ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ  ದರ್ಶನ್ ಸೇರಿ 13 ಜನ ಬಂಧನ

 ಬೆಂಗಳೂರು : ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್‌ ಆಯುಕ್ತ ದಯಾನಂದ್, ಚಿತ್ರದುರ್ಗ […]

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ  ದರ್ಶನ್ ಸೇರಿ 13 ಜನ ಬಂಧನ Read More »

ಕಾವು ವಿಶ್ವಕರ್ಮ ಕೂಡೂವಳಿಕೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ವಿಶ್ವಕರ್ಮ ಕೂಡೂವಳಿಕೆ ಕಾವು ವಲಯ ಇದರ ಮುಂದಿನ ಅವಧಿಯ ರಚನಾತ್ಮಕ ಚಟುವಟಿಕೆಗಳು ಮತ್ತು ಸಂಘಟನಾ ದೃಷ್ಟಿಯಿಂದ ನೂತನ ಪದಾಧಿಕಾರಿಗಳ ಆಯ್ಕೆ ಮೊಕ್ತೇಸರ ನಾರಾಯಣ ಆಚಾರ್ಯರ ಉಪಸ್ಥಿತಿಯಲ್ಲಿ ನಡೆಯಿತು. ಕೂಡೂವಳಿಕೆಯ ನೂತನ ಸಮಿತಿಯ ಅಧ್ಯಕ್ಷರಾಗಿ ಶ್ರೀನಿವಾಸ ಆಚಾರ್ಯ, ಕಾರ್ಯದರ್ಶಿಯಾಗಿ ಬಾಲಕೃಷ್ಣ ಆಚಾರ್ಯ ಮಳಿ, ಜೊತೆಕಾರ್ಯದರ್ಶಿಯಾಗಿ ರವೀಂದ್ರ ಆಚಾರ್ಯ ಅರಿಯಡ್ಕ, ಖಜಾಂಚಿಯಾಗಿ ಜಯಕರ ಆಚಾರ್ಯ ಕುಂಬ್ರ ಸರ್ವಾನುಮತದಿಂದ ಆಯ್ಕೆಯಾದರು. ಕೂಡೂವಳಿಕೆಯ ವೆಂಕಟ್ರಮಣ ಆಚಾರ್ಯ ಪೆರ್ಲಂಪಾಡಿ ಸೇರಿದಂತೆ ಎಲ್ಲಾ ಹಿರಿಯ-ಕಿರಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಕಾವು ವಿಶ್ವಕರ್ಮ ಕೂಡೂವಳಿಕೆ ಪದಾಧಿಕಾರಿಗಳ ಆಯ್ಕೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟಿ ಪವಿತ್ರ ಗೌಡ ಅರೆಸ್ಟ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ  ಇಂದು ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರ್.ಆ‌ರ್.ನಗರ ಪೊಲೀಸರು ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟಿ ಪವಿತ್ರ ಗೌಡ ಅರೆಸ್ಟ್ Read More »

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಮಾಹಿತಿ ಕಾರ್ಯಾಗಾರ

ಪುತ್ತೂರು : ನಗರದ ಧರ್ಮಸ್ಥಳ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಉದ್ಯೋಗಾಧಾರಿತ ಡಿಪ್ಲೋಮ ಮತ್ತು ಬಿಬಿಎ ಏವಿಯೇಶನ್ ಕೋರ್ಸ್ ಗೆ ಸಂಬಂಧಿಸಿದ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ಸಂಸ್ಥೆಯ ಚೆಯರ್ ಮ್ಯಾನ್ ಸುಜಾತ ಬೈರಿ ದೀಪ ಬೆಳಗಿಸಿ ಉದ್ಘಾಟಿಸಿ, ತಮ್ಮ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ಕೋರ್ಸುಗಳ ಬಗ್ಗೆ ಹಾಗೂ ಸಂಸ್ಥೆಯು ನಡೆದು ಬಂದ ಹಾದಿಯನ್ನು ವಿವರಿಸಿದರು. ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಬೆಂಗಳೂರು ಸ್ಕೈ ಬರ್ಡ್ ಏವಿಯೇಶನ್ ವತಿಯಿಂದ ಮಾಹಿತಿ ಕಾರ್ಯಾಗಾರ Read More »

ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಲಿ ಪ್ರದೇಶದಲ್ಲಿ ಪ್ರತ್ಯಕ್ಷವಾದ ಆನೆ | ಶಾಸಕ ಅಶೋಕ್‍ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು: ಇಂದು ಮುಂಜಾನೆ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದ ಬಾರ್ತೋಲಿ ಎಂಬಲ್ಲಿಗೆ  ಆನೆ ಲಗ್ಗೆಯಿಟ್ಟಿದ್ದು, ಎರಡು ಆನೆಗಳು ಇರುವ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು, ಈಗಾಗಲೇ ಆನೆ ದಾಳಿಯಿಂದ ಕೃಷಿಗೆ ಹಾನಿಯಾಗಿದ್ದು, ಅಂತವರಿಗೆ ಸರಕಾರದಿಂದ ಪರಿಹಾರ ನೀಡುವ ಕೆಲಸ ಆಗಬೇಕು. ಏನು ನಗರ ಪ್ರದೇಶಕ್ಕೆ ಆನೆಗಳು ಬರುವ ಜಾಗದಲ್ಲಿ ಆನೆ ಕಂದಕಗಳನ್ನು ನಿರ್ಮಾಣ ಮಾಡಬೇಕು.

ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ಬಾರ್ತೋಲಿ ಪ್ರದೇಶದಲ್ಲಿ ಪ್ರತ್ಯಕ್ಷವಾದ ಆನೆ | ಶಾಸಕ ಅಶೋಕ್‍ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ Read More »

ನೃತ್ಯಾಂತರಂಗ 110 ರಲ್ಲಿ ರಂಜಿಸಿದ ‘ವರ್ಣಿಕ’

ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ಕಾರ್ಯಕ್ರಮ ನೃತ್ಯಾಂತರಂಗದ 110ನೇ ಸರಣಿಯಲ್ಲಿ ಪದವರ್ಣಗಳ ಪ್ರಸ್ತುತಿ ‘ವರ್ಣಿಕ’ ಬಹಳ ವಿಶೇಷವಾಗಿತ್ತು. ಕಲಾವಿದೆಯರಾದ ಅಂಕಿತಾ ಪ್ರಜ್ವಲ್ ಮತ್ತು ವಿಂಧ್ಯಾ ಕಾರಂತರು ಪದವರ್ಣಗಳನ್ನು ಪ್ರಸ್ತುತಪಡಿಸಿದರು. ಪುತ್ತೂರಿನ ‘ದಿ ವೆಬ್ ಪೀಪಲ್’ ಕಂಪೆನಿಯ ಆದಿತ್ಯ ಕಲ್ಲೂರಾಯ ಅಭ್ಯಾಗತರಾಗಿ ಶುಭ ಹಾರೈಸಿದರು. ಹಿಮ್ಮೇಳದ ನಟುವಾಂಗದಲ್ಲಿ ಗುರು ದೀಪಕ್ ಕುಮಾರ್, ಹಾಡುಗಾರಿಕೆಯಲ್ಲಿ ವಿದುಷಿ ಪ್ರೀತಿಕಲಾ, ಮೃದಂಗದಲ್ಲಿ ಶ್ಯಾಮ ಭಟ್ ಮತ್ತು ಕೊಳಲಿನಲ್ಲಿ ಕೃಷ್ಣಗೋಪಾಲ್ ಸಹಕರಿಸಿದ್ದರು.

ನೃತ್ಯಾಂತರಂಗ 110 ರಲ್ಲಿ ರಂಜಿಸಿದ ‘ವರ್ಣಿಕ’ Read More »

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ !

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೆಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ | ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ! Read More »

ಜೂನ್ 12: ವಿವೇಕಾನಂದ ಕಾಲೇಜಿನಲ್ಲಿ ವಿವಿಧ ಕಂಪನಿಗಳ ಜೊತೆ ಒಡಂಬಡಿಕೆ ಕಾರ್ಯಕ್ರಮ

ಪುತ್ತೂರು : ವಿವೇಕಾನಂದ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಕಂಪನಿಗಳು ಹಾಗೂ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಗಳ ಜೊತೆಗೆ ಒಡಂಬಡಿಕೆಯನ್ನು ಮಾಡುವುದರ ಪೂರ್ವಭಾವಿಯಾಗಿ ಜೂ.12 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಸಾಂಕೇತಿಕವಾಗಿ ಒಪ್ಪಂದ ಮಾಡಿಕೊಳ್ಳುವ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗೇರು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ದಿನಕರ ಅಡಿಗ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ

ಜೂನ್ 12: ವಿವೇಕಾನಂದ ಕಾಲೇಜಿನಲ್ಲಿ ವಿವಿಧ ಕಂಪನಿಗಳ ಜೊತೆ ಒಡಂಬಡಿಕೆ ಕಾರ್ಯಕ್ರಮ Read More »

ಮತ್ತೆ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಕಾಣಿಸಿಕೊಂಡ ಆನೆ

ಪುತ್ತೂರು : ಮತ್ತೆ ಆನೆಯೊಂದು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ತೋಟವೊಂದರದಲ್ಲಿ ಕಾಣಿಸಿಕೊಂಡಿದೆ. ಸವಣೂರಿನ ಗೌರಿ ಹೊಳೆ ದಾಟಿ ಬಂದಿದ್ದ ಆನೆ ಸುಳ್ಯ ತಾಲೂಕಿನ ಕೆಲವೆಡೆ ತೋಟಗಳಿಗೆ ನುಗ್ಗಿ ಕೃಷಿ ಹಾನಿಗೊಳಿಸಿದೆ. ಬಳಿಕ ಆನೆ ಪುತ್ತೂರು ತಾಲೂಕಿನ ಮಾಡಾವು ಸುತ್ತಮುತ್ತಲ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಸೋಮವಾರ ಶಾಂತಿಗೋಡು ಗ್ರಾಮದಲ್ಲಿ ಕಾಣಿಸಿಕೊಂಡು ಮನೆಯೊಂದರ ಗೇಟಿಗೆ ಹಾನಿ ಮಾಡಿ, ಕೃಷಿ ತೋಟಕ್ಕೆ ನುಗ್ಗಿತ್ತು. ಇದೀಗ ಈ ಆನೆ ಇಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದ ಬಾರ್ತೋಲಿ ಎಂಬಲ್ಲಿ ತೋಟದಲ್ಲಿ ಕಂಡು ಬಂದಿದೆ.

ಮತ್ತೆ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಕಾಣಿಸಿಕೊಂಡ ಆನೆ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ  | ಜಿಲ್ಲೆಯಾದ್ಯಂತ  ಭಾರೀ ಮಳೆ ಮುನ್ಸೂಚನೆ  

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಮುಂಗಾರು ಪ್ರವೇಶಿಸಿದ ಬಳಿಕ ಜಿಲ್ಲೆಯಾದ್ಯಂತ ಧಾರಕಾರ ಮಳೆಯಾಗುತ್ತಿದೆ. ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಕಳೆದ 2-3 ದಿನಗಳಿಂದ ಇದರ ತೀವ್ರತೆ ಹೆಚ್ಚಿದೆ. ಸೋಮವಾರ ಜಿಲ್ಲೆಯಲ್ಲಿ ದಿನಪೂರ್ತಿ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ಮಳೆಯು ತುಸು ಬಿರುಸು ಪಡೆದುಕೊಂಡಿತ್ತು. ಮಂಗಳೂರು ನಗರದ ಮತ್ತು ಗ್ರಾಮಾಂತರ ಭಾಗದಲ್ಲಿ ಮುಂಜಾನೆ ವೇಳೆ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದ್ದು, ಬಳಿಕ ಕಡಿಮೆಯಾಗಿದೆ. ಪುತ್ತೂರು, ಕಡಬ, ಸುಬ್ರಹ್ಮಣ್ಯ, ಬಂಟ್ವಾಳ ಭಾಗದಲ್ಲಿಯೂ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ  | ಜಿಲ್ಲೆಯಾದ್ಯಂತ  ಭಾರೀ ಮಳೆ ಮುನ್ಸೂಚನೆ   Read More »

error: Content is protected !!
Scroll to Top