ಯ: ಅನ್ಯಕೋಮಿನ ಇಬ್ಬರು ಯುವಕರೊಂದಿಗೆ ಹಿಂದೂ ಹುಡುಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರು ತಡೆದ ಘಟನೆ ಸುಳ್ಯದಲ್ಲಿ ನಡೆದಿದೆ. ಕೇರಳ ಮೂಲದ ಅನ್ಯ ಕೋಮಿನ ಇಬ್ಬರು ಯುವಕರೊಂದಿಗೆ ಹಿಂದು ಹುಡುಗಿ ಇದ್ದಳೆಂದು ಅವರ ಪ್ರಯಾಣಿಸುತ್ತಿದ್ದ ಕಾರನ್ನು ಹಿಂದೂ ಕಾರ್ಯಕರ್ತರು ತಡೆದಿದ್ದಾರೆ. ಘಟನೆಗೆ ಸಂಬಂಧಿಸಿ ಮೂವರನ್ನು ಠಾಣೆಗೆ ಕರೆದೊಯ್ದಿರುವುದಾಗಿ ತಿಳಿದು ಬಂದಿದೆ. ಮಾರುತಿ ಶಿಫ್ಟ್ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ. ಇದೀಗ ಪೋಲಿಸರು ವಿಚಾರಿಸುತ್ತಿದ್ದು, ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಹುಡುಗಿ : ತಡೆದ ಹಿಂದೂ ಕಾರ್ಯಕರ್ತರು Read More »

ಕಾಂತಮಂಗಲ ಶಾಲಾ ಜಗಲಿಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಸಂತ ಎಂಬವರ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ (35) ಬಂಧಿತ ಆರೋಪಿ. ರವಿವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬವರನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಉದಯ ಕುಮಾರ್ ಗೆ ಬಾರೊಂದರಲ್ಲಿ ವಸಂತ ಎಂಬಾತನ ಪರಿಚಯವಾಗಿದ್ದು, ರವಿವಾರ

ಕಾಂತಮಂಗಲ ಶಾಲಾ ಜಗಲಿಯಲ್ಲಿ ನಡೆದ ಕೊಲೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು Read More »

ಕಾರ್ಯಕರ್ತರ ಅವಿರತ ಶ್ರಮ, ಮತದಾರರ ಬೆಂಬಲದಿಂದ ಪಾರ್ಟಿಗೆ ಗೆಲುವು : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ದಕ್ಷಿಣಕನ್ನಡ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಇಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಘ ಕಾರ್ಯಾಲಯ ಪಂಚವಟಿಗೆ ಭೇಟಿ ನೀಡಿ ಭಾರತಮಾತೆಗೆ ಪುಷ್ಪಾರ್ಚನೆಗೈದು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಅವಿರತ ಶ್ರಮ ಮತ್ತು ಮತದಾರರ ಬೆಂಬಲದಿಂದ ಪಾರ್ಟಿಗೆ ಗೆಲುವಾಗಿದೆ. ಜಿಲ್ಲೆಯ ಸಮಗ್ರ ದೃಷ್ಟಿಕೋನವನ್ನು ಇಟ್ಟುಕೊಂಡು ಅಭಿವೃದ್ದಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ರವರು ಶಾಲು ಹೊದಿಸಿ ಹಾರ

ಕಾರ್ಯಕರ್ತರ ಅವಿರತ ಶ್ರಮ, ಮತದಾರರ ಬೆಂಬಲದಿಂದ ಪಾರ್ಟಿಗೆ ಗೆಲುವು : ಕ್ಯಾ.ಬ್ರಿಜೇಶ್ ಚೌಟ Read More »

ಬಿಜೆಪಿ ಪ್ರಮುಖರಿಂದ ದಿ.ಎಂ.ಬಿ.ಭಾನುಪ್ರಕಾಶ್ ಗೆ ಶ್ರದ್ಧಾಂಜಲಿ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ದಿ.ಎಂ.ಬಿ.ಭಾನುಪ್ರಕಾಶ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಮಾಜಿ ವಿಧಾನ ಪರಿಷತ್‌ ಸದಸ್ಯರು, ಬಿಜೆಪಿ ಹಿರಿಯ ನಾಯಕರು ಭಾನುಪ್ರಕಾಶ್ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್‌, ವಿಧಾನಪರಿಷತ್‌ ಸದಸ್ಯರಾದ ಶ್ರೀ ಸಿ. ಟಿ. ರವಿ, ಶ್ರೀ ಛಲವಾದಿ ನಾರಾಯಣಸ್ವಾಮಿ,

ಬಿಜೆಪಿ ಪ್ರಮುಖರಿಂದ ದಿ.ಎಂ.ಬಿ.ಭಾನುಪ್ರಕಾಶ್ ಗೆ ಶ್ರದ್ಧಾಂಜಲಿ Read More »

ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ  ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ ಸರಿಪಡಿಸಲು ವರದಿ ತಯಾರಿಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.

ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ಮುಳಿಯ ಜ್ಯುವೆಲ್ಸ್ ನಿಂದ ಭಾರತೀಯ ಸೇನೆಗೆ ಆಯ್ಕೆಯಾದ ಭವಿಶ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು. ಪುತ್ತೂರು ಮುಳಿಯ ಜ್ಯುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಭವಿಶ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸನ್ಮಾನ ಸ್ವೀಕರಿಸಿ ಮಾತಾನಾಡಿದ ಅಗ್ನಿವೀರ ಭವಿಶ್ ತಾರಿಗುಡ್ಡೆ, ಸೇನೆಯಲ್ಲಿ ದೇಶ ಸೇವೆಯನ್ನು ಮಾಡಬೇಕೆಂಬ ಕನಸು ಸಣ್ಣದರಲ್ಲೇ ಇತ್ತು. ಆರ್ಥಿಕ ಕಷ್ಟ

ಮುಳಿಯ ಜ್ಯುವೆಲ್ಸ್ ನಿಂದ ಭಾರತೀಯ ಸೇನೆಗೆ ಆಯ್ಕೆಯಾದ ಭವಿಶ್ ಅವರಿಗೆ ಅಭಿನಂದನಾ ಕಾರ್ಯಕ್ರಮ Read More »

ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್  ಆತ್ಮಹತ್ಯೆ ! | ಡೆತ್ ನೋಟ್ ಪತ್ತೆ

ಬೆಂಗಳೂರು : ಕಾಣೆಯಾಗಿದ್ದ ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್ ಎಂಬಾತನ  ಶವ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್ (35) ವಿಷ ಸೇವಿಸಿ ಏಪ್ರಿಲ್ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ ಪೊಲೀಸರು

ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್  ಆತ್ಮಹತ್ಯೆ ! | ಡೆತ್ ನೋಟ್ ಪತ್ತೆ Read More »

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.17 ರ ಸಂಜೆ ಬೆಳಕಿಗೆ ಬಂದಿದೆ. ನಿಡ್ಪಳ್ಳಿ ಗ್ರಾಮ ವಾಲ್ತಾಜೆ ರಾಜಮೂಲೆ ನಿವಾಸಿ ದೇವಣ್ಣ ನಾಯ್ಕ(77) ಮೃತಪಟ್ಟವರು. ಅವರು ಮನೆಯ ಒಳಗೆ ನೈಲಾನ್ ಹಗ್ಗದಿಂದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಪುತ್ರ ಮಂಜುನಾಥ ನಾಯ್ಕರವರು ಕೂಲಿ ಕೆಲಸ ಮುಗಿಸಿ ಮನೆಗೆ ಬಂದ ಸಮಯ ಘಟನೆ ಬೆಳಕಿಗೆ ಬಂದಿದೆ. ಘಟನೆ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

error: Content is protected !!
Scroll to Top