ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ’ ಪ್ರಶಸ್ತಿ ಪ್ರದಾನ | ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: 2023-24ನೇ ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ ಶೇ.100 ಅಂಕ ಪಡೆದ ಮತ್ತು 10ನೇ ತರಗತಿಯಲ್ಲಿ 605ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ನೀಡಿ ಗೌರವಿಸುವ ಕಾರ್ಯಕ್ರಮ  ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಇಂದು ಪ್ರಯತ್ನ ಮಾಡಿದರೆ ಎನೂ […]

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ’ ಪ್ರಶಸ್ತಿ ಪ್ರದಾನ | ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ  ‘ಉದ್ಘೋಷ-2024’

ಪುತ್ತೂರು: ಇಂದು ಐಎಎಸ್, ಐಪಿಎಸ್ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ಬರೆಯುವುದಕ್ಕೆ ಮತ್ತು ಕನ್ನಡದಲ್ಲೇ ಸಂದರ್ಶನ ಎದುರಿಸುವುದಕ್ಕೆ ಅವಕಾಶವಿದೆ. ನಮ್ಮ ಭಾಗದ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಬಳಸಿಕೊಳ್ಳಬೇಕು. ಆಡಳಿತ ವ್ಯವಸ್ಥೆಗೆ ನಮ್ಮನ್ನು ನಾವು ಒಡಮೂಡಿಸಿಕೊಂಡು ಉತ್ಕೃಷ್ಟ ರಾಷ್ಟ್ರ ನಿರ್ಮಾಣದಲ್ಲಿ ಭಾಗಿಗಳಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ  ‘ಉದ್ಘೋಷ=2024’ ೨ನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳಿಂದ ದೂರ ಸರಿಯದೆ ರಾಷ್ಟ್ರಭಕ್ತರಾಗಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ  ‘ಉದ್ಘೋಷ-2024’ Read More »

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ಭವಿಷ್ಯದ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಕೊಳ್ಳಬೇಕು.ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿನ ಪ್ರತಿಭೆಯನ್ನು ಗುರುತಿಸಿ ಉತ್ತಮ ವಾತಾವರಣ ಕಲ್ಪಿಸಿಕೊಟ್ಟಾಗ ಪ್ರತಿಭೆ ವಿಕಸನಗೊಳ್ಳುತ್ತದೆ. ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು ಎಂದು ಮುಕ್ರಂಪಾಡಿಯಲ್ಲಿರುವ ಎಸ್. ಆರ್. ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳ ಸನ್ಮಾನ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ, ಅಭಿನಂದನಾ ಸಮಾರಂಭ Read More »

ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ವಿವೇಕಾನಂದದ ರಕ್ಷಾ ಜಿ. ಆಯ್ಕೆ

ಪುತ್ತೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಜರುಗಿದ  ರಾಜ್ಯ ಮಟ್ಟದ  ಜೂನಿಯರ್ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ +87 ವಿಭಾಗದಲ್ಲಿ ಭಾಗವಹಿಸಿದ ಪುತ್ತೂರಿನ ವಿವೇಕಾನಂದ ಕಾಲೇಜಿನ  ವಿದ್ಯಾರ್ಥಿನಿ ರಕ್ಷಾ.ಜಿ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಜೂ.18 ರಿಂದ 21 ರ ತನಕ ಮಧ್ಯಪ್ರದೇಶದ ಇಂಧೊರ್ ನಲ್ಲಿ ನಡೆಯಲಿರುವ ’ಅಸ್ಮಿತಾ ಖೇಲೊ ಇಂಡಿಯಾ’ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ  ರವಿಶಂಕರ್ ಹಾಗೂ ಯತೀಶ್

ರಾಷ್ಟ್ರಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಗೆ ವಿವೇಕಾನಂದದ ರಕ್ಷಾ ಜಿ. ಆಯ್ಕೆ Read More »

ಕರ್ನಾಟಕದ ರಾಜ್ಯಪಾಲರನ್ನು ಭೇಟಿಯಾದ ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶನಿವಾರ ಭೇಟಿ ಮಾಡಿದರು. ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಭೇಟಿ ಮಾಡಿದ್ದಾರೆ. ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತುಕತೆ ನಡೆಸಿದರು.

ಕರ್ನಾಟಕದ ರಾಜ್ಯಪಾಲರನ್ನು ಭೇಟಿಯಾದ ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಕಡ್ಡಾಯ | ಆದೇಶ ರದ್ದುಗೊಳಿಸುವಂತೆ ಶಾಸಕರಿಗೆ ಮನವಿ

ಪುತ್ತೂರು; ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಲ್ಲಿ ಬಿಇಡಿ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದು ಈ ಸುತ್ತೋಲೆಯನ್ನು ರದ್ದು ಮಾಡುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರಿಗೆ ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗಾಗಲೇ ಪಿಜಿ ಪದವಿಧರರು ಅತಿಥಿ ಉಪನ್ಯಾಸಕರಾಗಿ ಕರ್ತವ್ಯದಲ್ಲಿದ್ದಾರೆ. ಹಲವು ವರ್ಷಗಳಿಂದ ಉಪನ್ಯಾಸವನ್ನು ಮಾಡುತ್ತಿದ್ದಾರೆ. ಇವರು ಮುಂದಿನ ದಿನಗಳಲ್ಲಿ ಉಪನ್ಯಾಸಕರಾಗಿ ಮುಂದುವರೆಯಬೇಕಾದಲ್ಲಿ ಬಿಇಡಿ ಕಡ್ಡಾಯವಾಗಿ ಮಾಡಬೇಕಿದೆ ಎಂಬುದು ಶಿಕ್ಷಣ ಇಲಾಖೆಯ ಆದೇಶವಾಗಿದೆ. ಈ ಆದೇಶ ಜಾರಿಯಾದಲ್ಲಿ ಹಲವು ಮಂದಿ ಉಪನ್ಯಾಸಕರು ಕೆಲಸವನ್ನು ಕಳೆದುಕೊಳ್ಳಲಿದ್ದೇವೆ. ಅತಿಥಿ

ಪಿಯು ಅತಿಥಿ ಉಪನ್ಯಾಸಕರ ನೇಮಕಾತಿಗೆ ಬಿಇಡಿ ಕಡ್ಡಾಯ | ಆದೇಶ ರದ್ದುಗೊಳಿಸುವಂತೆ ಶಾಸಕರಿಗೆ ಮನವಿ Read More »

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್‍ ಮೇಲಿನ ತೆರಿಗೆ ಶೇ.4 ರಷ್ಟು ಹೆಚ್ಚಳ | ಜನವಿರೋಧಿ ನೀತಿ ಪ್ರದರ್ಶಿಸಿದ ರಾಜ್ಯ ಸರಕಾರ : ನಳಿನ್ ಕುಮಾರ್ ಕಟೀಲ್‍

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ ತನ್ನ ಜನವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಮತ್ತು ಸಚಿವರುಗಳ ನಡೆಸಿದ ಭ್ರಷ್ಟಾಚಾರದಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು ಈಗ ತೆರಿಗೆ ಹೆಚ್ಳಳ ಮಾಡುವ ಮೂಲಕ ಜನತೆಗೆ ಶಾಕ್ ನೀಡಿದೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ವಿದ್ಯುತ್ ದರ, ಮುದ್ರಾಂಕ ಶುಲ್ಕ

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್‍ ಮೇಲಿನ ತೆರಿಗೆ ಶೇ.4 ರಷ್ಟು ಹೆಚ್ಚಳ | ಜನವಿರೋಧಿ ನೀತಿ ಪ್ರದರ್ಶಿಸಿದ ರಾಜ್ಯ ಸರಕಾರ : ನಳಿನ್ ಕುಮಾರ್ ಕಟೀಲ್‍ Read More »

ಭಕ್ತಕೋಡಿಯ ದೀಪಿಕಾ ನಾಪತ್ತೆ

ಪುತ್ತೂರು: ವಿವಾಹಿತೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರು ತಾಲೂಕು ಸರ್ವೆ ಗ್ರಾಮದ ಕಲ್ಲಗುಡ್ಡೆ, ಭಕ್ತಕೋಡಿಯ ಹರೀಶ ಎಂಬವರ ಪತ್ನಿ ದೀಪಿಕಾ (23) ನಾಪತ್ತೆಯಾದವರು. ಪತಿ ಹರೀಶ್‌ರವರು ನೀಡಿದ ದೂರಿನಲ್ಲಿ ತನ್ನ ಪತ್ನಿ ತಾನು ಕಟ್ಟಿದ ತಾಳಿಯನ್ನು ಮನೆಯಲ್ಲಿ ಬಿಚ್ಚಿಟ್ಟು ಜೂ. 13ರಂದು ಬೆಳಿಗ್ಗೆ 05 ಗಂಟೆಗೆ ಮನೆಯಿಂದ ಹೋದವಳು ನಾಪತ್ತೆಯಾಗಿರುತ್ತಾಳೆ.. ಮನೆಯ ಸುತ್ತಮುತ್ತ ಪರಿಸರದಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿ ಹುಡಿಕಾಡಿದರೂ ಇಲ್ಲಿವರೆಗೂ ಪತ್ತೆಯಾಗಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೂರು ತಿಂಗಳ

ಭಕ್ತಕೋಡಿಯ ದೀಪಿಕಾ ನಾಪತ್ತೆ Read More »

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ !

ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್‌ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್ ದುಬಾರಿಯಾಗುತ್ತಿದೆ. ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ! Read More »

ಎಚ್‌.ಡಿ. ಕುಮಾರಸ್ವಾಮಿ  ಶಾಸಕ ಸ್ಥಾನಕ್ಕೆ  ರಾಜಿನಾಮೆ

ಇತ್ತೀಚೆಗೆ ಸಂಸದರಾಗಿ ಆಯ್ಕೆಯಾದ ಕೇಂದ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಅವರು ಸಂಸದ ಸ್ಥಾನ ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ

ಎಚ್‌.ಡಿ. ಕುಮಾರಸ್ವಾಮಿ  ಶಾಸಕ ಸ್ಥಾನಕ್ಕೆ  ರಾಜಿನಾಮೆ Read More »

error: Content is protected !!
Scroll to Top