ಮೈತ್ರಿಕೂಟದ ಸಂಖ್ಯೆ 303 ಕ್ಕೆ ಏರಿಕೆ | ಹೊಸ ಸರಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ

ಪುತ್ತೂರು:  ಮೈತ್ರಿಕೂಟದ ಸಂಖ್ಯೆ ಬುಧವಾರ 303 ಕ್ಕೆ ಏರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹಳೆಯ ಸರಕಾರ ವಿಸರ್ಜನೆ ಮಾಡಿ ರಾಷ್ಟ್ರಪತಿಗಳ ಮನವಿಗೆ ಹೊಸ ಸರಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ ಮುಂದುವರಿಯಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಒಟ್ಟು 293 ಸ್ಥಾನಗಳನ್ನು ಹೊಂದಿತ್ತು. ಆದರೆ ಈಗ ಮೈತ್ರಿಕೂಟದ ಸಂಖ್ಯೆ ಎರಡೇ ದಿನದಲ್ಲಿ 303ಕ್ಕೆ ಏರಿಕೆಯಾಗಿದೆ. ಎನ್‍.ಡಿ.ಎ ಸಭೆ ನಡೆಸಿ ನಾಯಕರ ಸರ್ವಾನುಮತದ ಮೂಲಕ ಎನ್‍.ಡಿ.ಎ ನಾಯಕನಾಗಿ ಮೋದಿಯವರನ್ನು […]

ಮೈತ್ರಿಕೂಟದ ಸಂಖ್ಯೆ 303 ಕ್ಕೆ ಏರಿಕೆ | ಹೊಸ ಸರಕಾರ ರಚನೆಯಾಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ Read More »

ವಿಧಾನಪರಿಷತ್ ಚುನಾವಣೆ : ಮೈಸೂರಿನ ಮತ ಎಣಿಕೆ ಕೇಂದ್ರಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು: ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕೇಂದ್ರ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿಗೆ ಅರುಣ್ ಪುತ್ತಿಲ ಭೇಟಿ ನೀಡಿದರು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೇಗೌಡರಿಗೆ ಅರುಣ್ ಕುಮಾರ್ ಪುತ್ತಿಲ ಶುಭಹಾರೈಸಿದರು. ಈ ಸಂದರ್ಭ ಬಿಜೆಪಿ ಶಾಸಕರಾದ ಚೆನ್ನಬಸಪ್ಪ, ಉಡುಪಿ ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ ಸಹಿತ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ವಿಧಾನಪರಿಷತ್ ಚುನಾವಣೆ : ಮೈಸೂರಿನ ಮತ ಎಣಿಕೆ ಕೇಂದ್ರಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ Read More »

ಜೂ.16 : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ | ಜೂ.10 ನೋಂದಾಯಿಸಲು ಕೊನೆಯ ದಿನಾಂಕ

ಪುತ್ತೂರು : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ ಜೂ.16 ಭಾನುವಾರ ಬೆಂಗಳೂರು ಚೌಡೇಶ್ವರಿ ನಗರದ ನಮ್ಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ನಡೆಯಲಿದೆ. ಹತ್ತು ಕುಟುಂಬ ಹದಿನೆಂಟು ಗೋತ್ರದ ಕುಲಬಾಂಧವರಿಗೆ ಭಾವಿ ವಧು-ವರರ ಮುಖಾಮುಖಿ ಭೇಟಿ ಕಾರ್ಯಕ್ರಮ ಇದಾಗಿದೆ. ಆನ್‍ ಲೈನ್‍ ನಲ್ಲಿ ನೋಂದಾಯಿಸಲು ಜೂ.10 ಕೊನೆಯ ದಿನಾಂಕವಾಗಿದೆ. www.kdkgowdasamaja.com ನಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ ಅಧ್ಯಕ್ಷೆ ಶಶಿಪ್ರಭಾ ಮಡ್ತಿಲ- 9008949543, ಉಪಾಧ್ಯಕ್ಷೆ – ಗಂಗಮ್ಮ ಸುರೇಶ್‍

ಜೂ.16 : ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ ವತಿಯಿಂದ “ಸಪ್ತಪದಿ-2024” ಜೀವನದ ಹೊಸ ಹೆಜ್ಜೆಗಳ ಸಮಾಗಮ ಕಾರ್ಯಕ್ರಮ | ಜೂ.10 ನೋಂದಾಯಿಸಲು ಕೊನೆಯ ದಿನಾಂಕ Read More »

ಕೇವಲ ಅಂಕ ಪಡೆಯುವುದಷ್ಟೇ ಶಿಕ್ಷಣವಲ್ಲ :  ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವದಲ್ಲಿ ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಅಂಕ ಪಡೆಯುವುದಷ್ಟೇ ಶಿಕ್ಷಣ ಅಲ್ಲ, ಬದಲಾಗಿ ಭಾರತದ ಸಂಸ್ಕೃತಿ ಮತ್ತು ದೇಶ ಪ್ರೇಮ ಶಿಕ್ಷಣದಲ್ಲಿ ಅಡಕವಾಗಿರಬೇಕು. ಹಾಗಾಗಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು ರಾಷ್ಟ್ರಸಂಪತ್ತನ್ನು ಬೆಳೆಸಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಆಶ್ರಯದಲ್ಲಿ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾದ ನೂತನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಅವ್ಯವಸ್ಥೆಗಳಿಗೆ ಶಿಕ್ಷಣ ಸಂಸ್ಥೆಗಳೇ ಹೊಣೆ. ಸಂಸ್ಕಾರಯುತ ಶಿಕ್ಷಣ ಕೊಟ್ಟಾಗ

ಕೇವಲ ಅಂಕ ಪಡೆಯುವುದಷ್ಟೇ ಶಿಕ್ಷಣವಲ್ಲ :  ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವದಲ್ಲಿ ಸುಬ್ರಹ್ಮಣ್ಯ ನಟ್ಟೋಜ Read More »

ವಿವಿಧೆಡೆ ಕಾಡಾನೆ ದಾಳಿ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಪುತ್ತೂರು: ಪುತ್ತೂರು ತಾಲೂಕಿನ ಬೊಳಿಕಳ, ಪುಣ್ಚಪ್ಪಾಡಿ ಗ್ರಾಮದ ನೂಜಾಜೆ, ಅಂಜಯ, ಪಾಲ್ತಾಡಿ ಗ್ರಾಮದ ಅಸಂತಡ್ಕ, ಖಂಡಿಗೆ, ಕೆಯ್ಯೂರು ಗ್ರಾಮದ ಓಲೆಮುಂಡೋವು ಪ್ರದೇಶದಲ್ಲಿ ಕಾಡಾನೆ ದಾಳಿ ನಡೆಸಿದೆ. ಕಾಡಾನೆ ದಾಳಿ ನಡೆಸಿದ ಪರಿಣಾಮ ಕೃಷಿ ತೋಟಗಳಿಗೆ ಹಾನಿಯಾಗಿದೆ. ದಾಳಿ ನಡೆಸಿದ ಸ್ಥಳಗಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿದರು. ಶಾಸಕರ ಜೊತೆ ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ಇಂದಿರಾ ಬಿ.ಕೆ, ತಾರಾನಾಥ ಕಾಯರ್ಗ, ಸತೀಶ್ ಅಂಗಡಿಮೂಲೆ, ಪ್ರಕಾಶ್ ರೈ ಸಾರಕರೆ ಮೊದಲಾದರಿದ್ದರು.

ವಿವಿಧೆಡೆ ಕಾಡಾನೆ ದಾಳಿ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಸವಣೂರು ವಿದ್ಯಾರಶ್ಮಿ ಶಿಫಾಲಿ ರೈ ಎಸ್‍.ಎಸ್‍.ಎಲ್‍.ಸಿ ಯಲ್ಲಿ 602 ಅಂಕಗಳು | ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕ ಗಳಿಕೆ

ಸವಣೂರು: ಮಾರ್ಚ್ 2024 ರಲ್ಲಿ ನಡೆದ ಎಸ್‍.ಎಸ್‍.ಎಲ್‍.ಸಿ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶಿಫಾಲಿ ರೈ 588 ಅಂಕ ಗಳಿಸಿದ್ದು, ಇದೀಗ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕಗಳನ್ನು ಗಳಿಸಿ ಒಟ್ಟು 602 (ಶೇ.96.32) ಅಂಕಗಳನ್ನು ಪಡೆದಿದ್ದಾರೆ. ಕನ್ನಡ-124, ಇಂಗ್ಲೀಷ್ 97, ಹಿಂದಿ-100, ಗಣಿತ-93, ವಿಜ್ಞಾನ-91 ಹಾಗೂ ಸಮಾಜ ವಿಜ್ಞಾನದಲ್ಲಿ 97 ಅಂಕಗಳನ್ನು ಪಡೆದಿದ್ದಾರೆ ಶಿಫಾಲಿ ರೈ ಪ್ರವೀಣ ರೈ ಮತ್ತು ಅನಿತಾ ಶೆಟ್ಟಿ ನೂಜಾಜೆ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ

ಸವಣೂರು ವಿದ್ಯಾರಶ್ಮಿ ಶಿಫಾಲಿ ರೈ ಎಸ್‍.ಎಸ್‍.ಎಲ್‍.ಸಿ ಯಲ್ಲಿ 602 ಅಂಕಗಳು | ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕ ಗಳಿಕೆ Read More »

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ

ಬೆಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಇಂದು ವಿಜಯೇಂದ್ರ ಭೇಟಿ ಮಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಬ್ರಿಜೇಶ್ ಚೌಟ ಧನ್ಯವಾದ ತಿಳಿಸಿದರು. ನಾಳೆ ದೆಹಲಿಯಲ್ಲಿ ಬಿಜೆಪಿ ನೂತನ ಸಂಸದರ ಸಭೆಯ ಹಿನ್ನೆಲೆಯಲ್ಲಿ ಬ್ರಿಜೇಶ್ ಚೌಟ ಇಂದು ದೆಹಲಿಗೆ ತೆರಳಲಿದ್ದಾರೆ.

ದ.ಕ. ಜಿಲ್ಲಾ ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟರಿಂದ ವಿಜಯೇಂದ್ರ ಭೇಟಿ Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ NDA, PDO/VAO, ನವೋದಯ/ ಸೈನಿಕ ಶಾಲೆ ,ಕಂಪ್ಯೂಟರ್ , ಪ್ರಾಕ್ಟಿಕಲ್ ಅಕೌಂಟೆನ್ಸಿ ಸೇರಿದಂತೆ ವಿವಿಧ ತರಬೇತಿಗಳು ಪ್ರಾರಂಭ

ಪುತ್ತೂರು: ಪುತ್ತೂರು, ಸುಳ್ಯ ,ಕಾರ್ಕಳದಲ್ಲಿ ಕಾರ್ಯಚರಿಸುತ್ತಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾ ಮಾತಾ ಅಕಾಡೆಮಿಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಹಾಗೂ ಉದ್ಯೋಗ ಕೌಶಲ್ಯಕ್ಕೆ ಸಂಬಂಧಿಸಿದ ವಿವಿಧ ತರಬೇತಿಗಳನ್ನು ಪ್ರಾರಂಭಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA )ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ,ನವೋದಯ/ ಸೈನಿಕ ಶಾಲೆ ಪ್ರವೇಶ ಪರೀಕ್ಷೆಗಳ ತರಬೇತಿ ಪ್ರತಿ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ,ಭಾರತೀಯ ಸೇನಾ ನೇಮಕಾತಿಗಳ ತರಬೇತಿ ಪ್ರತಿ

ವಿದ್ಯಾಮಾತಾ ಅಕಾಡೆಮಿಯಲ್ಲಿ NDA, PDO/VAO, ನವೋದಯ/ ಸೈನಿಕ ಶಾಲೆ ,ಕಂಪ್ಯೂಟರ್ , ಪ್ರಾಕ್ಟಿಕಲ್ ಅಕೌಂಟೆನ್ಸಿ ಸೇರಿದಂತೆ ವಿವಿಧ ತರಬೇತಿಗಳು ಪ್ರಾರಂಭ Read More »

ಮಾಡಾವಿನಲ್ಲಿ ಕೃಷಿ ತೋಟಗಳಿಗೆ ಆನೆ ದಾಳಿ | ಕೃಷಿ ನಾಶ

ಪುತ್ತೂರು: ತಾಲೂಕಿನ ಮಾಡಾವು ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡು ಬಂದಿದ್ದು, ಕೃಷಿಕರ ಅಡಿಕೆ ತೋಟಗಳಿಗೆ ದಾಳಿ ಮಾಡಿದೆ. ಬುಧವಾರ ರಾತ್ರಿ ವೇಳೆ ಮಾಡಾವು ಮಲೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆ ದಾಳಿ ಮಾಡಿದ್ದು, ಬಾಳೆ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ. ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದೆ. ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಾಡಾವಿನಲ್ಲಿ ಕೃಷಿ ತೋಟಗಳಿಗೆ ಆನೆ ದಾಳಿ | ಕೃಷಿ ನಾಶ Read More »

ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಯರಗಟ್ಟಿ ಬೆಳಗಾವಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವ‌ರ್ (23) ಕೊಲೆಯಾದ ಯುವಕ. ಮಲ್ಲಿಕಾರ್ಜುನ ಎನ್ನುವ ಸ್ನೇಹಿತನ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಪಾರ್ಟಿಗೆ ಯುವಕ ಹೋಗಿದ್ದನು. ಆದರೆ ಬರ್ತ್‌ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ನಡುವೆ ಗಲಾಟೆ ಆದ ವೇಳೆ ಮಾತಿಗೆ ಮಾತು ಬೆಳೆದು ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ತೀವ್ರವಾಗಿ

ಬರ್ತ್‌ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಹತ್ಯೆ Read More »

error: Content is protected !!
Scroll to Top