ಹೆಚ್ ಟಿ ಲೈನ್ ಮೇಲೆ ಬಿದ್ದ ಮರ: ಕಂಬಗಳಿಗೆ ಹಾನಿ

ಚಾರ್ವಾಕ : ಮರ ಮತ್ತು ತೆಂಗಿನ ಮರವು ಚಾರ್ವಾಕ ಫೀಡರ್ ನ ಹೆಚ್ ಟಿ ಲೈನ್ ಮೇಲೆ ಬಿದ್ದು ಕಂಬಗಳಿಗೆ ಹಾನಿಯಾದ ಘಟನೆ ನಡೆದಿದೆ. ದೈಪಿಲ ದೇವಸ್ಯ ಹತ್ತಿರ ಹೆಚ್ ಟಿ ಲೈನ್ ಮೇಲೆ ಮರ  ಮತ್ತು ತೆಂಗಿನ ಮರ ಬಿದ್ದು 9 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತೆಂಗಿನ ಮರ ಮತ್ತು ಮರ ದುರಸ್ಥಿ ಕೆಲಸವನ್ನು ಪ್ರವಿಣ್ ಕುಂಟ್ಯಾನ, ಸುಂದರ ದೇವಸ್ಯ ,ಬೆಳಿಯಪ್ಪ, ಶೇಷಪ್ಪ, ನಾಗೇಶ್ , ತಾರಾನಾಥ, ದಿವಿಶ್ ಖಂಡಿಗ, ನಾಗೇಶ್  ದೈಪಿಲ,  ಹರೀಶ್ ದೈಪಿಲ  […]

ಹೆಚ್ ಟಿ ಲೈನ್ ಮೇಲೆ ಬಿದ್ದ ಮರ: ಕಂಬಗಳಿಗೆ ಹಾನಿ Read More »

ಜೂನ್ 8 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಪಡೆದು ಮೂರನೇ ಬಾರಿಗೆ ಅಧಿಕಾರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಜೂನ್ 8 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ನರೇಂದ್ರ ಮೋದಿ ಅವರ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ. ಸತತ ಮೂರನೇ ಬಾರಿಗೆ ಚುನಾವಣೆಯಲ್ಲಿ ಗೆದ್ದು ದೇಶದ ಪ್ರಧಾನಿಯಾದ ದೇಶದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಜೂನ್ 8 : ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ Read More »

ಕೇಂದ್ರ ಅಧಿಕಾರ ಚುಕ್ಕಾಣಿಗೆ‌ ಎನ್ ಡಿಎ ಗೆ ಬೆಂಬಲ ಘೋಷಿಸಿದ  ಎನ್ ಚಂದ್ರಬಾಬು ನಾಯ್ಡು

ಪ್ರಸ್ತುತ ರಾಜಕಾರಣದಲ್ಲಿ ಕಿಂಗ್ ಮೇಕ‌ರ್, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಪುನರುಚ್ಛರಿಸಿದ್ದಾರೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಹೇಳಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ಚಂದ್ರಬಾಬು ನಾಯ್ಡು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹೊಸ ಸರ್ಕಾರದಲ್ಲಿ ಸ್ಪೀಕ‌ರ್ ಸ್ಥಾನಕ್ಕೆ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಬೇಡಿಕೆ ಇರಿಸಿದ್ದಾರೆ. ಲೋಕಸಭೆಯಲ್ಲಿ ಟಿಡಿಪಿ ಪಕ್ಷದ ಸಂಸದರನ್ನ ಸ್ಪೀಕ‌ರ್ ಮಾಡಬೇಕು. ಸಂಪುಟದಲ್ಲಿ ಟಿಡಿಪಿಗೆ ಒಂದು

ಕೇಂದ್ರ ಅಧಿಕಾರ ಚುಕ್ಕಾಣಿಗೆ‌ ಎನ್ ಡಿಎ ಗೆ ಬೆಂಬಲ ಘೋಷಿಸಿದ  ಎನ್ ಚಂದ್ರಬಾಬು ನಾಯ್ಡು Read More »

ಪಾಕ್ ಪರ ಜೈಕಾರ ಕೂಗಿದ ಯುವಕನ ಬಂಧನ

ಚಿಕ್ಕೋಡಿ : ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿಯನ್ನುಜಮೀರ್ ನಾಯಿಕವಾಡಿ (25) ಎಂದು ಗುರುತಿಸಲಾಗಿದೆ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ಆರೋಪಿ ಜಮೀರ್ ಪಾಕಿಸ್ತಾನ್ ಕೀ ಜೈ ಎಂದು ಘೋಷಣೆ

ಪಾಕ್ ಪರ ಜೈಕಾರ ಕೂಗಿದ ಯುವಕನ ಬಂಧನ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ಪುತ್ತೂರಿನ ಎಪಿಎಂಸಿ ರಸ್ತೆ ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು: ಎಪಿಎಂಸಿ ರಸ್ತೆಯಲ್ಲಿರುವ ಮೋನಾರ್ಚ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರಧಾನ ಕಚೇರಿ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಇದರ ಅಂಗವಾಗಿ ವಾರ್ಷಿಕ ಪೂಜಾ ಕಾರ್ಯಕ್ರಮ ಇಂದು ಬೆಳಿಗ್ಗೆ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸಂಘ ಬೆಳೆದು ಬಂದ ರೀತಿಯನ್ನು ವಿವರಿಸಿದರು. ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಶುಭ ಹಾರೈಸಿದರು. ಸಂಘದ ನಿರ್ದೇಶಕರಾದ ರಾಮಕೃಷ್ಣ ಕರ್ಮಲ, ಜಿನ್ನಪ್ಪ ಮಳುವೇಲು, ಪ್ರವೀಣ್ ಕುಂಟ್ಯಾಣ,

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ಪುತ್ತೂರಿನ ಎಪಿಎಂಸಿ ರಸ್ತೆ ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ Read More »

ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಮೇಲೆ ಹಲ್ಲೆ

ಬೆಳ್ತಂಗಡಿ: ತಾಲೂಕು ಬಿಜೆಪಿ ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ (33) ಅವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ಕಾಯರ್ತಡ್ಕದಲ್ಲಿ  ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ ದಾಳಿ ನಡೆಸಲಾಗಿದೆ. ತಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ವಸಂತ್

ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಮೇಲೆ ಹಲ್ಲೆ Read More »

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ

ಪುತ್ತೂರು: ಬದುಕಿನ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸವನ್ನು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಪಡೆಯಲು ಸಾಧ್ಯ. ವಿದ್ಯಾರ್ಥಿಗಳೆಲ್ಲರೂ ವಿದ್ಯೆಯ ಪ್ರಾಮುಖ್ಯತೆಯನ್ನುಅರಿತು ಅದರ ಸದುಪಯೋಗವನ್ನು ಪಡೆಯಬೇಕು ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ಹೇಳಿದರು. ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು. ಪ್ರಾರಂಭೋತ್ಸವದ ಅಂಗವಾಗಿ ಗಣಹೋಮ ಮತ್ತು ಸರಸ್ವತಿ ಪೂಜೆ ಕಶೆಕೋಡಿ ಸೂರ್ಯನಾರಾಯಣ ಭಟ್, ಶಶಿಕಾಂತ ಭಟ್, ಪ್ರಕಾಶ್ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ

ನರೇಂದ್ರ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೋರ್ವ ಆರೋಪಿ ಬಂಧನ

ಬೆಳ್ಳಾರೆ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಎನ್‌ಐಎ ಇಂದು ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಒಟ್ಟು 19 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಮತ್ತೋರ್ವ ಆರೋಪಿ ಬಂಧನ Read More »

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ಜಯಭೇರಿ | 1.52 ಲಕ್ಷ ಮತಗಳ ಅಂತರದಿಂದ ಗೆಲುವು

ನವದೆಹಲಿ : ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಸ್ಪರ್ಧಿಸಿದ್ದ ಪ್ರಧಾನಿ ಮೋದಿ ಅವರು ಜಯಭೇರಿ ಬಾರಿಸಿದ್ದಾರೆ. ಮೊದ ಮೊದಲು ಮತ ಎಣಿಕೆ ಆರಂಭವಾದಾಗ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಇದಾದ ಬಳಿಕ ಸುಮಾರು 4998 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ನಂತರ ಹಿನ್ನಡೆ ಅನುಭವಿಸಿದರು. ಕೊನೇ ಹಂತದ ಮತ ಎಣಿಕೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ಜಯಭೇರಿ | 1.52 ಲಕ್ಷ ಮತಗಳ ಅಂತರದಿಂದ ಗೆಲುವು Read More »

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು : ಜಿಲ್ಲಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೆ ಮುಗಿಲನ್ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು : ಜಿಲ್ಲಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕಾರ Read More »

error: Content is protected !!
Scroll to Top