ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ, ವೈಜ್ಞಾನಿಕ ಚಟುವಟಿಕೆ ಆಯೋಜನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಸಮಾಜಕಾರ್ಯ ವಿಭಾಗಗಳ ಸಹಯೋಗದಲ್ಲಿ  ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ ಹಾಗೂ ವಿವಿಧ ಬಗೆಯ ವೈಜ್ಞಾನಿಕ ಚಟುವಟಿಕೆಗಳನ್ನು ನಡೆಸಲಾಯಿತು. ಪಾಪೆಮಜಲು ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಂದನ್ನೂ ವೈಜ್ಞಾನಿಕ ನೆಲೆಯಲ್ಲಿ ಪ್ರಶ್ನಿಸಿ ವಿಶ್ಲೇಷಿಸುವ ಗುಣವನ್ನು ಈ ಕಾರ್ಯಕ್ರಮದ ಮೂಲಕ ಬೆಳೆಸಿ ಕೊಳ್ಳಬೇಕು ಎಂದು ಹೇಳಿದರು.  ಪಾಪೆಮಜಲು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. […]

ಪಾಪೆಮಜಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ರಚನೆ, ವೈಜ್ಞಾನಿಕ ಚಟುವಟಿಕೆ ಆಯೋಜನೆ Read More »

ಪಶ್ಚಿಮ ಘಟ್ಟ ಅರಣ್ಯದಲ್ಲಿ  ಹರಳು ಕಲ್ಲು ದಂಧೆ‌

ಪಶ್ಚಿಮ ಘಟ್ಟದಲ್ಲಿ‌ ಮತ್ತೆ‌ ಹರಳು ಕಲ್ಲು ದಂಧೆ‌ ನಡೆಯುತ್ತಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ರವಿ ಕುಶಾಲಪ್ಪನವರು ಅಕ್ರಮ ಹರಳು ಕಲ್ಲು ಗಣಿಗಾರಿಕೆ ನಡೆಯುವ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿ, ಬೆಟ್ಟಗಳಲ್ಲಿ ಆಗಿದಿರುವ ಗುಂಡಿಗಳನ್ನು ವೀಕ್ಷಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮುತುವರ್ಜಿ ವಹಿಸುವಂತೆ ಹೇಳಿದ್ದರು. ಆದರೆ ಇದೀಗ ಅಕ್ರಮ ಕೆಂಪು ಹರಳು ಕಲ್ಲುಗಳ ದಂದೆ ವ್ಯಾಪಕವಾಗಿ ನಡೆಯುತ್ತಿದೆ. ಕುಶಾಲನಗರ ಕಡೆಯಿಂದ ಹುಣಸೂರು ಕಡೆಗೆ ಪಿಕ್ ಆಪ್

ಪಶ್ಚಿಮ ಘಟ್ಟ ಅರಣ್ಯದಲ್ಲಿ  ಹರಳು ಕಲ್ಲು ದಂಧೆ‌ Read More »

ಸಾಮಾಜಿಕ ಜಾಲತಾಣದಲ್ಲಿ ಮಾಜಿ  ಸಂಸದ ನಳಿನ್ ಕುಮಾರ್ ಕಟೀಲ್ ಕುರಿತು ತಪ್ಪು ಸಂದೇಶ ರವಾನೆ | ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು

ಪುತ್ತೂರು : ಅಝೀಜ್ ಹಾಗೂ ಇನ್ನೂ ಹಲವರು ಮಾಜಿ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ಸಾಮಾಜಿಕ ಜಾಲತಾಣವಾದ  ವಾಟ್ಸಪ್ ನಲ್ಲಿ ತಪ್ಪು ಸಂದೇಶ ರವಾನಿಸಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸೀತಾರಾಮ ರೈ ಕೆದಂಬಾಡಿಗುತ್ತು ಈ ಬಗ್ಗೆ ದೂರು ನೀಡಿದ್ದಾರೆ. ಮೇ.14ರ ಬೆಳಗ್ಗಿನಿಂದ ವಾಟ್ಸಪ್‌ನಲ್ಲಿ ನಿರಂತರವಾಗಿ ಮಾಜಿ ಲೋಕಸಭಾ ಸದಸ್ಯರಾದ ನಳಿನ್ ಕುಮಾ‌ರ್ ಕಟೀಲ್ ವಿರುದ್ಧ ಮಾನಹಾನಿಯಾಗುವಂತೆ ಸ್ಟೇಟಸ್‌ ಹಾಕುತ್ತಿದ್ದು, ಅಜೀಜ್ ಎಂಬವರು “ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಗ್

ಸಾಮಾಜಿಕ ಜಾಲತಾಣದಲ್ಲಿ ಮಾಜಿ  ಸಂಸದ ನಳಿನ್ ಕುಮಾರ್ ಕಟೀಲ್ ಕುರಿತು ತಪ್ಪು ಸಂದೇಶ ರವಾನೆ | ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ದೂರು Read More »

ಜಿಲ್ಲಾಮಟ್ಟದ ಇನ್‍ ಸ್ಪೈರ್ ಅವಾರ್ಡ್ ಗೆ ಕುದ್ಮಾರು ಶಾಲಾ ವಿದ್ಯಾರ್ಥಿ ಕುಶನ್ ಕೆ. ಆಯ್ಕೆ

ಕಾಣಿಯೂರು: ಡಿಪಾರ್ಟೆಂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ ಆಂಡ್ ನ್ಯಾಷನಲ್ ಫೌಂಡೇಶನ್ ಆಫ್ ಇಂಡಿಯಾ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ INSPIRE AWARD 2022-23 ಸ್ಪರ್ಧೆಯಲ್ಲಿ ಕುದ್ಮಾರು ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿ  ಕುಶನ್ ಕೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ಸಹ ಶಿಕ್ಷಕಿ ಶ್ರೀಲತಾ ಇವರ ಮಾರ್ಗದರ್ಶನದಲ್ಲಿ ತಯಾರಿಸಿದ Foldable and potable solar nest to dry areca nuts ಎಂಬ ಮಾದರಿಯು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ

ಜಿಲ್ಲಾಮಟ್ಟದ ಇನ್‍ ಸ್ಪೈರ್ ಅವಾರ್ಡ್ ಗೆ ಕುದ್ಮಾರು ಶಾಲಾ ವಿದ್ಯಾರ್ಥಿ ಕುಶನ್ ಕೆ. ಆಯ್ಕೆ Read More »

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಜೂ.13 ರಂದು ಕಾಲೇಜಿನ ದಿ.ಶ್ರೀ ಮಂಜುನಾಥ ಶೆಟ್ಟಿ ಮಲಾರು ಬೀಡು ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಂಡು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸವಣೂರು ಜಿನಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಶತ್ರುಂಜಯ ಆರಿಗ ಮಾತನಾಡಿ, ಸಾಮಾಜಿಕ ಮಾಧ್ಯಮಗಳು ಯುವಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಎಚ್ಚರಿಕೆಯಿಂದ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು. ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಮಾತನಾಡಿ, ಕಾಲೇಜಿನ

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವಂತಿಲ್ಲ | ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ಲಖನೌ: ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವುದು ಮಾಡುವಂತಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದು, ಜೂನ್ 17 ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಅವರು ಎಲ್ಲೆಂದರಲ್ಲಿ ಕುಳಿತು ನಮಾಜ್ ಮಾಡುವುದು ಹಾಗೂ ಪ್ರಾಣಿಗಳನ್ನು ಬಲಿ ಕೊಡುವ ಕೆಲಸ ಮಾಡುತ್ತಾರೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ ಮುಸ್ಲಿಂರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ಅದಕ್ಕಾಗಿ

ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವಂತಿಲ್ಲ | ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ Read More »

ನಾಳೆ (ಜೂ.15) : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 100 ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರದಾನ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ತೆಂಕಿಲ ನರೇಂದ್ರ ಪದವಿಪೂರ್ವ ಕಾಲೇಜು ಸಹಕಾರದಲ್ಲಿ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 100 ಕ್ಕೆ 100 ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರದಾನ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.15 ಶನಿವಾರ ಮಧ್ಯಾಹ್ನ 2.30 ಕ್ಕೆ ತೆಂಕಿಲ ನರೇಂದ್ರ ಪದವಿಪೂರ್ವ ಕಾಲೆಜು ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಶಾಸಕ ಅಶೊಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪುತ್ತೂರು

ನಾಳೆ (ಜೂ.15) : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 100 ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರದಾನ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ Read More »

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ 2023-24 ರಲ್ಲಿ ಚಿತ್ರಕಲೆ ಸ್ಪರ್ಧೆ : ನಿಲಿಷ್ಕಾ ಪ್ರಥಮ

ಪುತ್ತೂರು: ಜಿಲ್ಲಾ ಮಟ್ಟದ ಮಕ್ಕಳ ಹಬ್ಬ-2024 ಚಿತ್ರಕಲೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9ನೇ ತರಗತಿ ವಿದ್ಯಾರ್ಥಿನಿ ನಿಲಿಷ್ಕಾ ಪ್ರಥಮ ಬಹುಮಾನ ಪಡೆದಿದ್ದಾರೆ. ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಧಾರವಾಡ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ದ.ಕ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಗೂ ಸಾರ್ವಜನಿಕ ಶಿಕ್ಷಣಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಟ್ಟದ ಈ ಸ್ಪರ್ಧೆ ನಡೆದಿತ್ತು. ನಿಲಿಷ್ಕಾ ಮಂಜಲ್ಪಡ್ಪು ಇಂಜಿನಿಯರ್ ದಿನೇಶ್

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ 2023-24 ರಲ್ಲಿ ಚಿತ್ರಕಲೆ ಸ್ಪರ್ಧೆ : ನಿಲಿಷ್ಕಾ ಪ್ರಥಮ Read More »

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯದ 28ನೇ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಯುವಕ ಸಂಘ, ಹಾಗೂ ಮಹಿಳಾ ಸಂಘಗಳ ನೇತೃತ್ವದಲ್ಲಿ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಸಂತೆಕಟ್ಟೆ ಶ್ರೀ ಮಂಜುನಾಥೇಶ್ವರ ಸಭಾಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗೀರಿ ಸಂಸ್ಥಾನ ಮಠಾಧ್ಯಕ್ಷರಾದ ಶಕ್ತಿವಿಶಿಷ್ಟಾದೈತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ ಷ.ಬ್ರ. ಮರುಳಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ಆರ್ಶಿವಾದ ನೀಡಿದರು. ಸಮಾಜದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ, ಕೋಶಾಧಿಕಾರಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯದ 28ನೇ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ಮತ್ತು ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ಪರಿಸರ ಕ್ಲಬ್ ಗಳ ಸಹಯೋಗದೊಂದಿಗೆ ವಿಶ್ವ ಪರಿಸರ ಹಾಗೂ ಅಂತರಾಷ್ಟ್ರೀಯ ಜೀವವೈವಿಧ್ಯ ದಿನವನ್ನು ಆಚರಿಸಲಾಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲತಾ ಜಿ. ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ನಾವು ಸಂಪನ್ಮೂಲಗಳನ್ನು ಸಂರಕ್ಷಿಸುವ ಜತೆಗೆ ಹಲವಾರು ವಸ್ತುಗಳನ್ನು ಮರುಬಳಕೆ ಮಾಡಬೇಕು. ಹಸಿ ತ್ಯಾಜ್ಯವಸ್ತುಗಳನ್ನು ಕಾಂಪೋಸ್ಟ್ ಮಾಡಿ ಭೂಮಿಯ ಫಲವತ್ತತೆಯನ್ನು ಉಳಿಸುವಲ್ಲಿ ನೆರವಾಗಬೇಕು. ಭೂಮಿಯು ಮುಂದಿನ ಪೀಳಿಗೆಗೆ ಸೇರಿದೆ. ಅದರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು. ಮುಖ್ಯ ಅತಿಥಿಯಾಗಿ ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ಮತ್ತು ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ Read More »

error: Content is protected !!
Scroll to Top