ಕೆಸಿಇಟಿ  ಫಲಿತಾಂಶ : ಅಂಬಿಕಾ ವಿದ್ಯಾಲಯಕ್ಕೆ 64ನೇ ರ್‍ಯಾಂಕ್, 500 ರ ಒಳಗೆ 8 ರ್‍ಯಾಂಕ್ ಗಳು, 1000 ದ ಒಳಗೆ 12 ರ್‍ಯಾಂಕ್ ಗಳು

ಪುತ್ತೂರು: 2024 ನೇ ಶೈಕ್ಷಣಿಕ ವರ್ಷದ ಕೆ ಸಿ ಇ ಟಿ ಫಲಿತಾಂಶ ಪ್ರಕಟವಾಗಿದ್ದು, ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು 500 ರ ಒಳಗೆ 8 ರ್‍ಯಾಂಕ್ ಗಳು ಹಾಗೂ  1000 ದ ಒಳಗಿನ 12 ರ್‍ಯಾಂಕ್ ಗಳನ್ನು ಪಡೆದುಕೊಂಡು ಅಮೋಘ ಸಾಧನೆ ಮಾಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕೆ. ಪ್ರಮಿತ್ ರೈ. ಇಂಜಿನಿಯರಿಂಗ್ ವಿಭಾಗದಲ್ಲಿ 64 ನೇ ರ್‍ಯಾಂಕ್  (258 ಫಾರ್ಮ ಡಿ), ಶೃಂಗಾ  ನಾಯಕ್ 320 (ಅಗ್ರಿಕಲ್ಚರ್ ಬಿಎಸ್ಸಿ) 493 (ಬಿಎನ್‌ವೈಎಸ್ ) 810(ವೆಟರ್ನರಿ ಸೈನ್ಸ್) 811(ಬಿ.ಎಸ್ಸಿ.ನರ್ಸಿಂಗ್) […]

ಕೆಸಿಇಟಿ  ಫಲಿತಾಂಶ : ಅಂಬಿಕಾ ವಿದ್ಯಾಲಯಕ್ಕೆ 64ನೇ ರ್‍ಯಾಂಕ್, 500 ರ ಒಳಗೆ 8 ರ್‍ಯಾಂಕ್ ಗಳು, 1000 ದ ಒಳಗೆ 12 ರ್‍ಯಾಂಕ್ ಗಳು Read More »

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿಗೆ ತೆರಳಿದ್ದ ಸುನಿಲ್ (42) ಹೃದಯಾಘಾತದಿಂದ ಭಾನುವಾರ ನಿಧನರಾದರು. ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ ಅವರು ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಹಖರಾಗಿ ಸೇವೆ ಸಲ್ಲಿಸಿದ್ದರು.

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ Read More »

ನಿವೃತ್ತಿ ಹಾಗೂ ಪದೋನ್ನತಿ ಹೊಂದಿದವರಿಗೆ ನಗರ ಪೊಲೀಸ್ ಠಾಣೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಆರ್.ಎಸ್.ಐ ಆಗಿದ್ದು ನಿವೃತ್ತಿಗೊಂಡ ನಾರಾಯಣ ಗೌಡ ಮತ್ತು ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪರಮೇಶ್ವರ ಗೌಡ ಅವರಿಗೆ ಠಾಣೆಯಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸತೀಶ್ ಜಿ.ಜೆ, ಮಹಿಳಾ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್, ಸಂಚಾರ ಪೊಲೀಸ್ ಠಾಣೆಯ ಎಸ್.ಐ ಸೈಯದ್ ಅಪ್ರೀದಿ ಶುಭ ಹಾರೈಸಿದರು. ಹೆಡ್‌ಕಾನ್‌ಸ್ಟೇಬಲ್ ಸ್ಕರಿಯ ಅನಿಸಿಕೆ ವ್ಯಕ್ತಪಡಿಸಿದರು. ಸಂಚಾರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್

ನಿವೃತ್ತಿ ಹಾಗೂ ಪದೋನ್ನತಿ ಹೊಂದಿದವರಿಗೆ ನಗರ ಪೊಲೀಸ್ ಠಾಣೆಯಲ್ಲಿ ಬೀಳ್ಕೊಡುಗೆ ಸಮಾರಂಭ Read More »

ಈಜಲು ತೆರಳಿದ ಮುಂಬೈ ಮೂಲದ ಇಬ್ಬರು ಬಾಲಕಿಯರು ಮೃತ್ಯು

ಚಿಕ್ಕಬಳ್ಳಾಪು: ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ನಲ್ಲಿ ನಡೆದಿದೆ. ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್ (17) ಹಾಗೂ ಜೋಯ ಪಾಟೀಲ್(14) ಮೃತಪಟ್ಟವರು. ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಹೊರಡಲಿದ್ದು, ದಂಡಿಗಾನಹಳ್ಳಿ ಜಲಾಶಯವನ್ನು ಕಣ್ಣುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈಜಲು ತೆರಳಿದ ಮುಂಬೈ ಮೂಲದ ಇಬ್ಬರು ಬಾಲಕಿಯರು ಮೃತ್ಯು Read More »

ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ

ಉಡುಪಿ : ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಷ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ. ಉದ್ಯಮಿ ಶ್ರೇಯಸ್ ನಾಯ್ಕ (25) ಅರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ

ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ Read More »

ನಾಳೆ ವಿಧಾನಪರಿಷತ್ ಚುನಾವಣೆ : ಸಂತೆ ಪ್ರವೇಶಕ್ಕೆ ಸಾರ್ವಜನಿಕರಿಗೆ ಹಿಂಬದಿ ದ್ವಾರದಿಂದ ಅವಕಾಶ

ಪುತ್ತೂರು: ನಾಳೆ ನಡೆಯಲಿರುವ ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಪುತ್ತೂರು ಕಿಲ್ಲೇ ಮೈದಾನದಲ್ಲಿ ನಡೆಯುವ ಸಂತೆಯನ್ನು ರದ್ದುಗೊಳಿಸದೇ ಸಂತೆಯ ಪ್ರವೇಶ ದ್ವಾರವನ್ನು ಬಂದ್ ಮಾಡುವ ಮೂಲಕ ಸಂತೆ ಗ್ರಾಹಕರಿಗೆ ಹಿಂಬದಿ ದ್ವಾರದಿಂದ ಪ್ರವೇಶಿಸುವಂತೆ ಅವಕಾಶ ಕಲ್ಪಿಸಲಾಗುವುದು ಎಂದು ತಹಸೀಲ್ದಾರ್‍ ಕುಂಞಿ ಅಹಮ್ಮದ್ ತಿಳಿಸಿದ್ದಾರೆ, ಭಾನುವಾರ ಆಡಳಿತ ಸೌಧದಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ  ನಡದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮತದಾನ ಪ್ರಕ್ರಿಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು

ನಾಳೆ ವಿಧಾನಪರಿಷತ್ ಚುನಾವಣೆ : ಸಂತೆ ಪ್ರವೇಶಕ್ಕೆ ಸಾರ್ವಜನಿಕರಿಗೆ ಹಿಂಬದಿ ದ್ವಾರದಿಂದ ಅವಕಾಶ Read More »

ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಕ್ತದಾನ ಶಿಬಿರ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಪಾಪೆಮಜಲು ಕೋಟಿ-ಚೆನ್ನಯ ಗೆಳೆಯರ ಬಳಗ ಪಾಪೆಮಜಲು, ರೋಟರಿ ಕ್ಯಾಂಫ್ಕೋ ಬಡ್ಲ್ ಸೆಂಟರ್, ಮತ್ತು ಅರಿಯಡ್ಕ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ಮೊಂತೇರೊ ಶಿಬಿರ ಉದ್ಘಾಟಿಸಿ, ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‍ವೈದ್ಯಾಧಿಕಾರಿ ಡಾ. ಸೀತಾರಾಮ್ ಭಟ್, ರಕ್ತದಾನದ ಮಹತ್ವ,

ಅರಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಕ್ತದಾನ ಶಿಬಿರ Read More »

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರು ಇದರ “ಶಿವಾಮೃತ” ಸಂಚಿಕೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಮರ್ಪಣೆ

ಪುತ್ತೂರು: ಸಮರ್ಪಣಾ ಚಾರಿಟೇಬಲ್‍ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರಿನ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂದರ್ಭದಲ್ಲಿ ಹೊರತಂದ “ಶಿವಾಮೃತ” ಸಂಚಿಕೆ ಇಂದು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಮರ್ಪಣೆಯಾಯಿತು. ಬೆಳಿಗ್ಗೆ ವಿಶೇಷ ಪೂಜೆಯೊಂದಿಗೆ “ಶಿವಾಮೃತ” ಸಂಚಿಕೆಯನ್ನು ಶ್ರೀ ದೇವರಿಗೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ರಾಜೇಂದ್ರ ಪ್ರಸಾದ್ ಶೆಟ್ಟಿ, ನಿರ್ದೇಶಕರಾದ ಚಿದಾನಂದ ಬೈಲಾಡಿ, ಶಿವಾಮೃತದ ಸಂಪಾದಕರೂ, ನಿರ್ದೇಶಕರಾದ ಸೀತಾರಾಮ ಕೇವಳ,  ಪ್ರವೀಣ್‍ ಕುಂಟ್ಯಾಣ, ಸತೀಶ್‍ ಪಾಂಬಾರು, ವಸಂತ

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರು ಇದರ “ಶಿವಾಮೃತ” ಸಂಚಿಕೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಮರ್ಪಣೆ Read More »

ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನರ್ ಆಫೀಸರ್ ಆಗಿ ಭವ್ಯ ನರಸಿಂಹ ಮೂರ್ತಿ ನೇಮಕ | ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಮಹಿಳಾ ಪ್ರಾದೇಶಿಕ ಸೇವಾ ಅಧಿಕಾರಿ

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನರ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನಂಟ್ ಆಗಿ ಇದೀಗ ಯೋಜನೆಗೊಂಡಿದ್ದಾರೆ. ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದೇನೆ ಎಂದು ಹೆಮ್ಮೆಯಾಗುತ್ತಿದೆ. ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ

ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನರ್ ಆಫೀಸರ್ ಆಗಿ ಭವ್ಯ ನರಸಿಂಹ ಮೂರ್ತಿ ನೇಮಕ | ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಮಹಿಳಾ ಪ್ರಾದೇಶಿಕ ಸೇವಾ ಅಧಿಕಾರಿ Read More »

ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಛತ್ತೀಸ್ ಗಢದ ಯುವಕ

ಪುತ್ತೂರು: ಯುವಕನೊಬ್ಬ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರ ಎಂಬಲ್ಲಿ ನಿನ್ನೆ ಬೆಳಕಿಗೆ ಬಂದಿದ್ದು, ಛತ್ತೀಸ್‌ಗಢದ ಮನಮೋಹನದಾಸ್ (24) ಎಂದು ತಿಳಿದು ಬಂದಿದೆ. ಪ್ರೇಮ ವೈಫಲ್ಯಕ್ಕೆ ಒಳಗಾಗಿ ಮನಮೋಹನದಾಸ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಛತ್ತೀಸ್‌ಗಢದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಅವರಿಬ್ಬರ ಮಧ್ಯೆ ವಿರಸ ಉಂಟಾಗಿದ್ದು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಪ್ರೇಯಸಿಯ ದೂರವಾಣಿಗೆ ಸಂದೇಶ ಕಳುಹಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕಳೆದ ಒಂದು ತಿಂಗಳಿನಿಂದ ಪುತ್ತೂರಿನಲ್ಲಿ ಎಳನೀರು ಕೀಳುವ

ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಛತ್ತೀಸ್ ಗಢದ ಯುವಕ Read More »

error: Content is protected !!
Scroll to Top