ಮಲ್ಪೆ ಸಮುದ್ರದಲ್ಲಿ ಸಿಕ್ಕಿದ ದೇವರ ವಿಗ್ರಹ : ವಿಡಿಯೋ ವೈರಲ್‌

ಇಸ್ಕಾನ್‌ ಅನುಯಾಯಿಗಳಿಗೆ ಸಿಕ್ಕಿದ ವಿಗ್ರಹ ಕುರಿತು ನಾನಾ ವದಂತಿ ಉಡುಪಿ: ಇಲ್ಲಿನ ಮಲ್ಪೆ ಕಡಲ ತೀರದಲ್ಲಿ ಭಾನುವಾರ ದೇವರ ವಿಗ್ರಹವೊಂದು ಸಮುದ್ರದಲ್ಲಿ ಸಿಕ್ಕಿ ಭಾರಿ ಕುತೂಹಲ ಕೆರಳಿಸಿದೆ. ಕೃಷ್ಣನೂರಿಗೆ ಸಾಕ್ಷಾತ್‌ ಕೃಷ್ಣನ ವಿಗ್ರಹವೇ ತೇಲಿ ಬಂದಿದೆ ಎಂದು ಭಾವಿಸಿ ಜನ ಸಂಭ್ರಮಿಸಿದ್ದಾರೆ. ಇದು ದೇವರ ಮಹಿಮೆ ಸಾವಿರಾರು ಜನ ವಿಗ್ರಹ ನೋಡಲು ಧಾವಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ. ಮಲ್ಪೆಯಲ್ಲಿ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರ ಉಡುಪಿ ಕೃಷ್ಣಮಠದಲ್ಲಿ ಇಸ್ಕಾನ್ […]

ಮಲ್ಪೆ ಸಮುದ್ರದಲ್ಲಿ ಸಿಕ್ಕಿದ ದೇವರ ವಿಗ್ರಹ : ವಿಡಿಯೋ ವೈರಲ್‌ Read More »

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ

ಡಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ ಬಂಟ್ವಾಳ : ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮಲ್‌ಕಟ್ಟೆ ಎಂಬಲ್ಲಿ ನಡೆದಿದೆ. ಗಾಯಗೊಂಡವರು ರಾಮಲ್‌ಕಟ್ಟೆ ನಿವಾಸಿ ಉಸ್ಮಾನ್ ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸ್ಮಾನ್ ಅವರು ಅಂಗಡಿಯಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಸ್ವರೂಪದ

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ Read More »

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ ಮೂಲಕ 80 ಸಾವಿರ ರೂ. ಎಗರಿಸಿದ ಪಾಪಿಗಳು

ಸಹಾಯ ಮಾಡಲೆಂದು ಬಂದು ಹಣ ವರ್ಗಾಯಿಸಿ ಪರಾರಿಯಾಗಿದ್ದ ಇಬ್ಬರ ಸೆರೆ ಮೈಸೂರು: ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಗೆ ಸಹಾಯ ಮಾಡುವ ನೆಪದಲ್ಲಿ ಬಂದು ಅವರ ಮೊಬೈಲ್‌ನ ಯುಪಿಐ ಬಳಸಿ 80 ಸಾವಿರ ರೂಪಾಯಿ ಎಗರಿಸಿದ ಅಮಾನವೀಯ ಘಟನೆ ಮೈಸೂರಿನಲ್ಲಿ ಸಂಭವಿಸಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ಕಡಕೊಳದ ಬಳಿ ಡಿ.19ರಂದು ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಆಸ್ಪತ್ರೆಗೆ ಸೇರಿಸುವ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ ಮೂಲಕ 80 ಸಾವಿರ ರೂ. ಎಗರಿಸಿದ ಪಾಪಿಗಳು Read More »

ಮುಡಾ ಹಗರಣ : ಇಂದು ಜನಪ್ರತಿನಿಧಿ ನ್ಯಾಯಾಲಯದ ತೀರ್ಪು

ಸಿದ್ದರಾಮಯ್ಯನವರ ಪಾಲಿಗೆ ನಿರ್ಣಾಯಕವಾಗಲಿರುವ ತೀರ್ಪು ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ಗೆ ಸಂಬಂಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಮಂಗಳವಾರ ಮಹತ್ವದ ಆದೇಶ ಪ್ರಕಟಿಸಲಿದೆ. ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದರೆ ಸಿದ್ದರಾಮಯ್ಯ ನಿರಾಳರಾಗುತ್ತಾರೆ. ಒಪ್ಪದೆ ಇದ್ದರೆ ಅವರಿಗೆ ಮತ್ತೆ ದೊಡ್ಡ ಸಂಕಷ್ಟ ಎದುರಾಗಲಿದೆ. ಡಿ.19 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದ

ಮುಡಾ ಹಗರಣ : ಇಂದು ಜನಪ್ರತಿನಿಧಿ ನ್ಯಾಯಾಲಯದ ತೀರ್ಪು Read More »

ದ್ವೇಷ ಭಾಷಣ ಮಾಡುವವರಿಂದ ದ್ವೇಷ ಭಾಷಣ ಕಾಯ್ದೆಗೆ ವಿರೋಧ : ಸಿದ್ದರಾಮಯ್ಯ

ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕಾಯ್ದೆ ರಚನೆ ಎಂದು ಸಮರ್ಥನೆ ಬೆಂಗಳೂರು: ಬಿಜೆಪಿ ದ್ವೇಷಪೂರಿತ ಮತ್ತು ಪ್ರಚೋದನಕಾರಿ ಭಾಷಣಗಳಲ್ಲಿ ಭಾಗಿಯಾಗಿದೆ. ಹೀಗಾಗಿ ವಿಧಾನಸಭೆ ಅಂಗೀಕರಿಸಿದ ದ್ವೇಷ ಭಾಷಣ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೆಟು ನೀಡಿದ್ದಾರೆ. ಸಮಾಜದಲ್ಲಿ ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಲು ಮತ್ತು ದ್ವೇಷ ಭಾಷಣಗಳನ್ನು ಕೊನೆಗೊಳಿಸಲು ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಡಿಸೆಂಬರ್ 19ರಂದು ಮುಕ್ತಾಯಗೊಂಡ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ,

ದ್ವೇಷ ಭಾಷಣ ಮಾಡುವವರಿಂದ ದ್ವೇಷ ಭಾಷಣ ಕಾಯ್ದೆಗೆ ವಿರೋಧ : ಸಿದ್ದರಾಮಯ್ಯ Read More »

ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆ : ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿ

ಆರು ತಿಂಗಳಿಂದ ಸಂಬಳ ಸಿಗದೆ ಬೇಸತ್ತು ರಾಜೀನಾಮೆ ನೀಡಿರುವ ವೈದ್ಯಾಧಿಕಾರಿ ಬೆಂಗಳೂರು: ಆರು ತಿಂಗಳಿಂದ ಸಂಬಳ ಸಿಗದ ಹಿನ್ನೆಲೆಯಲ್ಲಿ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೀನಾಮೆ ನೀಡಿರುವುದು ಸರ್ಕಾರವನ್ನು ಟೀಕಿಸಲು ವಿಪಕ್ಷಕ್ಕೆ ಇನ್ನೊಂದು ಅಸ್ತ್ರವಾಗಿದೆ. ರಾಜ್ಯಮಟ್ಟದಲ್ಲಿ ಈ ವಿಚಾರ ಚರ್ಚೆಯಾಗುತ್ತಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ದಿವಾಳಿಯಾಗಿರುವುದಕ್ಕೆ ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆಯೇ ಸಾಕ್ಷಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸುಳ್ಯದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಸರಿಯಾಗಿ

ಸುಳ್ಯದ ವೈದ್ಯಾಧಿಕಾರಿ ರಾಜೀನಾಮೆ : ಸರ್ಕಾರದ ಮೇಲೆ ಮುಗಿಬಿದ್ದ ಬಿಜೆಪಿ Read More »

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಿತು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪಥಸಂಚಲನ ಮಾಡಿ ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳು ತಂದ ಕ್ರೀಡಾ ಜ್ಯೋತಿಯಿಂದ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಧ್ವಜಾರೋಹಣಗೈದು ಮಾತನಾಡಿದ ಶ್ರೀನಿವಾಸ ಗೌಡ (NCC ಆಫೀಸರ್ ನೇವಿ ವಿಂಗ್ ವಿಠಲ ಪಿಯು ಕಾಲೇಜು ವಿಟ್ಲ), ಕ್ರೀಡೆ ಮತ್ತು ಶಿಕ್ಷಣ ಎರಡು ಕೂಡ ಜೀವನಕ್ಕೆ ಅತ್ಯಗತ್ಯ. ಸಮಾಜದಲ್ಲಿ ಕೆಟ್ಟ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ Read More »

ಶ್ರೀ ಮಹಾಭಾರತ ಸರಣಿಯ 103 ನೇ ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷ ಸೇವಾ ಟ್ರಸ್ಟ್ ಸ್ವರ್ಣ ಮಹೋತ್ಸವದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 103ನೇ ತಾಳಮದ್ದಳೆ ಕಲಿಕೀಚಕ ಎಂಬ ಪ್ರಸಂಗ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಬಿ. ಸುರೇಶ ರಾವ್ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಪರಪ್ಪು ಭಾಗವಹಿಸಿದ್ದರು. ವಿರಾಟನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಮಂತ್ರಿ ಮಾತಂಗ ಮತ್ತು ಭೀಮಸೇನನಾಗಿ ಶ್ರೀಧರ ಎಸ್ ಪಿ ಕೃಷ್ಣಾಪುರ, ರಥಕಾರನಾಗಿ ಸತೀಶ ಶಿರ್ಲಾಲು, ಕೀಚಕನಾಗಿ ಜಯರಾಮ ಗೌಡ

ಶ್ರೀ ಮಹಾಭಾರತ ಸರಣಿಯ 103 ನೇ ತಾಳಮದ್ದಳೆ Read More »

ಡಿ. 25: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸತ್ಯನಾರಾಯಣ ಪೂಜೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಪುತ್ತೂರು ಇದರ ವಾರ್ಷಿಕ ಸಮಾವೇಶ, ಗಣಪತಿ ಹವನ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ತಾಲೂಕು ಸಮಿತಿಗಳ ಪದಪ್ರಧಾನ ಸಮಾರಂಭ ಡಿ. 25 ರಂದು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಪೂರ್ವಾಹ್ನ 9.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 10. 30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠ ಮಂಗಳೂರಿನ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ.

ಡಿ. 25: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಸತ್ಯನಾರಾಯಣ ಪೂಜೆ Read More »

ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ

ಸುಳ್ಯ : ಇಲ್ಲಿನ ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗೂನಡ್ಕ ಬಳಿ ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆ. ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಪಾರಾಗಿದ್ದಾರೆ.

ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ Read More »

error: Content is protected !!
Scroll to Top