ಎಸ್‍.ಎಸ್‍.ಎಲ್‍.ಸಿ., ಪಿಯುಸಿಯಲ್ಲಿ ಶೇ.95 ಕ್ಕಿಂತ ಅಧಿಕ ಅಂಕ ಪಡೆದ  ಒಕ್ಕಲಿಗ ಸಮುದಾಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪುತ್ತೂರು: ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ವತಿಯಿಂದ 2023-24 ನೇ ಸಾಲಿನ ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿ.  ವಾರ್ಷಿಕ ಪರೀಕ್ಷೆಯಲ್ಲಿ ಶೇ 95 ಕ್ಕಿಂತ  ಅಧಿಕ ಅಂಕ ಗಳಿಸಿರುವ ಒಕ್ಕಲಿಗ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಕ್ಕಲಿಗ ಜನಾಂಗದ  ಅರ್ಹ ವಿದ್ಯಾರ್ಥಿಗಳು ತಮ್ಮ ಸ್ವ ವಿವರ, ಶಾಲಾ ಕಾಲೇಜಿನ ಹೆಸರು, ಎಸ್. ಎಸ್.ಎಲ್. ಸಿ / ಪಿ.ಯು.ಸಿ ಅಂಕಪಟ್ಟಿಯ  ದೃಡೀಕೃತ ನಕಲು ಪ್ರತಿಗಳು, […]

ಎಸ್‍.ಎಸ್‍.ಎಲ್‍.ಸಿ., ಪಿಯುಸಿಯಲ್ಲಿ ಶೇ.95 ಕ್ಕಿಂತ ಅಧಿಕ ಅಂಕ ಪಡೆದ  ಒಕ್ಕಲಿಗ ಸಮುದಾಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಪುತ್ತೂರು ವಕೀಲರ ಸಂಘದ ವತಿಯಿಂದ ಪರಿಸರ ದಿನಾಚರಣೆ, ಉಚಿತ ಸಸಿಗಳ ವಿತರಣೆ

ಪುತ್ತೂರು: ಪುತ್ತೂರು ವಕೀಲರ ಸಂಘದ ವತಿಯಿಂದ ಪರಿಸರ ದಿನಾಚರಣೆ ಹಾಗೂ ಉಚಿತ ಸಸಿಗಳ ವಿತರಣಾ ಸಮಾರಂಭ ಬುಧವಾರ ಕೋರ್ಟ್ಆವರಣದಲ್ಲಿ ನಡೆಯಿತು. ಹಿರಿಯ ನ್ಯಾಯವಾದಿ ಪಿ.ಕೆ.ಸತೀಶನ್ ಅವರಿಗೆ ಪುತ್ತೂರು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಿಯ ಜೋಗ್ಲೆಕರ್ ಗಿಡ ವಿತರಿಸಿ ಮಾತನಾಡಿ, ಪರಿಸರ ಸಂರಕ್ಷಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಗಿಡ-ಮರಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಕೇವಲ ಗಿಡ ನೆಟ್ಟರೆ ಸಾಲದು. ಗಿಡವನ್ನು ಮಗುವಿನಂತೆ ಲಾಲನೆ, ಪಾಲನೆಯೊಂದಿಗೆ ಫೋಷಿಸುವ ಮನೋಭಾವ ಪ್ರತಿಯೊಬ್ಬರಲ್ಲಿ ಬರಬೇಕು. ಈ ಮೂಲಕ ಪರಿಸರ ರಕ್ಷಣೆಯ ಕಾಳಜಿಯೊಂದಿಗೆ

ಪುತ್ತೂರು ವಕೀಲರ ಸಂಘದ ವತಿಯಿಂದ ಪರಿಸರ ದಿನಾಚರಣೆ, ಉಚಿತ ಸಸಿಗಳ ವಿತರಣೆ Read More »

ಕುವೈತ್‍ ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 35 ಮಂದಿ ಸಜೀವ ದಹನ

ಕುವೈತ್‍ ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಭಾರತೀಯರು ಸೇರಿದಂತೆ 35 ಮಂದಿ ಸಜೀವ ದಹನವಾದ ಘಟನೆ ನಡೆದಿದೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದ ಕಟ್ಟಡದಲ್ಲಿ ಅವಘಡ ಸಂಭವಿಸಿದ್ದು, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಕುವೈತ್ ಆರೋಗ್ಯ ಸಚಿವಾಲಯ ನೀಡಿದ ಹೇಳಿಕೆ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಎಲ್ಲಾ ಗಾಯಾಳುಗಳನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.

ಕುವೈತ್‍ ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 35 ಮಂದಿ ಸಜೀವ ದಹನ Read More »

ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು | ಮರಿಗಳ ರಕ್ಷಿಸಿದ ಪುತ್ತೂರಿನ ಸ್ನೇಕ್ ತೇಜಸ್

ಪುತ್ತೂರು: 25 ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ರಕ್ಷಿಸಿ ಜಿಲ್ಲೆಯ ಬೇರೆ ಬೇರೆ ಅರಣ್ಯಕ್ಕೆ ಬಿಡುವ ಮೂಲಕ ಉರಗ ಪ್ರೇಮಿಯೊಬ್ಬರು ತನ್ನ ಉರಗಪ್ರೇಮವನ್ನು ಮೆರೆದಿದ್ದಾರೆ. ಯುವ ಉರಗಪ್ರೇಮಿ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ತೇಜಸ್ ಬನ್ನೂರು ಅವರೇ ಸುಮಾರು 25 ಮರಿಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಕಳೆದ ಐದಾರು ವರ್ಷಗಳಿಂದ ಸಂಕಷ್ಟದಲ್ಲಿರುವ ಉರಗ ಸಂತಾನವನ್ನು ರಕ್ಷಿಸಿ, ಅವುಗಳನ್ನು ಮತ್ತೆ ಪ್ರಕೃತಿಗೆ ನೀಡುವ ಕಾರ್ಯವನ್ನು ನಡೆಸುತ್ತಿದ್ದಾರೆ. ಈವರೆಗೆ ಸುಮಾರು 100 ಕ್ಕೂ ಮಿಕ್ಕಿದ ಹೆಬ್ಬಾವಿನ ಮರಿಗಳನ್ನು ಕಾಡಿಗೆ ಬಿಟ್ಟು ಹೆಬ್ಬಾವುಗಳ

ಹೆಬ್ಬಾವಿನ ಮೊಟ್ಟೆಗಳಿಗೆ ಕೃತಕ ಕಾವು | ಮರಿಗಳ ರಕ್ಷಿಸಿದ ಪುತ್ತೂರಿನ ಸ್ನೇಕ್ ತೇಜಸ್ Read More »

ಪುತ್ತೂರಿನ ಪ್ರತಿಷ್ಠಿತ ರೋಟರಿ ಕ್ಲಬ್ ಪೂತ್ತೂರು ಪೂರ್ವದ ಅತ್ಯುತ್ತಮ ಸಮಾಜ ಸೇವೆ | ಪ್ಲಾಟಿನಂ ಪ್ಲಸ್ ಸಹಿತ ಹಲವು ಪ್ರಶಸ್ತಿ ಪಡೆದುಕೊಂಡ ಕ್ಲಬ್

ಪುತ್ತೂರು: ಪ್ರತಿಷ್ಠಿತ ರೋಟರಿ ಕ್ಲಬ್ ಪುತ್ತೂರು ಪೂರ್ವ 2023-24ನೇ ಸಾಲಿನಲ್ಲಿ ಸಲ್ಲಿಸಿದ ಅತ್ಯುತ್ತಮ ಸಮಾಜ ಸೇವೆಗೆ ರೋಟರಿ ಕ್ಲಬ್‌ನ ಅತ್ಯುನ್ನತ ಪ್ರಶಸ್ತಿ ಪ್ಲಾಟಿನಂ ಪ್ಲಸ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ-3181 ವತಿಯಿಂದ ಮೈಸೂರಿನಲ್ಲಿ ನಡೆದ 2023-24ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಪೂರ್ವದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಪ್ರಶಸ್ತಿ ಸ್ವೀಕರಿಸಿದರು. ಅತೀ ಹೆಚ್ಚು ಸದಸ್ಯತ್ವ ನೋಂದಾವಣೆಗೆ ಎಕ್ಸಲೆನ್ಸ್ ಪ್ರಶಸ್ತಿ, ಕ್ಲಬ್‌ನ ಶಾಶ್ವತ ಯೋಜನೆಗಳಿಗೆ ಮಹೋನ್ನತ ಕೊಡುಗೆ, ಜಿಲ್ಲಾ

ಪುತ್ತೂರಿನ ಪ್ರತಿಷ್ಠಿತ ರೋಟರಿ ಕ್ಲಬ್ ಪೂತ್ತೂರು ಪೂರ್ವದ ಅತ್ಯುತ್ತಮ ಸಮಾಜ ಸೇವೆ | ಪ್ಲಾಟಿನಂ ಪ್ಲಸ್ ಸಹಿತ ಹಲವು ಪ್ರಶಸ್ತಿ ಪಡೆದುಕೊಂಡ ಕ್ಲಬ್ Read More »

ಅನ್ಯ ಕೋಮಿನ ವಿದ್ಯಾರ್ಥಿಗಳ ಜತೆ ಹಿಂದೂ ಯುವತಿ ಕಾರಿನಲ್ಲಿ ಸುತ್ತಾಟ | ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಮಂಗಳೂರು: ಹಿಂದೂ ಯುವತಿಯೊಬ್ಬಳು ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಸುತ್ತಾಟ ನಡೆಸುತ್ತಿದ್ದುದು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಅನ್ಯಕೋಮಿನ ಯುವಕರು ಹಾಗೂ ಹಿಂದೂ ಯುವತಿಯಿದ್ದ ಐಬಿಎಂಡಬ್ಲ್ಯೂ ಕಾರು ಮುಕ್ಕ ಸಮೀಪ ಸ್ಕೂಲ್ ಬಸ್ ಗೆ ಡಿಕ್ಕಿಯಾಗಿದ್ದು, ಈ ವೇಳೆ ಬಸ್ ಚಾಲಕನ ಜೊತೆ ತಂಡ ಜಗಳವಾಡುತ್ತಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ತಂಡ ಅಲ್ಲಿಂದ ಎಸ್ಕೆಪ್ ಆಗಲು ಯತ್ನಿಸಿದೆ. ಈ ವೇಳೆ ಕಾರು ಕೈ ಕೊಟ್ಟಿದೆ ಎನ್ನಲಾಗಿದೆ. ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಂತೆ ಅನ್ಯಕೋಮಿನ ಜೋಡಿ ಎಂದು ಬೆಳಕಿಗೆ

ಅನ್ಯ ಕೋಮಿನ ವಿದ್ಯಾರ್ಥಿಗಳ ಜತೆ ಹಿಂದೂ ಯುವತಿ ಕಾರಿನಲ್ಲಿ ಸುತ್ತಾಟ | ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ Read More »

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೈದಿ

ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಕಡಬ ಮೂಲದ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಈ ವೇಳೆ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದು ವಿಚಾರಣೆ ಮುಂದುವರಿಸಿದ್ದಾರೆ ಎಂದು

ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕೈದಿ Read More »

ಹತ್ಯೆಯಾದ ರೇಣುಕಾಸ್ವಾಮಿ‌ ಕುಟುಂಬಕ್ಕೆ ಪರಿಹಾರ ನೀಡಲು‌ ಸಿಎಂ ಜತೆ ಚರ್ಚಿಸಲಿದ್ದೇನೆ l ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ದರ್ಶನ್ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು

ಹತ್ಯೆಯಾದ ರೇಣುಕಾಸ್ವಾಮಿ‌ ಕುಟುಂಬಕ್ಕೆ ಪರಿಹಾರ ನೀಡಲು‌ ಸಿಎಂ ಜತೆ ಚರ್ಚಿಸಲಿದ್ದೇನೆ l ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ Read More »

ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು ಎಂದು ನಟಿ ರಮ್ಯಾ ಪೋಸ್ಟ್ ಮೂಲಕ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೆಕ್ಷನ್ 302 ರ ಅಡಿಯಲ್ಲಿ ಶಿಕ್ಷೆ ಸಾಬೀತಾದರೆ ದರ್ಶನ್ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ಪಡೆಯುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಹಣ ಅಥವಾ ಇತರೆ ಅಂಶ ಪರಿಣಾಮ ಬೀರಬಾರದು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿರುವ ಪೋಸ್ಟ್ ಒಂದನ್ನು ಎಕ್ಸ್’ ನಲ್ಲಿ ರಮ್ಯಾ ರೀಟ್ವಿಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್

ನಟ ದರ್ಶನ್‍ ಗೆ ಜೀವಾವಧಿ-ಮರಣ ದಂಡನೆ ಶಿಕ್ಷೆಯಾಗಲಿ | ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ರೀಟ್ವಿಟ್ ಮಾಡಿದ ನಟಿ ರಮ್ಯಾ Read More »

ಅನ್ಯ ಕೋಮಿನವರಿಂದ ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಪ್ರತಿಪಕ್ಷ ನಾಯಕ ಆರ್‍. ಅಶೋಕ್

ಮಂಗಳೂರು : ಬಿಜೆಪಿ ವಿಜಯೋತ್ಸವ ಮುಗಿಸಿ ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದ ಸಂದರ್ಭ ಅನ್ಯಕೋಮಿನ ತಂಡದಿಂದ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ್ ಇಂದು ಭೇಟಿ ಮಾಡಿದರು. ಮಂಗಳೂರಿನ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಕಾರ್ಯಕರ್ತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಬಳಿಕ ಬಿಜೆಪಿ ನಾಯಕರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಡಾ.ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್

ಅನ್ಯ ಕೋಮಿನವರಿಂದ ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಪ್ರತಿಪಕ್ಷ ನಾಯಕ ಆರ್‍. ಅಶೋಕ್ Read More »

error: Content is protected !!
Scroll to Top